AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿಟಿಡಿ ಖ್ಯಾತೆಯಿಂದ ಅಲರ್ಟ್​! ಆಂಜನೇಯ ಜನಿಸಿದ ಅಂಜನಾದ್ರಿ ಅಭಿವೃದ್ಧಿಗೆ ಸರ್ಕಾರ ಮುಂದು, ಕೋಟ್ಯಂತರ ಅನುದಾನ ಘೋಷಣೆ ಸಾಧ್ಯತೆ

ರಾಜ್ಯ ಸರ್ಕಾರ, ಅಂಜನಾದ್ರಿಯಲ್ಲೆ ಆಂಜನೇಯ ಹುಟ್ಟಿದ್ದು ಎಂದು ಘೋಷಣೆ ಮಾಡಲು ಮುಂದಾಗಿದೆ. ಅಷ್ಟೇ ಅಲ್ಲ ಬಜೆಟ್‌ನಲ್ಲಿ ರಾಮಮಂದಿರದ ಮಾದರಿಯಲ್ಲೇ ಅಂಜನಾದ್ರಿ ಬೆಟ್ಟದ ಅಭಿವೃದ್ಧಿಗೆ ಹಣ ಮೀಸಲಿಡಲು ಮುಂದಾಗಿದೆ. ಅದಕ್ಕಾಗಿ ವಕ್ಫ್ ಹಾಗೂ ಮುಜರಾಯಿ ಇಲಾಖೆ ಆಗಮ ಪಂಡಿತರಿಂದಲೂ ಮಾಹಿತಿ ಸಂಗ್ರಹ ಮಾಡುತ್ತಿದೆ.

ಟಿಟಿಡಿ ಖ್ಯಾತೆಯಿಂದ ಅಲರ್ಟ್​! ಆಂಜನೇಯ ಜನಿಸಿದ ಅಂಜನಾದ್ರಿ ಅಭಿವೃದ್ಧಿಗೆ ಸರ್ಕಾರ ಮುಂದು, ಕೋಟ್ಯಂತರ ಅನುದಾನ ಘೋಷಣೆ ಸಾಧ್ಯತೆ
ಅಂಜನಾದ್ರಿ
TV9 Web
| Edited By: |

Updated on:Feb 21, 2022 | 7:30 AM

Share

ಅಂಜನಾದ್ರಿ ಪರ್ವತ(Anjanadri Hill). ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಕಿಷ್ಕಿಂದೆ ಪ್ರದೇಶದಲ್ಲಿರೋ ಈ ಪರ್ವತ, ಆಂಜನೇಯ ಹುಟ್ಟಿದ ಸ್ಥಳ(Birth Place Of Hanuman) ಎಂದು ಹೆಸರಾದ ಪ್ರದೇಶ. ದೇಶ ವಿದೇಶಗಳಿಂದಲೂ ಭಕ್ತರು ಆಂಜನೇಯನ ದರ್ಶನಕ್ಕೆ ಆಗಮಿಸುತ್ತಾರೆ. ಆದ್ರೆ ಹನುಮ ಹುಟ್ಟಿದ ಸ್ಥಳದ ಬಗ್ಗೆ ಟಿಟಿಡಿ(TTD) ಖ್ಯಾತೆ ಹೆಚ್ಚಾಗುತ್ತಿದ್ದಂತೆ ಅಲರ್ಟ ಆಗಿರುವ ರಾಜ್ಯ ಸರ್ಕಾರ ಮಹತ್ವದ ತೀರ್ಮಾನವೊಂದಕ್ಕೆ ಬಂದಿದೆ.

ಅಂಜನಾದ್ರಿ ಪರ್ವತ ಹನುಮ ಹುಟ್ಟಿದ್ದ ಸ್ಥಳವೆಂದೆ ಖ್ಯಾತಿಯಾಗಿದೆ. ರಾಮಾಯಣದಲ್ಲೂ ಇದರ ಬಗ್ಗೆ ಉಲ್ಲೇಖಗಳಿವೆ. ಆದ್ರೆ ಟಿಟಿಡಿ ಮಾತ್ರ ಹನುಮ ಹುಟ್ಟಿದ್ದು ತಿರುಪತಿಯ ಆಕಾಶಗಂಗೆ ಪ್ರದೇಶದಲ್ಲಿ ಅಂತಾ ಆ ಸ್ಥಳದಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲು ಮುಂದಾಗಿತ್ತು. ಆದ್ರೆ ಟಿಟಿಡಿ ಕಾರ್ಯಕ್ಕೆ ಆಂಧ್ರ ಹೈಕೋರ್ಟ್ ತಡೆಯಾಜ್ಞೆ ನೀಡ್ತಿದ್ದಂತೆ ರಾಜ್ಯ ಸರ್ಕಾರ ಅಲರ್ಟ್ ಆಗಿದೆ.

ಇನ್ನು ಟಿಟಿಡಿ ಕ್ಯಾತೆಗೆ ಕಿಡಿಕಾರಿರುವ ಸಚಿವ ಆನಂದ್ ಸಿಂಗ್, ಅವರು ಆಧಾರರಹಿತವಾಗಿ ಹೇಳ್ತಿದ್ದಾರೆ. ಆದ್ರೆ ನಮ್ಮ ಪೂರ್ವಿಕರು ಅಂಜನಾದ್ರಿಯಲ್ಲೆ ಆಂಜನೇಯ ಹುಟ್ಟಿದ ಸ್ಥಳವೆಂದು ಹೇಳ್ತಿದ್ರು. ಇನ್ನು ರಾಮ ಸೀತೆ ಇರೋ ಸೀತೆ ಸೆರಗು, ಮಾಲ್ಯವಂತ ಅನ್ನೋ ಸ್ಥಳ ಈಗಲೂ ಹಂಪಿಯಲ್ಲಿದೆ. ಇತಿಹಾಸ ತಿರುಚಲು ಯಾರಿಂದಲೂ ಸಾಧ್ಯವಿಲ್ಲ ಎಂದಿದ್ದಾರೆ.

ಅಂಜನಾದ್ರಿಯಲ್ಲೆ ಆಂಜನೇಯ ಹುಟ್ಟಿದ್ದು ಘೋಷಿಸಲು ಚಿಂತನೆ ಹೌದು ರಾಜ್ಯ ಸರ್ಕಾರ, ಅಂಜನಾದ್ರಿಯಲ್ಲೆ ಆಂಜನೇಯ ಹುಟ್ಟಿದ್ದು ಎಂದು ಘೋಷಣೆ ಮಾಡಲು ಮುಂದಾಗಿದೆ. ಅಷ್ಟೇ ಅಲ್ಲ ಬಜೆಟ್‌ನಲ್ಲಿ ರಾಮಮಂದಿರದ ಮಾದರಿಯಲ್ಲೇ ಅಂಜನಾದ್ರಿ ಬೆಟ್ಟದ ಅಭಿವೃದ್ಧಿಗೆ ಹಣ ಮೀಸಲಿಡಲು ಮುಂದಾಗಿದೆ. ಅದಕ್ಕಾಗಿ ವಕ್ಫ್ ಹಾಗೂ ಮುಜರಾಯಿ ಇಲಾಖೆ ಆಗಮ ಪಂಡಿತರಿಂದಲೂ ಮಾಹಿತಿ ಸಂಗ್ರಹ ಮಾಡುತ್ತಿದೆ. ಮುಂಬರುವ ಬಜೆಟ್‌ನಲ್ಲಿ ಸಿಎಂ ಬೊಮ್ಮಾಯಿ, 13 ಎಕರೆ ಪ್ರದೇಶದಲ್ಲಿ ಅಂಜನಾದ್ರಿ ಪರ್ವತವನ್ನ ಅಭಿವೃದ್ದಿ ಮಾಡಲು ಅನುದಾನ ಘೋಷಿಸುವ ಸಾಧ್ಯತೆಗಳಿವೆ. ಒಟ್ನಲ್ಲಿ ರಾಜ್ಯ ಸರ್ಕಾರ ಅಂಜನಾದ್ರಿಯಲ್ಲೆ ಆಂಜನೇಯ ಹುಟ್ಟಿದ್ದು ಎಂದು ಅಧಿಕೃತವಾಗಿ ಘೋಷಣೆ ಮಾಡಿದ್ರೆ ಹನುಮನ ಭಕ್ತರು ಹರ್ಷಗೊಳ್ಳಲಿದ್ದಾರೆ. ಆದ್ರೆ ಮುಂದಿನ ದಿನಗಳಲ್ಲಿ ಈ ವಿಚಾರವಾಗಿ ಟಿಟಿಡಿ ಯಾವ ರೀತಿ ಕಿತಾಪತಿ ಶುರು ಮಾಡುತ್ತೋ ಕಾದು ನೋಡಬೇಕಿದೆ.

ಇದನ್ನೂ ಓದಿ: ಅಂಜನಾದ್ರಿಯೇ ಹನುಮನ ಜನ್ಮಸ್ಥಳ, ವಿವಾದದ ಬಗ್ಗೆ ರಾಜ್ಯ ಸರ್ಕಾರದಿಂದ ಆದೇಶ ಸಾಧ್ಯತೆ: ಸಚಿವೆ ಶಶಿಕಲಾ ಜೊಲ್ಲೆ

ಅಂಜನಾದ್ರಿ ಪರ್ವತದಲ್ಲಿ ಅನ್ಯ ಧರ್ಮಿಯರ ಅಂಗಡಿಗಳು ಇರಬಾರದು ಎಂದಿದ್ದ ಮಧುಗಿರಿ ಮೋದಿ ವಿರುದ್ಧ ಕೇಸ್ ದಾಖಲು

Published On - 7:22 am, Mon, 21 February 22

Follow Us
Web contact
Web contact

TV9 Kannada

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?