AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಸ್ಲಿಂ ಹೆಣ್ಣುಮಕ್ಕಳ ಬಟ್ಟೆ ಪ್ರಚೋದನೆ ಕೊಡುತ್ತೋ, ಹಿಂದೂ ಮಕ್ಕಳ ಉಡುಗೆ ಪ್ರಚೋದನೆ ನೀಡುತ್ತೋ ನೀವೇ ನೋಡಿ; ಹೆಚ್​. ಆಂಜನೇಯ ವಿವಾದಾತ್ಮಕ ಹೇಳಿಕೆ

ಕಾಲೇಜ್ ಮುಂದೆ ಹೋಗಿ ನೋಡಿ ಮುಸ್ಲಿಂ ಹೆಣ್ಣು ಮಕ್ಕಳು ಉಡುಪು ಪ್ರಚೋದನೆ ಕೊಡುತ್ತದೋ ಅಥವಾ ನಮ್ಮ ಮಕ್ಕಳ ಉಡುಪು ಪ್ರಚೋದನೆ ಕೊಡುತ್ತೋ ಎಂದು ನಿಮಗೇ ಗೊತ್ತಾಗುತ್ತದೆ ಎಂದು ಕಾಂಗ್ರೆಸ್ ನಾಯಕ ಹೆಚ್​. ಆಂಜನೇಯ ಹೇಳಿದ್ದಾರೆ.

ಮುಸ್ಲಿಂ ಹೆಣ್ಣುಮಕ್ಕಳ ಬಟ್ಟೆ ಪ್ರಚೋದನೆ ಕೊಡುತ್ತೋ, ಹಿಂದೂ ಮಕ್ಕಳ ಉಡುಗೆ ಪ್ರಚೋದನೆ ನೀಡುತ್ತೋ ನೀವೇ ನೋಡಿ; ಹೆಚ್​. ಆಂಜನೇಯ ವಿವಾದಾತ್ಮಕ ಹೇಳಿಕೆ
ಎಚ್​ ಆಂಜನೇಯ
TV9 Web
| Edited By: |

Updated on:Feb 09, 2022 | 5:30 PM

Share

ಕೊಪ್ಪಳ: ಮಹಿಳೆಯರ ಬಟ್ಟೆ ನೋಡಿ ಪುರುಷರು ಉದ್ವೇಗಕ್ಕೆ ಒಳಗಾಗುತ್ತಾರೆ ಎಂಬ ಬಿಜೆಪಿ ಶಾಸಕ ಎಂ.ಪಿ. ರೇಣುಕಾಚಾರ್ಯ (MP Renukacharya) ಹೇಳಿಕೆಗೆ ತಿರುಗೇಟು ನೀಡಿರುವ ಮಾಜಿ ಸಚಿವ ಹೆಚ್. ಆಂಜನೇಯ (H Anjaneya) ಕೂಡ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಮುಸ್ಲಿಂ​​ ಹೆಣ್ಣು ಮಕ್ಕಳು ಉಡುಪು ಹೆಚ್ಚು ಪ್ರಚೋದನೆ ಕೊಡುತ್ತೋ ಅಥವಾ ಹಿಂದೂ ಮಕ್ಕಳ ಉಡುಪು ಹೆಚ್ಚು ಪ್ರಚೋದನೆ ಕೊಡುತ್ತೋ ನೀವೇ ನೋಡಿ. ಕಾಲೇಜಿನ ಮುಂದೆ ಹೋಗಿ ನೋಡಿದರೆ ನಿಮಗೇ ಗೊತ್ತಾಗುತ್ತದೆ ಎಂದು ಹೆಚ್. ಆಂಜನೇಯ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಈ ಮೂಲಕ ಪರೋಕ್ಷವಾಗಿ ಹಿಜಾಬ್ (Hijab) ಧರಿಸುವುದು ತಪ್ಪಲ್ಲ ಎಂದು ಸಮರ್ಥನೆ ಮಾಡಿಕೊಂಡಿದ್ದಾರೆ.

ಮಹಿಳೆಯರ ಉಡುಪು ಪ್ರಚೋದನೆಗೆ ಕಾರಣ ಎಂದು ಬಿಜೆಪಿ ಶಾಸಕ ರೇಣುಕಾಚಾರ್ಯ ಹೇಳಿದ್ದರು. ಮಹಿಳೆಯರ ಬಟ್ಟೆ ನೋಡಿ ಪುರುಷರು ಉದ್ವೇಗಕ್ಕೆ ಒಳಗಾಗುತ್ತಾರೆ. ಮಹಿಳೆಯರ ಬಟ್ಟೆ ಅತ್ಯಾಚಾರಕ್ಕೆ ಪ್ರಚೋದನೆ ನೀಡುತ್ತದೆ ಎಂದಿದ್ದ ಅವರು ಬಳಿಕ, ಮಹಿಳೆಯರನ್ನು ಗೌರವದಿಂದ ಕಾಣಬೇಕು. ಮಹಿಳೆಯರು ಮೈತುಂಬ ಬಟ್ಟೆ ಹಾಕಬೇಕು. ನಾನು ಮಹಿಳೆಯರನ್ನು ಅವಮಾನಿಸಿಲ್ಲ. ನನ್ನ ಹೇಳಿಕೆಯಿಂದ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ ಎಂದಿದ್ದರು.

ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಮಾಜಿ ಸಚಿವ ಹೆಚ್​. ಆಂಜನೇಯ, ಕಾಲೇಜ್ ಮುಂದೆ ಹೋಗಿ ನೋಡಿ ಮುಸ್ಲಿಂ ಹೆಣ್ಣು ಮಕ್ಕಳು ಉಡುಪು ಪ್ರಚೋದನೆ ಕೊಡುತ್ತದೋ ಅಥವಾ ನಮ್ಮ ಮಕ್ಕಳ ಉಡುಪು ಪ್ರಚೋದನೆ ಕೊಡುತ್ತೋ ಎಂದು ನಿಮಗೇ ಗೊತ್ತಾಗುತ್ತದೆ. ರೇಣುಕಾಚಾರ್ಯ ಬಹಳ ಒಳ್ಳೆಯ ಮಾತನ್ನು ಹೇಳಿದ್ದಾರೆ. ಮುಸ್ಲಿಂ ಮಹಿಳೆಯರನ್ನು ಯಾರೂ ನೋಡಲ್ಲ. ಹಾಗಾಗಿ ಅವರು ಹಿಜಾಬ್ ಹಾಕ್ತಾರೆ. ರೇಣುಕಾಚಾರ್ಯ ಮುಸ್ಲಿಂ ಹೆಣ್ಣುಮಕ್ಕಳ ಪರವಾಗಿ ಮಾತಾಡಿದ್ದಾರೆ ಎಂದು ಆಂಜನೇಯ ಲೇವಡಿ ಮಾಡಿದ್ದಾರೆ.

ಮಕ್ಕಳ ಕೈಲಿ ಕಲ್ಲು, ಚಾಕು ಕೊಟ್ಟಿದ್ದೇ ಬಿಜೆಪಿ. ಮೊದಲು ಚುನಾವಣೆಗಾಗಿ ಗಲಾಟೆ ನಡೆಯುತ್ತಿತ್ತು. ಇವತ್ತು ಅವರನ್ನು ಬೀದಿಗಿಳಿಸಿದ್ದು ಬಿಜೆಪಿ. ಪ್ರಚೋದನೆ ಕೊಡೋದೆ ಬಿಜೆಪಿಯ ತತ್ವ, ಸಿದ್ಧಾಂತ. ಆದರೆ, ನಾವು ಯಾರನ್ನೂ ಎತ್ತಿ ಕಟ್ಟೋ ಕೆಲಸ ಮಾಡಲ್ಲ. ಈಗ ನಡೆಯುತ್ತಿರುವ ಗಲಾಟೆಗೆ ಬಿಜೆಪಿಯವರು ಕಾರಣ. ಇದೇ ಬಟ್ಟೆಯನ್ನು ಹಾಕಬೇಕು ಎಂಬುದು ಯಾವ ನ್ಯಾಯ? ವಿದ್ಯಾರ್ಥಿಗಳಿಗೆ ಬಿಜೆಪಿಯವರೇ ಕೇಸರಿ ಶಾಲು ವಿತರಣೆ ಮಾಡಿದ್ದಾರೆ ಎಂದು ಹೆಚ್. ಆಂಜನೇಯ ಆರೋಪಿಸಿದ್ದಾರೆ.

ಇದನ್ನೂ ಓದಿ: ಮಹಿಳೆಯರ ಬಟ್ಟೆ ನೋಡಿ ಪುರುಷರು ಉದ್ವೇಗಕ್ಕೆ ಒಳಗಾಗ್ತಾರೆ, ಅತ್ಯಾಚಾರಕ್ಕೆ ಪ್ರಚೋದನೆ ನೀಡುತ್ತೆ: ಶಾಸಕ ರೇಣುಕಾಚಾರ್ಯ ವಿವಾದಾತ್ಮಕ ಹೇಳಿಕೆ

Hijab Row: ಜೈ ಶ್ರೀರಾಮ್ ಘೋಷಣೆ ಕೂಗಿದವರ ಮುಂದೆ ಅಲ್ಲಾಹು ಅಕ್ಬರ್ ಎಂದ ಯುವತಿಗೆ 5 ಲಕ್ಷ ರೂ. ಬಹುಮಾನ

Published On - 5:29 pm, Wed, 9 February 22

Follow Us
Web contact
Web contact

TV9 Kannada

Read More
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ