AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗದಗದಲ್ಲಿ ನಾಲ್ವರ ಬರ್ಬರ ಹತ್ಯೆ, ಬೆಚ್ಚಿಬಿದ್ದ ಪಕ್ಕದ ಜಿಲ್ಲೆ ಕೊಪ್ಪಳ

ಆ ದಂಪತಿ, ಕೊಪ್ಪಳದಲ್ಲಿ ಹೋಟೆಲ್ ಉದ್ಯಮ ಜೊತೆಗೆ ಸಮಾಜ ಸೇವೆಯನ್ನು ಮಾಡಿಕೊಂಡು ಚನ್ನಾಗಿದ್ದರು. ಮಗಳು ಎಸ್ಎಸ್​ಎಲ್​ಸಿ ಪರೀಕ್ಷೆಯನ್ನು ಬರೆದು, ಫಲಿತಾಂಶಕ್ಕಾಗಿ ಕಾಯುತ್ತಿದ್ದಳು. ಜೊತೆಗೆ ಕಳೆದ ರಾತ್ರಿಯಷ್ಟೇ ಮಗಳ ಜನ್ಮದಿನವನ್ನು ಅದ್ದೂರಿಯಾಗಿ ದಂಪತಿ ಆಚರಿಸಿದ್ದರು. ಆದ್ರೆ, ರಾತ್ರಿ ಸಮಯದಲ್ಲಿ ದುಷ್ಕರ್ಮಿಗಳು ಗಂಡ, ಹೆಂಡತಿ, ಮಗಳನ್ನು ಬರ್ಬರವಾಗಿ ಕೊಲೆ ಮಾಡಿದ್ದಾರೆ. ಗದಗದಲ್ಲಿ ಕೊಲೆಯಾದ ನಾಲ್ವರ ಪೈಕಿ ಮೂವರು ಕೊಪ್ಪಳದವರಾಗಿದ್ದು, ಕೊಪ್ಪಳ ಜನರು ಕೂಡ ಬೆಚ್ಚಿ ಬಿದ್ದಿದ್ದಾರೆ.

ಗದಗದಲ್ಲಿ ನಾಲ್ವರ ಬರ್ಬರ ಹತ್ಯೆ, ಬೆಚ್ಚಿಬಿದ್ದ ಪಕ್ಕದ ಜಿಲ್ಲೆ ಕೊಪ್ಪಳ
ಗದಗದಲ್ಲಿ ನಾಲ್ವರ ಬರ್ಬರ ಹತ್ಯೆ
ಸಂಜಯ್ಯಾ ಚಿಕ್ಕಮಠ
| Edited By: |

Updated on: Apr 19, 2024 | 10:21 PM

Share

ಕೊಪ್ಪಳ, ಏ.19: ಗದಗ ನಗರದಲ್ಲಿ ಕಳೆದ ರಾತ್ರಿ(ಏ.18) ನಡೆದಿರುವ ನಾಲ್ವರ ಬರ್ಬರ ಕೊಲೆ ಪ್ರಕರಣ ಕೇವಲ ಗದಗ ಮಾತ್ರವಲ್ಲ, ಕೊಪ್ಪಳ(Koppal) ನಗರದ ಜನರು ಕೂಡ ಬೆಚ್ಚಿಬೀಳುವಂತೆ ಮಾಡಿದೆ. ಹೌದು, ಕೊಲೆಯಾದ ನಾಲ್ವರ ಪೈಕಿ, ಮೂವರಾದ  55 ವರ್ಷದ ಪರಶುರಾಮ್ ಹಾದಿಮನಿ, ಅವರ ಪತ್ನಿ ಲಕ್ಷ್ಮಿ, ಮತ್ತು ಹದಿನೇಳು ವರ್ಷದ ಪುತ್ರಿ ಆಕಾಂಕ್ಷಾ ಕೊಪ್ಪಳ ನಗರದ ಭಾಗ್ಯ ನಗರದ ನಿವಾಸಿಗಳಾಗಿದ್ದಾರೆ. ಜೊತೆಗೆ ಗದಗ ನಗರಸಭೆ ಉಪಾಧ್ಯೆಕ್ಷೆ ಪುತ್ರ ಕಾರ್ತಿಕ ಬಾಕಳೆ ಸೇರಿ ಒಟ್ಟು ನಾಲ್ಕು ಜನರನ್ನು ದುಷ್ಕರ್ಮಿಗಳು ಮಾರಕಾಸ್ತ್ರದಿಂದ ಕೊಚ್ಚಿ ಕೊಲೆ ಮಾಡಿದ್ದಾರೆ.

ಕೊಲೆಯ ಸುದ್ದಿಯನ್ನು ಮುಂಜಾನೆ ಟಿವಿಯಲ್ಲಿ ನೋಡುತ್ತಿದ್ದಂತೆ, ಕೊಪ್ಪಳದ ಜನರು ಶಾಕ್ ಆಗಿದ್ದಾರೆ. ಇನ್ನು ದಂಪತಿ, ಕೊಪ್ಪಳ ನಗರದ ಭಾಗ್ಯ ನಗರದಲ್ಲಿ ಸ್ವಂತ ಮನೆಯನ್ನು ಹೊಂದಿದ್ದು. ಅನೇಕ ವರ್ಷಗಳಿಂದ ಇಲ್ಲಿಯೇ ವಾಸವಾಗಿದ್ದಾರೆ. ಮೃತ ಪರಶುರಾಮ್, ಕೊಪ್ಪಳ ನಗರದಲ್ಲಿ ಹೋಟೆಲ್ ಉದ್ಯಮವನ್ನು ಹೊಂದಿದ್ದು, ಕೆಲ ಹೋಟೆಲ್​ಗಳನ್ನು ನಡೆಸುತ್ತಿದ್ದಾರೆ. ಅವರ ಪತ್ನಿ ಲಕ್ಷ್ಮಿ, ಈ ಹಿಂದೆ ಬಿಜೆಪಿ ಸರ್ಕಾರದ ಅವಧಿಯಲ್ಲಿ, ಭಾಗ್ಯ ನಗರದ ಪಟ್ಟಣ ಪಂಚಾಯತ್​ನ ನಾಮ ನಿರ್ದೇಶಿತ ಸದಸ್ಯೆಯಾಗಿ ಹತ್ತು ತಿಂಗಳ ಕಾಲ ಕೆಲಸ ಮಾಡಿದ್ದರು.

ಇದನ್ನೂ ಓದಿ:ಗದಗ ನಗರಸಭೆ ಉಪಾಧ್ಯಕ್ಷೆ ಪುತ್ರ ಸೇರಿದಂತೆ ಒಂದೇ ಕುಟುಂಬದ ನಾಲ್ವರ ಕೊಲೆ

ದಂಪತಿಯ ಕೊಲೆಯ ಬಗ್ಗೆ ಮಾಹಿತಿ ಇಲ್ಲದೇ ಇಂದು ಮುಂಜಾನೆ ಮನೆಗೆ ಮನೆ ಕೆಲಸಕ್ಕೆ ಬಂದಿದ್ದ ಮಹಿಳೆ, ಜೊತೆ ಕೊಲೆ ಸುದ್ದಿ ಕೇಳಿ ಭಾಗ್ಯ ನಗರದಲ್ಲಿರುವ ಜನರು ಕೂಡ ಶಾಕ್ ಆಗಿದ್ದರು. ದಂಪತಿ ಯಾರ ತಂಟೆಗೂ ಹೋಗುತ್ತಿರಲಿಲ್ಲ, ತಾವಾಯ್ತು ತಮ್ಮ ಕೆಲಸವಾಯ್ತು ಎಂದು ಇದ್ದರಂತೆ. ಕಳೆದ ಬುಧವಾರವಷ್ಟೇ ದಂಪತಿ, ಗದಗ್​ಗೆ ಹೋಗಿ ಬರೋದಾಗಿ ಹೇಳಿ, ಮನೆ ಕೆಲಸದವಳಿಗೆ ಶುಕ್ರವಾರ ಕೆಲಸಕ್ಕೆ ಬಾ ಎಂದು ಹೇಳಿ ಹೋಗಿದ್ದರಂತೆ.

ಇನ್ನು ದಂಪತಿಯ ಏಕೈಕ ಪುತ್ರಿಯಾಗಿರುವ ಆಕಾಂಕ್ಷಾಳ ಬರ್ತಡೆ ನಿನ್ನೆ ರಾತ್ರಿ ಇತ್ತಂತೆ. ಹೀಗಾಗಿ ಗದಗ್​ನ ಸಂಬಂಧಿಗಳ ಮನೆಯಲ್ಲಿಯೇ ಬರ್ತಡೆ ಮಾಡಿದ್ದರು. ಪರಶುರಾಮ್ ಬರ್ತಡೆಯ ಪೋಟೋಗಳನ್ನು ವಾಟ್ಸಪ್ ಸ್ಟೇಟಸ್ ಕೂಡ ರಾತ್ರಿ ಹಾಕಿದ್ದರು. ಪರಶುರಾಮ್ ಪುತ್ರಿ ಕೆಲ ದಿನಗಳ ಹಿಂದೆ ನಡೆದಿರುವ ಎಸ್ ಎಸ್ ಎಲ್ ಸಿ ಪರೀಕ್ಷೆಯನ್ನು ಬರೆದಿದ್ದು, ಫಲಿತಾಂಶದ ನಿರೀಕ್ಷೆಯಲ್ಲಿದ್ದಳು. ಆದ್ರೆ ಮಧ್ಯರಾತ್ರಿ ಸಮಯದಲ್ಲಿ ಹಂತಕರ ಅಟ್ಟಹಾಸಕ್ಕೆ ಮೂವರು ಕೂಡ ಬಲಿಯಾಗಿದ್ದಾರೆ.

ಸದ್ಯ ಪರಶುರಾಮ್​ಗೆ ಕೊಪ್ಪಳದಲ್ಲಿ ಯಾವುದೇ ಸಂಬಂಧಿಗಳು ಇಲ್ಲ. ಹೆತ್ತವರು ಕೂಡ ಅನೇಕ ವರ್ಷಗಳ ಹಿಂದೆಯೇ ಮೃತಪಟ್ಟಿದ್ದಾರೆ. ಹೀಗಾಗಿ ಕೊಪ್ಪಳದಲ್ಲಿರುವ ಮನೆಗೆ ಬೀಗ ಬಿದ್ದಿದೆ. ಆದ್ರೆ, ಎಲ್ಲರ ಜೊತೆ ಚೆನ್ನಾಗಿದ್ದ ದಂಪತಿಯ ಬರ್ಬರ ಕೊಲೆ, ಕೊಪ್ಪಳ ಜನರು ಬೆಚ್ಚಿಬೀಳುವಂತೆ ಮಾಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ