AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಪ್ಪಳ: ತುಂಗಭದ್ರಾ ಡ್ಯಾಂನಿಂದ 1 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ

ಭಾರಿ ಮಳೆಗೆ ಮಾರ್ಕಂಡೇಯ ಅಣೆಕಟ್ಟು ಕೋಡಿ ಹರಿದಿದೆ. ಕೋಲಾರ ಜಿಲ್ಲೆ ಬಂಗಾರಪೇಟೆ ತಾಲೂಕಿನ ಬೂದಿಕೋಟೆ ಬಳಿ ಇರುವ ಮಾರ್ಕಂಡೇಯ ಅಣೆಕಟ್ಟು ಹದಿನೇಳು ವರ್ಷಗಳ ನಂತರ ಕೋಡಿ ಹರಿದಿದೆ.

ಕೊಪ್ಪಳ: ತುಂಗಭದ್ರಾ ಡ್ಯಾಂನಿಂದ 1 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ
ತುಂಗಭದ್ರಾ ಡ್ಯಾಂ
TV9 Web
| Edited By: |

Updated on:Nov 20, 2021 | 9:35 PM

Share

ಕೊಪ್ಪಳ: ತುಂಗಭದ್ರಾ ಡ್ಯಾಂನಿಂದ 1 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ. ಒಳಹರಿವು ಹೆಚ್ಚಳ ಹಿನ್ನೆಲೆ ಜಲಾಶಯದಿಂದ ನೀರು ರಿಲೀಸ್ ಮಾಡಲಾಗಿದೆ. ಕೊಪ್ಪಳ ತಾಲೂಕಿನ ಮುನಿರಾಬಾದ್ ಬಳಿಯ ಟಿಬಿ ಡ್ಯಾಂನ ನದಿ ಪಾತ್ರದ ಜನರಿಗೆ ಎಚ್ಚರಿಕೆಯಿಂದ ಇರುವಂತೆ ‌ಸೂಚನೆ ಕೊಡಲಾಗಿದೆ. ಕೊಪ್ಪಳ ಜಿಲ್ಲಾಧಿಕಾರಿ ವಿಕಾಸ್ ಕಿಶೋರ್​ರಿಂದ ಮಾಹಿತಿ ಲಭ್ಯವಾಗಿದೆ.

ನಿರಂತರ ‌ಮಳೆಯಿಂದಾಗಿ ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಬಸವನದುರ್ಗ ಗ್ರಾಮದಲ್ಲಿ ಮನೆಗಳು ಶಿಥಿಲಗೊಂಡಿದೆ. ಮಳೆಯಿಂದ 10ಕ್ಕೂ ಹೆಚ್ಚು ಮನೆಗಳು ಶಿಥಿಲಗೊಂಡಿದೆ. ಪರ್ಯಾಯ ವ್ಯವಸ್ಥೆ ಕಲ್ಪಿಸುವಂತೆ ಗ್ರಾಮಸ್ಥರು ಒತ್ತಾಯ ಮಾಡಿದ್ದಾರೆ. ಭಾರಿ ಮಳೆಗೆ ಮಾರ್ಕಂಡೇಯ ಅಣೆಕಟ್ಟು ಕೋಡಿ ಹರಿದಿದೆ. ಕೋಲಾರ ಜಿಲ್ಲೆ ಬಂಗಾರಪೇಟೆ ತಾಲೂಕಿನ ಬೂದಿಕೋಟೆ ಬಳಿ ಇರುವ ಮಾರ್ಕಂಡೇಯ ಅಣೆಕಟ್ಟು ಹದಿನೇಳು ವರ್ಷಗಳ ನಂತರ ಕೋಡಿ ಹರಿದಿದೆ.

ಧಾರಾಕಾರ ಮಳೆಯಿಂದ ಮಾರ್ಕೋನಹಳ್ಳಿ ಡ್ಯಾಂ ಭರ್ತಿ ಆಗಿದೆ. ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಮಾರ್ಕೋನಹಳ್ಳಿ ಹೇಮಾವತಿ ಡ್ಯಾಂ, ಮೇಲ್ಭಾಗದ ಕೆರೆಗಳಿಂದ ಡ್ಯಾಂಗೆ ನೀರು ಬಿಡಲಾಗಿದೆ. ಕೋಡಿ ಬಿದ್ದು ಶಿಂಷಾ ನದಿಯತ್ತ ನೀರು ಹರಿಯುತ್ತಿದೆ. ಮಾರ್ಕೋನಹಳ್ಳಿ ಡ್ಯಾಂನ ಗೇಟ್‌ ತೆಗೆದು ನೀರು ಹೊರಕ್ಕೆ ಬಿಡಲಾಗಿದೆ.

ನಲ್ಲೂರಿನ ಹಳ್ಳದಲ್ಲಿ ಕೊಚ್ಚಿಹೋಗಿ ವೃದ್ಧ ಮೃತಪಟ್ಟ ವಿಚಾರವಾಗಿ ಘಟನಾ ಸ್ಥಳಕ್ಕೆ ದಾವಣಗೆರೆ ಜಿಲ್ಲಾಧಿಕಾರಿ ಬೀಳಗಿ ಭೇಟಿ ನೀಡಿದ್ದಾರೆ. ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ನಲ್ಲೂರು ಗ್ರಾಮ ಹಳ್ಳದಲ್ಲಿ 60 ವರ್ಷದ ಕೆಂಚಪ್ಪ ಕೊಚ್ಚಿಹೋಗಿ ಮೃತಪಟ್ಟಿದ್ದರು. ಈ ಬಗ್ಗೆ ಮಹಾಂತೇಶ್ ಬೀಳಗಿ ಸೂಕ್ತ ಪರಿಹಾರದ ಭರವಸೆ ನೀಡಿದ್ದಾರೆ. ನೀರು ನುಗ್ಗಿ ಜಲಾವೃತವಾದ ಜಮೀನುಗಳಿಗೆ ಡಿಸಿ ಭೇಟಿ ನೀಡಿದ್ದಾರೆ.

ರಾಜ್ಯದಲ್ಲಿ ಭಾರಿ ಮಳೆಯಿಂದ ಬೆಳೆಹಾನಿ; ಕೇಂದ್ರ ತಂಡದಿಂದ ವರದಿ ಮಾಡಿಸಲು ಪ್ರಧಾನಿ ನರೇಂದ್ರ ಮೋದಿಗೆ ಮನವಿ ಮಾಡುತ್ತೇನೆ ಕರ್ನಾಟಕ ರಾಜ್ಯದಲ್ಲಿ ಭಾರಿ ಮಳೆಯಿಂದಾಗಿ ಅಪಾರ ಬೆಳೆ ಹಾನಿ ಆಗಿದೆ. ಈ ಬಗ್ಗೆ ವಾಸ್ತವ ವರದಿ ನೀಡಬೇಕೆಂದು ಮನವಿ ಮಾಡುತ್ತೇನೆ. ಕೇಂದ್ರ ತಂಡದಿಂದ ವರದಿ ಮಾಡಿಸಲು ಪ್ರಧಾನಿ ನರೇಂದ್ರ ಮೋದಿಗೆ ಮನವಿ ಮಾಡುತ್ತೇನೆ ಎಂದು ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಗ್ರಾ.ಪಂ. ಸದಸ್ಯತ್ವಕ್ಕೆ ರಾಜೀನಾಮೆ ‌ನೀಡಲು ಹಿಂಜರಿಕೆ ಮಾಡುವ ಈ ಕಾಲದಲ್ಲಿ ನಾನು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ. ಹಾಗಾಗಿ ಯಾವುದೇ ಕಾರಣಕ್ಕೂ ಮನೆಯಲ್ಲಿ ಕೂರಲ್ಲ. ರಾಜ್ಯದ ಉದ್ದಗಲಕ್ಕೂ ಓಡಾಡಿ ಪಕ್ಷ ಸಂಘಟಿಸುತ್ತೇನೆ. 2023ರ ಚುನಾವಣೆಯಲ್ಲಿ ಪಕ್ಷ ಅಧಿಕಾರಕ್ಕೆ ತರುತ್ತೇನೆ ಎಂದು ವಿಜಯಪುರದಲ್ಲಿ ಮಾಜಿ ಸಿಎಂ ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ,

ಇದನ್ನೂ ಓದಿ: ಉತ್ತರ ಕರ್ನಾಟಕದ ಹಲವೆಡೆ ಭಾರಿ ಮಳೆ ಸಾಧ್ಯತೆ; ಕೆಲ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

ಇದನ್ನೂ ಓದಿ: ಎಡಬಿಡದ ಮಳೆ ಮತ್ತು ಪ್ರವಾಹಗಳಿಗೆ ತುತ್ತಾಗಿರುವ ಆಂಧ್ರಪದ್ರದೇಶದಲ್ಲಿ ಹೃದಯ ವಿದ್ರಾವಕ ದೃಶ್ಯಗಳು ಕಾಣುತ್ತಿವೆ

Published On - 8:21 pm, Sat, 20 November 21

Follow Us
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ