AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಪ್ಪಳಕ್ಕೂ ಕಾಲಿಟ್ಟ ವಕ್ಫ್​ ವಿವಾದ: ಸರ್ಕಾರಿ ಜಾಗ, ರೈತರ ಜಮೀನು ಪಹಣಿಯಲ್ಲಿ ವಕ್ಫ್​ ಹೆಸರು

ವಕ್ಫ್ ಬೋರ್ಡ್ ಕೊಪ್ಪಳ ಜಿಲ್ಲೆಯ ರೈತರ ಭೂಮಿಯನ್ನು ಅಕ್ರಮವಾಗಿ ವಶಪಡಿಸಿಕೊಳ್ಳುತ್ತಿದೆ ಎಂಬ ಆರೋಪ ಕೇಳಿಬಂದಿದೆ. ರೈತರ ಪಹಣಿಯಲ್ಲಿ ವಕ್ಫ್ ಎಂದು ನಮೂದಿಸಲಾಗಿದೆ. ನೋಟಿಸ್ ನೀಡದೆ ಪಹಣಿಯಲ್ಲಿ ವಕ್ಫ್ ಅಂತ ನಮೂದು​ ಮಾಡಲಾಗಿದೆ ಎಂದು ರೈತರು ಆರೋಪಿಸುತ್ತಿದ್ದಾರೆ.

ಕೊಪ್ಪಳಕ್ಕೂ ಕಾಲಿಟ್ಟ ವಕ್ಫ್​ ವಿವಾದ: ಸರ್ಕಾರಿ ಜಾಗ, ರೈತರ ಜಮೀನು ಪಹಣಿಯಲ್ಲಿ ವಕ್ಫ್​ ಹೆಸರು
ರೈತರ ಜಮೀನು ಪಹಣಿಯಲ್ಲಿ ವಕ್ಫ್​​ ಹೆಸರು
ಸಂಜಯ್ಯಾ ಚಿಕ್ಕಮಠ
| Edited By: |

Updated on:Oct 31, 2024 | 10:20 AM

Share

ಕೊಪ್ಪಳ, ಅಕ್ಟೋಬರ್​ 31: ಕರ್ನಾಟಕದಲ್ಲಿ ವಕ್ಫ್ (Waqf)​​ ಆಸ್ತಿ ವಿಚಾರ ಸಾಕಷ್ಟು ಚರ್ಚೆಯಾಗುತ್ತಿದೆ. ವಕ್ಫ್​ ವಿವಾದ ಕೊಪ್ಪಳ (Koppal) ಜಿಲ್ಲೆಗೂ ಕಾಲಿಟ್ಟಿದೆ. ಕೊಪ್ಪಳ ಜಿಲ್ಲೆಯ ರೈತರ (Farmers) ಮತ್ತು ಸರ್ಕಾರ ಕಚೇರಿಯ ಜಾಗದ ಪಹಣಿಯಲ್ಲಿ ವಕ್ಫ್ ಬೋರ್ಡ್​​​ ಎಂದು ನಮೂದಾಗಿದೆ. ಕುಕನೂರು ಪಟ್ಟಣದಲ್ಲಿರುವ ಪಟ್ಟಣ ಪಂಚಾಯತ್ ಕಚೇರಿಯ 13 ಗುಂಟೆ ಜಾಗ ವಕ್ಫ್​​ಗೆ ಸೇರಿದೆ ಅಂತ ಪಹಣಿಯಲ್ಲಿ ನಮೂದಾಗಿದೆ.

ಕೊಪ್ಪಳ ವಿಭಾಗಾಧಿಕಾರಿ ಆದೇಶ ಅನ್ವಯ ಕುಕನೂರ ಉಪ ತಹಶಿಲ್ದಾರ್ 2019ರಲ್ಲಿ​ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಹೆಸರಿನಲ್ಲಿರುವ ಸರ್ವೇ ನಂಬರ್ 54ರ 13 ಗುಂಟೆ ಜಾಗದ ಪಹಣಿಯಲ್ಲಿ ವಕ್ಫ್​ ಬೋರ್ಡ್​​ ನಮೂದಿಸಿದ್ದಾರೆ.

ರೈತರ ಪಹಣಿಯಲ್ಲಿ ವಕ್ಫ್​

ಕೊಪ್ಪಳ ತಾಲೂಕಿನ ಕವಲೂರು, ಹೂವಿನಾಳ ಕುಕನೂರು, ಯಲಬುರ್ಗಾ ತಾಲೂಕಿನ ಹಲವು ರೈತರ ಜಮೀನು ಪಹಣಿಯ ಕಾಲಂ 11ರಲ್ಲಿ ವಕ್ಫ್ ಬೋರ್ಡ್​ ಅಂತ ಹೆಸರು ನಮೂದಾಗಿದೆ. ಅನೇಕ ರೈತರಿಗೆ ನೋಟಿಸ್ ನೀಡದೆ 2021ರಲ್ಲಿ ಪಹಣಿಯಲ್ಲಿ ವಕ್ಫ್​​ ಬೋರ್ಡ್​ ಅಂತ ನಮೂದಾಗಿದೆ. ವಕ್ಫ್​ ಬೋರ್ಡ್​ 2023ರಲ್ಲಿ ಅನೇಕ ರೈತರಿಗೆ ನೋಟಿಸ್ ನೀಡಿದೆ. ತಮ್ಮ ಮೂಲ ದಾಖಲೆಗಳನ್ನು ಹಾಜರುಪಡಿಸುವಂತೆ ಹೇಳಿದೆ. ​​

ವಕ್ಫ್​ ವಿವಾದ ಹೆಚ್ಚಾಗುತ್ತಿದ್ದಂತೆ ರೈತರು ತಮ್ಮ ಪಹಣಿ ಪರಿಶೀಲಿಸಿದಾಗ ವಿಚಾರ ಬೆಳಕಿಗೆ ಬಂದಿದೆ. ಪಹಣಿಯಲ್ಲಿ ವಕ್ಫ್​​ ಆಸ್ತಿ ಎಂದು ಉಲ್ಲೇಖಿಸಿದ್ದನ್ನು ಕಂಡು ರೈತರು ಕಂಗಾಲಾಗಿದ್ದಾರೆ.

ಇದನ್ನೂ ಓದಿ: ರೈತರನ್ನು ಟೆಂಟ್​ನಲ್ಲಿ ಕೂರಿಸಿದವರನ್ನು ಜೈಲಿನಲ್ಲಿ ಕೂರಿಸೋಣ ಎಂದ ಜೋಶಿ

ಕೆಲವು ಧಾರ್ಮಿಕ ಕೇಂದ್ರಗಳು ಸಹ ವಕ್ಫ್​​​​ಗೆ ಸೇರಿಕೊಳ್ಳುತ್ತವೆ: ದಿನೇಶ್​

ರೈತರ ಭೂಮಿ ವಕ್ಫ್​ಗೆ ಸೇರಿಸಿದ್ದಾರೆಂಬುದು ಸುಳ್ಳು, ಅರೆಬರೆ ಸುದ್ದಿ. ಹಿಂದಿನ ಬಿಜೆಪಿ ಅವಧಿಯಲ್ಲಿ ವಕ್ಫ್​ ವಿಚಾರದಲ್ಲಿ ನೋಟಿಸ್​ ನೀಡಲಾಗಿದೆ. ರೈತರ ಜಮೀನುಗಳನ್ನು ವಕ್ಫ್​ ಬೋರ್ಡ್​ ಕಿತ್ತುಕೊಳ್ಳಲು ಸಾಧ್ಯವಿಲ್ಲ. ವಕ್ಫ್​ ಆಸ್ತಿ ಬಗ್ಗೆ ಇರುವ ಗೊಂದಲವನ್ನು ನಿವಾರಣೆ ಮಾಡುತ್ತೇವೆ. ದಾನ ಮಾಡಿರುವ ಭೂಮಿ ವಕ್ಫ್​​ ಬೋರ್ಡ್​ಗೆ ಸೇರಿರುತ್ತೆ. ಕೆಲವು ಧಾರ್ಮಿಕ ಕೇಂದ್ರಗಳು ಸಹ ವಕ್ಫ್​​​​ ಆಸ್ತಿಗೆ ಸೇರಿಕೊಳ್ಳುತ್ತವೆ. ಈ ಸಂಬಂಧ ಈಗಾಗಲೇ ಸಚಿವ ಎಂ.ಬಿ.ಪಾಟೀಲ್ ಸ್ಪಷ್ಟನೆ ನೀಡಿದ್ದಾರೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.

ಈ ವಿಚಾರದಲ್ಲಿ ಬಿಜೆಪಿಯವರು ಮುಸ್ಲಿಮರ ಹೆಸರನ್ನು ತಂದಿದ್ದಾರೆ. ಹಿಂದೂ, ಮುಸ್ಲಿಮರ ನಡುವೆ ದ್ವೇಷ ಮೂಡಿಸುವುದೇ ಬಿಜೆಪಿ ಉದ್ದೇಶ. ಕಾಂಗ್ರೆಸ್ ದೇಶ ಮತ್ತು ರಾಜ್ಯದಲ್ಲಿ ಭೂಸುಧಾರಣೆ ಕಾಯ್ದೆ ಜಾರಿ ಮಾಡಿದೆ​​​​. ಹಿಂದೆ ಕಾಂಗ್ರೆಸ್ ಸರ್ಕಾರ ರೈತರಿಗೆ ಜಮೀನ್ದಾರರಿಂದ ಭೂಮಿ ಕೊಡಿಸಿದೆ. ಯಾರು ಕೂಡ ರಾಜ್ಯದ ರೈತರಿಗೆ ಮೋಸ ಮಾಡಲು ಸಾಧ್ಯವಿಲ್ಲ ಎಂದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 8:32 am, Thu, 31 October 24

Follow Us
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು
ಹುಲಿ ಕಾರ್ತಿಕ್​​ಗೆ ಚಾಲೆಂಜ್ ಮಾಡಿದ ಅನುಶ್ರೀ; ಗೆದ್ದಿದ್ದು ಯಾರು?
ಹುಲಿ ಕಾರ್ತಿಕ್​​ಗೆ ಚಾಲೆಂಜ್ ಮಾಡಿದ ಅನುಶ್ರೀ; ಗೆದ್ದಿದ್ದು ಯಾರು?
ಪೆನ್ ಕ್ಯಾಪ್ ನುಂಗಿದ ಬಾಲಕನ ಜೀವ ಉಳಿಸಿದ ವೈದ್ಯರು
ಪೆನ್ ಕ್ಯಾಪ್ ನುಂಗಿದ ಬಾಲಕನ ಜೀವ ಉಳಿಸಿದ ವೈದ್ಯರು