AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮ ಮತ್ತು ರಾಮನ ಭಂಟ ಆಂಜನೇಯ ಮೊದಲು ಭೇಟಿಯಾಗಿದ್ದು ಎಲ್ಲಿ? ಇಲ್ಲಿ ರಾಮನ ಪಾದುಕೆಯೂ ಇದೆ

ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣವಾಗುತ್ತಿದ್ದು ಕರ್ನಾಟಕದಲ್ಲಿ ಹನುಮಂತ ಜನ್ಮ ಸ್ಥಳವಿರುವುದು ರಾಜ್ಯಕ್ಕೆ ಹೆಮ್ಮೆ ಹೆಚ್ಚಿಸಿದೆ. ಜೊತೆಗೆ ರಾಮ ಮತ್ತು ಹನುಮಂತ ಮೊದಲ ಬಾರಿಗೆ ಭೇಟಿಯಾಗಿದ್ದು ಕೂಡ ಕರ್ನಾಟಕದಲ್ಲೇ. ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಆನೆಗೊಂದಿಯ ತುಂಗಭದ್ರಾ ನದಿ ದಡದಲ್ಲಿರುವ ಚಂಚಲಕೋಟೆಯಲ್ಲಿದೆ ಈ ಐತಿಹಾಸಿಕ ಸ್ಥಳ.

ರಾಮ ಮತ್ತು ರಾಮನ ಭಂಟ ಆಂಜನೇಯ ಮೊದಲು ಭೇಟಿಯಾಗಿದ್ದು ಎಲ್ಲಿ? ಇಲ್ಲಿ ರಾಮನ ಪಾದುಕೆಯೂ ಇದೆ
ರಾಮ ಮತ್ತು ಆಂಜನೇಯ ಮೊದಲ ಬಾರಿಗೆ ಭೇಟಿಯಾದ ಸ್ಥಳ
Follow us
ಸಂಜಯ್ಯಾ ಚಿಕ್ಕಮಠ, ಕೊಪ್ಪಳ
| Updated By: ಆಯೇಷಾ ಬಾನು

Updated on: Jan 06, 2024 | 8:00 AM

ಕೊಪ್ಪಳ, ಜ.06: ಅದೆಷ್ಟೋ ವರ್ಷಗಳ ಕನಸು ಈಗ ನನಸಾಗುತ್ತಿದೆ. ಅಯೋಧ್ಯೆಯಲ್ಲಿ ಮರ್ಯಾದಾ ಪುರುಷ ರಾಮನ ಭವ್ಯ ಮಂದಿರ ಸಿದ್ಧವಾಗುತ್ತಿದೆ (Ayodhya Ram Mandir). ಮತ್ತೊಂದೆಡೆ ಕರ್ನಾಟಕದಲ್ಲಿ ರಾಮನ ಪಾದ ಸ್ಪರ್ಶವಾದ ಅನೇಕ ಪ್ರಸಿದ್ಧ ಪುಣ್ಯ ಕ್ಷೇತ್ರಗಳಿವೆ. ಇನ್ನು ರಾಮಾಯಣ ನೆನಪಿಸಿಕೊಂಡರೆ ಸಾಕು ತಕ್ಷಣ ನಮ್ಮ ಮನಸ್ಸಿಗೆ ಭಗವಾನ್‌ ಶ್ರೀರಾಮ ಮತ್ತು ಸೀತಾ ದೇವಿ ಜೊತೆಗೆ ರಾಮನ ಪರಮ ಭಂಟ ಹನುಮಂತ ಕೂಡ ಬರುತ್ತಾನೆ. ಶ್ರೀರಾಮನ ಸೇವೆಗಾಗಿ ಹನುಮಂತನು (Lord Hanuman) ಮಾಡಿದ ಲೀಲೆಗಳು ಒಂದಾ ಎರಡಾ? ಬನ್ನಿ ರಾಮ ಮತ್ತು ರಾಮನ ಭಂಟ ಆಂಜನೇಯ ಮೊದಲು ಭೇಟಿಯಾಗಿದ್ದು ಎಲ್ಲಿ? ಈ ಸ್ಥಳದ ವಿಶೇಷತೆ ಬಗ್ಗೆ ಇಲ್ಲಿ ತಿಳಿಯಿರಿ.

ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣವಾಗುತ್ತಿದ್ದು ಕರ್ನಾಟಕದಲ್ಲಿ ಹನುಮಂತ ಜನ್ಮ ಸ್ಥಳವಿರುವುದು ರಾಜ್ಯಕ್ಕೆ ಹೆಮ್ಮೆ ಹೆಚ್ಚಿಸಿದೆ. ಜೊತೆಗೆ ರಾಮ ಮತ್ತು ಹನುಮಂತ ಮೊದಲ ಬಾರಿಗೆ ಭೇಟಿಯಾಗಿದ್ದು ಕೂಡ ಕರ್ನಾಟಕದಲ್ಲೇ. ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಆನೆಗೊಂದಿಯ ತುಂಗಭದ್ರಾ ನದಿ ದಡದಲ್ಲಿರುವ ಚಂಚಲಕೋಟೆಯಲ್ಲಿದೆ ಈ ಐತಿಹಾಸಿಕ ಸ್ಥಳ. ವಾಲಿಯ ಭಯದಿಂದ ಸುಗ್ರೀವ ಮತ್ತು ಆಂಜನೇಯ ಚಂಚಲಕೋಟೆಯಲ್ಲಿ ಅಡಗಿಕೊಂಡಿರುತ್ತಾರೆ. ಇದೇ ಸಮಯದಲ್ಲಿ ಸೀತೆಯನ್ನು ಹುಡುಕಿಕೊಂಡು ರಾಮ ಲಕ್ಷ್ಮಣರು ಹೋಗುತ್ತಿರುತ್ತಾರೆ. ಚಂಚಲಕೋಟೆಯಲ್ಲಿದ್ದ ಆಂಜನೇಯ ಮತ್ತು ಸುಗ್ರೀವರಿಬ್ಬರೂ ರಾಮ ಲಕ್ಷ್ಮಣರನ್ನು ನೋಡುತ್ತಾರೆ. ವಾಲಿಯ ಬಂಟರೇ ಬಂದಿರಬಹುದು ಅಂತ ಆಂಜನೇಯ ಮತ್ತು ಸುಗ್ರೀವ ಭಯ ಪಡುತ್ತಾರೆ. ಆದರೆ ತಾವು ರಾಮ ಲಕ್ಷ್ಮಣರು, ಸೀತೆಯನ್ನು ಹುಡುಕಿಕೊಂಡು ಹೋಗುತ್ತಿರುವುದಾಗಿ ಆಂಜನೇಯ ಮತ್ತು ಸುಗ್ರೀವಗೆ ಹೇಳುತ್ತಾರೆ. ಇದೇ ಚಂಚಲಕೋಟೆಯಲ್ಲಿ ರಾಮ ಮತ್ತು ಆಂಜನೇಯರ ಭೇಟಿಯಾಗುತ್ತದೆ.

ರಾಮ ಮತ್ತು ಆಂಜನೇಯರ ಮೊದಲು ಭೇಟಿಯಾಗಿದ್ದು ಇದೇ ತುಂಗಭದ್ರಾ ದಡದಲ್ಲಿರುವ ಚಂಚಲಕೋಟೆಯಲ್ಲಿ. ಈ ಸ್ಥಳದಲ್ಲಿ ರಾಮನ ಪಾದುಕೆಗಳು ಕೂಡಾ ಇವೆ. ಕಲ್ಲಿನ ಬಂಡೆ ಮೇಲೆ ರಾಮನ ಪಾದುಕೆಗಳಿವೆ.

ಕೊಪ್ಪಳಕ್ಕೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಹಿಂದೊಮ್ಮೆ ಪಾಕಿಸ್ತಾನ ಫೈರ್ ಮಾಡಿದ ಮಿಸೈಲ್ 5 ವರ್ಷದ ನಂತರ ಸಿಡಿದಿತ್ತು!
ಹಿಂದೊಮ್ಮೆ ಪಾಕಿಸ್ತಾನ ಫೈರ್ ಮಾಡಿದ ಮಿಸೈಲ್ 5 ವರ್ಷದ ನಂತರ ಸಿಡಿದಿತ್ತು!
ಆಡಿದ ಮಾತಿಗೆ ಕ್ಷಮೆ ಯಾಚಿಸಿದ ಮಧ್ಯಪ್ರದೇಶದ ಮಂತ್ರಿ ವಿಜಯ್ ಶಾ
ಆಡಿದ ಮಾತಿಗೆ ಕ್ಷಮೆ ಯಾಚಿಸಿದ ಮಧ್ಯಪ್ರದೇಶದ ಮಂತ್ರಿ ವಿಜಯ್ ಶಾ
ಒಪ್ಪಿಕೊಂಡಷ್ಟು ಅನುದಾನವನ್ನು ಕೇಂದ್ರ ಬಿಡುಗಡೆ ಮಾಡಬೇಕು: ಸಿದ್ದರಾಮಯ್ಯ
ಒಪ್ಪಿಕೊಂಡಷ್ಟು ಅನುದಾನವನ್ನು ಕೇಂದ್ರ ಬಿಡುಗಡೆ ಮಾಡಬೇಕು: ಸಿದ್ದರಾಮಯ್ಯ
ರಾಮನ ಹಾಡು ಹಾಡಿ ಮಗುವ ಮಲಗಿಸಿದ ನಟಿ ಹರಿಪ್ರಿಯಾ, ವಿಡಿಯೋ ನೋಡಿ
ರಾಮನ ಹಾಡು ಹಾಡಿ ಮಗುವ ಮಲಗಿಸಿದ ನಟಿ ಹರಿಪ್ರಿಯಾ, ವಿಡಿಯೋ ನೋಡಿ
ಸಿಂದಗಿ ಡಿಪೋದಲ್ಲಿ ಡೀಸೆಲ್​​ ಸಮಸ್ಯೆ, ನಿಂತಲ್ಲೇ ನಿಂತ ಬಸ್​ಗಳು..!
ಸಿಂದಗಿ ಡಿಪೋದಲ್ಲಿ ಡೀಸೆಲ್​​ ಸಮಸ್ಯೆ, ನಿಂತಲ್ಲೇ ನಿಂತ ಬಸ್​ಗಳು..!
ರೌಡಿಶೀಟರ್ ಎಂದ ಮಾತ್ರಕ್ಕೆ ಎಲ್ಲರೂ ರೌಡಿಶೀಟರ್​​ಗಲ್ಲ: ಸಿಟಿ ರವಿ
ರೌಡಿಶೀಟರ್ ಎಂದ ಮಾತ್ರಕ್ಕೆ ಎಲ್ಲರೂ ರೌಡಿಶೀಟರ್​​ಗಲ್ಲ: ಸಿಟಿ ರವಿ
ಅನೀಸುದ್ದೀನ್ ಹೆಸರಿನ ವ್ಯಕ್ತಿಯಿಂದ ಎಕ್ಸ್ ಹ್ಯಾಂಡಲ್​ನಲ್ಲಿ ಪೋಸ್ಟ್​
ಅನೀಸುದ್ದೀನ್ ಹೆಸರಿನ ವ್ಯಕ್ತಿಯಿಂದ ಎಕ್ಸ್ ಹ್ಯಾಂಡಲ್​ನಲ್ಲಿ ಪೋಸ್ಟ್​
ಭಾರತದ ಷರತ್ತುಗಳನ್ನು ಪ್ರಧಾನಿ ಮೋದಿ ಸ್ಪಷ್ಟಪಡಿಸಿದ್ದಾರೆ: ಯದುವೀರ್
ಭಾರತದ ಷರತ್ತುಗಳನ್ನು ಪ್ರಧಾನಿ ಮೋದಿ ಸ್ಪಷ್ಟಪಡಿಸಿದ್ದಾರೆ: ಯದುವೀರ್
ಮೈಸೂರು ಕ್ರಿಕೆಟ್ ಸ್ಟೇಡಿಯಂ ಬಗ್ಗೆ ಸಂಸದ ಯದುವೀರ್ ಮಹತ್ವದ ಮಾಹಿತಿ
ಮೈಸೂರು ಕ್ರಿಕೆಟ್ ಸ್ಟೇಡಿಯಂ ಬಗ್ಗೆ ಸಂಸದ ಯದುವೀರ್ ಮಹತ್ವದ ಮಾಹಿತಿ
ಮಳೆಗಾಲವನ್ನು ನೆನಪಿಸಿಕೊಳ್ಳಲೂ ಸಾಯಿ ಲೇಔಟ್ ಜನ ತಯಾರಿಲ್ಲ!
ಮಳೆಗಾಲವನ್ನು ನೆನಪಿಸಿಕೊಳ್ಳಲೂ ಸಾಯಿ ಲೇಔಟ್ ಜನ ತಯಾರಿಲ್ಲ!