AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮ ಮತ್ತು ರಾಮನ ಭಂಟ ಆಂಜನೇಯ ಮೊದಲು ಭೇಟಿಯಾಗಿದ್ದು ಎಲ್ಲಿ? ಇಲ್ಲಿ ರಾಮನ ಪಾದುಕೆಯೂ ಇದೆ

ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣವಾಗುತ್ತಿದ್ದು ಕರ್ನಾಟಕದಲ್ಲಿ ಹನುಮಂತ ಜನ್ಮ ಸ್ಥಳವಿರುವುದು ರಾಜ್ಯಕ್ಕೆ ಹೆಮ್ಮೆ ಹೆಚ್ಚಿಸಿದೆ. ಜೊತೆಗೆ ರಾಮ ಮತ್ತು ಹನುಮಂತ ಮೊದಲ ಬಾರಿಗೆ ಭೇಟಿಯಾಗಿದ್ದು ಕೂಡ ಕರ್ನಾಟಕದಲ್ಲೇ. ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಆನೆಗೊಂದಿಯ ತುಂಗಭದ್ರಾ ನದಿ ದಡದಲ್ಲಿರುವ ಚಂಚಲಕೋಟೆಯಲ್ಲಿದೆ ಈ ಐತಿಹಾಸಿಕ ಸ್ಥಳ.

ರಾಮ ಮತ್ತು ರಾಮನ ಭಂಟ ಆಂಜನೇಯ ಮೊದಲು ಭೇಟಿಯಾಗಿದ್ದು ಎಲ್ಲಿ? ಇಲ್ಲಿ ರಾಮನ ಪಾದುಕೆಯೂ ಇದೆ
ರಾಮ ಮತ್ತು ಆಂಜನೇಯ ಮೊದಲ ಬಾರಿಗೆ ಭೇಟಿಯಾದ ಸ್ಥಳ
ಸಂಜಯ್ಯಾ ಚಿಕ್ಕಮಠ
| Edited By: ಆಯೇಷಾ ಬಾನು|

Updated on: Jan 06, 2024 | 8:00 AM

Share

ಕೊಪ್ಪಳ, ಜ.06: ಅದೆಷ್ಟೋ ವರ್ಷಗಳ ಕನಸು ಈಗ ನನಸಾಗುತ್ತಿದೆ. ಅಯೋಧ್ಯೆಯಲ್ಲಿ ಮರ್ಯಾದಾ ಪುರುಷ ರಾಮನ ಭವ್ಯ ಮಂದಿರ ಸಿದ್ಧವಾಗುತ್ತಿದೆ (Ayodhya Ram Mandir). ಮತ್ತೊಂದೆಡೆ ಕರ್ನಾಟಕದಲ್ಲಿ ರಾಮನ ಪಾದ ಸ್ಪರ್ಶವಾದ ಅನೇಕ ಪ್ರಸಿದ್ಧ ಪುಣ್ಯ ಕ್ಷೇತ್ರಗಳಿವೆ. ಇನ್ನು ರಾಮಾಯಣ ನೆನಪಿಸಿಕೊಂಡರೆ ಸಾಕು ತಕ್ಷಣ ನಮ್ಮ ಮನಸ್ಸಿಗೆ ಭಗವಾನ್‌ ಶ್ರೀರಾಮ ಮತ್ತು ಸೀತಾ ದೇವಿ ಜೊತೆಗೆ ರಾಮನ ಪರಮ ಭಂಟ ಹನುಮಂತ ಕೂಡ ಬರುತ್ತಾನೆ. ಶ್ರೀರಾಮನ ಸೇವೆಗಾಗಿ ಹನುಮಂತನು (Lord Hanuman) ಮಾಡಿದ ಲೀಲೆಗಳು ಒಂದಾ ಎರಡಾ? ಬನ್ನಿ ರಾಮ ಮತ್ತು ರಾಮನ ಭಂಟ ಆಂಜನೇಯ ಮೊದಲು ಭೇಟಿಯಾಗಿದ್ದು ಎಲ್ಲಿ? ಈ ಸ್ಥಳದ ವಿಶೇಷತೆ ಬಗ್ಗೆ ಇಲ್ಲಿ ತಿಳಿಯಿರಿ.

ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣವಾಗುತ್ತಿದ್ದು ಕರ್ನಾಟಕದಲ್ಲಿ ಹನುಮಂತ ಜನ್ಮ ಸ್ಥಳವಿರುವುದು ರಾಜ್ಯಕ್ಕೆ ಹೆಮ್ಮೆ ಹೆಚ್ಚಿಸಿದೆ. ಜೊತೆಗೆ ರಾಮ ಮತ್ತು ಹನುಮಂತ ಮೊದಲ ಬಾರಿಗೆ ಭೇಟಿಯಾಗಿದ್ದು ಕೂಡ ಕರ್ನಾಟಕದಲ್ಲೇ. ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಆನೆಗೊಂದಿಯ ತುಂಗಭದ್ರಾ ನದಿ ದಡದಲ್ಲಿರುವ ಚಂಚಲಕೋಟೆಯಲ್ಲಿದೆ ಈ ಐತಿಹಾಸಿಕ ಸ್ಥಳ. ವಾಲಿಯ ಭಯದಿಂದ ಸುಗ್ರೀವ ಮತ್ತು ಆಂಜನೇಯ ಚಂಚಲಕೋಟೆಯಲ್ಲಿ ಅಡಗಿಕೊಂಡಿರುತ್ತಾರೆ. ಇದೇ ಸಮಯದಲ್ಲಿ ಸೀತೆಯನ್ನು ಹುಡುಕಿಕೊಂಡು ರಾಮ ಲಕ್ಷ್ಮಣರು ಹೋಗುತ್ತಿರುತ್ತಾರೆ. ಚಂಚಲಕೋಟೆಯಲ್ಲಿದ್ದ ಆಂಜನೇಯ ಮತ್ತು ಸುಗ್ರೀವರಿಬ್ಬರೂ ರಾಮ ಲಕ್ಷ್ಮಣರನ್ನು ನೋಡುತ್ತಾರೆ. ವಾಲಿಯ ಬಂಟರೇ ಬಂದಿರಬಹುದು ಅಂತ ಆಂಜನೇಯ ಮತ್ತು ಸುಗ್ರೀವ ಭಯ ಪಡುತ್ತಾರೆ. ಆದರೆ ತಾವು ರಾಮ ಲಕ್ಷ್ಮಣರು, ಸೀತೆಯನ್ನು ಹುಡುಕಿಕೊಂಡು ಹೋಗುತ್ತಿರುವುದಾಗಿ ಆಂಜನೇಯ ಮತ್ತು ಸುಗ್ರೀವಗೆ ಹೇಳುತ್ತಾರೆ. ಇದೇ ಚಂಚಲಕೋಟೆಯಲ್ಲಿ ರಾಮ ಮತ್ತು ಆಂಜನೇಯರ ಭೇಟಿಯಾಗುತ್ತದೆ.

ರಾಮ ಮತ್ತು ಆಂಜನೇಯರ ಮೊದಲು ಭೇಟಿಯಾಗಿದ್ದು ಇದೇ ತುಂಗಭದ್ರಾ ದಡದಲ್ಲಿರುವ ಚಂಚಲಕೋಟೆಯಲ್ಲಿ. ಈ ಸ್ಥಳದಲ್ಲಿ ರಾಮನ ಪಾದುಕೆಗಳು ಕೂಡಾ ಇವೆ. ಕಲ್ಲಿನ ಬಂಡೆ ಮೇಲೆ ರಾಮನ ಪಾದುಕೆಗಳಿವೆ.

ಕೊಪ್ಪಳಕ್ಕೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
Sanjayya Chikkamath
Sanjayya Chikkamath

ಸಂಜಯ್ಯಾ ಚಿಕ್ಕಮಠ. ಹುಟ್ಟಿದ್ದು ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ರಾಮನಾಳ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 14 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್ ನಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಕೊಪ್ಪಳಕ್ಕೆ ಬಂದು ನಿಂತಿದೆ. ಕೃಷಿ ನನ್ನಿಷ್ಟ.ಆದ್ರೆ ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು