ದ್ವಿತೀಯ ಪಿಯುಸಿ ಉರ್ದು, ಸಂಸ್ಕೃತ ಪರೀಕ್ಷೆಗೆ ಮೂವರೇ ವಿದ್ಯಾರ್ಥಿಗಳು ಹಾಜರು- 20 ಮಂದಿ ಸಿಬ್ಬಂದಿ ಕರ್ತವ್ಯ!

ಮೂವರು ವಿದ್ಯಾರ್ಥಿಗಳಿಗೆ ಇಬ್ಬರು ರೂಮ್ ಸೂಪರವೈಸರ್ ಸೇರಿದಂತೆ ಛೀಫ್​ ಕಸ್ಟೋಡಿಯನ್, ಜಂಠಿ ಅಧೀಕ್ಷಕರು, ಆಫೀಸ್‌ ಸುಪರಿಂಟೆಂಡೆಂಟ್​​, ಓರ್ವ ಉತ್ತರ ಪತ್ರಿಕೆ ಪಾಲಕರು, ಓರ್ವ ಕಚೇರಿ ಸಹಾಯಕ, ಓರ್ವ ಟೈಪಿಸ್ಟ್, ಓರ್ವ ಜಾಗೃತದಳ ಸಿಬ್ಬಂದಿ, ಓರ್ವ ಗ್ರೂಪ್ ಡಿ ಸಿಬ್ಬಂದಿ ಸೇರಿದಂತೆ ಇಪ್ಪತ್ತು ಜನ ಸಿಬ್ಬಂದಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಓರ್ವ ಮಹಿಳಾ ಪೊಲೀಸ್ ಸಿಬ್ಬಂದಿಯನ್ನು ಕೂಡಾ ನಿಯೋಜಿಸಲಾಗಿದೆ.

ದ್ವಿತೀಯ ಪಿಯುಸಿ ಉರ್ದು, ಸಂಸ್ಕೃತ ಪರೀಕ್ಷೆಗೆ ಮೂವರೇ ವಿದ್ಯಾರ್ಥಿಗಳು ಹಾಜರು- 20 ಮಂದಿ ಸಿಬ್ಬಂದಿ ಕರ್ತವ್ಯ!
ದ್ವಿತೀಯ ಪಿಯುಸಿ ಉರ್ದು, ಸಂಸ್ಕೃತ ಪರೀಕ್ಷೆಗೆ 3 ವಿದ್ಯಾರ್ಥಿಗಳು ಹಾಜರು
Follow us
| Updated By: ಸಾಧು ಶ್ರೀನಾಥ್​

Updated on: Mar 21, 2024 | 10:49 AM

ಕೊಪ್ಪಳ, ಮಾರ್ಚ್​​ 21: ಕೆಲ ದಿನಗಳಿಂದ ದ್ವಿತೀಯ ಪಿಯುಸಿ ವಾರ್ಷಿಕ (2nd PUC Exam) ಪರೀಕ್ಷೆಗಳು ರಾಜ್ಯಾದ್ಯಂತ ನಡೆಯುತ್ತಿದೆ. ಇಂದು ಸಂಸ್ಕೃತ ಮತ್ತು ಉರ್ದು ವಿಷಯದ (Urdu, Sanskrit) ಪರೀಕ್ಷೆ ನಡೆಯುತ್ತಿವೆ. ವಿಶೇಷವೆಂದರೆ, ಮೂವರೇ ಮೂವರು ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದರು ಕೂಡಾ ಇಪ್ಪತ್ತು ಮಂದಿ ಸಿಬ್ಬಂದಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಹೌದು ಕೊಪ್ಪಳ ನಗರದಲ್ಲಿರುವ (Koppal) ಬಾಲಕರ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಪರೀಕ್ಷಾ ಕೇಂದ್ರವಿದ್ದು, ಈ ಪರೀಕ್ಷಾ ಕೇಂದ್ರದಲ್ಲಿ ಇಂದು ಮೂವರೇ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ. ಇಬ್ಬರು ವಿದ್ಯಾರ್ಥಿನಿಯರು ಉರ್ದು ಪತ್ರಿಕೆ, ಓರ್ವ ವಿದ್ಯಾರ್ಥಿನಿ ಸಂಸ್ಕ್ರತ ಪರೀಕ್ಷೆ ಗೆ ಹಾಜರಾಗಿದ್ದಾರೆ.

ಮೂವರೇ ವಿದ್ಯಾರ್ಥಿಗಳು ಪರೀಕ್ಷೆ ಬರೆದ್ರು ಕೂಡಾ ಪರೀಕ್ಷಾ ಅಕ್ರಮಗಳು ನಡೆಯದಂತೆ ಮತ್ತು ಅಚ್ಚುಕಟ್ಟಾಗಿ ಪರೀಕ್ಷೆ ನಡೆಯಬೇಕು ಅನ್ನೋ ಕಾರಣದಿಂದ ಬೇರೆ ಪರೀಕ್ಷೆ ನಡೆದಾಗ ಯಾವ ರೀತಿ ಸಿಬ್ಬಂದಿ ಕೆಲಸ ನಿರ್ವಹಿಸುತ್ತಾರೋ ಅದೇ ರೀತಿ ಇಂದು ಕೂಡಾ ಅಚ್ಚುಕಟ್ಟಾಗಿ ಕೆಲಸ ನಿರ್ವಹಿಸುತ್ತಿದ್ದಾರೆ.

ಮೂವರು ವಿದ್ಯಾರ್ಥಿಗಳಿಗೆ ಇಬ್ಬರು ರೂಮ್ ಸೂಪರವೈಸರ್ ಸೇರಿದಂತೆ ಛೀಫ್​ ಕಸ್ಟೋಡಿಯನ್, ಜಂಠಿ ಅಧೀಕ್ಷಕರು, ಆಫೀಸ್‌ ಸುಪರಿಂಟೆಂಡೆಂಟ್​​, ಓರ್ವ ಉತ್ತರ ಪತ್ರಿಕೆ ಪಾಲಕರು, ಓರ್ವ ಕಚೇರಿ ಸಹಾಯಕ, ಓರ್ವ ಟೈಪಿಸ್ಟ್, ಓರ್ವ ಜಾಗೃತದಳ ಸಿಬ್ಬಂದಿ, ಓರ್ವ ಗ್ರೂಪ್ ಡಿ ಸಿಬ್ಬಂದಿ ಸೇರಿದಂತೆ ಇಪ್ಪತ್ತು ಜನ ಸಿಬ್ಬಂದಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಓರ್ವ ಮಹಿಳಾ ಪೊಲೀಸ್ ಸಿಬ್ಬಂದಿಯನ್ನು ಕೂಡಾ ನಿಯೋಜಿಸಲಾಗಿದೆ.

ಇದನ್ನೂ ಓದಿ: ಬೇಕೆ ಬೇಕು ಗ್ರೇಸ್​ ಮಾರ್ಕ್ಸ್​! ಫಿಸಿಕ್ಸ್ ಪರೀಕ್ಷೆಯಲ್ಲಿ ಪಿಯುಸಿ ಬೋರ್ಡ್ ಎಡವಿತಾ? ವಿದ್ಯಾರ್ಥಿಗಳು, ವಿಷಯ ತಜ್ಞರು ಹೇಳುವುದೇನು?

ಪರೀಕ್ಷಾ ಕೇಂದ್ರದಲ್ಲಿ ಮೂವರು ವಿದ್ಯಾರ್ಥಿಗಳೇ ಪರೀಕ್ಷೆ ಬರೆಯಲಿ ಅಥವಾ ಒಬ್ಬರೇ ಬರೆದರು‌ ಕೂಡಾ ತಾವು ಇನ್ನುಳಿದ ಪರೀಕ್ಷೆ ಸಮಯದಲ್ಲಿ ಮಾಡಿದಂತೆ ಎಲ್ಲಾ ರೀತಿಯ ವ್ಯವಸ್ಥೆ ಮಾಡುತ್ತೇವೆ, ಎಲ್ಲರೂ ಕೂಡಾ ಕೆಲಸ ನಿರ್ವಹಿಸುತ್ತೇವೆ ಅಂತಿದ್ದಾರೆ ಪರೀಕ್ಷಾ ಸಿಬ್ಬಂದಿ. ಅಂದಹಾಗೆ ಇಂದು ಪರೀಕ್ಷೆ ಇನ್ನೂ ನಡೆಯುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ