AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದ್ವಿತೀಯ ಪಿಯುಸಿ ಉರ್ದು, ಸಂಸ್ಕೃತ ಪರೀಕ್ಷೆಗೆ ಮೂವರೇ ವಿದ್ಯಾರ್ಥಿಗಳು ಹಾಜರು- 20 ಮಂದಿ ಸಿಬ್ಬಂದಿ ಕರ್ತವ್ಯ!

ಮೂವರು ವಿದ್ಯಾರ್ಥಿಗಳಿಗೆ ಇಬ್ಬರು ರೂಮ್ ಸೂಪರವೈಸರ್ ಸೇರಿದಂತೆ ಛೀಫ್​ ಕಸ್ಟೋಡಿಯನ್, ಜಂಠಿ ಅಧೀಕ್ಷಕರು, ಆಫೀಸ್‌ ಸುಪರಿಂಟೆಂಡೆಂಟ್​​, ಓರ್ವ ಉತ್ತರ ಪತ್ರಿಕೆ ಪಾಲಕರು, ಓರ್ವ ಕಚೇರಿ ಸಹಾಯಕ, ಓರ್ವ ಟೈಪಿಸ್ಟ್, ಓರ್ವ ಜಾಗೃತದಳ ಸಿಬ್ಬಂದಿ, ಓರ್ವ ಗ್ರೂಪ್ ಡಿ ಸಿಬ್ಬಂದಿ ಸೇರಿದಂತೆ ಇಪ್ಪತ್ತು ಜನ ಸಿಬ್ಬಂದಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಓರ್ವ ಮಹಿಳಾ ಪೊಲೀಸ್ ಸಿಬ್ಬಂದಿಯನ್ನು ಕೂಡಾ ನಿಯೋಜಿಸಲಾಗಿದೆ.

ದ್ವಿತೀಯ ಪಿಯುಸಿ ಉರ್ದು, ಸಂಸ್ಕೃತ ಪರೀಕ್ಷೆಗೆ ಮೂವರೇ ವಿದ್ಯಾರ್ಥಿಗಳು ಹಾಜರು- 20 ಮಂದಿ ಸಿಬ್ಬಂದಿ ಕರ್ತವ್ಯ!
ದ್ವಿತೀಯ ಪಿಯುಸಿ ಉರ್ದು, ಸಂಸ್ಕೃತ ಪರೀಕ್ಷೆಗೆ 3 ವಿದ್ಯಾರ್ಥಿಗಳು ಹಾಜರು
ಸಂಜಯ್ಯಾ ಚಿಕ್ಕಮಠ
| Edited By: |

Updated on: Mar 21, 2024 | 10:49 AM

Share

ಕೊಪ್ಪಳ, ಮಾರ್ಚ್​​ 21: ಕೆಲ ದಿನಗಳಿಂದ ದ್ವಿತೀಯ ಪಿಯುಸಿ ವಾರ್ಷಿಕ (2nd PUC Exam) ಪರೀಕ್ಷೆಗಳು ರಾಜ್ಯಾದ್ಯಂತ ನಡೆಯುತ್ತಿದೆ. ಇಂದು ಸಂಸ್ಕೃತ ಮತ್ತು ಉರ್ದು ವಿಷಯದ (Urdu, Sanskrit) ಪರೀಕ್ಷೆ ನಡೆಯುತ್ತಿವೆ. ವಿಶೇಷವೆಂದರೆ, ಮೂವರೇ ಮೂವರು ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದರು ಕೂಡಾ ಇಪ್ಪತ್ತು ಮಂದಿ ಸಿಬ್ಬಂದಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಹೌದು ಕೊಪ್ಪಳ ನಗರದಲ್ಲಿರುವ (Koppal) ಬಾಲಕರ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಪರೀಕ್ಷಾ ಕೇಂದ್ರವಿದ್ದು, ಈ ಪರೀಕ್ಷಾ ಕೇಂದ್ರದಲ್ಲಿ ಇಂದು ಮೂವರೇ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ. ಇಬ್ಬರು ವಿದ್ಯಾರ್ಥಿನಿಯರು ಉರ್ದು ಪತ್ರಿಕೆ, ಓರ್ವ ವಿದ್ಯಾರ್ಥಿನಿ ಸಂಸ್ಕ್ರತ ಪರೀಕ್ಷೆ ಗೆ ಹಾಜರಾಗಿದ್ದಾರೆ.

ಮೂವರೇ ವಿದ್ಯಾರ್ಥಿಗಳು ಪರೀಕ್ಷೆ ಬರೆದ್ರು ಕೂಡಾ ಪರೀಕ್ಷಾ ಅಕ್ರಮಗಳು ನಡೆಯದಂತೆ ಮತ್ತು ಅಚ್ಚುಕಟ್ಟಾಗಿ ಪರೀಕ್ಷೆ ನಡೆಯಬೇಕು ಅನ್ನೋ ಕಾರಣದಿಂದ ಬೇರೆ ಪರೀಕ್ಷೆ ನಡೆದಾಗ ಯಾವ ರೀತಿ ಸಿಬ್ಬಂದಿ ಕೆಲಸ ನಿರ್ವಹಿಸುತ್ತಾರೋ ಅದೇ ರೀತಿ ಇಂದು ಕೂಡಾ ಅಚ್ಚುಕಟ್ಟಾಗಿ ಕೆಲಸ ನಿರ್ವಹಿಸುತ್ತಿದ್ದಾರೆ.

ಮೂವರು ವಿದ್ಯಾರ್ಥಿಗಳಿಗೆ ಇಬ್ಬರು ರೂಮ್ ಸೂಪರವೈಸರ್ ಸೇರಿದಂತೆ ಛೀಫ್​ ಕಸ್ಟೋಡಿಯನ್, ಜಂಠಿ ಅಧೀಕ್ಷಕರು, ಆಫೀಸ್‌ ಸುಪರಿಂಟೆಂಡೆಂಟ್​​, ಓರ್ವ ಉತ್ತರ ಪತ್ರಿಕೆ ಪಾಲಕರು, ಓರ್ವ ಕಚೇರಿ ಸಹಾಯಕ, ಓರ್ವ ಟೈಪಿಸ್ಟ್, ಓರ್ವ ಜಾಗೃತದಳ ಸಿಬ್ಬಂದಿ, ಓರ್ವ ಗ್ರೂಪ್ ಡಿ ಸಿಬ್ಬಂದಿ ಸೇರಿದಂತೆ ಇಪ್ಪತ್ತು ಜನ ಸಿಬ್ಬಂದಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಓರ್ವ ಮಹಿಳಾ ಪೊಲೀಸ್ ಸಿಬ್ಬಂದಿಯನ್ನು ಕೂಡಾ ನಿಯೋಜಿಸಲಾಗಿದೆ.

ಇದನ್ನೂ ಓದಿ: ಬೇಕೆ ಬೇಕು ಗ್ರೇಸ್​ ಮಾರ್ಕ್ಸ್​! ಫಿಸಿಕ್ಸ್ ಪರೀಕ್ಷೆಯಲ್ಲಿ ಪಿಯುಸಿ ಬೋರ್ಡ್ ಎಡವಿತಾ? ವಿದ್ಯಾರ್ಥಿಗಳು, ವಿಷಯ ತಜ್ಞರು ಹೇಳುವುದೇನು?

ಪರೀಕ್ಷಾ ಕೇಂದ್ರದಲ್ಲಿ ಮೂವರು ವಿದ್ಯಾರ್ಥಿಗಳೇ ಪರೀಕ್ಷೆ ಬರೆಯಲಿ ಅಥವಾ ಒಬ್ಬರೇ ಬರೆದರು‌ ಕೂಡಾ ತಾವು ಇನ್ನುಳಿದ ಪರೀಕ್ಷೆ ಸಮಯದಲ್ಲಿ ಮಾಡಿದಂತೆ ಎಲ್ಲಾ ರೀತಿಯ ವ್ಯವಸ್ಥೆ ಮಾಡುತ್ತೇವೆ, ಎಲ್ಲರೂ ಕೂಡಾ ಕೆಲಸ ನಿರ್ವಹಿಸುತ್ತೇವೆ ಅಂತಿದ್ದಾರೆ ಪರೀಕ್ಷಾ ಸಿಬ್ಬಂದಿ. ಅಂದಹಾಗೆ ಇಂದು ಪರೀಕ್ಷೆ ಇನ್ನೂ ನಡೆಯುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್