AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಪ್ಪಳದ 415 ಶಾಲಾ ಕೊಠಡಿಗಳಿಗೆ ಬೇಕಿದೆ ದುರಸ್ತಿ ಭಾಗ್ಯ!

ಮಳೆ ಬಂದರೆ ಸಾಕು ಮಕ್ಕಳು ಕುಣಿದು ಕುಪ್ಪಳಿಸುತ್ತಾರೆ. ಆದರೆ, ಕೊಪ್ಪಳ ಜಿಲ್ಲೆಯಲ್ಲಿರುವ ಸರ್ಕಾರಿ ಶಾಲೆಗಳಲ್ಲಿ ಓದುತ್ತಿರುವ ಮಕ್ಕಳು ಮಳೆ ಬಂದರೆ ಭಯಪಡುತ್ತಾರೆ. ಒಂದಡೆ ಕೊಠಡಿಗಳು ಸೋರಿದರೆ, ಇನ್ನೊಂದಡೆ ಕುಸಿದು ಬೀಳುವ ಹಂತದಲ್ಲಿರುವ ಕೊಠಡಿಗಳು ಮಕ್ಕಳ ಜೀವ ಭಯವನ್ನು ಹೆಚ್ಚಿಸುತ್ತಿವೆ.

ಕೊಪ್ಪಳದ 415 ಶಾಲಾ ಕೊಠಡಿಗಳಿಗೆ ಬೇಕಿದೆ ದುರಸ್ತಿ ಭಾಗ್ಯ!
ಶಿಥಿಲಾವಸ್ಥೆಯಲ್ಲಿರುವ ಸರ್ಕಾರಿ ಶಾಲೆ
ಸಂಜಯ್ಯಾ ಚಿಕ್ಕಮಠ
| Updated By: ವಿವೇಕ ಬಿರಾದಾರ|

Updated on: Jun 24, 2024 | 1:50 PM

Share

ಕೊಪ್ಪಳ, ಜೂನ್​ 24: ಗಂಗಾವತಿ (Gangavathi) ತಾಲೂಕಿನ ಜಂಗಮರ ಕಲ್ಗುಡಿ ಗ್ರಾಮದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ (Government Higher Primary School) ಗೋಡೆಗಳು ಬಿರುಕು ಬಿಟ್ಟಿವೆ. ಮೇಲ್ಚಾವಣಿ ಈಗಲೋ, ಆಗಲೋ ಬೀಳುವಂತಿದೆ. ಇದು ಕೇವಲ ಜಂಗಮರ ಕಲ್ಗುಡಿ ಗ್ರಾಮದಲ್ಲಿರುವ ಸರ್ಕಾರಿ ಶಾಲೆಯ ಸ್ಥಿತಿಯಲ್ಲ ಕೊಪ್ಪಳ (Koppal) ಜಿಲ್ಲೆಯ ಬಹುತೇಕ ಸರ್ಕಾರಿ ಶಾಲೆಗಳ ಸ್ಥಿತಿ ಹೆಚ್ಚು ಕಡಿಮೆ ಇದೇ ರೀತಿ ಇದೆ.

ಶೈಕ್ಷಣಿಕವಾಗಿ ತೀರ ಹಿಂದುಳಿದಿರುವ ಕೊಪ್ಪಳ ಜಿಲ್ಲೆಯಲ್ಲಿ ಮಕ್ಕಳು ಇದೀಗ ಭಯದಲ್ಲಿಯೇ ಪಾಠ ಕೇಳುತ್ತಿದ್ದಾರೆ. ಒಮ್ಮೆ ಮೇಲ್ಚಾವಣಿ, ಇನ್ನೊಮ್ಮೆ ಶಿಕ್ಷಕರನ್ನು ನೋಡಿಕೊಂಡು ಪಾಠ ಕೇಳುವಂತಹ ಪರಿಸ್ಥಿತಿ ಎದುರಾಗಿದೆ. ಬೀಳುವ ಹಂತದಲ್ಲಿರುವ ಕೊಠಡಿಗಳಲ್ಲಿ ಮಕ್ಕಳು ಪಾಠ ಕೇಳುತ್ತಿದ್ದಾರೆ. ಇದರಿಂದ ಮಕ್ಕಳಿಗೆ ಪಾಠದ ಮೇಲೆ ಗಮನ ಹರಿಸಲು ಆಗದಂತಹ ಸ್ಥಿತಿ ನಿರ್ಮಾಣವಾಗಿದೆ. ಕೊಪ್ಪಳ ಜಿಲ್ಲೆಯಲ್ಲಿ 415 ಸರ್ಕಾರಿ ಶಾಲೆಗಳ 810 ಕೊಠಡಿಗಳು ದುರಸ್ತಿಯಲ್ಲಿವೆ. ಈ ಕೊಠಡಿಗಳ ದುರಸ್ಥಿ ಕಾರ್ಯ ಮುಗಿಯದೇ ಇರುವುದರಿಂದ ದುರಸ್ತಿಯಲ್ಲಿರುವ ಕೊಠಡಿಗಳಲ್ಲಿಯೇ ಮಕ್ಕಳು ಪಾಠ ಕೇಳುತ್ತಿದ್ದಾರೆ.

ಬೇಸಿಗೆ ರಜೆಯಲ್ಲಿ ಕೊಠಡಿಗಳ ದುರಸ್ತಿ ಕಾರ್ಯವನ್ನು ಮಾಡಬೇಕು. ಆದರೆ, ಇದೀಗ ಶಾಲೆ ಆರಂಭವಾಗಿ ತಿಂಗಳು ಕಳೆದರು ಕೂಡ ದುರಸ್ತಿ ಕಾರ್ಯ ಮುಗಿದಿಲ್ಲ. ಜಿಲ್ಲೆಯಲ್ಲಿ ಅನೇಕ ಹೊಸ ಕೊಠಡಿಗಳ ನಿರ್ಮಾಣ ಕಾರ್ಯ ಆಮೆಗತಿಯಲ್ಲಿ ನಡೆಯುತ್ತಿದೆ. ಎರಡು ವರ್ಷದ ಹಿಂದೆ ಆರಂಭವಾಗಿರುವ ಅನೇಕ ಕೊಠಡಿಗಳ ನಿರ್ಮಾಣ ಕಾರ್ಯ ಇನ್ನೂ ಮುಗಿದಿಲ್ಲ. ಇರುವ ಕೊಠಡಿಗಳು ದುರಸ್ತಿಯಲ್ಲಿರುವುದರಿಂದ ಜೀವ ಭಯದಲ್ಲಿ ಮಕ್ಕಳು ಪಾಠ ಕೇಳುತ್ತಿದ್ದಾರೆ.

ಇದನ್ನೂ ಓದಿ: ಸರ್ಕಾರಿ ಶಾಲೆಯಲ್ಲಿ ಎಲ್​ಕೆಜಿ, ಯುಕೆಜಿ ಆರಂಭಕ್ಕೆ ಸರ್ಕಾರ ಗ್ರೀನ್ ಸಿಗ್ನಲ್; ಆತಂಕದಲ್ಲಿ ಸಾವಿರಾರು ಅಂಗನವಾಡಿ ಕಾರ್ಯಕರ್ತೆಯರು

ಈ ಬಗ್ಗೆ ಕೊಪ್ಪಳ ಸಾರ್ವಜನಿಕ ಶಿಕ್ಷಣ ಇಲಾಖೆ ಡಿಡಿಪಿಐ ಶ್ರಿಶೈಲ್ ಬಿರಾದಾರ್ ಮಾತನಾಡಿ, ಈಗಾಗಲೇ ದುರಸ್ತಿ ಕಾರ್ಯ ನಡೆದಿದೆ. ಆದಷ್ಟು ಬೇಗನೆ ದುರಸ್ತಿ ಕಾರ್ಯ ಮುಗಿಯುತ್ತದೆ ಎಂದು ಹೇಳಿದರು.

ಸದ್ಯ ಕೊಪ್ಪಳದ ಸರ್ಕಾರಿ ಶಾಲೆಗಳ ಮಕ್ಕಳು ಮತ್ತು ಸಿಬ್ಬಂದಿ ಆತಕಂದಲ್ಲಿಯೇ ಶಾಲೆಯಲ್ಲಿ ಸಮಯ ಕಳೆಯುತ್ತಿದ್ದಾರೆ. ಹೀಗಾಗಿ ತೀರಾ ದುರಸ್ತಿಗೆ ಬಂದಿರುವ ಕೊಠಡಿಗಳನ್ನು ಕೆಡವಿ, ಹೊಸ ಕೊಠಡಿಗಳ ನಿರ್ಮಾಣ ಮಾಡಬೇಕು. ದುರಸ್ತಿ ಮಾಡಬಹುದಾದ ಕೊಠಡಿಗಳನ್ನು ಆದಷ್ಟು ಬೇಗನೆ ರಿಪೇರಿ ಮಾಡಿ, ಮಕ್ಕಳಿಗೆ ಉತ್ತಮ ಶೈಕ್ಷಣಿಕ ವಾತಾವರಣವನ್ನು ನಿರ್ಮಿಸುವ ಕೆಲಸ ಸರ್ಕಾರ ಮಾಡಲಿ ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್