AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಪ್ಪಳದ 415 ಶಾಲಾ ಕೊಠಡಿಗಳಿಗೆ ಬೇಕಿದೆ ದುರಸ್ತಿ ಭಾಗ್ಯ!

ಮಳೆ ಬಂದರೆ ಸಾಕು ಮಕ್ಕಳು ಕುಣಿದು ಕುಪ್ಪಳಿಸುತ್ತಾರೆ. ಆದರೆ, ಕೊಪ್ಪಳ ಜಿಲ್ಲೆಯಲ್ಲಿರುವ ಸರ್ಕಾರಿ ಶಾಲೆಗಳಲ್ಲಿ ಓದುತ್ತಿರುವ ಮಕ್ಕಳು ಮಳೆ ಬಂದರೆ ಭಯಪಡುತ್ತಾರೆ. ಒಂದಡೆ ಕೊಠಡಿಗಳು ಸೋರಿದರೆ, ಇನ್ನೊಂದಡೆ ಕುಸಿದು ಬೀಳುವ ಹಂತದಲ್ಲಿರುವ ಕೊಠಡಿಗಳು ಮಕ್ಕಳ ಜೀವ ಭಯವನ್ನು ಹೆಚ್ಚಿಸುತ್ತಿವೆ.

ಕೊಪ್ಪಳದ 415 ಶಾಲಾ ಕೊಠಡಿಗಳಿಗೆ ಬೇಕಿದೆ ದುರಸ್ತಿ ಭಾಗ್ಯ!
ಶಿಥಿಲಾವಸ್ಥೆಯಲ್ಲಿರುವ ಸರ್ಕಾರಿ ಶಾಲೆ
ಸಂಜಯ್ಯಾ ಚಿಕ್ಕಮಠ
| Edited By: ವಿವೇಕ ಬಿರಾದಾರ|

Updated on: Jun 24, 2024 | 1:50 PM

Share

ಕೊಪ್ಪಳ, ಜೂನ್​ 24: ಗಂಗಾವತಿ (Gangavathi) ತಾಲೂಕಿನ ಜಂಗಮರ ಕಲ್ಗುಡಿ ಗ್ರಾಮದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ (Government Higher Primary School) ಗೋಡೆಗಳು ಬಿರುಕು ಬಿಟ್ಟಿವೆ. ಮೇಲ್ಚಾವಣಿ ಈಗಲೋ, ಆಗಲೋ ಬೀಳುವಂತಿದೆ. ಇದು ಕೇವಲ ಜಂಗಮರ ಕಲ್ಗುಡಿ ಗ್ರಾಮದಲ್ಲಿರುವ ಸರ್ಕಾರಿ ಶಾಲೆಯ ಸ್ಥಿತಿಯಲ್ಲ ಕೊಪ್ಪಳ (Koppal) ಜಿಲ್ಲೆಯ ಬಹುತೇಕ ಸರ್ಕಾರಿ ಶಾಲೆಗಳ ಸ್ಥಿತಿ ಹೆಚ್ಚು ಕಡಿಮೆ ಇದೇ ರೀತಿ ಇದೆ.

ಶೈಕ್ಷಣಿಕವಾಗಿ ತೀರ ಹಿಂದುಳಿದಿರುವ ಕೊಪ್ಪಳ ಜಿಲ್ಲೆಯಲ್ಲಿ ಮಕ್ಕಳು ಇದೀಗ ಭಯದಲ್ಲಿಯೇ ಪಾಠ ಕೇಳುತ್ತಿದ್ದಾರೆ. ಒಮ್ಮೆ ಮೇಲ್ಚಾವಣಿ, ಇನ್ನೊಮ್ಮೆ ಶಿಕ್ಷಕರನ್ನು ನೋಡಿಕೊಂಡು ಪಾಠ ಕೇಳುವಂತಹ ಪರಿಸ್ಥಿತಿ ಎದುರಾಗಿದೆ. ಬೀಳುವ ಹಂತದಲ್ಲಿರುವ ಕೊಠಡಿಗಳಲ್ಲಿ ಮಕ್ಕಳು ಪಾಠ ಕೇಳುತ್ತಿದ್ದಾರೆ. ಇದರಿಂದ ಮಕ್ಕಳಿಗೆ ಪಾಠದ ಮೇಲೆ ಗಮನ ಹರಿಸಲು ಆಗದಂತಹ ಸ್ಥಿತಿ ನಿರ್ಮಾಣವಾಗಿದೆ. ಕೊಪ್ಪಳ ಜಿಲ್ಲೆಯಲ್ಲಿ 415 ಸರ್ಕಾರಿ ಶಾಲೆಗಳ 810 ಕೊಠಡಿಗಳು ದುರಸ್ತಿಯಲ್ಲಿವೆ. ಈ ಕೊಠಡಿಗಳ ದುರಸ್ಥಿ ಕಾರ್ಯ ಮುಗಿಯದೇ ಇರುವುದರಿಂದ ದುರಸ್ತಿಯಲ್ಲಿರುವ ಕೊಠಡಿಗಳಲ್ಲಿಯೇ ಮಕ್ಕಳು ಪಾಠ ಕೇಳುತ್ತಿದ್ದಾರೆ.

ಬೇಸಿಗೆ ರಜೆಯಲ್ಲಿ ಕೊಠಡಿಗಳ ದುರಸ್ತಿ ಕಾರ್ಯವನ್ನು ಮಾಡಬೇಕು. ಆದರೆ, ಇದೀಗ ಶಾಲೆ ಆರಂಭವಾಗಿ ತಿಂಗಳು ಕಳೆದರು ಕೂಡ ದುರಸ್ತಿ ಕಾರ್ಯ ಮುಗಿದಿಲ್ಲ. ಜಿಲ್ಲೆಯಲ್ಲಿ ಅನೇಕ ಹೊಸ ಕೊಠಡಿಗಳ ನಿರ್ಮಾಣ ಕಾರ್ಯ ಆಮೆಗತಿಯಲ್ಲಿ ನಡೆಯುತ್ತಿದೆ. ಎರಡು ವರ್ಷದ ಹಿಂದೆ ಆರಂಭವಾಗಿರುವ ಅನೇಕ ಕೊಠಡಿಗಳ ನಿರ್ಮಾಣ ಕಾರ್ಯ ಇನ್ನೂ ಮುಗಿದಿಲ್ಲ. ಇರುವ ಕೊಠಡಿಗಳು ದುರಸ್ತಿಯಲ್ಲಿರುವುದರಿಂದ ಜೀವ ಭಯದಲ್ಲಿ ಮಕ್ಕಳು ಪಾಠ ಕೇಳುತ್ತಿದ್ದಾರೆ.

ಇದನ್ನೂ ಓದಿ: ಸರ್ಕಾರಿ ಶಾಲೆಯಲ್ಲಿ ಎಲ್​ಕೆಜಿ, ಯುಕೆಜಿ ಆರಂಭಕ್ಕೆ ಸರ್ಕಾರ ಗ್ರೀನ್ ಸಿಗ್ನಲ್; ಆತಂಕದಲ್ಲಿ ಸಾವಿರಾರು ಅಂಗನವಾಡಿ ಕಾರ್ಯಕರ್ತೆಯರು

ಈ ಬಗ್ಗೆ ಕೊಪ್ಪಳ ಸಾರ್ವಜನಿಕ ಶಿಕ್ಷಣ ಇಲಾಖೆ ಡಿಡಿಪಿಐ ಶ್ರಿಶೈಲ್ ಬಿರಾದಾರ್ ಮಾತನಾಡಿ, ಈಗಾಗಲೇ ದುರಸ್ತಿ ಕಾರ್ಯ ನಡೆದಿದೆ. ಆದಷ್ಟು ಬೇಗನೆ ದುರಸ್ತಿ ಕಾರ್ಯ ಮುಗಿಯುತ್ತದೆ ಎಂದು ಹೇಳಿದರು.

ಸದ್ಯ ಕೊಪ್ಪಳದ ಸರ್ಕಾರಿ ಶಾಲೆಗಳ ಮಕ್ಕಳು ಮತ್ತು ಸಿಬ್ಬಂದಿ ಆತಕಂದಲ್ಲಿಯೇ ಶಾಲೆಯಲ್ಲಿ ಸಮಯ ಕಳೆಯುತ್ತಿದ್ದಾರೆ. ಹೀಗಾಗಿ ತೀರಾ ದುರಸ್ತಿಗೆ ಬಂದಿರುವ ಕೊಠಡಿಗಳನ್ನು ಕೆಡವಿ, ಹೊಸ ಕೊಠಡಿಗಳ ನಿರ್ಮಾಣ ಮಾಡಬೇಕು. ದುರಸ್ತಿ ಮಾಡಬಹುದಾದ ಕೊಠಡಿಗಳನ್ನು ಆದಷ್ಟು ಬೇಗನೆ ರಿಪೇರಿ ಮಾಡಿ, ಮಕ್ಕಳಿಗೆ ಉತ್ತಮ ಶೈಕ್ಷಣಿಕ ವಾತಾವರಣವನ್ನು ನಿರ್ಮಿಸುವ ಕೆಲಸ ಸರ್ಕಾರ ಮಾಡಲಿ ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ