AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೇಪರ್ ಪಾರಿವಾಳ ತಂದ ಅವಾಂತರ: ಮೊದಲ ಮಹಡಿಯಿಂದ ಬಿದ್ರೂ ಬದುಕುಳಿದ 5ರ ಬಾಲಕ

ಕೊಪ್ಪಳದ ಹಮಾಲರ ಕಾಲೋನಿಯಲ್ಲಿ 5 ವರ್ಷದ ಬಾಲಕ ಮೊದಲನೇ ಮಹಡಿಯಿಂದ ಬಿದ್ದು ಗಾಯಗೊಂಡಿದ್ದಾನೆ. ಬಿದ್ದ ರಭಸಕ್ಕೆ ಬಾಲಕನ ತಲೆಗೆ ಪೆಟ್ಟಾಗಿದ್ದು, ವೈದ್ಯರ ಪರೀಕ್ಷೆಯಲ್ಲಿ ಬಿರುಕು ಪತ್ತೆಯಾಗಿದೆ. ಸದ್ಯ ಪ್ರಾಣಾಪಾಯದಿಂದ ಪಾರಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಬಾಲಕ ಬಿಳ್ಳುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಎದೆ ಝಲ್​​ ಎನ್ನುವಂತಿದೆ.

ಪೇಪರ್ ಪಾರಿವಾಳ ತಂದ ಅವಾಂತರ: ಮೊದಲ ಮಹಡಿಯಿಂದ ಬಿದ್ರೂ ಬದುಕುಳಿದ 5ರ ಬಾಲಕ
ಮಹಮ್ಮದ್ ಹ್ಯಾರಿಸ್
ಶಿವಕುಮಾರ್ ಪತ್ತಾರ್
| Edited By: |

Updated on:Dec 22, 2025 | 7:34 PM

Share

ಕೊಪ್ಪಳ, ಡಿಸೆಂಬರ್​ 22: ಐದು ವರ್ಷ ಬಾಲಕ (Child) ಮನೆಯ ಮೊದಲನೇ ಮಹಡಿಯಿಂದ ಕೆಳಗೆ ಬಿದ್ದು (Fall) ಗಂಭೀರ ಗಾಯಗೊಂಡಿರುವಂತಹ ಘಟನೆ ಕೊಪ್ಪಳ ನಗರದ ಹಮಾಲರ ಕಾಲೋನಿಯಲ್ಲಿ ನಡೆದಿದೆ. ಪವಾಡಸದೃಶವೆಂಬಂತೆ ಬಾಲಕ ಪಾರಾಗಿದ್ದಾನೆ. ಮಹಮ್ಮದ್ ಹ್ಯಾರಿಸ್​ ಸಾವು ಗೆದ್ದುಬಂದ ಬಾಲಕ. ಕೂಡಲೇ ಕೊಪ್ಪಳ ಖಾಸಗಿ ಆಸ್ಪತ್ರೆಗೆ ಪೋಷಕರು ದಾಖಲಿಸಿದ್ದರು. ಆದರೆ ವೈದ್ಯರ ಪರೀಕ್ಷೆ ವೇಳೆ ಮಹಮ್ಮದ್ ಹ್ಯಾರಿಸ್ ತಲೆಯಲ್ಲಿ ಬಿರುಕು ಕಂಡುಬಂದಿದೆ. ಬಾಲಕ ಮೊದಲನೇ ಮಹಡಿಯಿಂದ ಕೆಳೆಗ ಬಿಳ್ಳುವ ದೃಶ್ಯ ಸೆರೆಯಾಗಿದ್ದು, ಎದೆ ಝಲ್ ಅನ್ನಿಸುತ್ತದೆ.

ನಡೆದದ್ದೇನು?

ಕೊಪ್ಪಳ ನಗರದ ಹಮಾಲರ ಕಾಲೋನಿಯಲ್ಲಿ ಐದು ವರ್ಷದ ಬಾಲಕ ಮಹಮ್ಮದ್ ಹ್ಯಾರಿಸ್ ನಿನ್ನೆ ಮಧ್ಯಾಹ್ನ ಮೊದಲನೇ ಮಹಡಿಯಲ್ಲಿ ಪೇಪರ್​ನಿಂದ ಪಾರಿವಾಳ ಮಾಡಿ ಆಟವಾಡುತ್ತಿದ್ದ. ಅದನ್ನು ಗಾಳಿ ತೂರಿ ಹಿಡಿಯಲು ಹೋದಾಗ ಮೊದಲನೇ ಮಹಡಿಯಿಂದ ಕೆಳಗಡೆ ಬಿದ್ದಿದ್ದಾನೆ. ಮಹಮ್ಮದ್ ಕೆಳಗಡೆ ಬಿಳ್ಳುವ ಭೀಕರ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ ಆಗಿದೆ.

ಇದನ್ನೂ ಓದಿ: ಆಟವಾಡುತ್ತಿದ್ದ ಬಾಲಕನ ಮೇಲೆ ಇದೆಂತಾ ವಿಕೃತಿ?: ವಿಡಿಯೋ ನೋಡಿದ್ರೆ ರಕ್ತ ಕುದಿಯುತ್ತೆ

ಮನೆಯ ಕೆಳಗಡೆ ಮಹಮ್ಮದ್ ಹ್ಯಾರಿಸ್ ಸಹೋದರಿ ಕೂಡ ಆಟವಾಡುತ್ತಿದ್ದು, ಮಹಮ್ಮದ್ ಬಿದ್ದ ತಕ್ಷಣ ಮೇಲೆ ಎತ್ತಿದ್ದಾಳೆ. ಒಳಗಡೆಯಿಂದ ಪೋಷಕರು ಕಿರುಚುತ್ತಾ ಓಡೋಡಿ ಬಂದಿದ್ದಾರೆ. ಕೆಳಗಡೆ ಬಿದ್ದ ಮಗುವನ್ನ ಕೂಡಲೇ ಕೊಪ್ಪಳದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ವೈದ್ಯರು ಮಹಮ್ಮದ್​​ಗೆ 2 ಗಂಟೆಯೊಳಗೆ ಆಪರೇಷನ್ ಮಾಡಿದ್ದಾರೆ. ಸದ್ಯ ಬಾಲಕ ಪ್ರಾಣಾಪಾಯದಿಂದ ಪಾರಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾನೆ.

ಇದನ್ನೂ ಓದಿ: ಬುದ್ಧಿಮಾಂದ್ಯ ಬಾಲಕನ ಮೇಲೆ ಶಿಕ್ಷಕ ದಂಪತಿಯಿಂದ ಹಲ್ಲೆ: ಕಣ್ಣಿಗೆ ಖಾರದಪುಡಿ ಎರಚಿ ಹೇಯ ಕೃತ್ಯ

ಒಟ್ಟಾರೆ ಮೊದಲನೇ ಮಹಡಿಯಿಂದ ಬಾಲಕ ಬಿದ್ದರೂ ಪವಾಡಸದೃಶವಾಗಿ ಬದುಕುಳಿದ್ದಾನೆ. ಆತನ ಹಣೆ ಬರಹ ಗಟ್ಟಿಯಿರುವ ಕಾರಣ ಬದುಕಿಳಿದಿದ್ದಾನೆ. ಸದ್ಯ ಮಹಮ್ಮದ್​ಗೆ ಯಾವುದೇ ತೊಂದರೆ ಇಲ್ಲ ಎಂದು ವೈದ್ಯರು ಹೇಳಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:29 pm, Mon, 22 December 25

Follow Us
ಚಾಮರಾಜೇಶ್ವರಸ್ವಾಮಿ ಆಷಾಢ ಮಾಸದ ರಥೋತ್ಸವಕ್ಕೆ ಕ್ಷಣಗಣನೆ ಆರಂಭ
ಚಾಮರಾಜೇಶ್ವರಸ್ವಾಮಿ ಆಷಾಢ ಮಾಸದ ರಥೋತ್ಸವಕ್ಕೆ ಕ್ಷಣಗಣನೆ ಆರಂಭ
‘ಟಾಕ್ಸಿಕ್ ನೋಡಿದವರು ವಾಟ್​ ದಿ ಹೆಲ್​ ವಾಸ್ ದ್ಯಾಟ್ ಅಂತ ಹೊರಗೆ ಬರ್ತಾರೆ’
‘ಟಾಕ್ಸಿಕ್ ನೋಡಿದವರು ವಾಟ್​ ದಿ ಹೆಲ್​ ವಾಸ್ ದ್ಯಾಟ್ ಅಂತ ಹೊರಗೆ ಬರ್ತಾರೆ’
ಸಿಟಿ ರವಿ ಚಿಕ್ಕಮಗಳೂರಿಗೆ ಬರದಂತೆ ತಡೀತೇವೆ, ಮುಸ್ಲಿಂ ಮುಖಂಡರ ಎಚ್ಚರಿಕೆ
ಸಿಟಿ ರವಿ ಚಿಕ್ಕಮಗಳೂರಿಗೆ ಬರದಂತೆ ತಡೀತೇವೆ, ಮುಸ್ಲಿಂ ಮುಖಂಡರ ಎಚ್ಚರಿಕೆ
ಭೀಕರ ಬರಕ್ಕೆ ತುತ್ತಾದ ರಾಯಚೂರು, ಲಿಂಗಸೂರಿನಲ್ಲಿ ಗುಳೆ ಹೊರಟ 40 ಸಾವಿರ ಜನ
ಭೀಕರ ಬರಕ್ಕೆ ತುತ್ತಾದ ರಾಯಚೂರು, ಲಿಂಗಸೂರಿನಲ್ಲಿ ಗುಳೆ ಹೊರಟ 40 ಸಾವಿರ ಜನ
ಬೆಂಗಳೂರು: ಕ್ಯಾಬ್ಗೆ ಕಾಯುತ್ತಿದ್ದ ಯುವತಿ ಜೊತೆ ವ್ಯಕ್ತಿ ಅಸಭ್ಯ ವರ್ತನೆ
ಬೆಂಗಳೂರು: ಕ್ಯಾಬ್ಗೆ ಕಾಯುತ್ತಿದ್ದ ಯುವತಿ ಜೊತೆ ವ್ಯಕ್ತಿ ಅಸಭ್ಯ ವರ್ತನೆ
ಸುಬ್ರಹ್ಮಣ್ಯ, ಹನುಮನ ಲಹರಿ ಇರುವ ಪರ್ವ ದಿನ: 12 ರಾಶಿಗಳ ದಿನ ಭವಿಷ್ಯ
ಸುಬ್ರಹ್ಮಣ್ಯ, ಹನುಮನ ಲಹರಿ ಇರುವ ಪರ್ವ ದಿನ: 12 ರಾಶಿಗಳ ದಿನ ಭವಿಷ್ಯ
ಸರ್ಕಾರದ ಜೊತೆ ಇರುತ್ತೇವೆ: ಡಿಕೆಶಿಗೆ ತೇಜಸ್ವಿ ಸೂರ್ಯ ಭರವಸೆ
ಸರ್ಕಾರದ ಜೊತೆ ಇರುತ್ತೇವೆ: ಡಿಕೆಶಿಗೆ ತೇಜಸ್ವಿ ಸೂರ್ಯ ಭರವಸೆ
ಪಶುವೈದ್ಯ ನೇಮಕಾತಿ ಹಗರಣ: CBI ತನಿಖೆಗೆ ಒಪ್ಪಿಸಿ ಎಂದ ಸುರೇಶ್ ಕುಮಾರ್
ಪಶುವೈದ್ಯ ನೇಮಕಾತಿ ಹಗರಣ: CBI ತನಿಖೆಗೆ ಒಪ್ಪಿಸಿ ಎಂದ ಸುರೇಶ್ ಕುಮಾರ್
ಪ್ರತಿಭಟನಾಕಾರರ ಮೇಲಿನ ಲಾಠಿಚಾರ್ಜ್​ಗೆ ಸದನದಲ್ಲಿ ಖರ್ಗೆ ಖಂಡನೆ
ಪ್ರತಿಭಟನಾಕಾರರ ಮೇಲಿನ ಲಾಠಿಚಾರ್ಜ್​ಗೆ ಸದನದಲ್ಲಿ ಖರ್ಗೆ ಖಂಡನೆ
ಡಿಕೆಶಿಗೆ ಹೈ ಸೆಕ್ಯೂರಿಟಿ:ದೆಹಲಿಯಲ್ಲಿ ವಿಶೇಷ ಭದ್ರತೆ ಇದೇ ಮೊದಲು
ಡಿಕೆಶಿಗೆ ಹೈ ಸೆಕ್ಯೂರಿಟಿ:ದೆಹಲಿಯಲ್ಲಿ ವಿಶೇಷ ಭದ್ರತೆ ಇದೇ ಮೊದಲು