AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇದು ಥೈಲ್ಯಾಂಡ್ ಟು ಕೊಪ್ಪಳ ಗಾಂಜಾ ಸ್ಟೋರಿ: ಅಕ್ರಮವಾಗಿ ತಂದು ಮಾರಾಟ ಮಾಡುತ್ತಿದ್ದವರ ಬಂಧನ

ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ಪೊಲೀಸರು ಭಾರಿ ಪ್ರಮಾಣದ ಹೈಡ್ರೋ ಗಾಂಜಾ ವಶಪಡಿಸಿಕೊಂಡಿದ್ದಾರೆ. ಥೈಲ್ಯಾಂಡ್​ನಿಂದ ತಂದು ಮಾರಾಟ ಮಾಡುತ್ತಿದ್ದ 8 ಜನರನ್ನು ಬಂಧಿಸಿದ್ದು, 1806 ಗ್ರಾಂ ಗಾಂಜಾವನ್ನು ಜಪ್ತಿ ಮಾಡಿದ್ದಾರೆ. ಇದರ ಮೌಲ್ಯ 18 ಲಕ್ಷ ರೂಪಾಯಿಗಳೆಂದು ಅಂದಾಜಿಸಲಾಗಿದೆ. ಈ ಪ್ರಕರಣದ ತನಿಖೆ ಮುಂದುವರೆದಿದೆ.

ಇದು ಥೈಲ್ಯಾಂಡ್ ಟು ಕೊಪ್ಪಳ ಗಾಂಜಾ ಸ್ಟೋರಿ: ಅಕ್ರಮವಾಗಿ ತಂದು ಮಾರಾಟ ಮಾಡುತ್ತಿದ್ದವರ ಬಂಧನ
ವಶಕ್ಕೆ ಪಡೆದ ಗಾಂಜಾ
ಶಿವಕುಮಾರ್ ಪತ್ತಾರ್
| Edited By: |

Updated on: May 28, 2025 | 8:28 PM

Share

ಕೊಪ್ಪಳ, ಮೇ 28: ಥೈಲ್ಯಾಂಡ್​ನಿಂದ (Thailand) ಅಕ್ರಮವಾಗಿ ಗಾಂಜಾ (ganja) ತಂದು ಮಾರಾಟ ಮಾಡುತ್ತಿದ್ದ 8 ಜನರನ್ನು  ಬಂಧಿಸಿರುವಂತಹ ಘಟನೆ ನಗರದಲ್ಲಿ ನಡೆದಿದೆ. ಜಿಲ್ಲೆಯ ಗಂಗಾವತಿ ಪೊಲೀಸರಿಂದ ಸೌಜೇಶ್, ಸಲೀಂ, ಬಿ.ದುರ್ಗಾ, ಬಾದ್​ ಷಾ, ಮದನ್, ಸೂರ್ಯ ಪ್ರತಾಪ್ ರೆಡ್ಡಿ, ಅಮೀದ್ ಮತ್ತು ಮಣಿಕಂಠ ಅನ್ನು ಬಂಧಿಸಿದ್ದು, ಇದರಲ್ಲಿ ಮೂವರು ಕೇರಳದವರು. 18 ಲಕ್ಷ ಮೌಲ್ಯದ 1806 ಗ್ರಾಂ ಹೈಡ್ರೋ ಗಾಂಜಾ ಮತ್ತು ಮೊಬೈಲ್ ಜಪ್ತಿ ಮಾಡಲಾಗಿದೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಮ್ ಅರಸಿದ್ದಿ ಹೇಳಿದ್ದಿಷ್ಟು

ಈ ಬಗ್ಗೆ ಕೊಪ್ಪಳ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಮ್ ಅರಸಿದ್ದಿ ಹೇಳಿಕೆ ನೀಡಿದ್ದು, ಜಿಲ್ಲೆಯಲ್ಲಿ ಇದೇ ಮೊದಲ ಬಾರಿಗೆ ಹೈಡ್ರೋ ಗಾಂಜಾ ವಶಕ್ಕೆ ಪಡೆಯಲಾಗಿದೆ. ಪಾರ್ಟಿಗಾಗಿ ಥೈಲ್ಯಾಂಡ್​​ನಿಂದ ಗಂಗಾವತಿಗೆ ಸಲೀಂ ಎರಡು ಕಾರ್​ಗಳಲ್ಲಿ ಅಕ್ರಮವಾಗಿ ಗಾಂಜಾ ತಂದಿದ್ದ. ಗಂಗಾವತಿ ನಗರದ ಸರ್ಕಾರಿ ಐಟಿಐ ಕಾಲೇಜ್ ಬಳಿ ಹೈಡ್ರೋ ಗಾಂಜಾ ಪತ್ತೆ ಆಗಿದೆ ಎಂದಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ 3 ಕೋಟಿ ರೂ. ಮೌಲ್ಯದ ಡ್ರಗ್ಸ್​, ಗಾಂಜಾ ಜಪ್ತಿ

ಇದನ್ನೂ ಓದಿ
Image
ಬೀದರ್​ನ ಐತಿಹಾಸಿಕ ಭಾತಂಬ್ರಾ ಕೋಟೆ ಜೀರ್ಣೋದ್ಧಾರ: ಶ್ಲಾಘನೆ
Image
ಬರದ ನಾಡು ಬೀದರ್​ನಲ್ಲಿ ಶ್ರೀಗಂಧದ ಘಮ: ಹೇರಳವಾಗಿ ಬೆಳೆದು ನಿಂತ ಮರಗಳು
Image
ಈರುಳ್ಳಿ ಬೀಜ ಮಾರಾಟ ಮಾಡಿ ಕೋಟ್ಯಂತರ ರೂ ಆದಾಯ ಗಳಿಸಿದ ಬೀದರ್​ನ ರೈತ
Image
ನಾನಾ ಕಾರಣಗಳಿಂದ ರಜೆಗೆ ಬಂದಿದ್ದ ಕರ್ನಾಟಕದ ಯೋಧರು ದೇಶ ಸೇವೆಗೆ ವಾಪಸ್

ಎಂಟು ಜನರ ಪೈಕಿ ಸೌಜೇಶ್, ಸಲೀಂ ಹಾಗೂ ಬಾದ್ ಷಾ ಕೇರಳದ ಮೂಲದವರು. ಮದನ್ ಬಿಇ ಓದಿದ್ದು, ದುರ್ಗಾ ಪ್ರಸಾದ್ ಬಿಕಾಂ‌ ಓದಿದ್ದಾನೆ. ಕಳೆದ ಕೆಲ ದಿನಗಳ ಹಿಂದೆ ನಡೆದ ಅತ್ಯಾಚಾರ ಪ್ರಕರಣಕ್ಕೂ ಗಾಂಜಾ ಪ್ರಕರಣಕ್ಕೂ ಲಿಂಕ್ ಇಲ್ಲ. ಗಂಗಾವತಿಗೆ ಏಕೆ ಬಂದರೂ, ಇಲ್ಲಿಂದ ಎಲ್ಲಿ ಹೋಗುತ್ತಿದ್ದರು ಎಂಬ ತನಿಖೆ ನಡೆಯುತ್ತಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ರಾಮ್ ಅರಸಿದ್ದಿ ಹೇಳಿದ್ದಾರೆ.

ಬೀದರ್​ನಲ್ಲಿ 183 ಕೆಜೆ 285 ಗ್ರಾಂನಷ್ಟು ಗಾಂಜಾ ನಾಶ

ಬೀದರ್​ ಜಿಲ್ಲೆಯ ಭಾಲ್ಕಿ ತಾಲೂಕಿನ ಧನ್ನೂರು ಗ್ರಾಮದಲ್ಲಿ 183 ಕೆಜಿ 285 ಗ್ರಾಂ ತೂಕದ ಅಕ್ರಮ ಗಾಂಜಾ ಜಪ್ತಿ ಮಾಡಲಾಗಿದೆ. ಸುಮಾರು 53 ಲಕ್ಷ 30 ಸಾವಿರ 329 ರೂಪಾಯಿ ಮೌಲ್ಯದ ಗಾಂಜಾವನ್ನು ನಾಶ ಮಾಡಲಾಗಿದೆ.

ಇದನ್ನೂ ಓದಿ: ಪತಿ-ಪತ್ನಿ ಜಗಳದಲ್ಲಿ ಬಲಿಯಾಯ್ತು ಏನೂ ಅರಿಯದ ಮಗು: ಮಲತಂದೆ ಸೇರಿ ನಾಲ್ವರ ಬಂಧನ

ವಿವಿಧ ಪೊಲೀಸ್​ ಠಾಣೆಯ ಎನ್​​ಡಿಪಿಎಸ್​ ಕಾಯ್ದೆಯಡಿ ವಶಕ್ಕೆ ಪಡೆಯಲಾಗಿದ್ದ ಗಾಂಜಾವನ್ನು ಇನ್ವೆರೋ ಬಯೋಟೆಕ್​ ಜೈವಿಕ ತ್ಯಾಜ್ಯ ವಿಲೇವಾರಿ ಕುಲುಮೆಗೆ ಹಾಕಿ ಜಿಲ್ಲಾ ಡ್ರಗ್ಸ್​ ಡಿಸ್ಫೋಸಲ್​ ಕಮಿಟಿ ನಾಶ ಮಾಡಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?