AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಪ್ಪಳ: ರಸ್ತೆ ದುರಸ್ತಿಗೆ ಪ್ರತಿಭಟನೆ ಮಾಡಿದ್ದ ಯುವಕರ ವಿರುದ್ಧ ಸುಳ್ಳು ಕೇಸ್​ ದಾಖಲು ಆರೋಪ: ಪೊಲೀಸರ ವಿರುದ್ದ ಯುವಕರ ಆಕ್ರೋಶ

ಕಾರಟಗಿ ತಾಲೂಕಿನ ಉಳೇನೂರು ಸಿದ್ದಾಪುರ ರಸ್ತೆ ದುರಸ್ತಿಗೆ ಪೊಲೀಸರ ಅನುಮತಿ ತೆಗೆದುಕೊಂಡು ಪ್ರತಿಭಟನೆ ಮಾಡಿದ್ದರೂ, ಇದೀಗ ಯುವಕರ ವಿರುದ್ಧ ಪೊಲೀಸರು FIR ಹಾಕಿ ನಿರತಂತರ ಕಿರುಕುಳ ನೀಡುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಕೊಪ್ಪಳ: ರಸ್ತೆ ದುರಸ್ತಿಗೆ ಪ್ರತಿಭಟನೆ ಮಾಡಿದ್ದ ಯುವಕರ ವಿರುದ್ಧ ಸುಳ್ಳು ಕೇಸ್​ ದಾಖಲು ಆರೋಪ: ಪೊಲೀಸರ ವಿರುದ್ದ ಯುವಕರ ಆಕ್ರೋಶ
ರಸ್ತೆ ದುರಸ್ಥಿ ವಿರುದ್ದ ಯುವಕರ ಪ್ರತಿಭಟನೆ
TV9 Web
| Edited By: |

Updated on:Feb 11, 2023 | 2:47 PM

Share

ಕೊಪ್ಪಳ: ಜಿಲ್ಲೆಯ ಕಾರಟಗಿ ತಾಲೂಕಿನ ಉಳೇನೂರು ಸಿದ್ದಾಪುರ ರಸ್ತೆ ದುರಸ್ತಿಗೆ ಪ್ರತಿಭಟನೆ ಮಾಡಿದ್ದ ಯುವಕರ ವಿರುದ್ಧ ಪೊಲೀಸರು FIR ಹಾಕಿ ನಿರತಂತರ ಕಿರುಕುಳ ನೀಡುತ್ತಿರುವ ಆರೋಪ ಕೇಳಿಬಂದಿದೆ. ಆಗಸ್ಟ್ 17 2022 ರಂದು ರಸ್ತೆ ದುರಸ್ತಿಗೆ ಮನವಿ ಮಾಡಿದ್ದ ಸುರೇಶ್ ಮಡಿವಾಳರ್, ಮಲ್ಲಿಕಾರ್ಜುನ ಮಡಿವಾಳರ್, ಯಮನೂರ ರಸ್ತೆ ತಡೆದು ಪ್ರತಿಭಟನೆ ಮಾಡಿದ್ದರು. ಈ ವೇಳೆ ಬಂದಿದ್ದ ಪೊಲೀಸರ ಹಾಗೂ ಯುವಕರ ಮಧ್ಯೆ ಮಾತಿನ ಚಕಮಕಿ ನಡೆದಿತ್ತು.

ಅದೇ ಕಾರಣದಿಂದ ಪ್ರತಿಭಟನೆ ಮಾಡಿದ ಯುವಕರ ಜೊತೆ ಮತ್ತಷ್ಟು ಯುವಕರ ಹೆಸರು ಸೇರ್ಪಡೆ ಮಾಡಿದ್ದಾರೆ. ರಸ್ತೆ ದುರಸ್ತಿಗೆ ಪಟ್ಟು ಹಿಡಿದಿದ್ದ ಉಳೇನೂರು ಗ್ರಾಮದ ಯುವಕ ಸುರೇಶ್, ಜಿ.ಪಂ ಸಿಇಓ ಗೂ ರಸ್ತೆ ದುರಸ್ತಿಗೆ ಮನವಿ ಮಾಡಿದ್ದನಂತೆ. ಆದರೀಗ ಯಾವುದೇ ಮಾಹಿತಿ ಇಲ್ಲದೆ ಪೊಲೀಸರು FIR ಮಾಡಿದ್ದರು‌. ನಾನು ನಿಮ್ಮ ಬೆದರಿಕೆಗೆ ಹೆದರುವುದಿಲ್ಲ ಎಂದ ಸುರೇಶ್. ಪೊಲೀಸರ ವಿರುದ್ಧ ಕ್ರಮಕ್ಕೆ ಗೃಹ ಸಚಿವರಿಗೆ ಸುರೇಶ್ ಮನವಿ ಮಾಡಿದ್ದಾನೆ. ಜೊತೆಗೆ ಪೊಲೀಸರ ಅನುಮತಿ ಪಡೆದೆ ಪ್ರತಿಭಟನೆ ಮಾಡಿದ್ರು, ಸುಳ್ಳು ಕೇಸ್ ದಾಖಲಿಸಿದ್ದಾರೆಂದು ಸಾಮಾಜಿಕ ತಾಣಗಳಲ್ಲಿ ಪೊಲೀಸರ ವಿರುದ್ಧ ಆರೋಪ ಮಾಡುವ ಮೂಲಕ ಆಕ್ರೋಶ ಹೊರಹಾಕಿದ್ದಾರೆ.

ನಗರದ ಹೊರ ವಲಯದಲ್ಲಿ ಸಾವನ್ನಪ್ಪಿದ್ದ ತಾಯಿ, ಮಗುವಿನ ಸಾವಿನ ಸುತ್ತ ಅನುಮಾನಗಳ ಹುತ್ತ

ಗದಗ: ನಗರದ ಹೊರವಲಯದ ಸಾಸ್ವಿಹಳ್ಳಿ ಪಾರ್ಮ್​ನಲ್ಲಿ ರುಬೀನಾ ಕಣವಿ 28 ವರ್ಷದ ಮಹಿಳೆ ಶವವಾಗಿ ಪತ್ತೆಯಾಗಿದ್ದಳು. ಇದೀಗ ನಾಲ್ಕು ದಿನಗಳ ಬಳಿಕ ಮೂರು ವರುಷದ ಜಾವೇದ್ ಕಣವಿ ಎಂಬ ಮಗುವಿನ ಶವ ಪತ್ತೆಯಾಗಿದೆ. ಮಗುವಿಗೆ ಕಲ್ಲು ಕಟ್ಟಿ, ಬಾವಿಗೆ ಎಸೆದಿರುವ ಕಿರಾತಕರು. ನಾಲ್ಕು ದಿನಗಳ ಹಿಂದೆ ತಾಯಿ ಇದೀಗ ಮೂರು ವರ್ಷದ ಮಗು ಶವವಾಗಿ ಪತ್ತೆ. ಮಗಳು, ಮೊಮ್ಮಗನ ಕಳೆದುಕೊಂಡು ತಾಯಿಯ ಅಕ್ರಂದನ ಮುಗಿಲು ಮುಟ್ಟಿದೆ. ಮಗಳು ರುಬೀನಾ ಹಾಗೂ ಜಾವೇದ್ ಕೊಲೆ ಮಾಡಿ, ನಂತ್ರ ಬಾವಿಗೆ ಹಾಕಲಾಗಿದೆ. ಮೊದಲಿನಿಂದಲೂ ವರದಕ್ಷಿಣೆ ಕಿರುಕುಳ ನೀಡ್ತಾಯಿದ್ರು ಎಂದು ಮೃತ ಮಹಿಳೆಯ ತಾಯಿ ಗಂಡ ದಾವಲಸಾಬ್ ಕಣವಿ ಸೇರಿದಂತೆ, ಐದು ಜನ ಕುಟುಂಬಸ್ಥರ ವಿರುದ್ದ ಗದಗ ಗ್ರಾಮೀಣ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:46 pm, Sat, 11 February 23

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್