AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಪ್ಪಳದಲ್ಲಿ ಅಚ್ಚರಿ ಘಟನೆ: ಗವಿಮಠದಲ್ಲಿ ಧ್ಯಾನಕ್ಕೆ ಕುಳಿತ ಮುಸ್ಲಿಂ ಮಹಿಳೆ

ಹಿಂದೂಗಳೇ ಹೆಚ್ಚಾಗಿ ಭೇಟಿ ನೀಡುವ ಕೊಪ್ಪಳದ ಗವಿಸಿದ್ದೆಶ್ವರ ಮಠದಲ್ಲಿ ಮುಸ್ಲಿಂ ‌ಮಹಿಳೆಯೊಬ್ಬರು ಕಳೆದ ಎಂಟು ದಿನಗಳಿಂದ ಧ್ಯಾನ ಮಾಡುತ್ತಿದ್ದಾರೆ. ಆ ಮೂಲಕ ಗವಿಮಠ ಸದ್ಯ ವಿಶಿಷ್ಟ ಕ್ಷಣಕ್ಕೆ ಸಾಕ್ಷಿ ಆಗಿದೆ. ಮಾನಸಿಕ ನೆಮ್ಮದಿಗಾಗಿ ಧ್ಯಾನ ಮಾಡುತ್ತಿರುವುದಾಗಿ ಮಹಿಳೆ ಟಿವಿ9 ಬಳಿ ಹೇಳಿಕೊಂಡಿದ್ದಾರೆ.

ಕೊಪ್ಪಳದಲ್ಲಿ ಅಚ್ಚರಿ ಘಟನೆ: ಗವಿಮಠದಲ್ಲಿ ಧ್ಯಾನಕ್ಕೆ ಕುಳಿತ ಮುಸ್ಲಿಂ ಮಹಿಳೆ
ಧ್ಯಾನಕ್ಕೆ ಕೂತ ಮುಸ್ಲಿಂ ಮಹಿಳೆ
ಶಿವಕುಮಾರ್ ಪತ್ತಾರ್
| Edited By: |

Updated on:Jul 26, 2025 | 10:26 AM

Share

ಕೊಪ್ಪಳ, ಜುಲೈ 26: ಕೊಪ್ಪಳದ ಗವಿಮಠ (Gavisiddeshwar Math) ಶಿಕ್ಷಣ ಸೇರಿದಂತೆ ಹತ್ತು ಹಲವು ವಿಚಾರಗಳಿಗೆ ಸುಪ್ರಸಿದ್ಧವಾಗಿದೆ. ಗವಿಮಠದ ಜಾತ್ರೆಯನ್ನು ದಕ್ಷಿಣದ ಕುಂಭಮೇಳ ಎಂದು ಕರೆಯುತ್ತಾರೆ. ಸದ್ಯ ಇದೇ ಗವಿಮಠ ವಿಶಿಷ್ಟ ಕ್ಷಣಕ್ಕೆ ಸಾಕ್ಷಿಯಾಗಿದೆ. ಅದೇನೆಂದರೆ ಕಳೆದ ಎಂಟು ದಿನಗಳಿಂದ ಮಠಕ್ಕೆ ಬರುತ್ತಿರುವ ಮಹಿಳೆ ನಾಗದೇವರ ಮುಂದೆ ಧ್ಯಾನಕ್ಕೆ ಕುಳಿತುಕೊಳ್ಳುತ್ತಿದ್ದಾರೆ. ಹೀಗೆ ಧ್ಯಾನಕ್ಕೆ ಕುಳಿತುಕೊಳ್ಳುತ್ತಿರುವುದು ಮುಸ್ಲಿಂ ಮಹಿಳೆ (Muslim woman) ಎಂಬುವುದು ಸದ್ಯ ಅಚ್ಚರಿಗೆ ಕಾರಣವಾಗಿದೆ.

ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಕುದರಿ ಮೋತಿ ನಿವಾಸಿ ಹಸೀನಾ ಬೇಗಂ ಅವರು ಗವಿ ಮಠದಲ್ಲಿ ನಿರಂತರ ಒಂದು ಗಂಟೆಗಳ ಕಾಲ ಧ್ಯಾನ ಮಾಡುತ್ತಿದ್ದಾರೆ. ಬಹುತೇಕ ಶೇಕಡಾ 90 ರಷ್ಟು ಹಿಂದೂ ಧರ್ಮದವರು ಗವಿ ಮಠಕ್ಕೆ ಬರುತ್ತಾರೆ. ಆದರೆ ಆವರಣದಲ್ಲಿ ಮೊದಲ ಬಾರಿಗೆ ಮುಸ್ಲಿಂ ಮಹಿಳೆಯೊಬ್ಬರಿಂದ ಧ್ಯಾನ ಮಾಡಲಾಗುತ್ತಿದೆ.

ಗವಿ ಮಠದ ಶ್ರೀಗಳು ನಿತ್ಯ ಸಂಜೆ ಹೊತ್ತಲ್ಲಿ ಕುಳಿತುಕೊಳ್ಳುವ ಜಾಗದ ಮುಂದೆಯೆ ಮಹಿಳೆಯಿಂದ ಧ್ಯಾನ ಮಾಡಲಾಗುತ್ತಿದ್ದು. ಮಾನಸಿಕ ನೆಮ್ಮದಿಗಾಗಿ ಒಟ್ಟು 11 ದಿನ ಧ್ಯಾನ ಮಾಡುವುದಾಗಿ ಹಸೀನಾ ಬೇಗಂ ಬೇಡಿಕೊಂಡಿದ್ದಾರೆ.

ನಾನು 13 ವರ್ಷದಿಂದ ಗವಿ ಮಠದ ಶ್ರೀಗಳನ್ನು ನಂಬಿದ್ದೇನೆ: ಹಸೀನಾ ಬೇಗಂ

ಈ ಕುರಿತಾಗಿ ಸ್ವತಃ ಹಸೀನಾ ಬೇಗಂ ಅವರು ಟಿವಿ9 ಜೊತೆ ಮಾತನಾಡಿದ್ದು, ‘ಮನಸ್ಸಿಗೆ ನೆಮ್ಮದಿ ಇರಲಿಲ್ಲ, ಬಹಳ ಕಷ್ಟ ಇತ್ತು. ಹೀಗಾಗಿ ಶ್ರೀಗಳ ಬಳಿ ಕೇಳಿಕೊಂಡು ಎಂಟು ದಿನದಿಂದ ಧ್ಯಾನ ಮಾಡುತ್ತಿದ್ದೇನೆ. ನಾನು ಮುಸ್ಲಿಂ ಆದರೂ ಎಲ್ಲಾ ಧರ್ಮ ಒಂದೇ’ ಎಂದರು.

ಇದನ್ನೂ ಓದಿ: ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ

‘ನಾನು 13 ವರ್ಷದಿಂದ ಗವಿ ಮಠದ ಶ್ರೀಗಳನ್ನು ನಂಬಿದ್ದೇನೆ. ಮಠದಲ್ಲಿ ಮುಸ್ಲಿಂ ಎಂಬ ಬೇಧ-ಭಾವ ಇಲ್ಲ. ನನಗೆ ಒಬ್ಬರಿಂದ ನೋವು ಆಗಿದೆ. ಹಾಗಾಗಿ ನಿತ್ಯ ಒಂದು ಗಂಟೆ ಧ್ಯಾನಕ್ಕೆ ಕೂತಿದ್ದೇನೆ. ನನಗೆ ಬಹಳ ಕಷ್ಟ ಇದೆ, ಪರಿಹಾರ ಆಗತ್ತೆ. ನನ್ನ ಮಕ್ಕಳ ಮೇಲೂ ಅಜ್ಜರ ಆಶೀರ್ವಾದ ಇದೆ. ನಾಗಪ್ಪ, ಬಸವಣ್ಣ ಎಲ್ಲರನ್ನೂ ಪೂಜೆ ಮಾಡುತ್ತೇನೆ. ಮನಸ್ಸಿಗೆ ನೆಮ್ಮದಿ ಸಿಗುತ್ತೆ ಎಂಬ ನಂಬಿಕೆ ಇದೆ’ ಎಂದು ಹೇಳಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:52 am, Sat, 26 July 25

Follow Us
Shivakumar Pattar
Shivakumar Pattar

ಶಿವಕುಮಾರ್ ಎಸ್ ಪತ್ತಾರ.. ಹುಟ್ಟಿದ್ದು ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಕೊಪ್ಪಳದಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಹುಬ್ಬಳ್ಳಿಗೆ ಬಂದು ನಿಂತಿದೆ.ಈ ಮದ್ಯೆ ರಾಯಚೂರು,ಬಳ್ಳಾರಿ,ವರದಿಗಾರನಾಗಿ ಕೆಲಸ ಮಾಡಿದ್ದೇನೆ.ರಹಸ್ಯ ಕಾರ್ಯಾಚರಣೆ ನನಗಿಷ್ಟ.ಟಿವಿ9 ನಲ್ಲಿ ಕೆಲ ರಹಸ್ಯ ಕಾರ್ಯಾಚರಣೆಗಳ ವರದಿಯನ್ನು ಮಾಡಿದ್ದೇನೆ.ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ