AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇವಿ ದೇವಾಲಯದ ಮುಂದೆ ಅಮಾನವೀಯ ಘಟನೆ: ಮುಳ್ಳಿನ ಪೊದೆಯಲ್ಲಿ ಒದ್ದಾಡಿದ ಒಂದು ದಿನದ ಹೆಣ್ಣು ಮಗು

ಕೊಪ್ಪಳದ ಹುಲಿಗೆಮ್ಮ ದೇವಾಲಯದ ಬಳಿ ನವಜಾತ ಹೆಣ್ಣು ಮಗುವನ್ನು ಅಮಾನವೀಯವಾಗಿ ಎಸೆದು ಹೋಗಲಾಗಿದೆ. ಮುಳ್ಳಿನ ಪೊದೆಯಲ್ಲಿ ಸಿಕ್ಕಿಬಿದ್ದ ಮಗುವನ್ನು ಹೋಮ್ ಗಾರ್ಡ್ ರಕ್ಷಿಸಿದ್ದಾರೆ. ಹಸಿವು ಮತ್ತು ಹುಳುಗಳಿಂದ ನರಳುತ್ತಿದ್ದ ಶಿಶು ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದೆ. ಸಮಾಜದಲ್ಲಿ ಹೆಣ್ಣು ಮಕ್ಕಳ ಬಗ್ಗೆ ಇನ್ನೂ ಇರುವ ತಪ್ಪು ಮನಸ್ಥಿತಿಗೆ ಈ ಘಟನೆ ಸಾಕ್ಷಿ. ಪೋಷಕರ ಪತ್ತೆಗೆ ಕಾರ್ಯಾಚರಣೆ ನಡೆಯುತ್ತಿದ್ದು, ಮಗು ಸುರಕ್ಷಿತವಾಗಿದೆ.

ದೇವಿ ದೇವಾಲಯದ ಮುಂದೆ ಅಮಾನವೀಯ ಘಟನೆ: ಮುಳ್ಳಿನ ಪೊದೆಯಲ್ಲಿ ಒದ್ದಾಡಿದ ಒಂದು ದಿನದ ಹೆಣ್ಣು ಮಗು
ಕೊಪ್ಪಳದಲ್ಲಿ ಸಿಕ್ಕ ಹೆಣ್ಣು ಮಗು
ಶಿವಕುಮಾರ್ ಪತ್ತಾರ್
| Edited By: |

Updated on:Dec 30, 2025 | 3:58 PM

Share

ಕೊಪ್ಪಳ, ಡಿ.30: ಹೆಣ್ಣು ಮಕ್ಕಳು ಬೇಡ (Koppal Baby Abandoned) ಎನ್ನುವ ಕ್ರೂರ ಮನಸ್ಥಿತಿ ಇನ್ನೂ ಹೋಗಿಲ್ಲ. ಹೆಣ್ಣು ಮಗು ಎಂಬ ಕಾರಣಕ್ಕೆ ಬೀದಿಯಲ್ಲಿ ಬಿಟ್ಟು ಹೋಗುವ ಘಟನೆಗಳು ಇಂದಿಗೂ ಕಂಡು ಬರುತ್ತಿದೆ ಎಂಬುದು ಅಚ್ಚರಿಯ ವಿಚಾರ, ಸಮಾಜ ಬದಲಾದರೂ, ಮನುಷ್ಯನ ಮನಸ್ಥಿತಿ ಬದಲಾಗುತ್ತಿಲ್ಲ. ಇದೀಗ ಕೊಪ್ಪಳದ ತಾಲೂಕಿನ ಐತಿಹಾಸಿಕ ಹುಲಗೆಮ್ಮ ದೇವಸ್ಥಾನದಲ್ಲೂ ಇಂತಹ ಅಮಾನವೀಯ ಘಟನೆಯೊಂದು ನಡೆದಿದೆ. ಈ ದೇವಸ್ಥಾನಕ್ಕೆ ಲಕ್ಷ ಲಕ್ಷ ಭಕ್ತರು ರಾಜ್ಯದಿಂದ ಹಾಗೂ ಹೊರರಾಜ್ಯದಿಂದಲೂ ಬಂದು ದೇವಿಯ ದರ್ಶನ ಪಡೆಯುತ್ತಾರೆ. ಇಂತಹ ಶ್ರದ್ಧಾ ಕೇಂದ್ರದಲ್ಲಿ ಈ ಘಟನೆ ನಡೆದಿರುವುದು, ಮನುಷ್ಯ ಸಮಾಜ ತಲೆ ತಗ್ಗಿಸುವಂತೆ ಮಾಡಿದೆ. ದೇವಾಲಯದ ಪಕ್ಕದಲ್ಲಿರುವ ಮುಳ್ಳಿನ ಪೊದೆಯಲ್ಲಿ ನವಜಾತ ಶಿಶುವನ್ನು ಎಸೆದು ಹೋಗಿದ್ದಾರೆ.

ಹೆಣ್ಣು ಮಗು ಎಂಬ ಕಾರಣಕ್ಕೆ ದೇವಾಲಯದ ಪಕ್ಕದಲ್ಲಿ ಮಗುವನ್ನು ಎಸೆದು ಹೋಗಿದ್ದಾರೆ ಎಂದು ಅಲ್ಲಿನ ಜನ ಹೇಳಿದ್ದಾರೆ. ಈ ಮಗು ಜನಿಸಿ ಒಂದು ದಿನ ಆಗಿರಬಹುದು ಎಂದು ಹೇಳಲಾಗಿದೆ. ಮಗು ಅಳುತ್ತಿರುವುದು ಕೇಳಿ ದೇವಸ್ಥಾನದ ಹೋಮ್ ಗಾರ್ಡ್​​ಗಳು ಸ್ಥಳಕ್ಕೆ ಬಂದು ನೋಡಿದ್ದಾರೆ. ತಕ್ಷಣ ಮಗುವನ್ನು ಎತ್ತಿಕೊಂಡು ಸಮಾಧಾನ ಮಾಡಲು ಪ್ರಯತ್ನಿಸಿದ್ದಾರೆ. ಅಮ್ಮನ ಎದೆಹಾಲು ಇಲ್ಲದೆ ಹಸಿವಿನಿಂದ ಮಗು ಒದ್ದಾಡಿದೆ. ತಕ್ಷಣ ಮಗುವನ್ನು ಸ್ಥಳೀಯ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಚಿಕಿತ್ಸೆ ನೀಡಿದ್ದಾರೆ. ಇನ್ನು ಈ ಮಗುವಿನ ಪೋಷಕರು ಯಾರು ಎಂಬ ಕಾರ್ಯಚರಣೆ ನಡೆಯುತ್ತಿದೆ. ಮದುವೆಗೂ ಮುನ್ನವೇ ಗರ್ಭಿಣಿಯಾಗಿ, ಮಗುವನ್ನು ಪಡೆದಿರುವ ಕಾರಣಕ್ಕೆ ಮಗುವನ್ನು ಎಸೆದು ಹೋಗಿದ್ದಾರೆ ಎಂದು ಶಂಕಿಸಲಾಗಿದೆ.

ದೇವಸ್ಥಾನದ ಪಕ್ಕದಲ್ಲಿರುವ ಮುಳ್ಳಿನ ಪೊದೆಯಲ್ಲಿ ಎಸೆದು ಹೋಗಿರುವ ಕಾರಣ, ಮಗುವಿನ ಮೇಲೆ ಹುಳುಗಳು ಮೆತ್ತಿಕೊಂಡು ನೋವಿನಿಂದ ಮಗು ಕೂಗುತ್ತಿತ್ತು. ಇದನ್ನು ಗಮನಿಸಿದ ಹುಲಗೆಮ್ಮ ದೇವಸ್ಥಾನದಲ್ಲಿ ಕೆಲಸ ಮಾಡತಿದ್ದ,ಹೋಮ್ ಗಾರ್ಡ್ ಗಳು ಮಗುವಿನ ರಕ್ಷಣೆ ಮಾಡಿ, ಹುಲಗಿಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ದಾಖಲಿಸಿದ್ದಾರೆ. ಇದೀಗ ಮಗು ಕೊಪ್ಪಳ ಜಿಲ್ಲಾ ಆಸ್ಪತ್ರೆಯಲ್ಲಿದೆ. ಮಗುವ ಆರೋಗ್ಯವಾಗಿದೆ ಎಂದು ಆಸ್ಪತ್ರೆ ವೈದ್ಯರು ಹೇಳಿದ್ದಾರೆ.

ಇದನ್ನೂ ಓದಿ: ವಿದ್ಯಾರ್ಥಿಗಳ ಕೈಯಲ್ಲಿ ಕಾರು ತೊಳೆಸಿದ ಶಿಕ್ಷಕ

ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಗು ಸುಮಾರು 2 ಕೆಜಿ 400 ಗ್ರಾಂ ಇದೆ. ಹುಲಗಿಯಲ್ಲಿ ಕೆಲಸ ಮಾಡತಿದ್ದ ಹೋಮ್ ಗಾರ್ಡ್ ಗಳಾದ ಶಿವಕುಮಾರ್ ಹಾಗೂ ಮಾರುತಿ ಅವರ ಸಮಯ ಪ್ರಜ್ಜೆಯಿಂದ ನವಜಾತ ಶಿಶು ಬದುಕಿದೆ. ಮಗುವಿಗೆ ಮುಳ್ಳು ಚುಚ್ಚಿಕೊಂಡಿದ್ದು, ಹಾಗೂ ಹುಳುಗಳು ಕಚ್ಚಿರುವುದರಿಂದ ನಂಜಾಗಿರುವ ಸಾಧ್ಯತೆಗಳು ಇದೆ ಎಂದು ವೈದ್ಯ ಗೀರಿಶ್ ಹೇಳಿದ್ದಾರೆ. ಮಕ್ಕಳಾ ರಕ್ಷಣಾ ಘಟಕದ ಅಧಿಕಾರಿಗಳು ಆಸ್ಪತ್ರೆಗೆ ಧಾವಿಸಿದ್ದು, ಮಗುವಿನ ಬಗ್ಗೆ ವಿಚಾರಣೆ ನಡೆಸಿದ್ದಾರೆ. ಮಗುವಿನ ಪೋಷಕರ ಬಗ್ಗೆಯೂ ಕಾರ್ಯಚರಣೆ ನಡೆಯುತ್ತಿದೆ ಎಂದು ಹೇಳಿದ್ದಾರೆ. ಒಂದು ವೇಳೆ ಮಗುವಿನ ಪೋಷಕರ ಸಿಕ್ಕಿಲ್ಲ ಎಂದರೆ ಮಗುವನ್ನು ದತ್ತು ನೀಡುವ ಪ್ರತಿಕ್ರಿಯೆ ನಡೆಸುತ್ತೇವೆ ಎಂದು ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳು ಹೇಳಿದ್ದಾರೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:55 pm, Tue, 30 December 25

Follow Us
‘ಸಾರಾ ಗೋವಿಂದ್ ನನಗೆ ಧಮ್ಕಿ ಹಾಕೋ ರೀತಿ ಮಾತಾಡಿದ್ರು’; ಚೇತನ್
‘ಸಾರಾ ಗೋವಿಂದ್ ನನಗೆ ಧಮ್ಕಿ ಹಾಕೋ ರೀತಿ ಮಾತಾಡಿದ್ರು’; ಚೇತನ್
ಪ್ರವಾಸಿಗರ ಕಣ್ಣಿಗೆ ಬಿದ್ದ ಅಪರೂಪದ 'ಬಿಳಿ ಜಿಂಕೆ'!
ಪ್ರವಾಸಿಗರ ಕಣ್ಣಿಗೆ ಬಿದ್ದ ಅಪರೂಪದ 'ಬಿಳಿ ಜಿಂಕೆ'!
ಪೆಟ್ರೋಲ್, ಡಿಸೇಲ್ ಏರಿಕೆ ಭೀತಿ! ಪೆಟ್ರೋಲ್ ಬಂಕ್​ಗಳಿಗೆ ಮುಗಿಬಿದ್ದ ಜನ
ಪೆಟ್ರೋಲ್, ಡಿಸೇಲ್ ಏರಿಕೆ ಭೀತಿ! ಪೆಟ್ರೋಲ್ ಬಂಕ್​ಗಳಿಗೆ ಮುಗಿಬಿದ್ದ ಜನ
ರೋಚಕ ಪಂದ್ಯದಲ್ಲಿ 2 ರನ್​ಗಳ ಜಯ ಸಾಧಿಸಿ ಫೈನಲ್​ಗೇರಿದ ಹೈದರಾಬಾದ್
ರೋಚಕ ಪಂದ್ಯದಲ್ಲಿ 2 ರನ್​ಗಳ ಜಯ ಸಾಧಿಸಿ ಫೈನಲ್​ಗೇರಿದ ಹೈದರಾಬಾದ್
ಅಳಿಯನ ಮನೆಗೇ ಕನ್ನ ಹಾಕಿ ಸಿಕ್ಕಿಬಿದ್ದ ಅತ್ತೆ: ಕದ್ದ ಬಂಗಾರ ಎಷ್ಟು ಗೊತ್ತಾ?
ಅಳಿಯನ ಮನೆಗೇ ಕನ್ನ ಹಾಕಿ ಸಿಕ್ಕಿಬಿದ್ದ ಅತ್ತೆ: ಕದ್ದ ಬಂಗಾರ ಎಷ್ಟು ಗೊತ್ತಾ?
ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿತ: ಇಬ್ಬರು ಅಧಿಕಾರಿಗಳ ತಲೆಂಡ
ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿತ: ಇಬ್ಬರು ಅಧಿಕಾರಿಗಳ ತಲೆಂಡ
ಪಶ್ಚಿಮ ಬಂಗಾಳದ 15 ಬೂತ್​ಗಳಲ್ಲಿ ಮರು ಮತದಾನ: ಮತದಾರರ ಜೋಶ್​​ ನೋಡಿ
ಪಶ್ಚಿಮ ಬಂಗಾಳದ 15 ಬೂತ್​ಗಳಲ್ಲಿ ಮರು ಮತದಾನ: ಮತದಾರರ ಜೋಶ್​​ ನೋಡಿ
ಮರುಎಣಿಕೆಗೂ ಮೊದಲೇ ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಬಾಕ್ಸ್​ ಸೀಲ್​​ ಓಪನ್​?
ಮರುಎಣಿಕೆಗೂ ಮೊದಲೇ ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಬಾಕ್ಸ್​ ಸೀಲ್​​ ಓಪನ್​?
ಛಾಯಾ ಸಿಂಗ್ ಹುಡುಗನಾಗಿ, ರಾಜೇಶ್ ಹುಡುಗಿಯಾಗಿ ಬದಲಾದ್ರೆ ಹೇಗಿರ್ತಾರೆ?
ಛಾಯಾ ಸಿಂಗ್ ಹುಡುಗನಾಗಿ, ರಾಜೇಶ್ ಹುಡುಗಿಯಾಗಿ ಬದಲಾದ್ರೆ ಹೇಗಿರ್ತಾರೆ?
ಫಲ ಸಿಗಬೇಕು ಎಂದರೆ ನೀವು ಯಾವ ದಿನ ಉಪವಾಸ ಮಾಡಬೇಕು ಗೊತ್ತಾ?
ಫಲ ಸಿಗಬೇಕು ಎಂದರೆ ನೀವು ಯಾವ ದಿನ ಉಪವಾಸ ಮಾಡಬೇಕು ಗೊತ್ತಾ?