AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಪ್ಪಳ: ಬಿರುಗಾಳಿ ಹೊಡೆತಕ್ಕೆ ಹಾಳಾದ ಬಾಳೆ ತೋಟ, ಲಕ್ಷಾಂತರ ರೂಪಾಯಿ ಆದಾಯ ಕಳೆದುಕೊಂಡು ಕಂಗಾಲಾದ ರೈತರು

ಒಂದು ಎಕರೆಯಲ್ಲಿ ಬಾಳೆ ಬೆಳೆಯಲು ಸಾಮಾನ್ಯ ಎರಡರಿಂದ ಮೂರು ಲಕ್ಷ ರೂಪಾಯಿ ಖರ್ಚಾಗುತ್ತದೆ. ಒಂದು ಎಕರೆಯಲ್ಲಿ ಬಾಳೆ ಚನ್ನಾಗಿ ಬಂದರೆ, ಏಳರಿಂದ ಎಂಟು ಲಕ್ಷ ರೂಪಾಯಿವರಗೆ ಆದಾಯ ಬರುತ್ತದೆ. ಆದರೆ ಈ ಬಾರಿ ಆದಾಯ ಬರೋದು ದೂರದ ಮಾತಾಯ್ತು, ಮಾಡಿದ ಖರ್ಚು ಕೂಡಾ ಬಾರದಂತಹ ಸ್ಥಿತಿ ನಿರ್ಮಾಣವಾಗಿದೆ.

ಕೊಪ್ಪಳ: ಬಿರುಗಾಳಿ ಹೊಡೆತಕ್ಕೆ ಹಾಳಾದ ಬಾಳೆ ತೋಟ, ಲಕ್ಷಾಂತರ ರೂಪಾಯಿ ಆದಾಯ ಕಳೆದುಕೊಂಡು ಕಂಗಾಲಾದ ರೈತರು
ಕೊಪ್ಪಳ: ಬಿರುಗಾಳಿ ಹೊಡೆತಕ್ಕೆ ಹಾಳಾದ ಬಾಳೆ ತೋಟ, ಲಕ್ಷಾಂತರ ರೂಪಾಯಿ ನಷ್ಟ
ಸಂಜಯ್ಯಾ ಚಿಕ್ಕಮಠ
| Edited By: |

Updated on: May 11, 2024 | 2:10 PM

Share

ಕೊಪ್ಪಳ, ಮೇ 11: ಆ ರೈತರಿಗೆ ಇದೀಗ ಕೈಗೆ ಬಂದ ತುತ್ತು ಬಾಯಿಗೆ ಬಾರದೆ ಹೋಗಿದೆ. ಬರಗಾಲದಲ್ಲಿ ನೀರನ್ನು ಅಮೃತದಂತೆ ಕಾಪಾಡಿಕೊಂಡು ರೈತರು ಬಾಳೆ (Banana Farming) ಬೆಳದಿದ್ದರು. ಆದರೆ ಬಿರುಗಾಳಿ ಹೊಡೆತಕ್ಕೆ ಬಾಳೆ ಗಿಡಗಳು ಬಾಗಿದ್ದು, ಹಣ್ಣಾಗುವ ಮೊದಲೇ ಬಾಳೆ ಗೊನೆಗಳು ಹಾಳಾಗಿ ಹೋಗಿವೆ. ಕಳೆದ ಎರಡು ದಿನಗಳಿಂದ ಕೊಪ್ಪಳ (Koppal) ಜಿಲ್ಲೆಯಲ್ಲಿ ಬಾರಿ ಬಿರುಗಾಳಿಗೆ ಲಕ್ಷಾಂತರ ಮೌಲ್ಯದ ಬಾಳೆ ಹಾಳಾಗಿ ಹೋಗಿದೆ. ಆದಾಯದ ನಿರೀಕ್ಷೆಯಲ್ಲಿದ್ದ ರೈತರಿಗೆ ದೊಡ್ಡ ಸಂಕಷ್ಟ ಎದುರಾಗಿದೆ.

ರಾಜ್ಯದಲ್ಲಿ ಬೀಕರ ಬರಗಾಲದಿಂದ ಈ ವರ್ಷ ರೈತರು ಸಾಕಷ್ಟು ಸಂಕಷ್ಟ ಅನುಭವಿಸಿದ್ದಾರೆ. ಲಕ್ಷ ಲಕ್ಷ ರೂಪಾಯಿ ಖರ್ಚು ಮಾಡಿದರೂ ಕೂಡಾ ಬೆಳೆ ಬಾರದೇ ಇರುವುದರಿಂದ ರೈತರು ಈಗಾಗಲೇ ಸಾಲದ ಸುಳಿಯಲ್ಲಿ ಸಿಲುಕಿ ನಲುಗುತ್ತಿದ್ದಾರೆ. ಆದರೆ, ಇಂತಹ ಸಂಕಷ್ಟದ ಸಮಯದಲ್ಲಿ ಕೂಡಾ ಮತ್ತೆ ಲಕ್ಷಾಂತರ ರೂಪಾಯಿ ಖರ್ಚು ಮಾಡಿ, ಕಿಲೋ ಮೀಟರ್ ದೂರಗಟ್ಟಲೆ ಪಂಪಸೆಟ್​​ಗಳ ಮೂಲಕ ನೀರು ತಂದು ಬಾಳೆ ಬೆಳದಿದ್ದ ರೈತರಿಗೆ ಇದೀಗ ಮತ್ತೆ ಸಂಕಷ್ಟ ಎದುರಾಗಿದೆ. ಕಳೆದ ಎರಡು ದಿನಗಳಿಂದ ಕೊಪ್ಪಳ ಜಿಲ್ಲೆಯ ಡಂಬರಳ್ಳಿ, ಗಂಗಾವತಿ ತಾಲೂಕಿನ ಆನೆಗೊಂದಿ ಸೇರಿದಂತೆ ಹಲವಡೆ ಬಾರಿ ಬಿರುಗಾಳಿ ಬೀಸಿದ್ದು, ಗಾಳಿಗೆ ಬಾಳೆ ಗಿಡಗಳು ನೆಲಕ್ಕುರುಳಿವೆ.

ವಾರದ ಹಿಂದೆ ಬೀಸಿದ್ದ ಬಿರುಗಾಳಿಗೆ ಕೆಲ ಬಾಳೆ ಗಿಡಗಳು ಹಾಳಾಗಿ ಹೋಗಿದ್ದವು. ಆದ್ರೆ ಕಳೆದ ಎರಡು ದಿನಗಳಿಂದ ದೊಡ್ಡ ಮಟ್ಟದ ಬಿರುಗಾಳಿ ಬೀಸಿದ್ದು ಬಹುತೇಕ ಗಿಡಗಳು ನೆಲಕ್ಕಚ್ಚಿವೆ. ಡಂಬರಳ್ಳಿ ಗ್ರಾಮದ ಬಸವರೆಡ್ಡಿ ಕರಡ್ಡಿ, ಹನಮಂತ ರೆಡ್ಡಿ ಸೇರಿದಂತೆ ಅನೇಕ ರೈತರು ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಯಾಲಕ್ಕಿ ಬಾಳೆ ಬೆಳದಿದ್ದರು. ಬರಗಾಲದಲ್ಲಿ ಕೂಡಾ ದೂರದಿಂದ ನೀರನ್ನು ತಂದು ಮಕ್ಕಳಂತೆ ಬಾಳೆ ಗಿಡಗಳನ್ನು ಜೋಪಾನ ಮಾಡಿದ್ದರು. ಭೂಮಿ ತಾಯಿ ಕೂಡಾ ರೈತನ ಶ್ರಮಕ್ಕೆ ಪ್ರತಿಫಲ ನೀಡಿದ್ದಳು. ಉತ್ತಮ ಬಾಳೆ ಗೊನೆಗಳಾಗಿದ್ದವು. ಇನ್ನೊಂದು ಹದಿನೈದು ದಿನ ಕಳೆದದ್ದರೆ ಬಾಳೆ ಕಟಾವಿಗೆ ಬರ್ತಿತ್ತು. ಆದ್ರೆ ಎರಡು ದಿನದಿಂದ ಬೀಸಿದ ಬಿರುಗಾಳಿಗೆ ಬಾಳೆ ಗಿಡಗಳು ಸಂಪೂರ್ಣವಾಗಿ ನೆಲಕ್ಕಚ್ಚಿವೆ.

ಒಂದು ಎಕರೆಯಲ್ಲಿ ಬಾಳೆ ಬೆಳೆಯಲು ಸಾಮಾನ್ಯ ಎರಡರಿಂದ ಮೂರು ಲಕ್ಷ ರೂಪಾಯಿ ಖರ್ಚಾಗುತ್ತದೆ. ಒಂದು ಎಕರೆಯಲ್ಲಿ ಬಾಳೆ ಚನ್ನಾಗಿ ಬಂದರೆ, ಏಳರಿಂದ ಎಂಟು ಲಕ್ಷ ರೂಪಾಯಿವರಗೆ ಆದಾಯ ಬರುತ್ತದೆ. ಆದರೆ ಈ ಬಾರಿ ಆದಾಯ ಬರೋದು ದೂರದ ಮಾತಾಯ್ತು, ಮಾಡಿದ ಖರ್ಚು ಕೂಡಾ ಬಾರದಂತಹ ಸ್ಥಿತಿ ನಿರ್ಮಾಣವಾಗಿದೆ. ಲಕ್ಷಾಂತರ ರೂಪಾಯಿ ಸಾಲ ಮಾಡಿ ಬಾಳೆ ಬೆಳದಿದ್ದ ರೈತರಿಗೆ ಇದೀಗ ಮಾಡಿದ ಸಾಲವನ್ನು ತೀರಿಸೋದು ಹೇಗೆ ಅನ್ನೋ ದೊಡ್ಡ ಚಿಂತೆ ಕಾಡಲು ಆರಂಭಿಸಿದೆ. ಇನ್ನು ಬಾಳೆ ಗಿಡಗಳು ನೆಲಕ್ಕಚ್ಚಿದ್ದರಿಂದ, ಗಿಡಗಳನ್ನು ಕಡಿದು, ಭೂಮಿಯನ್ನು ಸ್ವಚ್ಚಗೊಳಿಸಲು ಮತ್ತೆ ರೈತರು ಸಾವಿರಾರು ರೂಪಾಯಿ ಖರ್ಚು ಮಾಡಬೇಕಾದ ಸ್ಥಿತಿ ನಿರ್ಮಾಣವಾಗಿದೆ.

ಇದನ್ನೂ ಓದಿ: ಹೈಟೆನ್ಷನ್ ವಿದ್ಯುತ್ ವೈಯರ್ ತಗುಲಿ ವ್ಯಕ್ತಿ ಸಾವು; ವಿಂಡ್ ಪವರ್ ಕಂಪನಿ ವಿರುದ್ದ ಆಕ್ರೋಶ

ಲಕ್ಷಾಂತರ ರೂಪಾಯಿ ಆಧಾಯದ ನಿರೀಕ್ಷೆ ಇಟ್ಟುಕೊಂಡು ಸಾಲ ಮಾಡಿ ಬಾಳೆ ಬೆಳದಿದ್ದ ರೈತರು ಬಿರುಗಾಳಿ ಹೊಡೆತಕ್ಕೆ ಕಂಗಾಲಾಗಿದ್ದಾರೆ. ಹೀಗಾಗಿ ಮಾಡಿದ ಸಾಲವನ್ನು ತೀರಿಸೋದು ಹೇಗೆ ಅನ್ನೋ ಚಿಂತೆ ರೈತರನ್ನು ಕಾಡುತ್ತಿದೆ. ಹೀಗಾಗಿ ತೋಟಗಾರಿಕೆ ಇಲಾಖೆ ಅಧಿಕಾರಿಗಳು ರೈತರ ಜಮೀನಿಗೆ ಬೇಟಿ ನೀಡಿ, ರೈತರಿಗೆ ಸರ್ಕಾರದಿಂದ ಪರಿಹಾರ ಕೊಡಿಸುವ ಕೆಲಸ ಮಾಡಬೇಕಿದೆ. ಆ ಮೂಲಕ ಸಂಕಷ್ಟದಲ್ಲಿರುವ ಅನ್ನದಾತರ ಕೈ ಹಿಡಿಯುವ ಕೆಲಸವನ್ನು ಮಾಡಬೇಕಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸಂಜಯ್ಯಾ ಚಿಕ್ಕಮಠ
ಸಂಜಯ್ಯಾ ಚಿಕ್ಕಮಠ

ಸಂಜಯ್ಯಾ ಚಿಕ್ಕಮಠ. ಹುಟ್ಟಿದ್ದು ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ರಾಮನಾಳ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 14 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್ ನಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಕೊಪ್ಪಳಕ್ಕೆ ಬಂದು ನಿಂತಿದೆ. ಕೃಷಿ ನನ್ನಿಷ್ಟ.ಆದ್ರೆ ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು