AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಪ್ಪಳ: ಅಂತರ್ಜಾತಿ ವಿವಾಹವಾಗಿದ್ದಕ್ಕೆ ಕುಟುಂಬವೊಂದಕ್ಕೆ ಬಹಿಷ್ಕಾರ, ದೂರು ನೀಡಿದರೂ ಕ್ಯಾರೇ ಅನ್ನದ ಪೊಲೀಸರು

Koppal Family ostracized: ಅಂತರ್ಜಾತಿ ವಿವಾಹವಾದ ಕಾರಣಕ್ಕೆ ಕೊಪ್ಪಳದ ಭಾಗ್ಯನಗರದ ಕುಟುಂಬವೊಂದಕ್ಕೆ ಸಮುದಾಯ ಒಂದರ ಮುಖಂಡರು ಬಹಿಷ್ಕಾರ ಹಾಕಿದ ವಿಚಾರ ತಿಳಿದು ಬಂದಿದೆ. ಸುಮಾರು ಒಂದುವರೆ ವರ್ಷದಿಂದ ಕುಟುಂಬವು ಬಹಿಷ್ಕಾರ ಎದುರಿಸುತ್ತಿದ್ದು, ಪೊಲೀಸರಿಗೆ ದೂರು ನೀಡಲು ಮುಂದಾದರೂ ಕ್ರಮ ಕೈಗೊಂಡಿಲ್ಲ ಎಂಬ ಆರೋಪ ಕೇಳಿಬಂದಿದೆ.

ಕೊಪ್ಪಳ: ಅಂತರ್ಜಾತಿ ವಿವಾಹವಾಗಿದ್ದಕ್ಕೆ ಕುಟುಂಬವೊಂದಕ್ಕೆ ಬಹಿಷ್ಕಾರ, ದೂರು ನೀಡಿದರೂ ಕ್ಯಾರೇ ಅನ್ನದ ಪೊಲೀಸರು
ಸಾಮಾಜಿಕ ಬಹಿಷ್ಕಾರ ಎದುರಿಸುತ್ತಿರುವ ಕುಟುಂಬದವರ ನಿವಾಸ ಮತ್ತು ಒಳಚಿತ್ರದಲ್ಲಿ ಕುಟುಂದವರು.
ಸಂಜಯ್ಯಾ ಚಿಕ್ಕಮಠ
| Edited By: |

Updated on: Mar 07, 2024 | 8:19 AM

Share

ಕೊಪ್ಪಳ, ಮಾರ್ಚ್​​ 7: ಅಂತರ್ಜಾತಿ ವಿವಾಹವಾಗಿದ್ದಕ್ಕೆ (Inter Caste Marriage) ಕುಟುಂಬವೊಂದಕ್ಕೆ ಬಹಿಷ್ಕಾರ ಹಾಕಿದ ಅಮಾನವೀಯ ಘಟನೆ ಕೊಪ್ಪಳದ (Koppal) ಭಾಗ್ಯ ನಗರದಲ್ಲಿ (Bhagya Nagar) ನಡೆದಿರುವುದು ಗೊತ್ತಾಗಿದೆ. ಶಂಕ್ರಪ್ಪ ಬೇನಳ್ಳಿ ಎಂಬವರ ಕುಟುಂಬವನ್ನು ಕಳೆದ ಒಂದೂವರೆ ವರ್ಷದಿಂದ ಸಮಾಜದಿಂದ ಹೊರಗೆ ಇಡಲಾಗಿತ್ತು ಎಂಬ ಆರೋಪ ಈಗ ಕೇಳಿಬಂದಿದೆ. ಶಂಕ್ರಪ್ಪ ಅವರ ಪುತ್ರ ಅಂತರ್ಜಾತಿ ವಿವಾಹವಾಗಿದ್ದ. ಈ ಹಿನ್ನೆಲೆಯಲ್ಲಿ ಸಮಾಜದಿಂದ ಬಹಿಷ್ಕಾರ ಹಾಕಲಾಗಿತ್ತು ಎಂದು ಕುಟುಂಬದವರು ಆರೋಪಿಸಿದ್ದಾರೆ.

ಶೆಂಕ್ರಪ್ಪ ಅವರ ಪುತ್ರ ಲಿಂಗಾಯತ ಸಮಾಜದ ಯುವತಿಯನ್ನು ಮದುವೆಯಾಗಿದ್ದರು. ಹೀಗಾಗಿ ವಾಲ್ಮೀಕಿ ಸಮಾಜದ ನಾಯಕರು ಶೆಂಕ್ರಪ್ಪ ಕುಟುಂಬಕ್ಕೆ ಬಹಿಷ್ಕಾರ ಹಾಕಿದ್ದರು.

ಸಮಾಜದ ಯಾವುದೇ ಸಭೆ ಸಮಾರಂಭಗಳಿಗೆ ನಮಗೆ ಆಹ್ವಾನವಿಲ್ಲ. ಸಮಾಜದ ಬೇರೆ ಕುಟುಂಬದವರ ಕಾರ್ಯಕ್ರಮಕ್ಕೆ ಕೂಡಾ ಆಹ್ವಾನ ಇಲ್ಲ. ದಂಡ ಪಾವತಿ ಮಾಡುವ ವರಗೆ ಸಮಾಜದ ಯಾವುದೇ ಕಾರ್ಯಕ್ರಮಕ್ಕೆ ಕರೆಯಬಾರು ಎಂದು ಸಮಾಜದ ಮುಖಂಡರಿಂದ ಆದೇಶವಾಗಿದೆ ಎಂದು ಕುಟುಂಬದವರು ಆರೋಪಿಸಿದ್ದಾರೆ.

ಅಂತರ್ಜಾತಿ ವಿವಾಹವಾಗಿದ್ದಕ್ಕೆ ಒಂದು ಲಕ್ಷ ರೂಪಾಯಿ ದಂಡ ವಿಧಿಸಲಾಗಿದೆ ಎಂಬ ಆರೋಪ ಸಮಾಜದ ಮುಖಂಡರ ಮೇಲಿದೆ. ಇದನ್ನು ಶೆಂಕ್ರಪ್ಪ ನಿರಾಕರಿಸಿದ್ದರು. ಹೀಗಾಗಿ ಬುಧವಾರ ಸಭೆ ಸೇರಿದ್ದ ಮುಖಂಡರು, 21 ಸಾವಿರ ರೂ. ದಂಡ ನೀಡಬೇಕು ಎಂದು ಸೂಚಿಸಿದ್ದರು. ಹಣ ನೀಡದೇ ಇದ್ದರೆ ಸಮಾಜದ ಯಾವುದೇ ಕಾರ್ಯಕ್ರಮದಲ್ಲಿ ಸೇರಿಸಿಕೊಳ್ಳುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದರು.

ಈ ಕಾರಣಕ್ಕೆ ವಾಲ್ಮೀಕಿ ಸಮಾಜದ ಮುಖಂಡರ ವಿರುದ್ಧ ಶೆಂಕ್ರಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇವರು ಬಡಗಿ ವೃತ್ತಿ ಮಾಡುತ್ತಿದ್ದಾರೆ.

ಇದನ್ನೂ ಓದಿ: ವಡಕಿ ಗ್ರಾಮದಲ್ಲಿ ವಿಶೇಷ ಜಾತ್ರೆ; ರಥದ ಮೇಲಿಂದ ಮಕ್ಕಳನ್ನು ಎಸೆದು, ಮಹಿಳೆಯರೇ ಎಳಿತಾರೆ ರಥ

ಈ ಹಿಂದೆ ಕೂಡಾ ಕೊಪ್ಪಳದಲ್ಲಿ ಅನೇಕ ಕುಟುಂಬಕ್ಕೆ ಬಹಿಷ್ಕಾರ ಹಾಕಲಾಗಿತ್ತು ಎಂಬ ಆರೋಪವಿದೆ. ಈ ಬಗ್ಗೆ ಪೊಲೀಸರಿಗೆ ದೂರು ನೀಡಿದರೂ ಅವರು ಕ್ರಮ ಕೈಗೊಳ್ಳುತ್ತಿಲ್ಲ ಎಂಬ ಆರೋಪವೂ ಇದೆ.

ಹೀಗೆಲ್ಲ ಇದೆ ಬಹಿಷ್ಕಾರದ ನಿಯಮ!

ಬಹಿಷ್ಕಾರ ಹಾಕಿದ ಕುಟುಂಬವನ್ನು ಆ ಸಮುದಾಯದ ಬೇರೆಯವರು ತಮ್ಮ ಮನೆಗಳ ಕಾರ್ಯಕ್ರಮಕ್ಕೆ ಕರೆಯುವಂತಿಲ್ಲ. ಬೇರೆ ಕುಟುಂಬದವರು ಕೂಡಾ ಶೆಂಕ್ರಪ್ಪ ಅವರ ಮನೆಗೆ ಹೋಗುವಂತಿಲ್ಲ. ಶುಭಕಾರ್ಯ ಸೇರಿದಂತೆ ಯಾವುದೇ ಸಭೆ ಸಮಾರಂಭಗಳಿಗೆ ಹೋಗುವಂತಿಲ್ಲ ಮತ್ತು ಕರೆಯುವಂತಿಲ್ಲ ಎಂದು ಸಮುದಾಯದ ಮುಖಂಡರು ಸೂಚನೆ ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ