Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಪ್ಪಳ: ಅಂತರ್ಜಾತಿ ವಿವಾಹವಾಗಿದ್ದಕ್ಕೆ ಕುಟುಂಬವೊಂದಕ್ಕೆ ಬಹಿಷ್ಕಾರ, ದೂರು ನೀಡಿದರೂ ಕ್ಯಾರೇ ಅನ್ನದ ಪೊಲೀಸರು

Koppal Family ostracized: ಅಂತರ್ಜಾತಿ ವಿವಾಹವಾದ ಕಾರಣಕ್ಕೆ ಕೊಪ್ಪಳದ ಭಾಗ್ಯನಗರದ ಕುಟುಂಬವೊಂದಕ್ಕೆ ಸಮುದಾಯ ಒಂದರ ಮುಖಂಡರು ಬಹಿಷ್ಕಾರ ಹಾಕಿದ ವಿಚಾರ ತಿಳಿದು ಬಂದಿದೆ. ಸುಮಾರು ಒಂದುವರೆ ವರ್ಷದಿಂದ ಕುಟುಂಬವು ಬಹಿಷ್ಕಾರ ಎದುರಿಸುತ್ತಿದ್ದು, ಪೊಲೀಸರಿಗೆ ದೂರು ನೀಡಲು ಮುಂದಾದರೂ ಕ್ರಮ ಕೈಗೊಂಡಿಲ್ಲ ಎಂಬ ಆರೋಪ ಕೇಳಿಬಂದಿದೆ.

ಕೊಪ್ಪಳ: ಅಂತರ್ಜಾತಿ ವಿವಾಹವಾಗಿದ್ದಕ್ಕೆ ಕುಟುಂಬವೊಂದಕ್ಕೆ ಬಹಿಷ್ಕಾರ, ದೂರು ನೀಡಿದರೂ ಕ್ಯಾರೇ ಅನ್ನದ ಪೊಲೀಸರು
ಸಾಮಾಜಿಕ ಬಹಿಷ್ಕಾರ ಎದುರಿಸುತ್ತಿರುವ ಕುಟುಂಬದವರ ನಿವಾಸ ಮತ್ತು ಒಳಚಿತ್ರದಲ್ಲಿ ಕುಟುಂದವರು.
Follow us
ಸಂಜಯ್ಯಾ ಚಿಕ್ಕಮಠ, ಕೊಪ್ಪಳ
| Updated By: Ganapathi Sharma

Updated on: Mar 07, 2024 | 8:19 AM

ಕೊಪ್ಪಳ, ಮಾರ್ಚ್​​ 7: ಅಂತರ್ಜಾತಿ ವಿವಾಹವಾಗಿದ್ದಕ್ಕೆ (Inter Caste Marriage) ಕುಟುಂಬವೊಂದಕ್ಕೆ ಬಹಿಷ್ಕಾರ ಹಾಕಿದ ಅಮಾನವೀಯ ಘಟನೆ ಕೊಪ್ಪಳದ (Koppal) ಭಾಗ್ಯ ನಗರದಲ್ಲಿ (Bhagya Nagar) ನಡೆದಿರುವುದು ಗೊತ್ತಾಗಿದೆ. ಶಂಕ್ರಪ್ಪ ಬೇನಳ್ಳಿ ಎಂಬವರ ಕುಟುಂಬವನ್ನು ಕಳೆದ ಒಂದೂವರೆ ವರ್ಷದಿಂದ ಸಮಾಜದಿಂದ ಹೊರಗೆ ಇಡಲಾಗಿತ್ತು ಎಂಬ ಆರೋಪ ಈಗ ಕೇಳಿಬಂದಿದೆ. ಶಂಕ್ರಪ್ಪ ಅವರ ಪುತ್ರ ಅಂತರ್ಜಾತಿ ವಿವಾಹವಾಗಿದ್ದ. ಈ ಹಿನ್ನೆಲೆಯಲ್ಲಿ ಸಮಾಜದಿಂದ ಬಹಿಷ್ಕಾರ ಹಾಕಲಾಗಿತ್ತು ಎಂದು ಕುಟುಂಬದವರು ಆರೋಪಿಸಿದ್ದಾರೆ.

ಶೆಂಕ್ರಪ್ಪ ಅವರ ಪುತ್ರ ಲಿಂಗಾಯತ ಸಮಾಜದ ಯುವತಿಯನ್ನು ಮದುವೆಯಾಗಿದ್ದರು. ಹೀಗಾಗಿ ವಾಲ್ಮೀಕಿ ಸಮಾಜದ ನಾಯಕರು ಶೆಂಕ್ರಪ್ಪ ಕುಟುಂಬಕ್ಕೆ ಬಹಿಷ್ಕಾರ ಹಾಕಿದ್ದರು.

ಸಮಾಜದ ಯಾವುದೇ ಸಭೆ ಸಮಾರಂಭಗಳಿಗೆ ನಮಗೆ ಆಹ್ವಾನವಿಲ್ಲ. ಸಮಾಜದ ಬೇರೆ ಕುಟುಂಬದವರ ಕಾರ್ಯಕ್ರಮಕ್ಕೆ ಕೂಡಾ ಆಹ್ವಾನ ಇಲ್ಲ. ದಂಡ ಪಾವತಿ ಮಾಡುವ ವರಗೆ ಸಮಾಜದ ಯಾವುದೇ ಕಾರ್ಯಕ್ರಮಕ್ಕೆ ಕರೆಯಬಾರು ಎಂದು ಸಮಾಜದ ಮುಖಂಡರಿಂದ ಆದೇಶವಾಗಿದೆ ಎಂದು ಕುಟುಂಬದವರು ಆರೋಪಿಸಿದ್ದಾರೆ.

ಅಂತರ್ಜಾತಿ ವಿವಾಹವಾಗಿದ್ದಕ್ಕೆ ಒಂದು ಲಕ್ಷ ರೂಪಾಯಿ ದಂಡ ವಿಧಿಸಲಾಗಿದೆ ಎಂಬ ಆರೋಪ ಸಮಾಜದ ಮುಖಂಡರ ಮೇಲಿದೆ. ಇದನ್ನು ಶೆಂಕ್ರಪ್ಪ ನಿರಾಕರಿಸಿದ್ದರು. ಹೀಗಾಗಿ ಬುಧವಾರ ಸಭೆ ಸೇರಿದ್ದ ಮುಖಂಡರು, 21 ಸಾವಿರ ರೂ. ದಂಡ ನೀಡಬೇಕು ಎಂದು ಸೂಚಿಸಿದ್ದರು. ಹಣ ನೀಡದೇ ಇದ್ದರೆ ಸಮಾಜದ ಯಾವುದೇ ಕಾರ್ಯಕ್ರಮದಲ್ಲಿ ಸೇರಿಸಿಕೊಳ್ಳುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದರು.

ಈ ಕಾರಣಕ್ಕೆ ವಾಲ್ಮೀಕಿ ಸಮಾಜದ ಮುಖಂಡರ ವಿರುದ್ಧ ಶೆಂಕ್ರಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇವರು ಬಡಗಿ ವೃತ್ತಿ ಮಾಡುತ್ತಿದ್ದಾರೆ.

ಇದನ್ನೂ ಓದಿ: ವಡಕಿ ಗ್ರಾಮದಲ್ಲಿ ವಿಶೇಷ ಜಾತ್ರೆ; ರಥದ ಮೇಲಿಂದ ಮಕ್ಕಳನ್ನು ಎಸೆದು, ಮಹಿಳೆಯರೇ ಎಳಿತಾರೆ ರಥ

ಈ ಹಿಂದೆ ಕೂಡಾ ಕೊಪ್ಪಳದಲ್ಲಿ ಅನೇಕ ಕುಟುಂಬಕ್ಕೆ ಬಹಿಷ್ಕಾರ ಹಾಕಲಾಗಿತ್ತು ಎಂಬ ಆರೋಪವಿದೆ. ಈ ಬಗ್ಗೆ ಪೊಲೀಸರಿಗೆ ದೂರು ನೀಡಿದರೂ ಅವರು ಕ್ರಮ ಕೈಗೊಳ್ಳುತ್ತಿಲ್ಲ ಎಂಬ ಆರೋಪವೂ ಇದೆ.

ಹೀಗೆಲ್ಲ ಇದೆ ಬಹಿಷ್ಕಾರದ ನಿಯಮ!

ಬಹಿಷ್ಕಾರ ಹಾಕಿದ ಕುಟುಂಬವನ್ನು ಆ ಸಮುದಾಯದ ಬೇರೆಯವರು ತಮ್ಮ ಮನೆಗಳ ಕಾರ್ಯಕ್ರಮಕ್ಕೆ ಕರೆಯುವಂತಿಲ್ಲ. ಬೇರೆ ಕುಟುಂಬದವರು ಕೂಡಾ ಶೆಂಕ್ರಪ್ಪ ಅವರ ಮನೆಗೆ ಹೋಗುವಂತಿಲ್ಲ. ಶುಭಕಾರ್ಯ ಸೇರಿದಂತೆ ಯಾವುದೇ ಸಭೆ ಸಮಾರಂಭಗಳಿಗೆ ಹೋಗುವಂತಿಲ್ಲ ಮತ್ತು ಕರೆಯುವಂತಿಲ್ಲ ಎಂದು ಸಮುದಾಯದ ಮುಖಂಡರು ಸೂಚನೆ ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Daily Devotional: ಬ್ರಹ್ಮ ಮುಹೂರ್ತದ ಮಹತ್ವ ತಿಳಿಯಿರಿ
Daily Devotional: ಬ್ರಹ್ಮ ಮುಹೂರ್ತದ ಮಹತ್ವ ತಿಳಿಯಿರಿ
Daily horoscope: ವೃಷಭ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿದೆ
Daily horoscope: ವೃಷಭ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿದೆ
ಸ್ಪೈಸ್‌ಜೆಟ್ ಪ್ರಯಾಣಿಕರೊಂದಿಗೆ ಡ್ಯಾನ್ಸ್ ಮಾಡಿ ಹೋಳಿ ಆಚರಿಸಿದ ಸಿಬ್ಬಂದಿ
ಸ್ಪೈಸ್‌ಜೆಟ್ ಪ್ರಯಾಣಿಕರೊಂದಿಗೆ ಡ್ಯಾನ್ಸ್ ಮಾಡಿ ಹೋಳಿ ಆಚರಿಸಿದ ಸಿಬ್ಬಂದಿ
ವೇದಿಕೆ ಮೇಲೆಯೇ ವಾಗ್ವಾದಕ್ಕಿಳಿದ ಸಂಸದ ಪಿಸಿ ಮೋಹನ್​, ಪ್ರದೀಪ್​ ಈಶ್ವರ್
ವೇದಿಕೆ ಮೇಲೆಯೇ ವಾಗ್ವಾದಕ್ಕಿಳಿದ ಸಂಸದ ಪಿಸಿ ಮೋಹನ್​, ಪ್ರದೀಪ್​ ಈಶ್ವರ್
ಆಶೀರ್ವಾದ ರೂಪದಲ್ಲಿ ಹಣ ನೀಡುವುದು ಮಠದ ಸಂಪ್ರದಾಯ: ಸ್ವಾಮೀಜಿ
ಆಶೀರ್ವಾದ ರೂಪದಲ್ಲಿ ಹಣ ನೀಡುವುದು ಮಠದ ಸಂಪ್ರದಾಯ: ಸ್ವಾಮೀಜಿ
ಗೋರಖ್‌ಪುರದಲ್ಲಿ ಬಣ್ಣ ಎರಚಿ ಸಿಎಂ ಯೋಗಿ ಆದಿತ್ಯನಾಥ್ ಹೋಳಿ ಸಂಭ್ರಮ
ಗೋರಖ್‌ಪುರದಲ್ಲಿ ಬಣ್ಣ ಎರಚಿ ಸಿಎಂ ಯೋಗಿ ಆದಿತ್ಯನಾಥ್ ಹೋಳಿ ಸಂಭ್ರಮ
ಆಮಿರ್- ರಣ್​ಬೀರ್ ನಡುವೆ ಬಿರುಕು ಮೂಡಿಸಿದ ರಿಷಭ್ ಪಂತ್
ಆಮಿರ್- ರಣ್​ಬೀರ್ ನಡುವೆ ಬಿರುಕು ಮೂಡಿಸಿದ ರಿಷಭ್ ಪಂತ್
ನೀವೆಲ್ಲ ಬರುವಂಗಿದಿದ್ರೆ ನಿಮ್ಮನ್ನೂ ಊಟಕ್ಕೆ ಕರೀಬಹುದಿತ್ತು: ಶಿವಕುಮಾರ್
ನೀವೆಲ್ಲ ಬರುವಂಗಿದಿದ್ರೆ ನಿಮ್ಮನ್ನೂ ಊಟಕ್ಕೆ ಕರೀಬಹುದಿತ್ತು: ಶಿವಕುಮಾರ್
‘ಅಪ್ಪು’ ಮರು ಬಿಡುಗಡೆ: ಅಣ್ಣಾವ್ರ ಅಭಿಮಾನಿಗಳಿಂದ ಮತ್ತೊಂದು ಬೇಡಿಕೆ
‘ಅಪ್ಪು’ ಮರು ಬಿಡುಗಡೆ: ಅಣ್ಣಾವ್ರ ಅಭಿಮಾನಿಗಳಿಂದ ಮತ್ತೊಂದು ಬೇಡಿಕೆ
ಶಾಸಕರು ಬಣ್ಣದಾಟ ಆಡುವಾಗ ಕೃಷ್ಣ ಭೈರೇಗೌಡ ತಪ್ಪಿಸಿಕೊಂಡಿದ್ದು ಹೇಗೆ ಗೊತ್ತಾ?
ಶಾಸಕರು ಬಣ್ಣದಾಟ ಆಡುವಾಗ ಕೃಷ್ಣ ಭೈರೇಗೌಡ ತಪ್ಪಿಸಿಕೊಂಡಿದ್ದು ಹೇಗೆ ಗೊತ್ತಾ?