ಕೊಪ್ಪಳ: ಉದ್ಯಮಿ ಗೋವಿಂದ ಪೂಜಾರಿ ರೀತಿಯಲ್ಲೆ ಟಿಕೆಟ್​ಗಾಗಿ ಲಕ್ಷ ಲಕ್ಷ ಕಳೆದುಕೊಂಡ ಬಿಜೆಪಿ ಮುಖಂಡ

ಕನಕಗಿರಿ ಎಸ್ಸಿ ಮೀಸಲು ಕ್ಷೇತ್ರದ ಆಕಾಂಕ್ಷಿಯಾಗಿದ್ದ ಗಾಯತ್ರಿ ತಿಮ್ಮಾರೆಡ್ಡಿ ಅವರು ಬಿಜೆಪಿ ಟಿಕೆಟ್​ಗಾಗಿ ಭಾರಿ ಪೈಪೋಟಿ ಮಾಡಿದ್ದರು. ಈ ವೇಳೆ ದೆಹಲಿ ಮೂಲದ ವಿಶಾಲ್ ನಾಗ್ ಮತ್ತು ಬೆಂಗಳೂರಿನ ಜೀತು, ಗೌರವ್ ಟಿಕೆಟ್ ಕೊಡಿಸುತ್ತವೆಂದು ಬರೋಬ್ಬರಿ 21 ಲಕ್ಷ ಹಣ ಪಂಗನಾಮ ಹಾಕಿದ್ದಾರೆ.

ಕೊಪ್ಪಳ: ಉದ್ಯಮಿ ಗೋವಿಂದ ಪೂಜಾರಿ ರೀತಿಯಲ್ಲೆ ಟಿಕೆಟ್​ಗಾಗಿ ಲಕ್ಷ ಲಕ್ಷ ಕಳೆದುಕೊಂಡ ಬಿಜೆಪಿ ಮುಖಂಡ
ಎಂಎಲ್​ಎ ಟಿಕೆಟ್​ ಆಕಾಂಕ್ಷಿ ಪತಿ
Follow us
| Updated By: ಕಿರಣ್ ಹನುಮಂತ್​ ಮಾದಾರ್

Updated on: Sep 15, 2023 | 4:11 PM

ಕೊಪ್ಪಳ, ಸೆ.15: ಈಗಾಗಲೇ ರಾಜ್ಯದಲ್ಲಿ ಉದ್ಯಮಿ ಗೋವಿಂದ ಪೂಜಾರಿ ಎಂಎಲ್​ಎ ಟಿಕೆಟ್​ (MLA Ticket) ಗಾಗಿ ಕೋಟ್ಯಾಂತರ ರೂಪಾಯಿ ಹಣ ಕಳೆದುಕೊಂಡ ಘಟನೆ ಬೆಳಕಿಗೆ ಬಂದಿದೆ. ಅದರ ಬೆನ್ನಲ್ಲೇ ಇದೀಗ ಅದೇ ರೀತಿಯಲ್ಲೆ ಕೊಪ್ಪಳ (Koppala) ಜಿಲ್ಲೆಯಲ್ಲೂ ಓರ್ವ ಬಿಜೆಪಿ ಮುಖಂಡನಿಗೆ ಲಕ್ಷ ಲಕ್ಷ ಟೋಪಿ ಹಾಕಿದ ಘಟನೆ ನಡೆದಿದೆ. ಹೌದು, ಕೊಪ್ಪಳ ಜಿಲ್ಲೆಯ ಕನಕಗಿರಿ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಗಾಯತ್ರಿ ತಿಮ್ಮಾರೆಡ್ಡಿ ಅವರಿಗೆ ಟಿಕೆಟ್​ ಕೊಡಿಸುವಲ್ಲಿ ಅವರ ಪತಿ ಜಿ‌.ತಿಮ್ಮಾರೆಡ್ಡಿ ಗಿಲ್ಲೆಸೂಗುರ್ ಭಾರಿ ಪ್ರಯತ್ನ ಮಾಡಿದ್ದರು. ಈ ವೇಳೆ ಟಿಕೆಟ್​ ಕೊಡಿಸುತ್ತವೆಂದು ಮೂವರು ಚೈತ್ರಾ ಕುಂದಾಪುರ ಗ್ಯಾಂಗ್ ರೀತಿಯಲ್ಲೆ ವಂಚನೆ ಮಾಡಿದ್ದಾರೆ ಎನ್ನಲಾಗುತ್ತಿದೆ.

ಕನಕಗಿರಿ ಎಸ್ಸಿ ಮೀಸಲು ಕ್ಷೇತ್ರದ ಆಕಾಂಕ್ಷಿಯಾಗಿದ್ದ ಗಾಯತ್ರಿ ತಿಮ್ಮಾರೆಡ್ಡಿಗೆ 21 ಲಕ್ಷ ರೂ ವಂಚನೆ

ಹೌದು, ಕನಕಗಿರಿ ಎಸ್ಸಿ ಮೀಸಲು ಕ್ಷೇತ್ರದ ಆಕಾಂಕ್ಷಿಯಾಗಿದ್ದ ಗಾಯತ್ರಿ ತಿಮ್ಮಾರೆಡ್ಡಿ ಅವರು ಬಿಜೆಪಿ ಟಿಕೆಟ್​ಗಾಗಿ ಭಾರಿ ಪೈಪೋಟಿ ಮಾಡಿದ್ದರು. ಈ ವೇಳೆ ದೆಹಲಿ ಮೂಲದ ವಿಶಾಲ್ ನಾಗ್ ಮತ್ತು ಬೆಂಗಳೂರಿನ ಜೀತು, ಗೌರವ್ ಟಿಕೆಟ್ ಕೊಡಿಸುತ್ತವೆಂದು ಬರೋಬ್ಬರಿ 21 ಲಕ್ಷ ಹಣ ಪಂಗನಾಮ ಹಾಕಿದ್ದಾರೆ. ಈ ಕುರಿತು ಮೂವರ ವಿರುದ್ಧ ಬೆಂಗಳೂರಿನ ಅಶೋಕ ನಗರ ಠಾಣೆಯಲ್ಲಿ ತಿಮ್ಮಾರೆಡ್ಡಿ ದೂರು ದಾಖಲಿಸಿದ್ದಾರೆ.

ಇದನ್ನೂ ಓದಿ:ವಿಶ್ವನಾಥ್ ಜೀ ಸಾವನಪ್ಪಿದ್ದಾರೆ ಗೋವಿಂದ ಗೋವಿಂದ ಎಂದಿದ್ದ ಗಗನ್, ಚೈತ್ರಾ ಜೋಡಿಗೆ ಹಾಲಶ್ರೀ ಸ್ವಾಮೀಜಿ ಎಂಟ್ರಿಯಿಂದ ಧೈರ್ಯ ಬಂದಿತ್ತು!

ತಮಗೆ ಅಮಿತ್ ಶಾ ಪರಿಚಯವೆಂದು ವಂಚನೆ.

ರಾಜ್ಯದಲ್ಲಿ ಸಮೀಕ್ಷೆ ಮಾಡುತ್ತಿದ್ದೆವೆ. ನಾನು ಕೇಂದ್ರ ಬಿಜೆಪಿ ಚುನಾವಣೆ ಸಮೀಕ್ಷೆ ಮುಖ್ಯಸ್ಥನೆಂದು ಪರಿಚಯಿಸಿಕೊಂಡಿದ್ದ ವಿಶಾಲ್ ನಾಗ್. ನಮಗೆ ಅಮಿತ್ ಶಾ ಪರಿಚಯವಿದೆ. ಹಾಗಾಗಿ ಅದರಲ್ಲಿ ನಿಮ್ಮ ಹೆಸರು ಮುಂಚೂಣಿಗೆ ತರುತ್ತೆವೆಂದಿದ್ದರಂತೆ. ಹೀಗಾಗಿ ಆತನನ್ನು ನಂಬಿ ಟಿಕೆಟ್​ ಆಕಾಂಕ್ಷಿಯ ಪತಿ, ವಿಶಾಲ್ ಬ್ಯಾಂಕ್ ಖಾತೆಗೆ 2 ಲಕ್ಷ ಹಾಗೂ ನಗದು 19 ಲಕ್ಷ ನೀಡಿದ್ದರಂತೆ. ಕೊನೆಗೆ ಟಿಕೆಟ್ ಸಿಗದೇ ಹಣವೂ ವಾಪಸ್ ಬಾರದ ಹಿನ್ನಲೆ ದೂರು ನೀಡಿದ್ದಾರೆ. ಇದೀಗ ಇಂತಹ ಪ್ರಕರಣಗಳು ಬೆಳಕಿಗೆ ಬರುತ್ತಿರುವುದರಿಂದ ರಾಜ್ಯದಲ್ಲಿ ಬಿಜೆಪಿ ಟಿಕೆಟ್​ಗಾಗಿ ಬಹುದೊಡ್ಡ ಡೀಲ್​ ನಡೆದಿದೆಯಾ ಎಂಬ ಪ್ರಶ್ನೆ ಮೂಡಿದೆ.

ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ