ಕೊಪ್ಪಳ: ಉದ್ಯಮಿ ಗೋವಿಂದ ಪೂಜಾರಿ ರೀತಿಯಲ್ಲೆ ಟಿಕೆಟ್​ಗಾಗಿ ಲಕ್ಷ ಲಕ್ಷ ಕಳೆದುಕೊಂಡ ಬಿಜೆಪಿ ಮುಖಂಡ

ಕನಕಗಿರಿ ಎಸ್ಸಿ ಮೀಸಲು ಕ್ಷೇತ್ರದ ಆಕಾಂಕ್ಷಿಯಾಗಿದ್ದ ಗಾಯತ್ರಿ ತಿಮ್ಮಾರೆಡ್ಡಿ ಅವರು ಬಿಜೆಪಿ ಟಿಕೆಟ್​ಗಾಗಿ ಭಾರಿ ಪೈಪೋಟಿ ಮಾಡಿದ್ದರು. ಈ ವೇಳೆ ದೆಹಲಿ ಮೂಲದ ವಿಶಾಲ್ ನಾಗ್ ಮತ್ತು ಬೆಂಗಳೂರಿನ ಜೀತು, ಗೌರವ್ ಟಿಕೆಟ್ ಕೊಡಿಸುತ್ತವೆಂದು ಬರೋಬ್ಬರಿ 21 ಲಕ್ಷ ಹಣ ಪಂಗನಾಮ ಹಾಕಿದ್ದಾರೆ.

ಕೊಪ್ಪಳ: ಉದ್ಯಮಿ ಗೋವಿಂದ ಪೂಜಾರಿ ರೀತಿಯಲ್ಲೆ ಟಿಕೆಟ್​ಗಾಗಿ ಲಕ್ಷ ಲಕ್ಷ ಕಳೆದುಕೊಂಡ ಬಿಜೆಪಿ ಮುಖಂಡ
ಎಂಎಲ್​ಎ ಟಿಕೆಟ್​ ಆಕಾಂಕ್ಷಿ ಪತಿ
Edited By: ಕಿರಣ್ ಹನುಮಂತ್​ ಮಾದಾರ್

Updated on: Sep 15, 2023 | 4:11 PM

ಕೊಪ್ಪಳ, ಸೆ.15: ಈಗಾಗಲೇ ರಾಜ್ಯದಲ್ಲಿ ಉದ್ಯಮಿ ಗೋವಿಂದ ಪೂಜಾರಿ ಎಂಎಲ್​ಎ ಟಿಕೆಟ್​ (MLA Ticket) ಗಾಗಿ ಕೋಟ್ಯಾಂತರ ರೂಪಾಯಿ ಹಣ ಕಳೆದುಕೊಂಡ ಘಟನೆ ಬೆಳಕಿಗೆ ಬಂದಿದೆ. ಅದರ ಬೆನ್ನಲ್ಲೇ ಇದೀಗ ಅದೇ ರೀತಿಯಲ್ಲೆ ಕೊಪ್ಪಳ (Koppala) ಜಿಲ್ಲೆಯಲ್ಲೂ ಓರ್ವ ಬಿಜೆಪಿ ಮುಖಂಡನಿಗೆ ಲಕ್ಷ ಲಕ್ಷ ಟೋಪಿ ಹಾಕಿದ ಘಟನೆ ನಡೆದಿದೆ. ಹೌದು, ಕೊಪ್ಪಳ ಜಿಲ್ಲೆಯ ಕನಕಗಿರಿ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಗಾಯತ್ರಿ ತಿಮ್ಮಾರೆಡ್ಡಿ ಅವರಿಗೆ ಟಿಕೆಟ್​ ಕೊಡಿಸುವಲ್ಲಿ ಅವರ ಪತಿ ಜಿ‌.ತಿಮ್ಮಾರೆಡ್ಡಿ ಗಿಲ್ಲೆಸೂಗುರ್ ಭಾರಿ ಪ್ರಯತ್ನ ಮಾಡಿದ್ದರು. ಈ ವೇಳೆ ಟಿಕೆಟ್​ ಕೊಡಿಸುತ್ತವೆಂದು ಮೂವರು ಚೈತ್ರಾ ಕುಂದಾಪುರ ಗ್ಯಾಂಗ್ ರೀತಿಯಲ್ಲೆ ವಂಚನೆ ಮಾಡಿದ್ದಾರೆ ಎನ್ನಲಾಗುತ್ತಿದೆ.

ಕನಕಗಿರಿ ಎಸ್ಸಿ ಮೀಸಲು ಕ್ಷೇತ್ರದ ಆಕಾಂಕ್ಷಿಯಾಗಿದ್ದ ಗಾಯತ್ರಿ ತಿಮ್ಮಾರೆಡ್ಡಿಗೆ 21 ಲಕ್ಷ ರೂ ವಂಚನೆ

ಹೌದು, ಕನಕಗಿರಿ ಎಸ್ಸಿ ಮೀಸಲು ಕ್ಷೇತ್ರದ ಆಕಾಂಕ್ಷಿಯಾಗಿದ್ದ ಗಾಯತ್ರಿ ತಿಮ್ಮಾರೆಡ್ಡಿ ಅವರು ಬಿಜೆಪಿ ಟಿಕೆಟ್​ಗಾಗಿ ಭಾರಿ ಪೈಪೋಟಿ ಮಾಡಿದ್ದರು. ಈ ವೇಳೆ ದೆಹಲಿ ಮೂಲದ ವಿಶಾಲ್ ನಾಗ್ ಮತ್ತು ಬೆಂಗಳೂರಿನ ಜೀತು, ಗೌರವ್ ಟಿಕೆಟ್ ಕೊಡಿಸುತ್ತವೆಂದು ಬರೋಬ್ಬರಿ 21 ಲಕ್ಷ ಹಣ ಪಂಗನಾಮ ಹಾಕಿದ್ದಾರೆ. ಈ ಕುರಿತು ಮೂವರ ವಿರುದ್ಧ ಬೆಂಗಳೂರಿನ ಅಶೋಕ ನಗರ ಠಾಣೆಯಲ್ಲಿ ತಿಮ್ಮಾರೆಡ್ಡಿ ದೂರು ದಾಖಲಿಸಿದ್ದಾರೆ.

ಇದನ್ನೂ ಓದಿ:ವಿಶ್ವನಾಥ್ ಜೀ ಸಾವನಪ್ಪಿದ್ದಾರೆ ಗೋವಿಂದ ಗೋವಿಂದ ಎಂದಿದ್ದ ಗಗನ್, ಚೈತ್ರಾ ಜೋಡಿಗೆ ಹಾಲಶ್ರೀ ಸ್ವಾಮೀಜಿ ಎಂಟ್ರಿಯಿಂದ ಧೈರ್ಯ ಬಂದಿತ್ತು!

ತಮಗೆ ಅಮಿತ್ ಶಾ ಪರಿಚಯವೆಂದು ವಂಚನೆ.

ರಾಜ್ಯದಲ್ಲಿ ಸಮೀಕ್ಷೆ ಮಾಡುತ್ತಿದ್ದೆವೆ. ನಾನು ಕೇಂದ್ರ ಬಿಜೆಪಿ ಚುನಾವಣೆ ಸಮೀಕ್ಷೆ ಮುಖ್ಯಸ್ಥನೆಂದು ಪರಿಚಯಿಸಿಕೊಂಡಿದ್ದ ವಿಶಾಲ್ ನಾಗ್. ನಮಗೆ ಅಮಿತ್ ಶಾ ಪರಿಚಯವಿದೆ. ಹಾಗಾಗಿ ಅದರಲ್ಲಿ ನಿಮ್ಮ ಹೆಸರು ಮುಂಚೂಣಿಗೆ ತರುತ್ತೆವೆಂದಿದ್ದರಂತೆ. ಹೀಗಾಗಿ ಆತನನ್ನು ನಂಬಿ ಟಿಕೆಟ್​ ಆಕಾಂಕ್ಷಿಯ ಪತಿ, ವಿಶಾಲ್ ಬ್ಯಾಂಕ್ ಖಾತೆಗೆ 2 ಲಕ್ಷ ಹಾಗೂ ನಗದು 19 ಲಕ್ಷ ನೀಡಿದ್ದರಂತೆ. ಕೊನೆಗೆ ಟಿಕೆಟ್ ಸಿಗದೇ ಹಣವೂ ವಾಪಸ್ ಬಾರದ ಹಿನ್ನಲೆ ದೂರು ನೀಡಿದ್ದಾರೆ. ಇದೀಗ ಇಂತಹ ಪ್ರಕರಣಗಳು ಬೆಳಕಿಗೆ ಬರುತ್ತಿರುವುದರಿಂದ ರಾಜ್ಯದಲ್ಲಿ ಬಿಜೆಪಿ ಟಿಕೆಟ್​ಗಾಗಿ ಬಹುದೊಡ್ಡ ಡೀಲ್​ ನಡೆದಿದೆಯಾ ಎಂಬ ಪ್ರಶ್ನೆ ಮೂಡಿದೆ.

ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Dattatraya Patil

ಮೂಲತಃ ಕಲಬುರಗಿ ಜಿಲ್ಲೆಯವರಾದ ದತ್ತಾತ್ರೇಯ ಪಾಟೀಲ್ ಸಧ್ಯ ಟಿರ್ವಿ ಕನ್ನಡ ವಾಹಿನಿಯ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದಾರೆ. ಕಳೆದ 9 ವರ್ಷಗಳಿಂದ ಟಿರ್ವಿ ಸಂಸ್ಥೆಯಲ್ಲಿ ಕೆಲಸ‌ ಮಾಡುತ್ತಿದ್ದು ಜ,2015 ರಿಂದ 22 ರವೆಗೆ ಹುಬ್ಬಳ್ಳಿಯ ವರದಿಗಾರಾಗಿ, ಕಳೆದೊಂದು ವರ್ಷ ಕೊಪ್ಪಳ ಸಧ್ಯ ಮೂರು ತಿಂಗಳಿಮದ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದು, ಕೊರೊನಾ ಸಮಯದಲ್ಲಿ ವೈದ್ಯರ ಕಳ್ಳಾಟದ ಮಾಡಿದ ರಹಸ್ಯ ಕಾರ್ಯಚರಣೆ.ಆಪರೇಷನ್ ಕಮಲದ ಕುರಿತು ಸ್ಪೋಟಕ ಬಿಎಸ್ ವೈ ವಿಡಿಯೋ ದ ಎಕ್ಸಕ್ಲೂಸಿವ್ ವರದಿಯ ಜೊತೆಗೆ ರಾಜಕೀಯ ವರದಿಗಾರಿಕೆಯಲ್ಲಿಯೂ ಆಸಕ್ತಿ ಹೊಂದಿದ್ದು, ಬಿಡುವಿನ ಸಮಯದಲ್ಲಿ ಪುಸ್ತಕ ಓದುವುದು,ಪ್ರೇಕ್ಷಣೀಯ ಹಾಗೂ ಐತಿಹಾಸಿಕ ಸ್ಥಳಗಳ ಪ್ರವಾಸ,ಮತ್ತು ಟ್ರೆಕ್ಕಿಂಗ್ ಹವ್ಯಾಸ ರೂಢಿಸಿಕೊಂಡಿದ್ದಾರೆ.

Read More
Follow Us