AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾರನ್ನ ಕೇಳಿ ಬಸ್ ಟಿಕೆಟ್​ ದರ ಹೆಚ್ಚಿಸಿದ್ದೀರಿ? ಅಂತ ಕುಡಿದ ಮತ್ತಿನಲ್ಲಿ ಕಂಡಕ್ಟರ್​​ ಮೇಲೆ ಹಲ್ಲೆ

ಕುಡಿದ ಮತ್ತಿನ ಪ್ರಯಾಣಿಕನೊಬ್ಬ ನಿರ್ವಾಹಕನ ಮೇಲೆ ಹಲ್ಲೆ ಮಾಡಿರುವ ಘಟನೆ ಕೊಪ್ಪಳ ಜಿಲ್ಲೆಯಲ್ಲಿ ನಡೆದಿದೆ. ಗಂಗಾವತಿ ಡಿಪೋದ ನಿರ್ವಾಹಕ ಹನುಮಪ್ಪ ಅವರ ಮೇಲೆ ವಿಜಯನಗರ ಜಿಲ್ಲೆಯ ಶ್ರೀಧರ್ ಹಲ್ಲೆ ಮಾಡಿದ್ದಾನೆ.ಬಸ್ ಟಿಕಟ್​ ದರ ಹೆಚ್ಚಳ ವಿಚಾರವಾಗಿ ನಿರ್ವಾಹಕನ ಜೊತೆ ಗಲಾಟೆ ಮಾಡಿ ಹಲ್ಲೆ ಮಾಡದ್ದಾನೆ. ಹನುಮಪ್ಪ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಯಾರನ್ನ ಕೇಳಿ ಬಸ್ ಟಿಕೆಟ್​ ದರ ಹೆಚ್ಚಿಸಿದ್ದೀರಿ? ಅಂತ ಕುಡಿದ ಮತ್ತಿನಲ್ಲಿ ಕಂಡಕ್ಟರ್​​ ಮೇಲೆ ಹಲ್ಲೆ
ನಿರ್ವಾಹಕ ಹನುಮಂತಪ್ಪ
ಸಂಜಯ್ಯಾ ಚಿಕ್ಕಮಠ
| Edited By: |

Updated on: Feb 26, 2025 | 11:34 AM

Share

ಕೊಪ್ಪಳ, ಫೆಬ್ರವರಿ 26: ಸರ್ಕಾರಿ ಬಸ್ (Government Bus) ಪ್ರಯಾಣ ದರವನ್ನು ಹೆಚ್ಚಳ ಅಥವಾ ಕಡಿಮೆ ಸರ್ಕಾರ ಮಾಡುತ್ತದೆ. ಸರ್ಕಾರ ನಿಗದಿ ಮಾಡಿದ ದರದ ಟಿಕೆಟ್ ನೀಡುವುದು ನಿರ್ವಾಹಕರ ಕೆಲಸ. ಆದರೆ, ಕುಡಿದ ಮತ್ತಿನಲ್ಲಿ ಪ್ರಯಾಣಿಕನೋರ್ವ “ಯಾರನ್ನು ಕೇಳಿ ಬಸ್ ದರ ಹೆಚ್ಚಿಸಿದ್ದೀರಿ” ಅಂತ ನಿರ್ವಾಹಕನ ಮೇಲೆ ಕಲ್ಲಿನಿಂದ ಹಲ್ಲೆ ಮಾಡಿರುವ ಘಟನೆ ಕೊಪ್ಪಳ (Koppal) ಜಿಲ್ಲೆಯಲ್ಲಿ ನಡೆದಿದೆ.

ಗಂಗಾವತಿ ಡಿಪೋಕ್ಕೆ ಸೇರಿರುವ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ನಿರ್ವಾಹಕ ಹನುಮಪ್ಪ ಎಂಬುವರ ಮೇಲೆ ಹಲ್ಲೆಯಾಗಿದೆ. ವಿಜಯನಗರ ಜಿಲ್ಲೆಯ ನಿವಾಸಿ ಶ್ರೀಧರ್​ ಹಲ್ಲೆ ಮಾಡಿದ ವ್ಯಕ್ತಿ. ಮಂಗಳವಾರ (ಫೆ.26) ಕೊಪ್ಪಳ ತಾಲೂಕಿನ ಹುಲಗಿ ಗ್ರಾಮದಿಂದ ಗಂಗಾವತಿಗೆ ಹೋಗುತ್ತಿದ್ದ ಬಸ್ ಅನ್ನು ಶ್ರೀಧರ್ ಕುಡಿದ ಮತ್ತಿನಲ್ಲಿ ಹುಲಗಿಯಲ್ಲಿ ಹತ್ತಿದ್ದಾನೆ. ಬಳಿಕ, ಶ್ರೀಧರ್​ ಗಂಗಾವತಿ ತಾಲೂಕಿನ ಹನುಮನಹಳ್ಳಿಗೆ ಹೋಗಬೇಕು ಅಂತ ಹೇಳಿದ್ದರಿಂದ ಆತನಿಗೆ ನಿರ್ವಾಹಕ ಹನುಮಪ್ಪ 30 ರೂಪಾಯಿ ಟಿಕೆಟ್ ನೀಡಿದ್ದಾರೆ.

ಈ ಮೊದಲು ಹುಲಗಿಯಿಂದ ಗಂಗಾವತಿಗೆ 26 ರೂಪಾಯಿ ಇತ್ತು, ಇದೀಗ 30 ರೂಪಾಯಿ ಟಿಕೆಟ್ ಯಾಕೆ ಅಂತ ಕೇಳಿದ್ದಾನೆ. ಬಸ್ ದರ ಹೆಚ್ಚಳವಾಗಿದೆ ಅಂತ ನಿರ್ವಾಹಕ ಹೇಳಿದ್ದಾರೆ. ಯಾರನ್ನು ಕೇಳಿ ಟಿಕೆಟ್ ದರ ಹೆಚ್ಚಳ ಮಾಡಿದ್ದೀರಿ? ಅಂತ ನಿರ್ವಾಹಕ ಹನುಮಂತಪ್ಪ ಅವರ ಜೊತೆ ಶ್ರೀಧರ್ ಜಗಳ ಆರಂಭಿಸಿದ್ದಾನೆ. ಈ ವೇಳೆ ನಿರ್ವಾಹಕ ಹನುಮಂತಪ್ಪರಿಗೆ ಶ್ರೀಧರ್ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ. ಗಂಗಾವತಿ ತಾಲೂಕಿನ ವಿರುಪಾಪುರ ಗಡ್ಡಿ ಬಳಿ ಬಸ್ ನಿಲ್ಲಿಸಿದಾಗ ಶ್ರೀಧರ್ ನಿರ್ವಾಹಕ ಹನುಮಂತರನ್ನು ಎಳೆದುಕೊಂಡು ಕೆಳಗೆ ಇಳಿದ್ದಾನೆ. ಬಳಿಕ ಕೈಗೆ ಸಿಕ್ಕ ಕಲ್ಲಿನಿಂದ ಹನಮಪ್ಪರ ಮೇಲೆ ಹಲ್ಲೆ ಮಾಡಿದ್ದಾನೆ.

ಘಟನೆಯಲ್ಲಿ ಹನಮಪ್ಪನ ಬಲಗಣ್ಣು ಮತ್ತು ಹಣೆಗೆ ತೀರ್ವ ಪೆಟ್ಟು ಬಿದ್ದಿದೆ. ರಕ್ತಸ್ರಾವವಾಗಿದ್ದರಿಂದ ಕೂಡಲೇ ಹನುಮಪ್ಪನನ್ನು ಗಂಗಾವತಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ನೀಡಲಾಗಿದೆ. ಈ ಬಗ್ಗೆ ಗಂಗಾವತಿ ಗ್ರಾಮೀಣ ಠಾಣೆಯಲ್ಲಿ ಹನುಮಪ್ಪ ಆರೋಪಿ‌ ಶ್ರೀಧರ್ ವಿರುದ್ಧ ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಆರೋಪಿ ಶ್ರೀಧರ್​ನನ್ನು ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ:  ತುಂಗಭದ್ರಾ ನದಿಯಲ್ಲಿ ನೀರುಪಾಲು, ಕೊನೇ ಕ್ಷಣದಲ್ಲಿ ಜೀವ ಉಳಿಸಿಕೊಳ್ಳಲು ಒದ್ದಾಡಿದ್ದ ವೈದ್ಯೆ, ವಿಡಿಯೋ ಇಲ್ಲಿದೆ

ಬಸ್ ಟಿಕೆಟ್ ವಿಚಾರವಾಗಿ ಬೆಳಗಾವಿಯಲ್ಲಿ ನಿರ್ವಾಹಕನ ಮೇಲೆ ಘಟನೆ ಮಾಸುವ ಮುನ್ನವೇ ಕುಡಿತ ಮತ್ತಿನಲ್ಲಿ ಪ್ರಯಾಣಿಕ ಹನುಮಪ್ಪನ ಮೇಲೆ ಹಲ್ಲೆ ಮಾಡಿರುವುದನ್ನು ಸಾರಿಗೆ ಸಂಸ್ಥೆ ಸಿಬ್ಬಂದಿ ಖಂಡಿಸಿದ್ದಾರೆ. ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ದಾಖಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕನಸಿನಲ್ಲಿ ಬಂದ ದೇವರು ಹೇಳಿದ್ದಕ್ಕೆ ಮಣ್ಣು ಅಗೆದಾಗ ನಡೆಯಿತು ಅಚ್ಚರಿ!
ಕನಸಿನಲ್ಲಿ ಬಂದ ದೇವರು ಹೇಳಿದ್ದಕ್ಕೆ ಮಣ್ಣು ಅಗೆದಾಗ ನಡೆಯಿತು ಅಚ್ಚರಿ!
ಈ ವರ್ಷದ ಮೊದಲ ಸೂಪರ್ ಮೂನ್ ಭಾರತದಲ್ಲಿ ಕಂಡಿದ್ದು ಹೀಗೆ; ವಿಡಿಯೋ ವೈರಲ್
ಈ ವರ್ಷದ ಮೊದಲ ಸೂಪರ್ ಮೂನ್ ಭಾರತದಲ್ಲಿ ಕಂಡಿದ್ದು ಹೀಗೆ; ವಿಡಿಯೋ ವೈರಲ್
ನಟ ಭಯಂಕರ ವಜ್ರಮುನಿ ಅವರ ಕೊನೆಯ ದಿನಗಳು ಹೇಗಿದ್ದವು: ವಿಡಿಯೋ
ನಟ ಭಯಂಕರ ವಜ್ರಮುನಿ ಅವರ ಕೊನೆಯ ದಿನಗಳು ಹೇಗಿದ್ದವು: ವಿಡಿಯೋ
ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್
ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್
ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ
ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
4ನೇ ಶತಕ.. ದೇಶಿ ಅಂಗಳದಲ್ಲಿ ಕನ್ನಡಿಗನ ಪಾರುಪತ್ಯ; ವಿಡಿಯೋ
4ನೇ ಶತಕ.. ದೇಶಿ ಅಂಗಳದಲ್ಲಿ ಕನ್ನಡಿಗನ ಪಾರುಪತ್ಯ; ವಿಡಿಯೋ