AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾರನ್ನ ಕೇಳಿ ಬಸ್ ಟಿಕೆಟ್​ ದರ ಹೆಚ್ಚಿಸಿದ್ದೀರಿ? ಅಂತ ಕುಡಿದ ಮತ್ತಿನಲ್ಲಿ ಕಂಡಕ್ಟರ್​​ ಮೇಲೆ ಹಲ್ಲೆ

ಕುಡಿದ ಮತ್ತಿನ ಪ್ರಯಾಣಿಕನೊಬ್ಬ ನಿರ್ವಾಹಕನ ಮೇಲೆ ಹಲ್ಲೆ ಮಾಡಿರುವ ಘಟನೆ ಕೊಪ್ಪಳ ಜಿಲ್ಲೆಯಲ್ಲಿ ನಡೆದಿದೆ. ಗಂಗಾವತಿ ಡಿಪೋದ ನಿರ್ವಾಹಕ ಹನುಮಪ್ಪ ಅವರ ಮೇಲೆ ವಿಜಯನಗರ ಜಿಲ್ಲೆಯ ಶ್ರೀಧರ್ ಹಲ್ಲೆ ಮಾಡಿದ್ದಾನೆ.ಬಸ್ ಟಿಕಟ್​ ದರ ಹೆಚ್ಚಳ ವಿಚಾರವಾಗಿ ನಿರ್ವಾಹಕನ ಜೊತೆ ಗಲಾಟೆ ಮಾಡಿ ಹಲ್ಲೆ ಮಾಡದ್ದಾನೆ. ಹನುಮಪ್ಪ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಯಾರನ್ನ ಕೇಳಿ ಬಸ್ ಟಿಕೆಟ್​ ದರ ಹೆಚ್ಚಿಸಿದ್ದೀರಿ? ಅಂತ ಕುಡಿದ ಮತ್ತಿನಲ್ಲಿ ಕಂಡಕ್ಟರ್​​ ಮೇಲೆ ಹಲ್ಲೆ
ನಿರ್ವಾಹಕ ಹನುಮಂತಪ್ಪ
ಸಂಜಯ್ಯಾ ಚಿಕ್ಕಮಠ
| Updated By: ವಿವೇಕ ಬಿರಾದಾರ|

Updated on: Feb 26, 2025 | 11:34 AM

Share

ಕೊಪ್ಪಳ, ಫೆಬ್ರವರಿ 26: ಸರ್ಕಾರಿ ಬಸ್ (Government Bus) ಪ್ರಯಾಣ ದರವನ್ನು ಹೆಚ್ಚಳ ಅಥವಾ ಕಡಿಮೆ ಸರ್ಕಾರ ಮಾಡುತ್ತದೆ. ಸರ್ಕಾರ ನಿಗದಿ ಮಾಡಿದ ದರದ ಟಿಕೆಟ್ ನೀಡುವುದು ನಿರ್ವಾಹಕರ ಕೆಲಸ. ಆದರೆ, ಕುಡಿದ ಮತ್ತಿನಲ್ಲಿ ಪ್ರಯಾಣಿಕನೋರ್ವ “ಯಾರನ್ನು ಕೇಳಿ ಬಸ್ ದರ ಹೆಚ್ಚಿಸಿದ್ದೀರಿ” ಅಂತ ನಿರ್ವಾಹಕನ ಮೇಲೆ ಕಲ್ಲಿನಿಂದ ಹಲ್ಲೆ ಮಾಡಿರುವ ಘಟನೆ ಕೊಪ್ಪಳ (Koppal) ಜಿಲ್ಲೆಯಲ್ಲಿ ನಡೆದಿದೆ.

ಗಂಗಾವತಿ ಡಿಪೋಕ್ಕೆ ಸೇರಿರುವ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ನಿರ್ವಾಹಕ ಹನುಮಪ್ಪ ಎಂಬುವರ ಮೇಲೆ ಹಲ್ಲೆಯಾಗಿದೆ. ವಿಜಯನಗರ ಜಿಲ್ಲೆಯ ನಿವಾಸಿ ಶ್ರೀಧರ್​ ಹಲ್ಲೆ ಮಾಡಿದ ವ್ಯಕ್ತಿ. ಮಂಗಳವಾರ (ಫೆ.26) ಕೊಪ್ಪಳ ತಾಲೂಕಿನ ಹುಲಗಿ ಗ್ರಾಮದಿಂದ ಗಂಗಾವತಿಗೆ ಹೋಗುತ್ತಿದ್ದ ಬಸ್ ಅನ್ನು ಶ್ರೀಧರ್ ಕುಡಿದ ಮತ್ತಿನಲ್ಲಿ ಹುಲಗಿಯಲ್ಲಿ ಹತ್ತಿದ್ದಾನೆ. ಬಳಿಕ, ಶ್ರೀಧರ್​ ಗಂಗಾವತಿ ತಾಲೂಕಿನ ಹನುಮನಹಳ್ಳಿಗೆ ಹೋಗಬೇಕು ಅಂತ ಹೇಳಿದ್ದರಿಂದ ಆತನಿಗೆ ನಿರ್ವಾಹಕ ಹನುಮಪ್ಪ 30 ರೂಪಾಯಿ ಟಿಕೆಟ್ ನೀಡಿದ್ದಾರೆ.

ಈ ಮೊದಲು ಹುಲಗಿಯಿಂದ ಗಂಗಾವತಿಗೆ 26 ರೂಪಾಯಿ ಇತ್ತು, ಇದೀಗ 30 ರೂಪಾಯಿ ಟಿಕೆಟ್ ಯಾಕೆ ಅಂತ ಕೇಳಿದ್ದಾನೆ. ಬಸ್ ದರ ಹೆಚ್ಚಳವಾಗಿದೆ ಅಂತ ನಿರ್ವಾಹಕ ಹೇಳಿದ್ದಾರೆ. ಯಾರನ್ನು ಕೇಳಿ ಟಿಕೆಟ್ ದರ ಹೆಚ್ಚಳ ಮಾಡಿದ್ದೀರಿ? ಅಂತ ನಿರ್ವಾಹಕ ಹನುಮಂತಪ್ಪ ಅವರ ಜೊತೆ ಶ್ರೀಧರ್ ಜಗಳ ಆರಂಭಿಸಿದ್ದಾನೆ. ಈ ವೇಳೆ ನಿರ್ವಾಹಕ ಹನುಮಂತಪ್ಪರಿಗೆ ಶ್ರೀಧರ್ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ. ಗಂಗಾವತಿ ತಾಲೂಕಿನ ವಿರುಪಾಪುರ ಗಡ್ಡಿ ಬಳಿ ಬಸ್ ನಿಲ್ಲಿಸಿದಾಗ ಶ್ರೀಧರ್ ನಿರ್ವಾಹಕ ಹನುಮಂತರನ್ನು ಎಳೆದುಕೊಂಡು ಕೆಳಗೆ ಇಳಿದ್ದಾನೆ. ಬಳಿಕ ಕೈಗೆ ಸಿಕ್ಕ ಕಲ್ಲಿನಿಂದ ಹನಮಪ್ಪರ ಮೇಲೆ ಹಲ್ಲೆ ಮಾಡಿದ್ದಾನೆ.

ಘಟನೆಯಲ್ಲಿ ಹನಮಪ್ಪನ ಬಲಗಣ್ಣು ಮತ್ತು ಹಣೆಗೆ ತೀರ್ವ ಪೆಟ್ಟು ಬಿದ್ದಿದೆ. ರಕ್ತಸ್ರಾವವಾಗಿದ್ದರಿಂದ ಕೂಡಲೇ ಹನುಮಪ್ಪನನ್ನು ಗಂಗಾವತಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ನೀಡಲಾಗಿದೆ. ಈ ಬಗ್ಗೆ ಗಂಗಾವತಿ ಗ್ರಾಮೀಣ ಠಾಣೆಯಲ್ಲಿ ಹನುಮಪ್ಪ ಆರೋಪಿ‌ ಶ್ರೀಧರ್ ವಿರುದ್ಧ ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಆರೋಪಿ ಶ್ರೀಧರ್​ನನ್ನು ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ:  ತುಂಗಭದ್ರಾ ನದಿಯಲ್ಲಿ ನೀರುಪಾಲು, ಕೊನೇ ಕ್ಷಣದಲ್ಲಿ ಜೀವ ಉಳಿಸಿಕೊಳ್ಳಲು ಒದ್ದಾಡಿದ್ದ ವೈದ್ಯೆ, ವಿಡಿಯೋ ಇಲ್ಲಿದೆ

ಬಸ್ ಟಿಕೆಟ್ ವಿಚಾರವಾಗಿ ಬೆಳಗಾವಿಯಲ್ಲಿ ನಿರ್ವಾಹಕನ ಮೇಲೆ ಘಟನೆ ಮಾಸುವ ಮುನ್ನವೇ ಕುಡಿತ ಮತ್ತಿನಲ್ಲಿ ಪ್ರಯಾಣಿಕ ಹನುಮಪ್ಪನ ಮೇಲೆ ಹಲ್ಲೆ ಮಾಡಿರುವುದನ್ನು ಸಾರಿಗೆ ಸಂಸ್ಥೆ ಸಿಬ್ಬಂದಿ ಖಂಡಿಸಿದ್ದಾರೆ. ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ದಾಖಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!