ಕೋಟ್ಯಂತರ ಅಕ್ರಮದ ನಡುವೆಯೇ 10 ದಿನಗಳಲ್ಲಿ ನಗರ ಸಭೆ ಜೆಇ ಅಮಾನತು ವಾಪಸ್! ಅನುಮಾನಕ್ಕೆ ಎಡೆ ಮಾಡಿ‌ಕೊಟ್ಟ ಆದೇಶ!

ಕೊಪ್ಪಳ ನಗರಸಭೆಯ ಜೂನಿಯರ್ ಇಂಜಿನಿಯರ್ ಸೋಮಲಿಂಗಪ್ಪ ಅವರ ಅಮಾನತು ಕೇವಲ 10 ದಿನಗಳಲ್ಲಿ ಹಿಂಪಡೆಯಲಾಗಿದ್ದು, ಸಾಕಷ್ಟು ಅನುಮಾನ ಹುಟ್ಟುಹಾಕಿದೆ. ಸುಮಾರು 10 ಕೋಟಿ ರೂ. ಅಕ್ರಮ ಆರೋಪದ ಮೇಲೆ ಲೋಕಾಯುಕ್ತ ತನಿಖೆಯಲ್ಲಿ ಅವ್ಯವಹಾರಗಳು ಬಯಲಾಗಿದ್ದವು. ಆದರೆ, ಸೋಮಲಿಂಗಪ್ಪ ಹೈಕೋರ್ಟ್ ತಡೆಯಾಜ್ಞೆ ಪಡೆದ ಕಾರಣ, ಪೌರಾಡಳಿತ ಇಲಾಖೆ ಆದೇಶ ಹಿಂಪಡೆದಿದೆ. ಈ ತ್ವರಿತ ಕ್ರಮ ಸಾರ್ವಜನಿಕರಲ್ಲಿ ಗಂಭೀರ ಅನುಮಾನಗಳನ್ನು ಹುಟ್ಟುಹಾಕಿದೆ.

ಕೋಟ್ಯಂತರ ಅಕ್ರಮದ ನಡುವೆಯೇ 10 ದಿನಗಳಲ್ಲಿ ನಗರ ಸಭೆ ಜೆಇ ಅಮಾನತು ವಾಪಸ್! ಅನುಮಾನಕ್ಕೆ ಎಡೆ ಮಾಡಿ‌ಕೊಟ್ಟ ಆದೇಶ!
ಜೂನಿಯರ್ ಇಂಜಿನಿಯರ್ ಸೋಮಲಿಂಗಪ್ಪ
Edited By:

Updated on: Mar 27, 2026 | 11:41 AM

ಕೊಪ್ಪಳ, ಮಾರ್ಚ್​ 27: ಅಕ್ರಮ ಹಣ ವ್ಯವಹಾರ ನಡೆಸಿದ ಆರೋಪದ ಹಿನ್ನೆಲೆ ಅಮಾನತುಗೊಂಡಿದ್ದ ಕೊಪ್ಪಳ (Koppal) ನಗರಸಭೆಯ ಜೂನಿಯರ್ ಇಂಜಿನಿಯರ್ ಸೋಮಲಿಂಗಪ್ಪ ಪ್ರಕರಣದಲ್ಲಿ ಹೊಸ ತಿರುವು ಎದುರಾಗಿದೆ. ಪೌರಾಡಳಿತ ಇಲಾಖೆ ಕೇವಲ 10 ದಿನಗಳಲ್ಲೇ ಅಮಾನತು ಆದೇಶವನ್ನು ಹಿಂಪಡೆದಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.

ನೂರಾರು ಕಾಮಗಾರಿಗಳಲ್ಲಿ ಲೋಪ

ಸೋಮಲಿಂಗಪ್ಪ ವಿರುದ್ಧ ಸುಮಾರು 10 ಕೋಟಿ ರೂಪಾಯಿ ಅಕ್ರಮ ಆರೋಪ ಕೇಳಿಬಂದಿತ್ತು. 2023-24 ಹಾಗೂ 2024-25ನೇ ಸಾಲಿನ ಸುಮಾರು 336 ಕಾಮಗಾರಿಗಳಲ್ಲಿ ಅವ್ಯವಹಾರ ನಡೆದಿರುವುದು ಲೋಕಾಯುಕ್ತ ತನಿಖೆಯಲ್ಲಿ ಬಹಿರಂಗವಾಗಿತ್ತು. ಈ ಹಿನ್ನೆಲೆಯಲ್ಲಿ ಇದೇ ಮಾರ್ಚ್ 16ರಂದು ಪೌರಾಡಳಿತ ಇಲಾಖೆ ಅವರನ್ನು ಅಮಾನತು ಮಾಡಿತ್ತು.

ಹೈ ಕೋರ್ಟ್​ ತಡೆಯಾಜ್ಞೆ

ಆದರೆ, ಅಮಾನತು ಆದೇಶದ ವಿರುದ್ಧ ಸೋಮಲಿಂಗಪ್ಪ ಧಾರವಾಡ ಹೈಕೋರ್ಟ್‌ನಲ್ಲಿ ತಡೆಯಾಜ್ಞೆ ಪಡೆದುಕೊಂಡಿದ್ದಾರೆ. ನ್ಯಾಯಾಲಯದಿಂದ ತಾತ್ಕಾಲಿಕ ತಡೆ ಸಿಕ್ಕ ಹಿನ್ನೆಲೆ, ವಿಚಾರಣೆ ಪೂರ್ಣಗೊಳ್ಳುವವರೆಗೆ ಅಮಾನತು ಆದೇಶವನ್ನು ಹಿಂಪಡೆಯಲಾಗಿದೆ ಎಂದು ಇಲಾಖೆ ತಿಳಿಸಿದೆ. ಇದರಿಂದ ಕೇವಲ 10 ದಿನಗಳೊಳಗೆ ಅಮಾನತು ವಾಪಸ್ ಪಡೆದಿರುವ ಕ್ರಮ ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.

ಲೋಕಾಯುಕ್ತ ತನಿಖೆಯಲ್ಲಿ ಗಂಭೀರ ಅಕ್ರಮಗಳು ಬಹಿರಂಗವಾಗಿದ್ದರೂ, ತ್ವರಿತವಾಗಿ ಆದೇಶ ಹಿಂಪಡೆಯಲ್ಪಟ್ಟಿರುವುದು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಈ ಪ್ರಕರಣದಲ್ಲಿ ಮುಂದಿನ ನ್ಯಾಯಾಲಯದ ತೀರ್ಪು ಹಾಗೂ ತನಿಖೆಯ ಫಲಿತಾಂಶವೇ ಸತ್ಯಾಂಶವನ್ನು ಬಹಿರಂಗಪಡಿಸುವುದು ಎಂಬ ಅಭಿಪ್ರಾಯ ವ್ಯಕ್ತವಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

 

Follow Us