AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಬ್ಬರಿಂದ ಅತ್ಯಾಚಾರ ಮಾಡಲು ಸಾಧ್ಯವಿಲ್ಲ: ಕಾಂಗ್ರೆಸ್​ ಮಾಜಿ ಶಾಸಕನ ಆಡಿಯೋ ವೈರಲ್​​​

ಅಕ್ಟೋಬರ್ 10 ರಂದು ಕುಷ್ಟಗಿ ತಾಲೂಕಿನ ಎಂ. ಗುಡದೂರು ಗ್ರಾಮದ ಕಾಂಗ್ರೆಸ್​ ಮುಖಂಡ ಸಂಗನಗೌಡ ನನ್ನ ಮೇಲೆ ಅತ್ಯಾಚಾರವೆಸಗಿದ್ದಾನೆ ಎಂದು ಸಂತ್ರಸ್ತೆ ಕೊಪ್ಪಳ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಅಲ್ಲದೆ ಸಂತ್ರಸ್ತೆಯ ಮಾವ ಯಮನೂರಪ್ಪ ನ್ಯಾಯಕ್ಕಾಗಿ ಮಾಜಿ ಶಾಸಕ ಅಮರೇಗೌಡ ಬಯ್ಯಾಪುರ ಅವರ ಬಳಿಯೂ ಯಮನೂರಪ್ಪ ಮನವಿ ಮಾಡಿದ್ದರು. ಮುಂದೇನಾಯ್ತು ಇಲ್ಲಿದೆ ಓದಿ..

ಒಬ್ಬರಿಂದ ಅತ್ಯಾಚಾರ ಮಾಡಲು ಸಾಧ್ಯವಿಲ್ಲ: ಕಾಂಗ್ರೆಸ್​ ಮಾಜಿ ಶಾಸಕನ ಆಡಿಯೋ ವೈರಲ್​​​
ಮಾಜಿ ಶಾಸಕ ಅಮರೇಗೌಡ ಬೈಯಾಪುರ
ಸಂಜಯ್ಯಾ ಚಿಕ್ಕಮಠ
| Edited By: |

Updated on:Nov 20, 2023 | 12:30 PM

Share

ಕೊಪ್ಪಳ ನ.20: ಒಂದೇ ಕೈಯಲ್ಲಿ ಚಪ್ಪಾಳೆ ತಟ್ಟಲು ಸಾಧ್ಯವಿಲ್ಲ, ಹಾಗೆ ಜಗತ್ತಿನಲ್ಲಿ ಒಬ್ಬರಿಂದ ಅತ್ಯಾಚಾರ ಮಾಡಲು ಸಾಧ್ಯವಿಲ್ಲ ಎಂದು ಕುಷ್ಟಗಿ (Kustagi) ಕ್ಷೇತ್ರದ ಕಾಂಗ್ರೆಸ್​ನ (Congress) ಮಾಜಿ ಶಾಸಕ ಅಮರೇಗೌಡ ಬಯ್ಯಾಪುರ (Amaregouda Bayyapur) ಮಾತನಾಡಿರುವ ಫೋನ್​ ಸಂಭಾಷಣೆಯ ಆಡಿಯೋ ವೈರಲ್​ ಆಗಿದೆ.

ಅಕ್ಟೋಬರ್ 10 ರಂದು ಕುಷ್ಟಗಿ ತಾಲೂಕಿನ ಎಂ. ಗುಡದೂರು ಗ್ರಾಮದ ಕಾಂಗ್ರೆಸ್​ ಮುಖಂಡ ಸಂಗನಗೌಡ ನನ್ನ ಮೇಲೆ ಅತ್ಯಾಚಾರವೆಸಗಿದ್ದಾನೆ ಎಂದು ಸಂತ್ರಸ್ತೆ ಕೊಪ್ಪಳ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ದೂರು ದಾಖಲಿಸಿಕೊಂಡರೂ ಆರೋಪಿ ವಿರುದ್ಧ ಕ್ರಮ ಕೈಗೊಳ್ಳಲು ಪೊಲೀಸರು ಮೀನಾಮೇಷ ಎಣಿಸುತ್ತಿದ್ದರು. ಹೀಗಾಗಿ ಸಂತ್ರಸ್ತೆಯ ಮಾವ ಯಮನೂರಪ್ಪ ನ್ಯಾಯಕ್ಕಾಗಿ ಎಸ್ಪಿಗೆ ದೂರು ನೀಡಿದ್ದರು. ಹಾಗೆ ನ್ಯಾಯಕೊಡಿಸುವಂತೆ ಮಾಜಿ ಶಾಸಕ ಅಮರೇಗೌಡ ಬಯ್ಯಾಪುರ ಅವರ ಬಳಿಯೂ ಯಮನೂರಪ್ಪ ಮನವಿ ಮಾಡಿದರು.

ಇದನ್ನೂ ಓದಿ: ಮಂಡ್ಯ: 17 ವರ್ಷದ ಅಪ್ರಾಪ್ತೆ ಮೇಲೆ ಮೂವರಿಂದ ಅತ್ಯಾಚಾರ 

ಆದರೆ ಅಮರೇಗೌಡ ಬಯ್ಯಾಪುರ ಅವರು ಆರೋಪಿ ಪರವಾಗಿಯೇ ನಿಲುವು ತಾಳಿದ್ದು, ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ (SP) ಅವರಿಗೆ ದೂರು ನೀಡಬಾರದಿತ್ತು ಎಂದು ಯಮನೂರಪ್ಪ ಅವರಿಗೆ ಹೇಳಿದ್ದಾರೆ. ಅಲ್ಲದೆ “ನಿಮ್ಮ ಮರ್ಯಾದೆಯನ್ನು ನೀವೆ ಕಳೆದುಕೊಳ್ಳುತ್ತಿದ್ದೀಯಾ, ಒಬ್ಬರಿಂದ ಹೇಗೆ ಅತ್ಯಾಚಾರ ಮಾಡಲು ಸಾಧ್ಯ? ನೀನು ಒಬ್ಬನನ್ನು ಕರೆದುಕೊಂಡು ಬಾ, ನಾನು ಓರ್ವ ಮಹಿಳೆಯನ್ನು ಕಳುಹಿಸುತ್ತೇನೆ. ಆ ವ್ಯಕ್ತಿ ಆಕೆಯನ್ನು ಅತ್ಯಾಚಾರ ಮಾಡಲಿ ನೋಡಣ. ಒಬ್ಬನಿಂದ ಅತ್ಯಾಚಾರ ಮಾಡಲು ಸಾಧ್ಯವಿಲ್ಲ. ಸೂಕ್ಷ್ಮ ವಿಚಾರ ಇದು, ಮರ್ಯಾದೆ ಪ್ರಶ್ನೆ ಇದೆ ಯೋಚಿಸು” ಎಂದು ಅಮರೇಗೌಡ ಬಯ್ಯಾಪುರ ಸಂತ್ರಸ್ತೆ ಮಾವನಿಗೆ ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 11:43 am, Mon, 20 November 23

ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ