AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಪ್ಪಳ: ರೆಸಾರ್ಟ್‌ಗಳ ಬಗ್ಗೆ 48 ಗಂಟೆಯಲ್ಲಿ ವರದಿ ನೀಡುವಂತೆ ಡಿಸಿ ಆದೇಶ; ಮಾಲೀಕರು ಕಂಗಾಲು

ಕೃಷಿ ಭೂಮಿಯಲ್ಲಿ ಅನಧಿಕೃತವಾಗಿ ರೆಸಾರ್ಟ್​ಗಳಿಗೆ ನೋಟಿಸ್ ಅಂಟಿಸಿ ಬೀಗ ಜಡಿದಿದ್ದಾರೆ. ಅಲ್ಲದೆ ಜೆಸ್ಕಾಂ ಅಧಿಕಾರಿಗಳನ್ನು ಕರೆಸಿ ವಿದ್ಯುತ್​ ಕಟ್ ಮಾಡಿಸಿದ್ದಾರೆ. ಎರಡು ದಿನಗಳಲ್ಲಿ ರೆಸಾರ್ಟ್ ತೆರವು ಮಾಡಬೇಕೆಂದು ಎಚ್ಚರಿಕೆ ನೀಡಿದ್ದಾರೆ. ಖುದ್ದು ರೆಸಾರ್ಟ್ ಮಾಲೀಕರನ್ನು ಕರೆದು ಅಧಿಕಾರಿಗಳು ದಾಖಲೆಗಳ ಪರಿಶೀಲನೆ ಮಾಡಿದ್ದಾರೆ.

ಕೊಪ್ಪಳ: ರೆಸಾರ್ಟ್‌ಗಳ ಬಗ್ಗೆ 48 ಗಂಟೆಯಲ್ಲಿ ವರದಿ ನೀಡುವಂತೆ ಡಿಸಿ ಆದೇಶ; ಮಾಲೀಕರು ಕಂಗಾಲು
ರೆಸಾರ್ಟ್‌
TV9 Web
| Updated By: preethi shettigar|

Updated on:Dec 29, 2021 | 3:01 PM

Share

ಕೊಪ್ಪಳ: ಹೊಸ ವರ್ಷಕ್ಕೆ ಬಹುತೇಕ ರೆಸಾರ್ಟ್​ಗಳು (Resorts) ಸಜ್ಜಾಗಿದ್ದವು, ಒಮಿಕ್ರಾನ್ (Omicron) ಭೀತಿ ನಡುವೆ ರೆಸಾರ್ಟ್​ಗಳಲ್ಲಿ ಮೋಜು ಮಸ್ತಿ ಮಾಡುವುದಕ್ಕೆ ತಯಾರಿ‌ ನಡೆದಿತ್ತು. ಆದರೆ ಕೊಪ್ಪಳ ಜಿಲ್ಲಾಧಿಕಾರಿ ರೆಸಾರ್ಟ್ ಮಾಲೀಕರಿಗೆ ಶಾಕ್ ನೀಡಿದ್ದಾರೆ. ಕೊಪ್ಪಳ ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಅಕ್ರಮ ರೆಸಾರ್ಟ್​ಗಳ ವಿರುದ್ಧ ಸಮರ ಸಾರಿದ್ದಾರೆ. ಅಕ್ರಮ ರೆಸಾರ್ಟ್​ಗಳ ಕುರಿತು 48 ಗಂಟೆಯಲ್ಲಿ ವರದಿ ಕೊಡುವಂತೆ ತಹಶಿಲ್ದಾರ್, ಉಪವಿಭಾಗ ಅಧಿಕಾರಿ, ಹಂಪಿ ಪ್ರಾಧಿಕಾರದ ಅಧಿಕಾರಿಗಳಿಗೆ ನೋಟಿಸ್ ನೀಡಿದ್ದಾರೆ‌.

ಈ ಹಿನ್ನಲೆಯಲ್ಲಿ ಆನೆಗೊಂದಿ ಸುತ್ತಮುತ್ತ ಇರುವ ಸಣಾಪೂರ, ಮಲ್ಲಾಪೂರ, ಸಂಗಾಪೂರ ಸೇರಿ 15 ಹಳ್ಳಿಗಳಲ್ಲಿ ತಲೆ ಎತ್ತಿದ ಅಕ್ರಮ ರೆಸಾರ್ಟ್​ಗಳಿಗೆ ಬೀಗ ಬಿದ್ದಿದೆ. ಡಿಸಿ ನೋಟಿಸ್ ನೀಡಿದ ಕೂಡಲೇ ಎಚ್ಚೆತ್ತ ಕೊಪ್ಪಳ ಉಪವಿಭಾಗಧಿಕಾರಿ ಕನಕರೆಡ್ಡಿ, ಹಂಪಿ ಪ್ರಾಧಿಕಾರದ ಆಯುಕ್ತ ಸಿದ್ದಾರೇಮಶ್ವರ, ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿ ಸುಮಾರು 80 ಕ್ಕೂ ಅಧಿಕ ರೆಸಾರ್ಟ್​ಗಳಿಗೆ ಬೀಗ ಹಾಕಿದ್ದಾರೆ.

ಕೃಷಿ ಭೂಮಿಯಲ್ಲಿ ಅನಧಿಕೃತವಾಗಿ ರೆಸಾರ್ಟ್​ಗಳಿಗೆ ನೋಟಿಸ್ ಅಂಟಿಸಿ ಬೀಗ ಜಡಿದಿದ್ದಾರೆ. ಅಲ್ಲದೆ ಜೆಸ್ಕಾಂ ಅಧಿಕಾರಿಗಳನ್ನು ಕರೆಸಿ ವಿದ್ಯುತ್​ ಕಟ್ ಮಾಡಿಸಿದ್ದಾರೆ. ಎರಡು ದಿನಗಳಲ್ಲಿ ರೆಸಾರ್ಟ್ ತೆರವು ಮಾಡಬೇಕೆಂದು ಎಚ್ಚರಿಕೆ ನೀಡಿದ್ದಾರೆ. ಖುದ್ದು ರೆಸಾರ್ಟ್ ಮಾಲೀಕರನ್ನು ಕರೆದು ಅಧಿಕಾರಿಗಳು ದಾಖಲೆಗಳ ಪರಿಶೀಲನೆ ಮಾಡಿದ್ದಾರೆ. ರೆಸಾರ್ಟ್ ಮಾಲೀಕರು ತೆರವು ಮಾಡದಿದ್ದರೆ, ಡೆಮಾಲಿಶ್ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಗಂಗಾವತಿ ತಾಲೂಕಿನ ಸಣಾಪೂರ, ಸಂಗಾಪೂರ, ಮಲ್ಲಾಪೂರ, ಆನೆಗೊಂದಿ ಸುತ್ತಮುತ್ತ ನಾಯಿ ಕೊಡೆಯಂತೆ ಅಕ್ರಮ ರೆಸಾರ್ಟ್​ಗಳು ತಲೆ ಎತ್ತಿದ್ದವು. ಈ ರೆಸಾರ್ಟ್​ಗಳಲ್ಲಿ ಅಕ್ರಮ ಚಟುವಟಿಕೆಗಳು ನಡೆಯುತ್ತವೇ ಎನ್ನುವ ಆರೋಪಗಳು ಕೇಳಿ ಬರುತ್ತದೆ. ಅಧಿಕಾರಿಗಳು ದಾಳಿ ಮಾಡುವ ಸಮಯದಲ್ಲಿ ಕೆಲ ರೆಸಾರ್ಟ್​ಗಳಲ್ಲಿ ಮಾದಕ ವಸ್ತುಗಳು ಹುಕ್ಕಾ ಸ್ಟ್ಯಾಂಡ್​ಗಳಾಗಿ ಪತ್ತೆಯಾಗಿವೆ.

ಹದಿನೈದು ಹಳ್ಳಿಗಳಲ್ಲಿ ಕೃಷಿ ಭೂಮಿಯನ್ನು ಪರಿವರ್ತನೆ ಮಾಡದೆ, ವಾಣಿಜ್ಯ ಚಟುವಟಿಕೆಗೆ ಬಳಕೆ ಮಾಡಲಾಗುತ್ತಿತ್ತು. ಸುಮಾರು 80 ಕ್ಕೂ ಅಧಿಕ ರೆಸಾರ್ಟ್​ಗಳು ಅಕ್ರಮವಾಗಿ ತಲೆ ಎತ್ತಿದವು. ಇನ್ನೇನು ಹೊಸ ವರ್ಷಕ್ಕೆ 2 ದಿನಗಳಿರುವಾಗಲೇ ಇವುಗಳಿಗೆ ನಿರ್ಬಂಧ ಹೇರಲಾಗಿದೆ.

ಇದನ್ನೂ ಓದಿ: ಬೆಂಗಳೂರು ಪೊಲೀಸ್ ಆಯುಕ್ತರ ಕಚೇರಿಯಲ್ಲಿ ತುರ್ತು ಸಭೆ: ಹೊಸ ವರ್ಷ ಆಚರಣೆಗೆ ಮಾರ್ಗಸೂಚಿ ಪ್ರಕಟ

ಮತ್ತೆ ಹೆಚ್ಚಾದ ಕೊವಿಡ್​ 19, ಒಮಿಕ್ರಾನ್​ ಸೋಂಕು; ದೆಹಲಿಯಲ್ಲಿ ನಾಳೆಯಿಂದ ನೈಟ್​ ಕರ್ಫ್ಯೂ ಜಾರಿ

Published On - 2:59 pm, Wed, 29 December 21

ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?