Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಪ್ಪಳ: ರೆಸಾರ್ಟ್‌ಗಳ ಬಗ್ಗೆ 48 ಗಂಟೆಯಲ್ಲಿ ವರದಿ ನೀಡುವಂತೆ ಡಿಸಿ ಆದೇಶ; ಮಾಲೀಕರು ಕಂಗಾಲು

ಕೃಷಿ ಭೂಮಿಯಲ್ಲಿ ಅನಧಿಕೃತವಾಗಿ ರೆಸಾರ್ಟ್​ಗಳಿಗೆ ನೋಟಿಸ್ ಅಂಟಿಸಿ ಬೀಗ ಜಡಿದಿದ್ದಾರೆ. ಅಲ್ಲದೆ ಜೆಸ್ಕಾಂ ಅಧಿಕಾರಿಗಳನ್ನು ಕರೆಸಿ ವಿದ್ಯುತ್​ ಕಟ್ ಮಾಡಿಸಿದ್ದಾರೆ. ಎರಡು ದಿನಗಳಲ್ಲಿ ರೆಸಾರ್ಟ್ ತೆರವು ಮಾಡಬೇಕೆಂದು ಎಚ್ಚರಿಕೆ ನೀಡಿದ್ದಾರೆ. ಖುದ್ದು ರೆಸಾರ್ಟ್ ಮಾಲೀಕರನ್ನು ಕರೆದು ಅಧಿಕಾರಿಗಳು ದಾಖಲೆಗಳ ಪರಿಶೀಲನೆ ಮಾಡಿದ್ದಾರೆ.

ಕೊಪ್ಪಳ: ರೆಸಾರ್ಟ್‌ಗಳ ಬಗ್ಗೆ 48 ಗಂಟೆಯಲ್ಲಿ ವರದಿ ನೀಡುವಂತೆ ಡಿಸಿ ಆದೇಶ; ಮಾಲೀಕರು ಕಂಗಾಲು
ರೆಸಾರ್ಟ್‌
Follow us
TV9 Web
| Updated By: preethi shettigar

Updated on:Dec 29, 2021 | 3:01 PM

ಕೊಪ್ಪಳ: ಹೊಸ ವರ್ಷಕ್ಕೆ ಬಹುತೇಕ ರೆಸಾರ್ಟ್​ಗಳು (Resorts) ಸಜ್ಜಾಗಿದ್ದವು, ಒಮಿಕ್ರಾನ್ (Omicron) ಭೀತಿ ನಡುವೆ ರೆಸಾರ್ಟ್​ಗಳಲ್ಲಿ ಮೋಜು ಮಸ್ತಿ ಮಾಡುವುದಕ್ಕೆ ತಯಾರಿ‌ ನಡೆದಿತ್ತು. ಆದರೆ ಕೊಪ್ಪಳ ಜಿಲ್ಲಾಧಿಕಾರಿ ರೆಸಾರ್ಟ್ ಮಾಲೀಕರಿಗೆ ಶಾಕ್ ನೀಡಿದ್ದಾರೆ. ಕೊಪ್ಪಳ ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಅಕ್ರಮ ರೆಸಾರ್ಟ್​ಗಳ ವಿರುದ್ಧ ಸಮರ ಸಾರಿದ್ದಾರೆ. ಅಕ್ರಮ ರೆಸಾರ್ಟ್​ಗಳ ಕುರಿತು 48 ಗಂಟೆಯಲ್ಲಿ ವರದಿ ಕೊಡುವಂತೆ ತಹಶಿಲ್ದಾರ್, ಉಪವಿಭಾಗ ಅಧಿಕಾರಿ, ಹಂಪಿ ಪ್ರಾಧಿಕಾರದ ಅಧಿಕಾರಿಗಳಿಗೆ ನೋಟಿಸ್ ನೀಡಿದ್ದಾರೆ‌.

ಈ ಹಿನ್ನಲೆಯಲ್ಲಿ ಆನೆಗೊಂದಿ ಸುತ್ತಮುತ್ತ ಇರುವ ಸಣಾಪೂರ, ಮಲ್ಲಾಪೂರ, ಸಂಗಾಪೂರ ಸೇರಿ 15 ಹಳ್ಳಿಗಳಲ್ಲಿ ತಲೆ ಎತ್ತಿದ ಅಕ್ರಮ ರೆಸಾರ್ಟ್​ಗಳಿಗೆ ಬೀಗ ಬಿದ್ದಿದೆ. ಡಿಸಿ ನೋಟಿಸ್ ನೀಡಿದ ಕೂಡಲೇ ಎಚ್ಚೆತ್ತ ಕೊಪ್ಪಳ ಉಪವಿಭಾಗಧಿಕಾರಿ ಕನಕರೆಡ್ಡಿ, ಹಂಪಿ ಪ್ರಾಧಿಕಾರದ ಆಯುಕ್ತ ಸಿದ್ದಾರೇಮಶ್ವರ, ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿ ಸುಮಾರು 80 ಕ್ಕೂ ಅಧಿಕ ರೆಸಾರ್ಟ್​ಗಳಿಗೆ ಬೀಗ ಹಾಕಿದ್ದಾರೆ.

ಕೃಷಿ ಭೂಮಿಯಲ್ಲಿ ಅನಧಿಕೃತವಾಗಿ ರೆಸಾರ್ಟ್​ಗಳಿಗೆ ನೋಟಿಸ್ ಅಂಟಿಸಿ ಬೀಗ ಜಡಿದಿದ್ದಾರೆ. ಅಲ್ಲದೆ ಜೆಸ್ಕಾಂ ಅಧಿಕಾರಿಗಳನ್ನು ಕರೆಸಿ ವಿದ್ಯುತ್​ ಕಟ್ ಮಾಡಿಸಿದ್ದಾರೆ. ಎರಡು ದಿನಗಳಲ್ಲಿ ರೆಸಾರ್ಟ್ ತೆರವು ಮಾಡಬೇಕೆಂದು ಎಚ್ಚರಿಕೆ ನೀಡಿದ್ದಾರೆ. ಖುದ್ದು ರೆಸಾರ್ಟ್ ಮಾಲೀಕರನ್ನು ಕರೆದು ಅಧಿಕಾರಿಗಳು ದಾಖಲೆಗಳ ಪರಿಶೀಲನೆ ಮಾಡಿದ್ದಾರೆ. ರೆಸಾರ್ಟ್ ಮಾಲೀಕರು ತೆರವು ಮಾಡದಿದ್ದರೆ, ಡೆಮಾಲಿಶ್ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಗಂಗಾವತಿ ತಾಲೂಕಿನ ಸಣಾಪೂರ, ಸಂಗಾಪೂರ, ಮಲ್ಲಾಪೂರ, ಆನೆಗೊಂದಿ ಸುತ್ತಮುತ್ತ ನಾಯಿ ಕೊಡೆಯಂತೆ ಅಕ್ರಮ ರೆಸಾರ್ಟ್​ಗಳು ತಲೆ ಎತ್ತಿದ್ದವು. ಈ ರೆಸಾರ್ಟ್​ಗಳಲ್ಲಿ ಅಕ್ರಮ ಚಟುವಟಿಕೆಗಳು ನಡೆಯುತ್ತವೇ ಎನ್ನುವ ಆರೋಪಗಳು ಕೇಳಿ ಬರುತ್ತದೆ. ಅಧಿಕಾರಿಗಳು ದಾಳಿ ಮಾಡುವ ಸಮಯದಲ್ಲಿ ಕೆಲ ರೆಸಾರ್ಟ್​ಗಳಲ್ಲಿ ಮಾದಕ ವಸ್ತುಗಳು ಹುಕ್ಕಾ ಸ್ಟ್ಯಾಂಡ್​ಗಳಾಗಿ ಪತ್ತೆಯಾಗಿವೆ.

ಹದಿನೈದು ಹಳ್ಳಿಗಳಲ್ಲಿ ಕೃಷಿ ಭೂಮಿಯನ್ನು ಪರಿವರ್ತನೆ ಮಾಡದೆ, ವಾಣಿಜ್ಯ ಚಟುವಟಿಕೆಗೆ ಬಳಕೆ ಮಾಡಲಾಗುತ್ತಿತ್ತು. ಸುಮಾರು 80 ಕ್ಕೂ ಅಧಿಕ ರೆಸಾರ್ಟ್​ಗಳು ಅಕ್ರಮವಾಗಿ ತಲೆ ಎತ್ತಿದವು. ಇನ್ನೇನು ಹೊಸ ವರ್ಷಕ್ಕೆ 2 ದಿನಗಳಿರುವಾಗಲೇ ಇವುಗಳಿಗೆ ನಿರ್ಬಂಧ ಹೇರಲಾಗಿದೆ.

ಇದನ್ನೂ ಓದಿ: ಬೆಂಗಳೂರು ಪೊಲೀಸ್ ಆಯುಕ್ತರ ಕಚೇರಿಯಲ್ಲಿ ತುರ್ತು ಸಭೆ: ಹೊಸ ವರ್ಷ ಆಚರಣೆಗೆ ಮಾರ್ಗಸೂಚಿ ಪ್ರಕಟ

ಮತ್ತೆ ಹೆಚ್ಚಾದ ಕೊವಿಡ್​ 19, ಒಮಿಕ್ರಾನ್​ ಸೋಂಕು; ದೆಹಲಿಯಲ್ಲಿ ನಾಳೆಯಿಂದ ನೈಟ್​ ಕರ್ಫ್ಯೂ ಜಾರಿ

Published On - 2:59 pm, Wed, 29 December 21

ಹೊಸ ಧಾರಾವಾಹಿಯಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ ಚಂದು ಗೌಡ-ಕಾವ್ಯಾ ಮಹಾದೇವ್
ಹೊಸ ಧಾರಾವಾಹಿಯಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ ಚಂದು ಗೌಡ-ಕಾವ್ಯಾ ಮಹಾದೇವ್
ಶಿವಕುಮಾರ್ ಡಿಸಿಎಂ ಆಗಿರುವುದರಿಂದ ಭೇಟಿಯಾಗಲೇಬೇಕಾಗುತ್ತದೆ: ಸೋಮಶೇಖರ್
ಶಿವಕುಮಾರ್ ಡಿಸಿಎಂ ಆಗಿರುವುದರಿಂದ ಭೇಟಿಯಾಗಲೇಬೇಕಾಗುತ್ತದೆ: ಸೋಮಶೇಖರ್
ಸ್ಕೂಟಿಗೆ ಡಿಕ್ಕಿ ಹೊಡೆದು 11 ಕಿ.ಮೀ ಎಳೆದೊಯ್ದ ಕಾರು, ಭಯಾನಕ ವಿಡಿಯೋ
ಸ್ಕೂಟಿಗೆ ಡಿಕ್ಕಿ ಹೊಡೆದು 11 ಕಿ.ಮೀ ಎಳೆದೊಯ್ದ ಕಾರು, ಭಯಾನಕ ವಿಡಿಯೋ
ಹೇಳಬೇಕಾಗಿದ್ದನ್ನು ಸರಿಯಾಗಿ ಕನ್ವೇ ಮಾಡಲು ಶಿವಕುಮಾರ್​ಗೆ ಅಗಿಲ್ಲ: ಯತೀಂದ್ರ
ಹೇಳಬೇಕಾಗಿದ್ದನ್ನು ಸರಿಯಾಗಿ ಕನ್ವೇ ಮಾಡಲು ಶಿವಕುಮಾರ್​ಗೆ ಅಗಿಲ್ಲ: ಯತೀಂದ್ರ
VIDEO: ಆಂಬ್ಯುಲೆನ್ಸ್​ಗೆ ಕರೆ ಮಾಡಿ, ಆದರೆ ಅದು ನನಗಲ್ಲ..!
VIDEO: ಆಂಬ್ಯುಲೆನ್ಸ್​ಗೆ ಕರೆ ಮಾಡಿ, ಆದರೆ ಅದು ನನಗಲ್ಲ..!
ಇದ್ದಕ್ಕಿದ್ದಂತೆ ಬಾಯ್ತೆರೆದ ರಸ್ತೆ ಕಾರು ಜಸ್ಟ್​ ಮಿಸ್, ಬೈಕ್ ಹೋಗೇಬಿಡ್ತು
ಇದ್ದಕ್ಕಿದ್ದಂತೆ ಬಾಯ್ತೆರೆದ ರಸ್ತೆ ಕಾರು ಜಸ್ಟ್​ ಮಿಸ್, ಬೈಕ್ ಹೋಗೇಬಿಡ್ತು
Daily Devotional: ಪ್ರದೂಷ ಕಾಲದ ಮಹತ್ವ ಹಾಗೂ ಹಿಂದಿನ ರಹಸ್ಯ ತಿಳಿಯಿರಿ
Daily Devotional: ಪ್ರದೂಷ ಕಾಲದ ಮಹತ್ವ ಹಾಗೂ ಹಿಂದಿನ ರಹಸ್ಯ ತಿಳಿಯಿರಿ
ಬಾಂಬೆ ಹೈಕೋರ್ಟ್​ ಆವರಣದಲ್ಲಿ ವಾಮಾಚಾರ?
ಬಾಂಬೆ ಹೈಕೋರ್ಟ್​ ಆವರಣದಲ್ಲಿ ವಾಮಾಚಾರ?
Daily Horoscope: ಈ ರಾಶಿಯವರಿಗೆ ಇಂದು ಸಾಲ ಮಾಡುವ ಸಂದರ್ಭ ಬರಬಹುದು
Daily Horoscope: ಈ ರಾಶಿಯವರಿಗೆ ಇಂದು ಸಾಲ ಮಾಡುವ ಸಂದರ್ಭ ಬರಬಹುದು
ರಜತ್, ವಿನಯ್ ಗೌಡ ಮೆಡಿಕಲ್ ಚೆಕಪ್; ಲಾಂಗ್ ಹಿಡಿದವರಿಗೆ ಕಾದಿದೆ ಕಷ್ಟ ಕಾಲ
ರಜತ್, ವಿನಯ್ ಗೌಡ ಮೆಡಿಕಲ್ ಚೆಕಪ್; ಲಾಂಗ್ ಹಿಡಿದವರಿಗೆ ಕಾದಿದೆ ಕಷ್ಟ ಕಾಲ