AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಪ್ಪಳ: ರೆಸಾರ್ಟ್‌ಗಳ ಬಗ್ಗೆ 48 ಗಂಟೆಯಲ್ಲಿ ವರದಿ ನೀಡುವಂತೆ ಡಿಸಿ ಆದೇಶ; ಮಾಲೀಕರು ಕಂಗಾಲು

ಕೃಷಿ ಭೂಮಿಯಲ್ಲಿ ಅನಧಿಕೃತವಾಗಿ ರೆಸಾರ್ಟ್​ಗಳಿಗೆ ನೋಟಿಸ್ ಅಂಟಿಸಿ ಬೀಗ ಜಡಿದಿದ್ದಾರೆ. ಅಲ್ಲದೆ ಜೆಸ್ಕಾಂ ಅಧಿಕಾರಿಗಳನ್ನು ಕರೆಸಿ ವಿದ್ಯುತ್​ ಕಟ್ ಮಾಡಿಸಿದ್ದಾರೆ. ಎರಡು ದಿನಗಳಲ್ಲಿ ರೆಸಾರ್ಟ್ ತೆರವು ಮಾಡಬೇಕೆಂದು ಎಚ್ಚರಿಕೆ ನೀಡಿದ್ದಾರೆ. ಖುದ್ದು ರೆಸಾರ್ಟ್ ಮಾಲೀಕರನ್ನು ಕರೆದು ಅಧಿಕಾರಿಗಳು ದಾಖಲೆಗಳ ಪರಿಶೀಲನೆ ಮಾಡಿದ್ದಾರೆ.

ಕೊಪ್ಪಳ: ರೆಸಾರ್ಟ್‌ಗಳ ಬಗ್ಗೆ 48 ಗಂಟೆಯಲ್ಲಿ ವರದಿ ನೀಡುವಂತೆ ಡಿಸಿ ಆದೇಶ; ಮಾಲೀಕರು ಕಂಗಾಲು
ರೆಸಾರ್ಟ್‌
TV9 Web
| Edited By: |

Updated on:Dec 29, 2021 | 3:01 PM

Share

ಕೊಪ್ಪಳ: ಹೊಸ ವರ್ಷಕ್ಕೆ ಬಹುತೇಕ ರೆಸಾರ್ಟ್​ಗಳು (Resorts) ಸಜ್ಜಾಗಿದ್ದವು, ಒಮಿಕ್ರಾನ್ (Omicron) ಭೀತಿ ನಡುವೆ ರೆಸಾರ್ಟ್​ಗಳಲ್ಲಿ ಮೋಜು ಮಸ್ತಿ ಮಾಡುವುದಕ್ಕೆ ತಯಾರಿ‌ ನಡೆದಿತ್ತು. ಆದರೆ ಕೊಪ್ಪಳ ಜಿಲ್ಲಾಧಿಕಾರಿ ರೆಸಾರ್ಟ್ ಮಾಲೀಕರಿಗೆ ಶಾಕ್ ನೀಡಿದ್ದಾರೆ. ಕೊಪ್ಪಳ ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಅಕ್ರಮ ರೆಸಾರ್ಟ್​ಗಳ ವಿರುದ್ಧ ಸಮರ ಸಾರಿದ್ದಾರೆ. ಅಕ್ರಮ ರೆಸಾರ್ಟ್​ಗಳ ಕುರಿತು 48 ಗಂಟೆಯಲ್ಲಿ ವರದಿ ಕೊಡುವಂತೆ ತಹಶಿಲ್ದಾರ್, ಉಪವಿಭಾಗ ಅಧಿಕಾರಿ, ಹಂಪಿ ಪ್ರಾಧಿಕಾರದ ಅಧಿಕಾರಿಗಳಿಗೆ ನೋಟಿಸ್ ನೀಡಿದ್ದಾರೆ‌.

ಈ ಹಿನ್ನಲೆಯಲ್ಲಿ ಆನೆಗೊಂದಿ ಸುತ್ತಮುತ್ತ ಇರುವ ಸಣಾಪೂರ, ಮಲ್ಲಾಪೂರ, ಸಂಗಾಪೂರ ಸೇರಿ 15 ಹಳ್ಳಿಗಳಲ್ಲಿ ತಲೆ ಎತ್ತಿದ ಅಕ್ರಮ ರೆಸಾರ್ಟ್​ಗಳಿಗೆ ಬೀಗ ಬಿದ್ದಿದೆ. ಡಿಸಿ ನೋಟಿಸ್ ನೀಡಿದ ಕೂಡಲೇ ಎಚ್ಚೆತ್ತ ಕೊಪ್ಪಳ ಉಪವಿಭಾಗಧಿಕಾರಿ ಕನಕರೆಡ್ಡಿ, ಹಂಪಿ ಪ್ರಾಧಿಕಾರದ ಆಯುಕ್ತ ಸಿದ್ದಾರೇಮಶ್ವರ, ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿ ಸುಮಾರು 80 ಕ್ಕೂ ಅಧಿಕ ರೆಸಾರ್ಟ್​ಗಳಿಗೆ ಬೀಗ ಹಾಕಿದ್ದಾರೆ.

ಕೃಷಿ ಭೂಮಿಯಲ್ಲಿ ಅನಧಿಕೃತವಾಗಿ ರೆಸಾರ್ಟ್​ಗಳಿಗೆ ನೋಟಿಸ್ ಅಂಟಿಸಿ ಬೀಗ ಜಡಿದಿದ್ದಾರೆ. ಅಲ್ಲದೆ ಜೆಸ್ಕಾಂ ಅಧಿಕಾರಿಗಳನ್ನು ಕರೆಸಿ ವಿದ್ಯುತ್​ ಕಟ್ ಮಾಡಿಸಿದ್ದಾರೆ. ಎರಡು ದಿನಗಳಲ್ಲಿ ರೆಸಾರ್ಟ್ ತೆರವು ಮಾಡಬೇಕೆಂದು ಎಚ್ಚರಿಕೆ ನೀಡಿದ್ದಾರೆ. ಖುದ್ದು ರೆಸಾರ್ಟ್ ಮಾಲೀಕರನ್ನು ಕರೆದು ಅಧಿಕಾರಿಗಳು ದಾಖಲೆಗಳ ಪರಿಶೀಲನೆ ಮಾಡಿದ್ದಾರೆ. ರೆಸಾರ್ಟ್ ಮಾಲೀಕರು ತೆರವು ಮಾಡದಿದ್ದರೆ, ಡೆಮಾಲಿಶ್ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಗಂಗಾವತಿ ತಾಲೂಕಿನ ಸಣಾಪೂರ, ಸಂಗಾಪೂರ, ಮಲ್ಲಾಪೂರ, ಆನೆಗೊಂದಿ ಸುತ್ತಮುತ್ತ ನಾಯಿ ಕೊಡೆಯಂತೆ ಅಕ್ರಮ ರೆಸಾರ್ಟ್​ಗಳು ತಲೆ ಎತ್ತಿದ್ದವು. ಈ ರೆಸಾರ್ಟ್​ಗಳಲ್ಲಿ ಅಕ್ರಮ ಚಟುವಟಿಕೆಗಳು ನಡೆಯುತ್ತವೇ ಎನ್ನುವ ಆರೋಪಗಳು ಕೇಳಿ ಬರುತ್ತದೆ. ಅಧಿಕಾರಿಗಳು ದಾಳಿ ಮಾಡುವ ಸಮಯದಲ್ಲಿ ಕೆಲ ರೆಸಾರ್ಟ್​ಗಳಲ್ಲಿ ಮಾದಕ ವಸ್ತುಗಳು ಹುಕ್ಕಾ ಸ್ಟ್ಯಾಂಡ್​ಗಳಾಗಿ ಪತ್ತೆಯಾಗಿವೆ.

ಹದಿನೈದು ಹಳ್ಳಿಗಳಲ್ಲಿ ಕೃಷಿ ಭೂಮಿಯನ್ನು ಪರಿವರ್ತನೆ ಮಾಡದೆ, ವಾಣಿಜ್ಯ ಚಟುವಟಿಕೆಗೆ ಬಳಕೆ ಮಾಡಲಾಗುತ್ತಿತ್ತು. ಸುಮಾರು 80 ಕ್ಕೂ ಅಧಿಕ ರೆಸಾರ್ಟ್​ಗಳು ಅಕ್ರಮವಾಗಿ ತಲೆ ಎತ್ತಿದವು. ಇನ್ನೇನು ಹೊಸ ವರ್ಷಕ್ಕೆ 2 ದಿನಗಳಿರುವಾಗಲೇ ಇವುಗಳಿಗೆ ನಿರ್ಬಂಧ ಹೇರಲಾಗಿದೆ.

ಇದನ್ನೂ ಓದಿ: ಬೆಂಗಳೂರು ಪೊಲೀಸ್ ಆಯುಕ್ತರ ಕಚೇರಿಯಲ್ಲಿ ತುರ್ತು ಸಭೆ: ಹೊಸ ವರ್ಷ ಆಚರಣೆಗೆ ಮಾರ್ಗಸೂಚಿ ಪ್ರಕಟ

ಮತ್ತೆ ಹೆಚ್ಚಾದ ಕೊವಿಡ್​ 19, ಒಮಿಕ್ರಾನ್​ ಸೋಂಕು; ದೆಹಲಿಯಲ್ಲಿ ನಾಳೆಯಿಂದ ನೈಟ್​ ಕರ್ಫ್ಯೂ ಜಾರಿ

Published On - 2:59 pm, Wed, 29 December 21

ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ