AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Koppal Devadasi System: ಅನಾರೋಗ್ಯ ನಿವಾರಣೆಗೆ ಯುವತಿಗೆ ದೇವದಾಸಿ ಪಟ್ಟ; ಮೂವರ ಬಂಧನ

ಅನಾರೋಗ್ಯ ನಿವಾರಣೆಗೆಂದು ಕೊಪ್ಪಳ ತಾಲೂಕಿನ ಗ್ರಾಮವೊಂದರ ಯುವತಿಗೆ ಕುಟುಂಬದವರೇ ದೇವದಾಸಿ ಪಟ್ಟ ಕಟ್ಟಿದ ಅಮಾನವೀಯ ಪ್ರಕರಣ ಸಂಬಂಧ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.

Koppal Devadasi System: ಅನಾರೋಗ್ಯ ನಿವಾರಣೆಗೆ ಯುವತಿಗೆ ದೇವದಾಸಿ ಪಟ್ಟ; ಮೂವರ ಬಂಧನ
ಮುನಿರಾಬಾದ್​ ಪೊಲೀಸ್​ ಠಾಣೆ
TV9 Web
| Edited By: |

Updated on:Dec 28, 2022 | 9:25 PM

Share

ಕೊಪ್ಪಳ: ಅನಾರೋಗ್ಯ ನಿವಾರಣೆಗೆಂದು ಕೊಪ್ಪಳ (Koppal) ತಾಲೂಕಿನ ಗ್ರಾಮವೊಂದರ ಯುವತಿಗೆ ಕುಟುಂಬದವರೇ ದೇವದಾಸಿ (Devadasi) ಪಟ್ಟ ಕಟ್ಟಿದ ಅಮಾನವೀಯ ಪ್ರಕರಣ ಸಂಬಂಧ ಯುವತಿಯ ತಾಯಿ ಹುಲಿಗೆವ್ವ, ಯಮನೂರಪ್ಪ ಮುಂದಲಮನಿ ಮತ್ತು ಸಹೋದರಿ ಮುಖವ್ವಳನ್ನು ಮುನಿರಾಬಾದ್ ಪೊಲೀಸರು ಬಂಧಿಸಿದ್ದಾರೆ. ದೇವದಾಸಿ ಪಟ್ಟ ಕಟ್ಟಿದ ಕುರಿತು ಬೆಳಗ್ಗೆ ಟಿವಿ9 ವರದಿ ಮಾಡಿತ್ತು. ಟಿವಿ9 ವರದಿ ಬೆನ್ನಲ್ಲೇ ಎಚ್ಚೆತ್ತ ಪೊಲೀಸ್​ ಇಲಾಖೆ ಆರೋಪಿಗಳನ್ನು ಬಂಧಿಸಿದ್ದಾರೆ.

ಅಮಾನವೀಯ ಪ್ರಕರಣದ ಹಿನ್ನೆಲೆ

ಕೊಪ್ಪಳ ತಾಲೂಕಿನ ಗ್ರಾಮವೊಂದರ 21 ವರ್ಷದ ಯುವತಿ ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಇದಕ್ಕೆ ದೇವರ ಶಾಪವೇ ಕಾರಣ ಎಂದು ಕುಟುಂಬಸ್ಥರು ತಿಳಿಸಿದಿದ್ದರು. ಈ ಸಂಬಂಧ ದೇವದಾಸಿಯನ್ನಾಗಿ ಮಾಡಿದರೆ ಗುಣಮುಖಳಾಗುತ್ತಾಳೆ ಎಂಬ ಮೌಢ್ಯದಲ್ಲಿ ಕುಟುಂದವರು ಆಕೆಯನ್ನು ದೇವದಾಸಿಯನ್ನಾಗಿ ಮಾಡಿದ್ದಾರೆ. 7 ತಿಂಗಳ ಹಿಂದೆಯೇ ಜಿಲ್ಲೆಯ ಪ್ರಮುಖ ಹುಲಿಗೆಮ್ಮೆ ದೇವಸ್ಥಾನದಲ್ಲಿ ಯುವತಿಗೆ ಮುತ್ತು ಕಟ್ಟಿಸಲಾಗಿತ್ತು. ದೇವದಾಸಿ ಪದ್ಧತಿಯ ವಿಧಿವಿಧಾನ ಮಾಡಿಸಿರುವುದು ತಿಳಿದುಬಂದಿದೆ. ಯುವತಿಯ ನಡುವಳಿಕೆ, ವಿಚಿತ್ರ ವರ್ತನೆ ಕಂಡು ಗ್ರಾಮದ ದಲಿತ ಮುಖಂಡರು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ದೂರು ನೀಡಿದ್ದರು.

ಇದನ್ನೂ ಓದಿ: 17 ವರ್ಷದ ಬಾಲಕಿಯ ಕತ್ತು ಸೀಳಿ ಹತ್ಯೆ, ಪ್ರೇಮಿಯ ಬಂಧನ

ಖಚಿತ ಮಾಹಿತಿ‌ ಮೇರೆಗೆ ಗ್ರಾಮಕ್ಕೆ ಭೇಟಿ‌ ನೀಡಿದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಈ ವೇಳೆ, ಯುವತಿಯನ್ನು 7 ತಿಂಗಳ ಹಿಂದೆಯೇ ದೇವದಾಸಿಯನ್ನಾಗಿ ಮಾಡಿರುವ ವಿಷಯ ತಿಳಿದುಬಂದಿದೆ.

ಇದನ್ನೂ ಓದಿ: ಪ್ರೇಯಸಿಯ ಬಯಕೆ ತೀರಿಸಲು ಹೋಗಿ ಗೋವಾ ಬೀಚ್‌ನಲ್ಲಿ ಸಿಕ್ಕಿಬಿದ್ದ ಬೆಂಗಳೂರಿನ ಯುವಕ

ಯುವತಿಯನ್ನು ರಕ್ಷಣೆ ಮಾಡಲಾಗಿದ್ದು, ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ನಾಲ್ವರ ವಿರುದ್ಧ ಪ್ರಕರಣ ದಾಖಲಾಗಿತ್ತು. ಯುವತಿಯನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮಹಿಳಾ ಸಾಂತ್ವನ ಕೇಂದ್ರಕ್ಕೆ ಕಳುಹಿಸಿ ಆರೈಕೆ ಮಾಡಲಾಗುತ್ತಿದೆ. ಇದೀಗ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ ಸರ್ಕಾರಕ್ಕೆ ವರದಿ ಸಲ್ಲಿಸಿದೆ. ಸದ್ಯ ಪ್ರಕರಣ ಸಂಬಂಧ ಪೊಲೀಸರು ಮೂವರನ್ನು ಬಂಧಿಸಿದ್ದು, ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 9:23 pm, Wed, 28 December 22

ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ