AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Koppal Devadasi System: ಅನಾರೋಗ್ಯ ನಿವಾರಣೆಗೆ ಯುವತಿಗೆ ದೇವದಾಸಿ ಪಟ್ಟ; ಮೂವರ ಬಂಧನ

ಅನಾರೋಗ್ಯ ನಿವಾರಣೆಗೆಂದು ಕೊಪ್ಪಳ ತಾಲೂಕಿನ ಗ್ರಾಮವೊಂದರ ಯುವತಿಗೆ ಕುಟುಂಬದವರೇ ದೇವದಾಸಿ ಪಟ್ಟ ಕಟ್ಟಿದ ಅಮಾನವೀಯ ಪ್ರಕರಣ ಸಂಬಂಧ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.

Koppal Devadasi System: ಅನಾರೋಗ್ಯ ನಿವಾರಣೆಗೆ ಯುವತಿಗೆ ದೇವದಾಸಿ ಪಟ್ಟ; ಮೂವರ ಬಂಧನ
ಮುನಿರಾಬಾದ್​ ಪೊಲೀಸ್​ ಠಾಣೆ
TV9 Web
| Edited By: |

Updated on:Dec 28, 2022 | 9:25 PM

Share

ಕೊಪ್ಪಳ: ಅನಾರೋಗ್ಯ ನಿವಾರಣೆಗೆಂದು ಕೊಪ್ಪಳ (Koppal) ತಾಲೂಕಿನ ಗ್ರಾಮವೊಂದರ ಯುವತಿಗೆ ಕುಟುಂಬದವರೇ ದೇವದಾಸಿ (Devadasi) ಪಟ್ಟ ಕಟ್ಟಿದ ಅಮಾನವೀಯ ಪ್ರಕರಣ ಸಂಬಂಧ ಯುವತಿಯ ತಾಯಿ ಹುಲಿಗೆವ್ವ, ಯಮನೂರಪ್ಪ ಮುಂದಲಮನಿ ಮತ್ತು ಸಹೋದರಿ ಮುಖವ್ವಳನ್ನು ಮುನಿರಾಬಾದ್ ಪೊಲೀಸರು ಬಂಧಿಸಿದ್ದಾರೆ. ದೇವದಾಸಿ ಪಟ್ಟ ಕಟ್ಟಿದ ಕುರಿತು ಬೆಳಗ್ಗೆ ಟಿವಿ9 ವರದಿ ಮಾಡಿತ್ತು. ಟಿವಿ9 ವರದಿ ಬೆನ್ನಲ್ಲೇ ಎಚ್ಚೆತ್ತ ಪೊಲೀಸ್​ ಇಲಾಖೆ ಆರೋಪಿಗಳನ್ನು ಬಂಧಿಸಿದ್ದಾರೆ.

ಅಮಾನವೀಯ ಪ್ರಕರಣದ ಹಿನ್ನೆಲೆ

ಕೊಪ್ಪಳ ತಾಲೂಕಿನ ಗ್ರಾಮವೊಂದರ 21 ವರ್ಷದ ಯುವತಿ ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಇದಕ್ಕೆ ದೇವರ ಶಾಪವೇ ಕಾರಣ ಎಂದು ಕುಟುಂಬಸ್ಥರು ತಿಳಿಸಿದಿದ್ದರು. ಈ ಸಂಬಂಧ ದೇವದಾಸಿಯನ್ನಾಗಿ ಮಾಡಿದರೆ ಗುಣಮುಖಳಾಗುತ್ತಾಳೆ ಎಂಬ ಮೌಢ್ಯದಲ್ಲಿ ಕುಟುಂದವರು ಆಕೆಯನ್ನು ದೇವದಾಸಿಯನ್ನಾಗಿ ಮಾಡಿದ್ದಾರೆ. 7 ತಿಂಗಳ ಹಿಂದೆಯೇ ಜಿಲ್ಲೆಯ ಪ್ರಮುಖ ಹುಲಿಗೆಮ್ಮೆ ದೇವಸ್ಥಾನದಲ್ಲಿ ಯುವತಿಗೆ ಮುತ್ತು ಕಟ್ಟಿಸಲಾಗಿತ್ತು. ದೇವದಾಸಿ ಪದ್ಧತಿಯ ವಿಧಿವಿಧಾನ ಮಾಡಿಸಿರುವುದು ತಿಳಿದುಬಂದಿದೆ. ಯುವತಿಯ ನಡುವಳಿಕೆ, ವಿಚಿತ್ರ ವರ್ತನೆ ಕಂಡು ಗ್ರಾಮದ ದಲಿತ ಮುಖಂಡರು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ದೂರು ನೀಡಿದ್ದರು.

ಇದನ್ನೂ ಓದಿ: 17 ವರ್ಷದ ಬಾಲಕಿಯ ಕತ್ತು ಸೀಳಿ ಹತ್ಯೆ, ಪ್ರೇಮಿಯ ಬಂಧನ

ಖಚಿತ ಮಾಹಿತಿ‌ ಮೇರೆಗೆ ಗ್ರಾಮಕ್ಕೆ ಭೇಟಿ‌ ನೀಡಿದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಈ ವೇಳೆ, ಯುವತಿಯನ್ನು 7 ತಿಂಗಳ ಹಿಂದೆಯೇ ದೇವದಾಸಿಯನ್ನಾಗಿ ಮಾಡಿರುವ ವಿಷಯ ತಿಳಿದುಬಂದಿದೆ.

ಇದನ್ನೂ ಓದಿ: ಪ್ರೇಯಸಿಯ ಬಯಕೆ ತೀರಿಸಲು ಹೋಗಿ ಗೋವಾ ಬೀಚ್‌ನಲ್ಲಿ ಸಿಕ್ಕಿಬಿದ್ದ ಬೆಂಗಳೂರಿನ ಯುವಕ

ಯುವತಿಯನ್ನು ರಕ್ಷಣೆ ಮಾಡಲಾಗಿದ್ದು, ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ನಾಲ್ವರ ವಿರುದ್ಧ ಪ್ರಕರಣ ದಾಖಲಾಗಿತ್ತು. ಯುವತಿಯನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮಹಿಳಾ ಸಾಂತ್ವನ ಕೇಂದ್ರಕ್ಕೆ ಕಳುಹಿಸಿ ಆರೈಕೆ ಮಾಡಲಾಗುತ್ತಿದೆ. ಇದೀಗ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ ಸರ್ಕಾರಕ್ಕೆ ವರದಿ ಸಲ್ಲಿಸಿದೆ. ಸದ್ಯ ಪ್ರಕರಣ ಸಂಬಂಧ ಪೊಲೀಸರು ಮೂವರನ್ನು ಬಂಧಿಸಿದ್ದು, ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 9:23 pm, Wed, 28 December 22

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!