AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Koppal Devadasi System: ಅನಾರೋಗ್ಯ ನಿವಾರಣೆಗೆ ಯುವತಿಗೆ ದೇವದಾಸಿ ಪಟ್ಟ; ಮೂವರ ಬಂಧನ

ಅನಾರೋಗ್ಯ ನಿವಾರಣೆಗೆಂದು ಕೊಪ್ಪಳ ತಾಲೂಕಿನ ಗ್ರಾಮವೊಂದರ ಯುವತಿಗೆ ಕುಟುಂಬದವರೇ ದೇವದಾಸಿ ಪಟ್ಟ ಕಟ್ಟಿದ ಅಮಾನವೀಯ ಪ್ರಕರಣ ಸಂಬಂಧ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.

Koppal Devadasi System: ಅನಾರೋಗ್ಯ ನಿವಾರಣೆಗೆ ಯುವತಿಗೆ ದೇವದಾಸಿ ಪಟ್ಟ; ಮೂವರ ಬಂಧನ
ಮುನಿರಾಬಾದ್​ ಪೊಲೀಸ್​ ಠಾಣೆ
TV9 Web
| Updated By: ವಿವೇಕ ಬಿರಾದಾರ|

Updated on:Dec 28, 2022 | 9:25 PM

Share

ಕೊಪ್ಪಳ: ಅನಾರೋಗ್ಯ ನಿವಾರಣೆಗೆಂದು ಕೊಪ್ಪಳ (Koppal) ತಾಲೂಕಿನ ಗ್ರಾಮವೊಂದರ ಯುವತಿಗೆ ಕುಟುಂಬದವರೇ ದೇವದಾಸಿ (Devadasi) ಪಟ್ಟ ಕಟ್ಟಿದ ಅಮಾನವೀಯ ಪ್ರಕರಣ ಸಂಬಂಧ ಯುವತಿಯ ತಾಯಿ ಹುಲಿಗೆವ್ವ, ಯಮನೂರಪ್ಪ ಮುಂದಲಮನಿ ಮತ್ತು ಸಹೋದರಿ ಮುಖವ್ವಳನ್ನು ಮುನಿರಾಬಾದ್ ಪೊಲೀಸರು ಬಂಧಿಸಿದ್ದಾರೆ. ದೇವದಾಸಿ ಪಟ್ಟ ಕಟ್ಟಿದ ಕುರಿತು ಬೆಳಗ್ಗೆ ಟಿವಿ9 ವರದಿ ಮಾಡಿತ್ತು. ಟಿವಿ9 ವರದಿ ಬೆನ್ನಲ್ಲೇ ಎಚ್ಚೆತ್ತ ಪೊಲೀಸ್​ ಇಲಾಖೆ ಆರೋಪಿಗಳನ್ನು ಬಂಧಿಸಿದ್ದಾರೆ.

ಅಮಾನವೀಯ ಪ್ರಕರಣದ ಹಿನ್ನೆಲೆ

ಕೊಪ್ಪಳ ತಾಲೂಕಿನ ಗ್ರಾಮವೊಂದರ 21 ವರ್ಷದ ಯುವತಿ ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಇದಕ್ಕೆ ದೇವರ ಶಾಪವೇ ಕಾರಣ ಎಂದು ಕುಟುಂಬಸ್ಥರು ತಿಳಿಸಿದಿದ್ದರು. ಈ ಸಂಬಂಧ ದೇವದಾಸಿಯನ್ನಾಗಿ ಮಾಡಿದರೆ ಗುಣಮುಖಳಾಗುತ್ತಾಳೆ ಎಂಬ ಮೌಢ್ಯದಲ್ಲಿ ಕುಟುಂದವರು ಆಕೆಯನ್ನು ದೇವದಾಸಿಯನ್ನಾಗಿ ಮಾಡಿದ್ದಾರೆ. 7 ತಿಂಗಳ ಹಿಂದೆಯೇ ಜಿಲ್ಲೆಯ ಪ್ರಮುಖ ಹುಲಿಗೆಮ್ಮೆ ದೇವಸ್ಥಾನದಲ್ಲಿ ಯುವತಿಗೆ ಮುತ್ತು ಕಟ್ಟಿಸಲಾಗಿತ್ತು. ದೇವದಾಸಿ ಪದ್ಧತಿಯ ವಿಧಿವಿಧಾನ ಮಾಡಿಸಿರುವುದು ತಿಳಿದುಬಂದಿದೆ. ಯುವತಿಯ ನಡುವಳಿಕೆ, ವಿಚಿತ್ರ ವರ್ತನೆ ಕಂಡು ಗ್ರಾಮದ ದಲಿತ ಮುಖಂಡರು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ದೂರು ನೀಡಿದ್ದರು.

ಇದನ್ನೂ ಓದಿ: 17 ವರ್ಷದ ಬಾಲಕಿಯ ಕತ್ತು ಸೀಳಿ ಹತ್ಯೆ, ಪ್ರೇಮಿಯ ಬಂಧನ

ಖಚಿತ ಮಾಹಿತಿ‌ ಮೇರೆಗೆ ಗ್ರಾಮಕ್ಕೆ ಭೇಟಿ‌ ನೀಡಿದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಈ ವೇಳೆ, ಯುವತಿಯನ್ನು 7 ತಿಂಗಳ ಹಿಂದೆಯೇ ದೇವದಾಸಿಯನ್ನಾಗಿ ಮಾಡಿರುವ ವಿಷಯ ತಿಳಿದುಬಂದಿದೆ.

ಇದನ್ನೂ ಓದಿ: ಪ್ರೇಯಸಿಯ ಬಯಕೆ ತೀರಿಸಲು ಹೋಗಿ ಗೋವಾ ಬೀಚ್‌ನಲ್ಲಿ ಸಿಕ್ಕಿಬಿದ್ದ ಬೆಂಗಳೂರಿನ ಯುವಕ

ಯುವತಿಯನ್ನು ರಕ್ಷಣೆ ಮಾಡಲಾಗಿದ್ದು, ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ನಾಲ್ವರ ವಿರುದ್ಧ ಪ್ರಕರಣ ದಾಖಲಾಗಿತ್ತು. ಯುವತಿಯನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮಹಿಳಾ ಸಾಂತ್ವನ ಕೇಂದ್ರಕ್ಕೆ ಕಳುಹಿಸಿ ಆರೈಕೆ ಮಾಡಲಾಗುತ್ತಿದೆ. ಇದೀಗ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ ಸರ್ಕಾರಕ್ಕೆ ವರದಿ ಸಲ್ಲಿಸಿದೆ. ಸದ್ಯ ಪ್ರಕರಣ ಸಂಬಂಧ ಪೊಲೀಸರು ಮೂವರನ್ನು ಬಂಧಿಸಿದ್ದು, ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 9:23 pm, Wed, 28 December 22

ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ