AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Koppal Devadasi System: ಅನಾರೋಗ್ಯ ನಿವಾರಣೆಗೆ ಯುವತಿಗೆ ದೇವದಾಸಿ ಪಟ್ಟ; ಮೂವರ ಬಂಧನ

ಅನಾರೋಗ್ಯ ನಿವಾರಣೆಗೆಂದು ಕೊಪ್ಪಳ ತಾಲೂಕಿನ ಗ್ರಾಮವೊಂದರ ಯುವತಿಗೆ ಕುಟುಂಬದವರೇ ದೇವದಾಸಿ ಪಟ್ಟ ಕಟ್ಟಿದ ಅಮಾನವೀಯ ಪ್ರಕರಣ ಸಂಬಂಧ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.

Koppal Devadasi System: ಅನಾರೋಗ್ಯ ನಿವಾರಣೆಗೆ ಯುವತಿಗೆ ದೇವದಾಸಿ ಪಟ್ಟ; ಮೂವರ ಬಂಧನ
ಮುನಿರಾಬಾದ್​ ಪೊಲೀಸ್​ ಠಾಣೆ
TV9 Web
| Edited By: ವಿವೇಕ ಬಿರಾದಾರ|

Updated on:Dec 28, 2022 | 9:25 PM

Share

ಕೊಪ್ಪಳ: ಅನಾರೋಗ್ಯ ನಿವಾರಣೆಗೆಂದು ಕೊಪ್ಪಳ (Koppal) ತಾಲೂಕಿನ ಗ್ರಾಮವೊಂದರ ಯುವತಿಗೆ ಕುಟುಂಬದವರೇ ದೇವದಾಸಿ (Devadasi) ಪಟ್ಟ ಕಟ್ಟಿದ ಅಮಾನವೀಯ ಪ್ರಕರಣ ಸಂಬಂಧ ಯುವತಿಯ ತಾಯಿ ಹುಲಿಗೆವ್ವ, ಯಮನೂರಪ್ಪ ಮುಂದಲಮನಿ ಮತ್ತು ಸಹೋದರಿ ಮುಖವ್ವಳನ್ನು ಮುನಿರಾಬಾದ್ ಪೊಲೀಸರು ಬಂಧಿಸಿದ್ದಾರೆ. ದೇವದಾಸಿ ಪಟ್ಟ ಕಟ್ಟಿದ ಕುರಿತು ಬೆಳಗ್ಗೆ ಟಿವಿ9 ವರದಿ ಮಾಡಿತ್ತು. ಟಿವಿ9 ವರದಿ ಬೆನ್ನಲ್ಲೇ ಎಚ್ಚೆತ್ತ ಪೊಲೀಸ್​ ಇಲಾಖೆ ಆರೋಪಿಗಳನ್ನು ಬಂಧಿಸಿದ್ದಾರೆ.

ಅಮಾನವೀಯ ಪ್ರಕರಣದ ಹಿನ್ನೆಲೆ

ಕೊಪ್ಪಳ ತಾಲೂಕಿನ ಗ್ರಾಮವೊಂದರ 21 ವರ್ಷದ ಯುವತಿ ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಇದಕ್ಕೆ ದೇವರ ಶಾಪವೇ ಕಾರಣ ಎಂದು ಕುಟುಂಬಸ್ಥರು ತಿಳಿಸಿದಿದ್ದರು. ಈ ಸಂಬಂಧ ದೇವದಾಸಿಯನ್ನಾಗಿ ಮಾಡಿದರೆ ಗುಣಮುಖಳಾಗುತ್ತಾಳೆ ಎಂಬ ಮೌಢ್ಯದಲ್ಲಿ ಕುಟುಂದವರು ಆಕೆಯನ್ನು ದೇವದಾಸಿಯನ್ನಾಗಿ ಮಾಡಿದ್ದಾರೆ. 7 ತಿಂಗಳ ಹಿಂದೆಯೇ ಜಿಲ್ಲೆಯ ಪ್ರಮುಖ ಹುಲಿಗೆಮ್ಮೆ ದೇವಸ್ಥಾನದಲ್ಲಿ ಯುವತಿಗೆ ಮುತ್ತು ಕಟ್ಟಿಸಲಾಗಿತ್ತು. ದೇವದಾಸಿ ಪದ್ಧತಿಯ ವಿಧಿವಿಧಾನ ಮಾಡಿಸಿರುವುದು ತಿಳಿದುಬಂದಿದೆ. ಯುವತಿಯ ನಡುವಳಿಕೆ, ವಿಚಿತ್ರ ವರ್ತನೆ ಕಂಡು ಗ್ರಾಮದ ದಲಿತ ಮುಖಂಡರು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ದೂರು ನೀಡಿದ್ದರು.

ಇದನ್ನೂ ಓದಿ: 17 ವರ್ಷದ ಬಾಲಕಿಯ ಕತ್ತು ಸೀಳಿ ಹತ್ಯೆ, ಪ್ರೇಮಿಯ ಬಂಧನ

ಖಚಿತ ಮಾಹಿತಿ‌ ಮೇರೆಗೆ ಗ್ರಾಮಕ್ಕೆ ಭೇಟಿ‌ ನೀಡಿದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಈ ವೇಳೆ, ಯುವತಿಯನ್ನು 7 ತಿಂಗಳ ಹಿಂದೆಯೇ ದೇವದಾಸಿಯನ್ನಾಗಿ ಮಾಡಿರುವ ವಿಷಯ ತಿಳಿದುಬಂದಿದೆ.

ಇದನ್ನೂ ಓದಿ: ಪ್ರೇಯಸಿಯ ಬಯಕೆ ತೀರಿಸಲು ಹೋಗಿ ಗೋವಾ ಬೀಚ್‌ನಲ್ಲಿ ಸಿಕ್ಕಿಬಿದ್ದ ಬೆಂಗಳೂರಿನ ಯುವಕ

ಯುವತಿಯನ್ನು ರಕ್ಷಣೆ ಮಾಡಲಾಗಿದ್ದು, ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ನಾಲ್ವರ ವಿರುದ್ಧ ಪ್ರಕರಣ ದಾಖಲಾಗಿತ್ತು. ಯುವತಿಯನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮಹಿಳಾ ಸಾಂತ್ವನ ಕೇಂದ್ರಕ್ಕೆ ಕಳುಹಿಸಿ ಆರೈಕೆ ಮಾಡಲಾಗುತ್ತಿದೆ. ಇದೀಗ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ ಸರ್ಕಾರಕ್ಕೆ ವರದಿ ಸಲ್ಲಿಸಿದೆ. ಸದ್ಯ ಪ್ರಕರಣ ಸಂಬಂಧ ಪೊಲೀಸರು ಮೂವರನ್ನು ಬಂಧಿಸಿದ್ದು, ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 9:23 pm, Wed, 28 December 22

Follow Us
TV9 Web
TV9 Web

TV9 Kannada

Read More
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!