AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Anjanadri Betta: 105 ಕೆಜಿ ಅಕ್ಕಿ ಚೀಲ ಹೊತ್ತು ಅಂಜನಾದ್ರಿ ಬೆಟ್ಟ ಏರಿ ಸಾಹಸ ಮೆರೆದ ಹನುಮಂತಪ್ಪ

ಹನುಮ ಭಕ್ತರೊಬ್ಬರು 105 ಕೆಜಿಯ ಅಕ್ಕಿ ಚೀಲ ಹೊತ್ತು ಅಂಜನಾದ್ರಿ ಬೆಟ್ಟ (Anjanadri Temple) ಸಾಹಸ ಮೆರೆದಿದ್ದಾರೆ.

Anjanadri Betta: 105 ಕೆಜಿ ಅಕ್ಕಿ ಚೀಲ ಹೊತ್ತು ಅಂಜನಾದ್ರಿ ಬೆಟ್ಟ ಏರಿ ಸಾಹಸ ಮೆರೆದ ಹನುಮಂತಪ್ಪ
Follow us
ರಮೇಶ್ ಬಿ. ಜವಳಗೇರಾ
|

Updated on: Apr 02, 2023 | 12:17 PM

ಕೊಪ್ಪಳ: ರಾಮ ನವಮಿಯ ದಿನ (Ram Navami) 46 ವರ್ಷದ ವ್ಯಕ್ತಿ ರಾಯಪ್ಪ ದಪೇದಾರ್ ಎನ್ನುವರು 101 ಕೆಜಿಯ ಜೋಳದ ಚೀಲ ಹೊತ್ತು ಅಂಜನಾದ್ರಿ ಬೆಟ್ಟ (anjanadri betta) ಏರಿ ಸಾಹಸ ಮೆರೆದಿದ್ದರು. ಇದರ ಬೆನ್ನಲ್ಲೇ ಇದೀಗ ಮತ್ತೋರ್ವ ಆಂಜನೇಯ ಭಕ್ತರೊಬ್ಬರು 105 ಕೆಜಿಯ ಅಕ್ಕಿ ಚೀಲ ಹೊತ್ತು ಅಂಜನಾದ್ರಿ ಬೆಟ್ಟ ಹತ್ತಿದ್ದಾರೆ. ಹೌದು.. ಕೊಪ್ಪಳ(Koppal) ಜಿಲ್ಲೆಯ ಯಲಬುರ್ಗಾ ತಾಲ್ಲೂಕಿನ ಹಿರೇಮ್ಯಾಗೇರಿ ಗ್ರಾಮದ 34 ವರ್ಷದ ಹನುಮಂತಪ್ಪ ಪೂಜಾರ ಎಂಬ ಯುವಕ ಭಾನುವಾರ 105 ಕೆ.ಜಿ. ತೂಕದ ಅಕ್ಕಿ ಚೀಲ ಹೊತ್ತು ಅಂಜನಾದ್ರಿ ಬೆಟ್ಟ ಏರಿದ್ದಾರೆ. ಬೆಳಿಗ್ಗೆ 6 ಗಂಟೆಗೆ ಬೆಟ್ಟ ಏರುವುದನ್ನು ಆರಂಭಿಸಿ 50 ನಿಮಿಷಗಳಲ್ಲಿ 575 ಮೆಟ್ಟಿಲುಗಳನ್ನು ಹತ್ತಿ ಎಲ್ಲರ ಗಮನ ಸೆಳೆದಿದ್ದಾರೆ.

ಇದನ್ನೂ ಓದಿ: ಕೊಪ್ಪಳ: ಹನುಮಮಾಲೆ ಧರಿಸಿದ ಕಾಂಗ್ರೆಸ್​​ ಅಭ್ಯರ್ಥಿ ಶಿವರಾಜ್​​ ತಂಗಡಗಿ, ಚುನಾವಣೆ ಹೊಸ್ತಿಲಲ್ಲಿ ಆಂಜನೇಯನ ಜಪ

ಸಾಮನ್ಯವಾಗಿ ಅಂಜನಾದ್ರಿ ಬೆಟ್ಟ ಹತ್ತುವುದಕ್ಕೆ ಜನ ಕಷ್ಟ ಪಡುತ್ತಅರೆ. ಯಾಕೆಂದ್ರೆ ಸುಮಾರು 575 ಮೆಟ್ಟಿಲುಗಳು ಇವೆ. ಈ ಬಿರು ಬೇಸಿಗೆಯಲ್ಲಿ ಅಂಜನಾದ್ರಿ ಬೆಟ್ಟ ಹತ್ತುವುದು ಸಮಾನ್ಯ ಮಾತಲ್ಲ. ಆದ್ರೇ ಈ ಯುವಕ ಒಂದು ಕ್ವಿಂಟಾಲ್ ಚೀಲವನ್ನ ಬೆನ್ನ ಮೇಲೆ ಹೊತ್ತುಕೊಂಡು ಹತ್ತಿ ಎಲ್ಲರ ನಿಬ್ಬೇರಗಾಗುವಂತೆ ಮಾಡಿದ್ದಾನೆ. ಮೊನ್ನೇ ರಾಮ ನವಮಿಯ ದಿನ ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲೂಕು ಹುನ್ನೂರು ಗ್ರಾಮದ ರಾಯಪ್ಪ ದಫೇದಾರ ಎಂಬುವರು 101 ಕೆ.ಜಿ. ತೂಕದ ಜೋಳದ ಚೀಲ ಹೊತ್ತು ಅಂಜನಾದ್ರಿ ಬೆಟ್ಟ ಹತ್ತಿದ್ದರು. ಇದೀಗ ಹನುಮಂತಪ್ಪ ಪೂಜಾರ,ರಾಯಪ್ಪ ಅವರಿಗಿಂತ 4 ಕೆಜಿ ಹೆಚ್ಚಿರುವ ಅಕ್ಕಿ ಚೀಲ ಹೊತ್ತುಕೊಂಡು ಹೋಗಿದ್ದಾರೆ.

ಕುರಿಗಾಹಿಯಾಗಿರುವ ಹನುಮಂತಪ್ಪ ಪೂಜಾರ

ಆಂಜನೇಯನ ದರ್ಶನ ಪಡೆಯಬೇಕು ಎಂದು ಹಲವು ವರ್ಷಗಳಿಂದ ಕಾಯುತ್ತಿದ್ದರು. ಮೊದಲ ಬಾರಿಗೆ ಬೆಟ್ಟ ಹತ್ತಿದ‌ ನೆನಪನ್ನು ಸ್ಮರಣೀಯವಾಗಿರಿಸಬೇಕು ಎನ್ನುವ ಕಾರಣಕ್ಕೆ ಅಕ್ಕಿ‌ಚೀಲ ಹೊತ್ತು ಹತ್ತಲು ನಿರ್ಧರಿಸಿದ್ದರು. ಚೀಲ ಹೊತ್ತು ಬೆಟ್ಟ ಹತ್ತಬೇಕು ಎನ್ನುವ ಬಹಳ ದಿನಗಳ ಕನಸು ಈಗ ಈಡೇರಿದೆ. ನನ್ನ ಆಸೆಗೆ ಊರಿನ ಸ್ನೇಹಿತರು ನೆರವಾದರು. ಬಿಸಿಲು ಹೆಚ್ಚಾಗುವ ಮೊದಲೇ ಬೆಟ್ಟ ಹತ್ತಿ ಇಳಿಯಬೇಕು ಎಂದು ನಿರ್ಧರಿಸಿದ್ದೆ. ಅಂದುಕೊಂಡಂತೆ ಮಾಡಿದ್ದಕ್ಕೆ ಖುಷಿಯಾಗಿದೆ ಎಂದು ಹನುಮಂತಪ್ಪ ಜೊತೆ ಅನಿಸಿಕೆ ಹಂಚಿಕೊಂಡಿದ್ದಾರೆ.

ಕಳೆದ ವಾರ ಜಮಖಂಡಿ ತಾಲ್ಲೂಕಿನ ಹುನ್ನೂರು ಗ್ರಾಮದ ರಾಯಪ್ಪ ದಫೇದಾರ ಎಂಬುವರು 101 ಕೆ.ಜಿ. ತೂಕದ ಜೋಳದ ಚೀಲ ಹೊತ್ತು ಬೆಟ್ಟ ಹತ್ತಿ ಗಮನ ಸೆಳೆದಿದ್ದರು. ಈಗ ಹನುಮಂತಪ್ಪ ಪೂಜಾರ 105 ಕೆ.ಜಿ ಅಕ್ಕಿಚೀಲ ಹೊತ್ತುಕೊಂಡು 575 ಮೆಟ್ಟಿಲು ಹತ್ತುವ ಮೂಲಕ ರಾಯಪ್ಪ ದಾಖಲೆ ಮುರಿದಿದ್ದಾರೆ.

ಕೊಪ್ಪಳ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಪಾಕಿಸ್ತಾನಕ್ಕೆ ಇನ್ನೂ ಹೆಚ್ಚಿನದನ್ನೇ ಮಾಡುವ ತಾಕತ್ತು ನಮಗಿತ್ತು
ಪಾಕಿಸ್ತಾನಕ್ಕೆ ಇನ್ನೂ ಹೆಚ್ಚಿನದನ್ನೇ ಮಾಡುವ ತಾಕತ್ತು ನಮಗಿತ್ತು
ಕರಾಚಿ ಏರ್​​ಪೋರ್ಟ್​ನಲ್ಲಿ ತೊಳ್ಕೊಳೋಕೂ ನೀರಿಲ್ವಂತೆ, ನಟಿ ಹೇಳಿದ್ದೇನು?
ಕರಾಚಿ ಏರ್​​ಪೋರ್ಟ್​ನಲ್ಲಿ ತೊಳ್ಕೊಳೋಕೂ ನೀರಿಲ್ವಂತೆ, ನಟಿ ಹೇಳಿದ್ದೇನು?
ವಿದ್ಯಾರ್ಥಿನಿಯ ಬದ್ಧತೆ ಕಂಡು ಸಂತೋಷ ವ್ಯಕ್ತಪಡಿಸಿದ ಕಾಲೇಜು ಪ್ರಿನ್ಸಿಪಾಲ್
ವಿದ್ಯಾರ್ಥಿನಿಯ ಬದ್ಧತೆ ಕಂಡು ಸಂತೋಷ ವ್ಯಕ್ತಪಡಿಸಿದ ಕಾಲೇಜು ಪ್ರಿನ್ಸಿಪಾಲ್
‘ಅವರು ಇದ್ದಿದ್ರೆ...’ ಅಂಬರೀಶ್ ಹುಟ್ಟುಹಬ್ಬದಂದು ಸುಮಲತಾ ಭಾವುಕ
‘ಅವರು ಇದ್ದಿದ್ರೆ...’ ಅಂಬರೀಶ್ ಹುಟ್ಟುಹಬ್ಬದಂದು ಸುಮಲತಾ ಭಾವುಕ
ಹಿಂದೂ-ಮುಸ್ಲಿಂ ಸಮುದಾಯಗಳು ಸಾಮರಸ್ಯದಿಂದ ಬದುಕಬೇಕು: ಸಿದ್ದರಾಮಯ್ಯ
ಹಿಂದೂ-ಮುಸ್ಲಿಂ ಸಮುದಾಯಗಳು ಸಾಮರಸ್ಯದಿಂದ ಬದುಕಬೇಕು: ಸಿದ್ದರಾಮಯ್ಯ
‘ಸರಿಗಮಪ’ ವೇದಿಕೆ ಮೇಲೆ ಫಿನಾಲೆಗೂ ಮೊದಲು ವಿಶೇಷ ಕಾರ್ಯಕ್ರಮ
‘ಸರಿಗಮಪ’ ವೇದಿಕೆ ಮೇಲೆ ಫಿನಾಲೆಗೂ ಮೊದಲು ವಿಶೇಷ ಕಾರ್ಯಕ್ರಮ
ಸೋನಿಯ ಗಾಂಧಿಗೆ ಹರಿಪ್ರಸಾದ್ ಆಪ್ತರು ಎಂಬ ಕಾರಣಕ್ಕೆ ಭೇಟಿಯೇ?
ಸೋನಿಯ ಗಾಂಧಿಗೆ ಹರಿಪ್ರಸಾದ್ ಆಪ್ತರು ಎಂಬ ಕಾರಣಕ್ಕೆ ಭೇಟಿಯೇ?
ಭಾರತ ಏನು ಮಾಡಬಹುದು ಎಂದು ಪಾಕಿಸ್ತಾನಕ್ಕೆ ಈಗ ಅರ್ಥವಾಗಿರಬಹುದು
ಭಾರತ ಏನು ಮಾಡಬಹುದು ಎಂದು ಪಾಕಿಸ್ತಾನಕ್ಕೆ ಈಗ ಅರ್ಥವಾಗಿರಬಹುದು
ಒಂದೇ ವಾರದಲ್ಲಿ ಹೃದಯಾಘಾತದಿಂದ ಮೂವರ ಸಾವು; ತಜ್ಞರು ಹೇಳಿದ್ದೇನು ನೋಡಿ
ಒಂದೇ ವಾರದಲ್ಲಿ ಹೃದಯಾಘಾತದಿಂದ ಮೂವರ ಸಾವು; ತಜ್ಞರು ಹೇಳಿದ್ದೇನು ನೋಡಿ
VIDEO: ಮೈದಾನದಲ್ಲೇ ಹೊಡೆದಾಟ... ಬಾಂಗ್ಲಾ ಆಟಗಾರನಿಗೆ ಪಂಚ್
VIDEO: ಮೈದಾನದಲ್ಲೇ ಹೊಡೆದಾಟ... ಬಾಂಗ್ಲಾ ಆಟಗಾರನಿಗೆ ಪಂಚ್