AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Anjanadri Betta: 105 ಕೆಜಿ ಅಕ್ಕಿ ಚೀಲ ಹೊತ್ತು ಅಂಜನಾದ್ರಿ ಬೆಟ್ಟ ಏರಿ ಸಾಹಸ ಮೆರೆದ ಹನುಮಂತಪ್ಪ

ಹನುಮ ಭಕ್ತರೊಬ್ಬರು 105 ಕೆಜಿಯ ಅಕ್ಕಿ ಚೀಲ ಹೊತ್ತು ಅಂಜನಾದ್ರಿ ಬೆಟ್ಟ (Anjanadri Temple) ಸಾಹಸ ಮೆರೆದಿದ್ದಾರೆ.

Anjanadri Betta: 105 ಕೆಜಿ ಅಕ್ಕಿ ಚೀಲ ಹೊತ್ತು ಅಂಜನಾದ್ರಿ ಬೆಟ್ಟ ಏರಿ ಸಾಹಸ ಮೆರೆದ ಹನುಮಂತಪ್ಪ
ರಮೇಶ್ ಬಿ. ಜವಳಗೇರಾ
|

Updated on: Apr 02, 2023 | 12:17 PM

Share

ಮುಖ್ಯಾಂಶಗಳು

  • 105kg ತೂಕದ‌ ಜೋಳದ ಚೀಲ‌ ಹೊತ್ತು ಅಂಜನಾದ್ರಿ ಬೆಟ್ಟ ಏರಿದ ವ್ಯಕ್ತಿ
  • 105 ಕೆಜಿ ಹೊತ್ತು 575 ಮೆಟ್ಟಿಲು ಹತ್ತಿ ಸಾಹಸ ಮೆರೆದ ಯಲಬುರ್ಗಾ ತಾಲೂಕಿನ ಹಿರೇಮ್ಯಾಗೇರಿ ಗ್ರಾಮದ ಹನುಮಂತಪ್ಪ
  • ಬೆಟ್ಟ ಏರಿದ ಹನುಮಂತಪ್ಪನ ಸಾಹಸಕ್ಕೆ ಜನರ ಮೆಚ್ಚುಗೆ

ಕೊಪ್ಪಳ: ರಾಮ ನವಮಿಯ ದಿನ (Ram Navami) 46 ವರ್ಷದ ವ್ಯಕ್ತಿ ರಾಯಪ್ಪ ದಪೇದಾರ್ ಎನ್ನುವರು 101 ಕೆಜಿಯ ಜೋಳದ ಚೀಲ ಹೊತ್ತು ಅಂಜನಾದ್ರಿ ಬೆಟ್ಟ (anjanadri betta) ಏರಿ ಸಾಹಸ ಮೆರೆದಿದ್ದರು. ಇದರ ಬೆನ್ನಲ್ಲೇ ಇದೀಗ ಮತ್ತೋರ್ವ ಆಂಜನೇಯ ಭಕ್ತರೊಬ್ಬರು 105 ಕೆಜಿಯ ಅಕ್ಕಿ ಚೀಲ ಹೊತ್ತು ಅಂಜನಾದ್ರಿ ಬೆಟ್ಟ ಹತ್ತಿದ್ದಾರೆ. ಹೌದು.. ಕೊಪ್ಪಳ(Koppal) ಜಿಲ್ಲೆಯ ಯಲಬುರ್ಗಾ ತಾಲ್ಲೂಕಿನ ಹಿರೇಮ್ಯಾಗೇರಿ ಗ್ರಾಮದ 34 ವರ್ಷದ ಹನುಮಂತಪ್ಪ ಪೂಜಾರ ಎಂಬ ಯುವಕ ಭಾನುವಾರ 105 ಕೆ.ಜಿ. ತೂಕದ ಅಕ್ಕಿ ಚೀಲ ಹೊತ್ತು ಅಂಜನಾದ್ರಿ ಬೆಟ್ಟ ಏರಿದ್ದಾರೆ. ಬೆಳಿಗ್ಗೆ 6 ಗಂಟೆಗೆ ಬೆಟ್ಟ ಏರುವುದನ್ನು ಆರಂಭಿಸಿ 50 ನಿಮಿಷಗಳಲ್ಲಿ 575 ಮೆಟ್ಟಿಲುಗಳನ್ನು ಹತ್ತಿ ಎಲ್ಲರ ಗಮನ ಸೆಳೆದಿದ್ದಾರೆ.

ಇದನ್ನೂ ಓದಿ: ಕೊಪ್ಪಳ: ಹನುಮಮಾಲೆ ಧರಿಸಿದ ಕಾಂಗ್ರೆಸ್​​ ಅಭ್ಯರ್ಥಿ ಶಿವರಾಜ್​​ ತಂಗಡಗಿ, ಚುನಾವಣೆ ಹೊಸ್ತಿಲಲ್ಲಿ ಆಂಜನೇಯನ ಜಪ

ಸಾಮನ್ಯವಾಗಿ ಅಂಜನಾದ್ರಿ ಬೆಟ್ಟ ಹತ್ತುವುದಕ್ಕೆ ಜನ ಕಷ್ಟ ಪಡುತ್ತಅರೆ. ಯಾಕೆಂದ್ರೆ ಸುಮಾರು 575 ಮೆಟ್ಟಿಲುಗಳು ಇವೆ. ಈ ಬಿರು ಬೇಸಿಗೆಯಲ್ಲಿ ಅಂಜನಾದ್ರಿ ಬೆಟ್ಟ ಹತ್ತುವುದು ಸಮಾನ್ಯ ಮಾತಲ್ಲ. ಆದ್ರೇ ಈ ಯುವಕ ಒಂದು ಕ್ವಿಂಟಾಲ್ ಚೀಲವನ್ನ ಬೆನ್ನ ಮೇಲೆ ಹೊತ್ತುಕೊಂಡು ಹತ್ತಿ ಎಲ್ಲರ ನಿಬ್ಬೇರಗಾಗುವಂತೆ ಮಾಡಿದ್ದಾನೆ. ಮೊನ್ನೇ ರಾಮ ನವಮಿಯ ದಿನ ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲೂಕು ಹುನ್ನೂರು ಗ್ರಾಮದ ರಾಯಪ್ಪ ದಫೇದಾರ ಎಂಬುವರು 101 ಕೆ.ಜಿ. ತೂಕದ ಜೋಳದ ಚೀಲ ಹೊತ್ತು ಅಂಜನಾದ್ರಿ ಬೆಟ್ಟ ಹತ್ತಿದ್ದರು. ಇದೀಗ ಹನುಮಂತಪ್ಪ ಪೂಜಾರ,ರಾಯಪ್ಪ ಅವರಿಗಿಂತ 4 ಕೆಜಿ ಹೆಚ್ಚಿರುವ ಅಕ್ಕಿ ಚೀಲ ಹೊತ್ತುಕೊಂಡು ಹೋಗಿದ್ದಾರೆ.

ಕುರಿಗಾಹಿಯಾಗಿರುವ ಹನುಮಂತಪ್ಪ ಪೂಜಾರ

ಆಂಜನೇಯನ ದರ್ಶನ ಪಡೆಯಬೇಕು ಎಂದು ಹಲವು ವರ್ಷಗಳಿಂದ ಕಾಯುತ್ತಿದ್ದರು. ಮೊದಲ ಬಾರಿಗೆ ಬೆಟ್ಟ ಹತ್ತಿದ‌ ನೆನಪನ್ನು ಸ್ಮರಣೀಯವಾಗಿರಿಸಬೇಕು ಎನ್ನುವ ಕಾರಣಕ್ಕೆ ಅಕ್ಕಿ‌ಚೀಲ ಹೊತ್ತು ಹತ್ತಲು ನಿರ್ಧರಿಸಿದ್ದರು. ಚೀಲ ಹೊತ್ತು ಬೆಟ್ಟ ಹತ್ತಬೇಕು ಎನ್ನುವ ಬಹಳ ದಿನಗಳ ಕನಸು ಈಗ ಈಡೇರಿದೆ. ನನ್ನ ಆಸೆಗೆ ಊರಿನ ಸ್ನೇಹಿತರು ನೆರವಾದರು. ಬಿಸಿಲು ಹೆಚ್ಚಾಗುವ ಮೊದಲೇ ಬೆಟ್ಟ ಹತ್ತಿ ಇಳಿಯಬೇಕು ಎಂದು ನಿರ್ಧರಿಸಿದ್ದೆ. ಅಂದುಕೊಂಡಂತೆ ಮಾಡಿದ್ದಕ್ಕೆ ಖುಷಿಯಾಗಿದೆ ಎಂದು ಹನುಮಂತಪ್ಪ ಜೊತೆ ಅನಿಸಿಕೆ ಹಂಚಿಕೊಂಡಿದ್ದಾರೆ.

ಕಳೆದ ವಾರ ಜಮಖಂಡಿ ತಾಲ್ಲೂಕಿನ ಹುನ್ನೂರು ಗ್ರಾಮದ ರಾಯಪ್ಪ ದಫೇದಾರ ಎಂಬುವರು 101 ಕೆ.ಜಿ. ತೂಕದ ಜೋಳದ ಚೀಲ ಹೊತ್ತು ಬೆಟ್ಟ ಹತ್ತಿ ಗಮನ ಸೆಳೆದಿದ್ದರು. ಈಗ ಹನುಮಂತಪ್ಪ ಪೂಜಾರ 105 ಕೆ.ಜಿ ಅಕ್ಕಿಚೀಲ ಹೊತ್ತುಕೊಂಡು 575 ಮೆಟ್ಟಿಲು ಹತ್ತುವ ಮೂಲಕ ರಾಯಪ್ಪ ದಾಖಲೆ ಮುರಿದಿದ್ದಾರೆ.

ಕೊಪ್ಪಳ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Follow Us
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ