AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS, World Cup Final: ವಿಶ್ವ ಕಪ್​ ಫೈನಲ್​ ಪಂದ್ಯ ವೀಕ್ಷಣೆಗೆ ವ್ಯವಸ್ಥೆ ಮಾಡಿ ಕ್ರೀಡಾಸ್ಫೂರ್ತಿ, ದೇಶಪ್ರೇಮ ಮೆರೆದ ಕೊಪ್ಪಳ ಜಿಲ್ಲಾಡಳಿತ! ಏನದು ವಿಶೇಷ?

ವಿಶೇಷ ಅನ್ನುವಂತೆ ಕೊಪ್ಪಳದಲ್ಲಿ ನಾಳಿನ ಪಂದ್ಯವನ್ನು ಕ್ರಿಕೆಟ್ ಪ್ರೇಮಿಗಳು ಉಚಿತವಾಗಿ ದೊಡ್ಡ ಪರದೆ ಮೇಲೆ ವೀಕ್ಷಿಸಬಹುದಾಗಿದೆ. ಕೊಪ್ಪಳ ಜಿಲ್ಲಾಡಳಿತ, ಕೊಪ್ಪಳ ಜಿಲ್ಲಾ ಪಂಚಾಯತ್​​ ಮತ್ತು ಕೊಪ್ಪಳ‌ ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಅಧಿಕಾರಿಗಳು ಇಂತಹದೊಂದು ಅವಕಾಶ ಕಲ್ಪಿಸಿದ್ದಾರೆ.

IND vs AUS, World Cup Final: ವಿಶ್ವ ಕಪ್​ ಫೈನಲ್​ ಪಂದ್ಯ ವೀಕ್ಷಣೆಗೆ ವ್ಯವಸ್ಥೆ ಮಾಡಿ ಕ್ರೀಡಾಸ್ಫೂರ್ತಿ, ದೇಶಪ್ರೇಮ ಮೆರೆದ ಕೊಪ್ಪಳ ಜಿಲ್ಲಾಡಳಿತ! ಏನದು ವಿಶೇಷ?
ಫೈನಲ್​ ಪಂದ್ಯ ವೀಕ್ಷಣೆಗೆ ವ್ಯವಸ್ಥೆ ಮಾಡಿ ಕ್ರೀಡಾಸ್ಫೂರ್ತಿ, ದೇಶಪ್ರೇಮ ಮೆರೆದ ಕೊಪ್ಪಳ ಜಿಲ್ಲಾಡಳಿತ!
ಸಂಜಯ್ಯಾ ಚಿಕ್ಕಮಠ
| Edited By: |

Updated on:Nov 18, 2023 | 12:46 PM

Share

ಕೊಪ್ಪಳ, ನವೆಂಬರ್​ 18: ನಾಳೆ ಭಾನುವಾರ ಭಾರತ ಮತ್ತು ಆಸ್ಟ್ರೇಲಿಯಾ ತಂಡದ ನಡುವೆ ‌ವಿಶ್ವ ಕಪ್ ಫೈನಲ್ ಪಂದ್ಯ (ICC world cup) ನಡೆಯಲಿದೆ. ಭಾರತ ಮೂರನೇ ಬಾರಿ ವಿಶ್ವ ಕಪ್ ಗೆಲ್ಲಲಿ ‌ ಅಂತ ದೇಶಾದ್ಯಂತ ಕ್ರಿಕೆಟ್ ಪ್ರೇಮಿಗಳು ಅದಾಗಲೇ ಪೂಜೆ, ಪುನಸ್ಕಾರ ಮಾಡಿಸುತ್ತಿದ್ದಾರೆ. ಅನೇಕರು ಭಾರತ ತಂಡಕ್ಕೆ ( Team india) ಚಿಯರ್ ಅಪ್ ಮಾಡುತ್ತಿದ್ದಾರೆ. ಇನ್ನು ನಾಳಿನ ಪಂದ್ಯವನ್ನು ದೊಡ್ಡ ಪರದೆ ಮೇಲೆ ತೋರಿಸಲು ಅನೇಕ ಹೋಟೆಲ್ ಗಳಲ್ಲಿ‌ ಸಿದ್ದತೆ ಕೂಡಾ‌ ನಡೆದಿದೆ.

ಇನ್ನೂ ವಿಶೇಷ ಅನ್ನುವಂತೆ ಕೊಪ್ಪಳ ನಗರದಲ್ಲಿ ನಾಳಿನ ಪಂದ್ಯವನ್ನು ಕ್ರಿಕೆಟ್ ಪ್ರೇಮಿಗಳು ಉಚಿತವಾಗಿ ದೊಡ್ಡ ಪರದೆ ಮೇಲೆ ವೀಕ್ಷಿಸಬಹುದಾಗಿದೆ. ಇಂತಹದೊಂದು ಅವಕಾಶ ಕಲ್ಪಿಸಿರುವುದು ಕೊಪ್ಪಳ ಜಿಲ್ಲಾಡಳಿತ, ಕೊಪ್ಪಳ ಜಿಲ್ಲಾ ಪಂಚಾಯತ್​​ ಮತ್ತು ಕೊಪ್ಪಳ‌ ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಅಧಿಕಾರಿಗಳು (Koppal district administration).

ಕೊಪ್ಪಳ‌ ನಗರದ ತಾಲೂಕು ಕ್ರೀಡಾಂಗಣದಲ್ಲಿ ನಾಳಿನ ಪಂದ್ಯದ ನೇರ ಪ್ರಸಾರ ಮಾಡಲು‌ ಇಲಾಖೆ ಸಿದ್ದತೆ ಮಾಡಿಕೊಳ್ಳುತ್ತಿದೆ. 8×12 ಅಡಿಯ ಬೃಹತ್ ಎಲ್ ಸಿ ಡಿ‌ ಸ್ಕ್ರೀನ್ ಅಳವಡಿಸಲಾಗುತ್ತಿದ್ದು, ಸೌಂಡ್ ಸಿಸ್ಟಮ್ ವ್ಯವಸ್ಥೆ ಯನ್ನು ಕೂಡಾ ಮಾಡಲಾಗುತ್ತದೆ. ಕ್ರಿಕೆಟ್ ಪ್ರೇಮಿಗಳು ಕುಳಿತು ಪಂದ್ಯ ವೀಕ್ಷಣೆ ಮಾಡಲು ಬೇಕಾದ ವ್ಯವಸ್ಥೆಯನ್ನು ‌ಇಲಾಖೆಯಿಂದಲೇ ಮಾಡಲಾಗುತ್ತಿದೆ.

ದುಡ್ಡು ಕೊಟ್ಟು ಜನ ಹೋಟೆಲ್ ಗಳಿಗೆ ಹೋಗೋ ಬದಲು, ಉಚಿತವಾಗಿ ನೋಡಿ, ನಾಳಿನ ಪಂದ್ಯವನ್ನು ವೀಕ್ಷಿಸಲಿ ಅನ್ನೋ ಉದ್ದೇಶದಿಂದ ಇಲಾಖೆ ಉಚಿತ ನೇರ ಪ್ರಸಾರಕ್ಕೆ ವ್ಯವಸ್ಥೆ ಮಾಡಿಕೊಳ್ಳುತ್ತಿದೆ ಎಂದು ಯುವಜನ ಸೇವೆ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ವಿಠ್ಠಲ್‌ ಜಾಬಗೌಡರ ಟಿವಿ9 ಗೆ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: IND vs AUS, World Cup Final: ಭಾರತ ವಿಶ್ವಕಪ್ ಗೆದ್ದರೆ, ಬಿಸಿಸಿಐಗೆ ಹಣಗಳ ಸುರಿಮಳೆ: ಇದರಲ್ಲಿ ಆಟಗಾರರಿಗೆ ಎಷ್ಟು ಸಿಗುತ್ತದೆ?

ನಾಳೆ ಮಧ್ಯಾಹ್ನ 2 ರಿಂದ ಪಂದ್ಯ ಮುಗಿಯೋವರಗೆ ಕ್ರಿಕ್ರೆಟ್ ಪ್ರೇಮಿಗಳು, ಸಾರ್ವಜನಿಕರು ಉಚಿತವಾಗಿ ನಾಳಿನ ಪಂದ್ಯವನ್ನು ದೊಡ್ಡ ಪರದೆ ಮೇಲೆ ವೀಕ್ಷಿಸಿ, ಭರಪೂರ ಆನಂದಿಸಬಹುದಾಗಿದೆ.

ವರದಿ: ಸಂಜಯ್ಯಾ ಚಿಕ್ಕಮಠ, ಕೊಪ್ಪಳ

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:53 am, Sat, 18 November 23

Follow Us
Sanjayya Chikkamath
Sanjayya Chikkamath

ಸಂಜಯ್ಯಾ ಚಿಕ್ಕಮಠ. ಹುಟ್ಟಿದ್ದು ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ರಾಮನಾಳ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 14 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್ ನಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಕೊಪ್ಪಳಕ್ಕೆ ಬಂದು ನಿಂತಿದೆ. ಕೃಷಿ ನನ್ನಿಷ್ಟ.ಆದ್ರೆ ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ