IND vs AUS, World Cup Final: ವಿಶ್ವ ಕಪ್​ ಫೈನಲ್​ ಪಂದ್ಯ ವೀಕ್ಷಣೆಗೆ ವ್ಯವಸ್ಥೆ ಮಾಡಿ ಕ್ರೀಡಾಸ್ಫೂರ್ತಿ, ದೇಶಪ್ರೇಮ ಮೆರೆದ ಕೊಪ್ಪಳ ಜಿಲ್ಲಾಡಳಿತ! ಏನದು ವಿಶೇಷ?

ವಿಶೇಷ ಅನ್ನುವಂತೆ ಕೊಪ್ಪಳದಲ್ಲಿ ನಾಳಿನ ಪಂದ್ಯವನ್ನು ಕ್ರಿಕೆಟ್ ಪ್ರೇಮಿಗಳು ಉಚಿತವಾಗಿ ದೊಡ್ಡ ಪರದೆ ಮೇಲೆ ವೀಕ್ಷಿಸಬಹುದಾಗಿದೆ. ಕೊಪ್ಪಳ ಜಿಲ್ಲಾಡಳಿತ, ಕೊಪ್ಪಳ ಜಿಲ್ಲಾ ಪಂಚಾಯತ್​​ ಮತ್ತು ಕೊಪ್ಪಳ‌ ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಅಧಿಕಾರಿಗಳು ಇಂತಹದೊಂದು ಅವಕಾಶ ಕಲ್ಪಿಸಿದ್ದಾರೆ.

IND vs AUS, World Cup Final: ವಿಶ್ವ ಕಪ್​ ಫೈನಲ್​ ಪಂದ್ಯ ವೀಕ್ಷಣೆಗೆ ವ್ಯವಸ್ಥೆ ಮಾಡಿ ಕ್ರೀಡಾಸ್ಫೂರ್ತಿ, ದೇಶಪ್ರೇಮ ಮೆರೆದ ಕೊಪ್ಪಳ ಜಿಲ್ಲಾಡಳಿತ! ಏನದು ವಿಶೇಷ?
ಫೈನಲ್​ ಪಂದ್ಯ ವೀಕ್ಷಣೆಗೆ ವ್ಯವಸ್ಥೆ ಮಾಡಿ ಕ್ರೀಡಾಸ್ಫೂರ್ತಿ, ದೇಶಪ್ರೇಮ ಮೆರೆದ ಕೊಪ್ಪಳ ಜಿಲ್ಲಾಡಳಿತ!
Follow us
| Edited By: ಸಾಧು ಶ್ರೀನಾಥ್​

Updated on:Nov 18, 2023 | 12:46 PM

ಕೊಪ್ಪಳ, ನವೆಂಬರ್​ 18: ನಾಳೆ ಭಾನುವಾರ ಭಾರತ ಮತ್ತು ಆಸ್ಟ್ರೇಲಿಯಾ ತಂಡದ ನಡುವೆ ‌ವಿಶ್ವ ಕಪ್ ಫೈನಲ್ ಪಂದ್ಯ (ICC world cup) ನಡೆಯಲಿದೆ. ಭಾರತ ಮೂರನೇ ಬಾರಿ ವಿಶ್ವ ಕಪ್ ಗೆಲ್ಲಲಿ ‌ ಅಂತ ದೇಶಾದ್ಯಂತ ಕ್ರಿಕೆಟ್ ಪ್ರೇಮಿಗಳು ಅದಾಗಲೇ ಪೂಜೆ, ಪುನಸ್ಕಾರ ಮಾಡಿಸುತ್ತಿದ್ದಾರೆ. ಅನೇಕರು ಭಾರತ ತಂಡಕ್ಕೆ ( Team india) ಚಿಯರ್ ಅಪ್ ಮಾಡುತ್ತಿದ್ದಾರೆ. ಇನ್ನು ನಾಳಿನ ಪಂದ್ಯವನ್ನು ದೊಡ್ಡ ಪರದೆ ಮೇಲೆ ತೋರಿಸಲು ಅನೇಕ ಹೋಟೆಲ್ ಗಳಲ್ಲಿ‌ ಸಿದ್ದತೆ ಕೂಡಾ‌ ನಡೆದಿದೆ.

ಇನ್ನೂ ವಿಶೇಷ ಅನ್ನುವಂತೆ ಕೊಪ್ಪಳ ನಗರದಲ್ಲಿ ನಾಳಿನ ಪಂದ್ಯವನ್ನು ಕ್ರಿಕೆಟ್ ಪ್ರೇಮಿಗಳು ಉಚಿತವಾಗಿ ದೊಡ್ಡ ಪರದೆ ಮೇಲೆ ವೀಕ್ಷಿಸಬಹುದಾಗಿದೆ. ಇಂತಹದೊಂದು ಅವಕಾಶ ಕಲ್ಪಿಸಿರುವುದು ಕೊಪ್ಪಳ ಜಿಲ್ಲಾಡಳಿತ, ಕೊಪ್ಪಳ ಜಿಲ್ಲಾ ಪಂಚಾಯತ್​​ ಮತ್ತು ಕೊಪ್ಪಳ‌ ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಅಧಿಕಾರಿಗಳು (Koppal district administration).

ಕೊಪ್ಪಳ‌ ನಗರದ ತಾಲೂಕು ಕ್ರೀಡಾಂಗಣದಲ್ಲಿ ನಾಳಿನ ಪಂದ್ಯದ ನೇರ ಪ್ರಸಾರ ಮಾಡಲು‌ ಇಲಾಖೆ ಸಿದ್ದತೆ ಮಾಡಿಕೊಳ್ಳುತ್ತಿದೆ. 8×12 ಅಡಿಯ ಬೃಹತ್ ಎಲ್ ಸಿ ಡಿ‌ ಸ್ಕ್ರೀನ್ ಅಳವಡಿಸಲಾಗುತ್ತಿದ್ದು, ಸೌಂಡ್ ಸಿಸ್ಟಮ್ ವ್ಯವಸ್ಥೆ ಯನ್ನು ಕೂಡಾ ಮಾಡಲಾಗುತ್ತದೆ. ಕ್ರಿಕೆಟ್ ಪ್ರೇಮಿಗಳು ಕುಳಿತು ಪಂದ್ಯ ವೀಕ್ಷಣೆ ಮಾಡಲು ಬೇಕಾದ ವ್ಯವಸ್ಥೆಯನ್ನು ‌ಇಲಾಖೆಯಿಂದಲೇ ಮಾಡಲಾಗುತ್ತಿದೆ.

ದುಡ್ಡು ಕೊಟ್ಟು ಜನ ಹೋಟೆಲ್ ಗಳಿಗೆ ಹೋಗೋ ಬದಲು, ಉಚಿತವಾಗಿ ನೋಡಿ, ನಾಳಿನ ಪಂದ್ಯವನ್ನು ವೀಕ್ಷಿಸಲಿ ಅನ್ನೋ ಉದ್ದೇಶದಿಂದ ಇಲಾಖೆ ಉಚಿತ ನೇರ ಪ್ರಸಾರಕ್ಕೆ ವ್ಯವಸ್ಥೆ ಮಾಡಿಕೊಳ್ಳುತ್ತಿದೆ ಎಂದು ಯುವಜನ ಸೇವೆ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ವಿಠ್ಠಲ್‌ ಜಾಬಗೌಡರ ಟಿವಿ9 ಗೆ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: IND vs AUS, World Cup Final: ಭಾರತ ವಿಶ್ವಕಪ್ ಗೆದ್ದರೆ, ಬಿಸಿಸಿಐಗೆ ಹಣಗಳ ಸುರಿಮಳೆ: ಇದರಲ್ಲಿ ಆಟಗಾರರಿಗೆ ಎಷ್ಟು ಸಿಗುತ್ತದೆ?

ನಾಳೆ ಮಧ್ಯಾಹ್ನ 2 ರಿಂದ ಪಂದ್ಯ ಮುಗಿಯೋವರಗೆ ಕ್ರಿಕ್ರೆಟ್ ಪ್ರೇಮಿಗಳು, ಸಾರ್ವಜನಿಕರು ಉಚಿತವಾಗಿ ನಾಳಿನ ಪಂದ್ಯವನ್ನು ದೊಡ್ಡ ಪರದೆ ಮೇಲೆ ವೀಕ್ಷಿಸಿ, ಭರಪೂರ ಆನಂದಿಸಬಹುದಾಗಿದೆ.

ವರದಿ: ಸಂಜಯ್ಯಾ ಚಿಕ್ಕಮಠ, ಕೊಪ್ಪಳ

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:53 am, Sat, 18 November 23

ತಾಜಾ ಸುದ್ದಿ
ತಾವು ನೋಡಿದ ಕನ್ನಡ ಸಿನಿಮಾಗಳನ್ನು ಹೆಸರಿಸಿದ ಮಾಜಿ ಕ್ರಿಕೆಟಿಗ ಮುರಳೀಧರನ್
ತಾವು ನೋಡಿದ ಕನ್ನಡ ಸಿನಿಮಾಗಳನ್ನು ಹೆಸರಿಸಿದ ಮಾಜಿ ಕ್ರಿಕೆಟಿಗ ಮುರಳೀಧರನ್
ಎಸ್​ಪಿ ರೋಡ್​ನಲ್ಲಿ ರಸ್ತೆ ಗುಂಡಿ ವೀಕ್ಷಿಸಿದ ಡಿಸಿಎಂ ಡಿಕೆ ಶಿವಕುಮಾರ್​
ಎಸ್​ಪಿ ರೋಡ್​ನಲ್ಲಿ ರಸ್ತೆ ಗುಂಡಿ ವೀಕ್ಷಿಸಿದ ಡಿಸಿಎಂ ಡಿಕೆ ಶಿವಕುಮಾರ್​
ನನ್ನ ಬಯೋಪಿಕ್ ನಿರ್ಮಾಣವಾಗೋದು ಇಷ್ಟವಿರಲಿಲ್ಲ: ಮುತ್ತಯ್ಯ ಮುರಳೀಧರನ್
ನನ್ನ ಬಯೋಪಿಕ್ ನಿರ್ಮಾಣವಾಗೋದು ಇಷ್ಟವಿರಲಿಲ್ಲ: ಮುತ್ತಯ್ಯ ಮುರಳೀಧರನ್
ಬಿಗ್​ ಬಾಸ್​ ಮನೆಯಲ್ಲಿ ಗಮನ ಸೆಳೆಯುತ್ತಿದೆ ಮೈಕೆಲ್​ ಮಾತನಾಡುವ ಕನ್ನಡ
ಬಿಗ್​ ಬಾಸ್​ ಮನೆಯಲ್ಲಿ ಗಮನ ಸೆಳೆಯುತ್ತಿದೆ ಮೈಕೆಲ್​ ಮಾತನಾಡುವ ಕನ್ನಡ
ಪ್ರಧಾನಿ ನರೇಂದ್ರ ಮೋದಿಯವರ ಕೈ ಬಲಪಡಿಸಲು ಒಂದಾಗಿ ಹೋರಾಟ: ಹೆಚ್ ಡಿ ದೇವೇಗೌಡ
ಪ್ರಧಾನಿ ನರೇಂದ್ರ ಮೋದಿಯವರ ಕೈ ಬಲಪಡಿಸಲು ಒಂದಾಗಿ ಹೋರಾಟ: ಹೆಚ್ ಡಿ ದೇವೇಗೌಡ
ಉಡುಪಿ: ಭಜನೆ ಹಾಡಿಗೆ ಹೆಜ್ಜೆ ಹಾಕಿದ ಗೋವು; ವಿಡಿಯೋ ವೈರಲ್​
ಉಡುಪಿ: ಭಜನೆ ಹಾಡಿಗೆ ಹೆಜ್ಜೆ ಹಾಕಿದ ಗೋವು; ವಿಡಿಯೋ ವೈರಲ್​
ಕನಕದಾಸ ಜಯಂತಿಯಲ್ಲಿ ಜನರೊಂದಿಗೆ ಡೊಳ್ಳು ಬಾರಿಸಿ ಕುಣಿದ ಸಚಿವ ಸಂತೋಷ್ ಲಾಡ್ 
ಕನಕದಾಸ ಜಯಂತಿಯಲ್ಲಿ ಜನರೊಂದಿಗೆ ಡೊಳ್ಳು ಬಾರಿಸಿ ಕುಣಿದ ಸಚಿವ ಸಂತೋಷ್ ಲಾಡ್ 
ಕಾಂಗ್ರೆಸ್ ಅಧಿಕಾರದಲ್ಲಿ ಕಾನೂನು ವ್ಯವಸ್ಥೆ ಕುಲಗೆಟ್ಟು ಹೋಗಿದೆ: ಹೆಚ್​ಡಿಕೆ
ಕಾಂಗ್ರೆಸ್ ಅಧಿಕಾರದಲ್ಲಿ ಕಾನೂನು ವ್ಯವಸ್ಥೆ ಕುಲಗೆಟ್ಟು ಹೋಗಿದೆ: ಹೆಚ್​ಡಿಕೆ
ಟಿವಿ9 ಡಿಜಿಟಲ್​ ವರದಿ ಫಲಶ್ರುತಿ: ಕಲಬುರಗಿ ಸರ್ಕಾರಿ ಶಾಲೆಯಲ್ಲೇ ಊಟ ಸಿದ್ಧ
ಟಿವಿ9 ಡಿಜಿಟಲ್​ ವರದಿ ಫಲಶ್ರುತಿ: ಕಲಬುರಗಿ ಸರ್ಕಾರಿ ಶಾಲೆಯಲ್ಲೇ ಊಟ ಸಿದ್ಧ
ಅಯೋಧ್ಯೆಯಲ್ಲಿ ಮಹಾಮೃತ್ಯುಂಜಯ ಹೋಮ ಮಾಡಿದ ಕರ್ನಾಟಕ ತಂಡ
ಅಯೋಧ್ಯೆಯಲ್ಲಿ ಮಹಾಮೃತ್ಯುಂಜಯ ಹೋಮ ಮಾಡಿದ ಕರ್ನಾಟಕ ತಂಡ