AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನಧಿಕೃತ ರೆಸಾರ್ಟ್ ತೆರವು ಮಾಡದಿದ್ದರೆ ನೀವೇ ಹೊಣೆ; 4 ಅಧಿಕಾರಿಗಳಿಗೆ ಕೊಪ್ಪಳ ಡಿಸಿ ನೋಟಿಸ್

ಹಂಪಿ ಪರಂಪರೆ ಪ್ರದೇಶ ವ್ಯಾಪ್ತಿಗೆ ಒಳಪಡುವ ಕೊಪ್ಪಳದ ಗಂಗಾವತಿ ತಾಲೂಕಿನ ವಿರೂಪಾಪೂರ ಗಡ್ಡಿಯಲ್ಲಿದ್ದ ಅಕ್ರಮ ರೆಸಾರ್ಟ್​ಗಳು ಕಳೆದ 2 ವರ್ಷದ ಹಿಂದೆ ನೆಲಸಮ ಆಗಿದ್ದವು.

ಅನಧಿಕೃತ ರೆಸಾರ್ಟ್ ತೆರವು ಮಾಡದಿದ್ದರೆ ನೀವೇ ಹೊಣೆ; 4 ಅಧಿಕಾರಿಗಳಿಗೆ ಕೊಪ್ಪಳ ಡಿಸಿ ನೋಟಿಸ್
ರೆಸಾರ್ಟ್​ಗಳು
TV9 Web
| Edited By: sandhya thejappa|

Updated on:Oct 02, 2021 | 10:56 AM

Share

ಕೊಪ್ಪಳ: ಸುಪ್ರೀಂಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಹಂಪಿ ಪಕ್ಕದ ವಿರೂಪಾಪೂರ ಗಡ್ಡಿಯ ಅಕ್ರಮ ರೆಸಾರ್ಟ್​ಗಳನ್ನು ಕೊಪ್ಪಳ ಜಿಲ್ಲಾಡಳಿತ ನೆಲಸಮ ಮಾಡಿತ್ತು. ಇದರ ಬೆನ್ನಲ್ಲೇ ರೆಸಾರ್ಟ್ ಮಾಲೀಕರು ಪಟ್ಟಾ ಭೂಮಿಯಲ್ಲಿ ಅನಧಿಕೃತವಾಗಿ ರೆಸಾರ್ಟ್ ನಿರ್ಮಾಣ ಮಾಡಿರುವ ಆರೋಪ ಈಗ ಮತ್ತೆ ಕೇಳಿ ಬಂದಿದೆ. ಇದಕ್ಕೂ ಕೊಪ್ಪಳ ಜಿಲ್ಲಾಡಳಿತ ಬ್ರೇಕ್ ಹಾಕಲು ಮುಂದಾಗಿದೆ. ವಿಶ್ವ ಪಾರಂಪರಿಕ ತಾಣಗಳ ಪಟ್ಟಿಯ ಹಂಪಿ ಪ್ರದೇಶ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ತಲೆ ಎತ್ತಿರುವ ರೆಸಾರ್ಟ್​ಗಳನ್ನು ತೆರವು ಮಾಡಿ. ಇಲ್ಲದಿದ್ದರೆ ಅದಕ್ಕೆ ನೀವೇ ಹೊಣೆಗಾರರಾಗಿ ಎಂದು ಕೊಪ್ಪಳ ಜಿಲ್ಲಾಧಿಕಾರಿ ಎಸ್.ವಿಕಾಸ ಕಿಶೋರ ಅವರು ನೋಟಿಸ್ ನೀಡಿದ್ದಾರೆ.

ಹಂಪಿ ಪರಂಪರೆ ಪ್ರದೇಶ ವ್ಯಾಪ್ತಿಗೆ ಒಳಪಡುವ ಕೊಪ್ಪಳದ ಗಂಗಾವತಿ ತಾಲೂಕಿನ ವಿರೂಪಾಪೂರ ಗಡ್ಡಿಯಲ್ಲಿದ್ದ ಅಕ್ರಮ ರೆಸಾರ್ಟ್​ಗಳು ಕಳೆದ 2 ವರ್ಷದ ಹಿಂದೆ ನೆಲಸಮ ಆಗಿದ್ದವು. ಸುಪ್ರೀಂ ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಕೊಪ್ಪಳ ಜಿಲ್ಲಾಡಳಿತ ಇಲ್ಲಿನ ರೆಸಾರ್ಟ್​ಗಳನ್ನು ತೆರವು ಮಾಡಿತ್ತು. ವಿರೂಪಾಪೂರ ಗಡ್ಡಿಯಲ್ಲಿನ ರೆಸಾರ್ಟ್ ನೆಲಸಮ ಆದ ನಂತರ ಗಂಗಾವತಿ ತಾಲೂಕಿನ ಆನೇಗೊಂದಿ, ಹನುಮನಹಳ್ಳಿ, ಜಂಗ್ಲಿ, ಸಣಾಪೂರ, ರಂಗಾಪೂರ, ಗಡ್ಡಿ, ಪಂಪಾ ಸರೋವರ ಸುತ್ತಮುತ್ತ ಪಟ್ಟಾ ಭೂಮಿಯಲ್ಲಿ ಮತ್ತೆ ಅಕ್ರಮವಾಗಿ ರೆಸಾರ್ಟ್​ಗಳು ತಲೆ ಎತ್ತುತ್ತಿವೆ. ಈ ಕಾರಣಕ್ಕೆ ಕೊಪ್ಪಳ ಜಿಲ್ಲಾಧಿಕಾರಿ ಎಸ್.ವಿಕಾಸ ಕಿಶೋರ್ ಅವರು ಹೊಸಪೇಟೆಯ ಹಂಪಿ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರು, ಕೊಪ್ಪಳ ಉಪ ವಿಭಾಗಾಧಿಕಾರಿ, ಗಂಗಾವತಿಯ ತಹಶೀಲ್ದಾರ್ ಮತ್ತು ತಾಲೂಕು ಪಂಚಾಯತ್ ಇಒಗೆ ನೋಟಿಸ್ ನೀಡಿದ್ದಾರೆ.

ಕೋರ್ಟ್ ನಿರ್ದೇಶನದಂತೆ ಹಂಪಿ ಪ್ರದೇಶ ವ್ಯಾಪ್ತಿಗೆ ಒಳಪಡುವ 15 ಗ್ರಾಮಗಳಲ್ಲಿ ಮಾಸ್ಟರ್ ಪ್ಲಾನ್ ರೆಡಿ ಆಗುತ್ತಿದೆ. ಅಂದರೆ ಯಾವ ಜಾಗದಲ್ಲಿ ಎಂಥ ಕಟ್ಟಡ ನಿರ್ಮಿಸಬಹುದು ಎಂಬುದರ ಚಿಂತನೆ ನಡೆಯುತ್ತಿದೆ. ಆದರೆ ಕೆಲ ಪ್ರಭಾವಿಗಳು ಈಗಾಗಲೇ ಪಟ್ಟಾ ಭೂಮಿಯಲ್ಲಿ ಅನಧಿಕೃತವಾಗಿ ರೆಸಾರ್ಟ್ ನಿರ್ಮಿಸಿದ್ದಾರೆ. ಭೂಮಿ ಎನ್ಎ ಮಾಡಿಲ್ಲ. ಜೊತೆಗೆ ಸ್ಥಳೀಯ ಸಂಸ್ಥೆಗಳ ಪರವಾನಗಿ ಇಲ್ಲದೇ ರೆಸಾರ್ಟ್ ನಿರ್ಮಾಣ ಮಾಡುತ್ತಿದ್ದಾರೆ. ವಿರೂಪಾಪೂರ ಗಡ್ಡಿಯಲ್ಲಿದ್ದ ರೆಸಾರ್ಟ್ ತೆರವಿನ ನಂತರ ಎಲ್ಲಂದರಲ್ಲಿ ರೆಸಾರ್ಟ್ ತಲೆ ಎತ್ತುತ್ತಿದ್ದು, ಇದಕ್ಕೆ ಕಡಿವಾಣ ಹಾಕಬೇಕು ಎಂಬ ದೂರು ಕೇಳಿ ಬಂದಿದೆ. ನೆರೆ ರಾಜ್ಯ ಮತ್ತು ವಿದೇಶಿ ಪ್ರವಾಸಿಗರಿಗಾಗಿಯೇ ತಲೆ ಎತ್ತುವ ರೆಸಾರ್ಟ್​ಗಳು ಅಕ್ರಮ ಚಟುವಟಿಕೆ ತಾಣವಾಗಿವೆ ಎಂಬ ಆರೋಪ ಕೂಡ ಮೊದಲಿಂದಲೂ ಕೇಳಿ ಬಂದಿದೆ. ಈ ಬಗ್ಗೆ ಸಂಬಂಧಿಸಿದ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕಿದೆ.

ಇದನ್ನೂ ಓದಿ

Death Note: ಯಾರಿಂದಲೂ ಸಹಾಯ ದೊರೆಯಲಿಲ್ಲ; ಇಂತ ಕೆಟ್ಟ ಪ್ರಪಂಚದಲ್ಲಿ ಬದುಕೋದು ಹೇಗೆ ಎಂಬ ಪ್ರಶ್ನೆಗೆ ನಮ್ಮ ಸಾವೇ ಉತ್ತರ!

‘ಆ ನಟನಿಗೆ ಕೆಟ್ಟ ಸಾವು ಬರುತ್ತೆ’; ಪೊಸಾನಿಗೆ ಬಂಡ್ಲ ಗಣೇಶ್​ ಶಾಪ: ಪವನ್​ ಕಲ್ಯಾಣ್​ ಬಗ್ಗೆ ಮಾತಾಡಿದ್ದೇ ತಪ್ಪಾಯ್ತು

Published On - 10:35 am, Sat, 2 October 21

Follow Us
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ