AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಪ್ಪಳ ಜಿಲ್ಲೆ ಮುನಿರಾಬಾದ್ ಪೊಲೀಸರ ಕಾರ್ಯಚರಣೆ: 8,5 ಲಕ್ಷ ಮೌಲ್ಯದ ಅಕ್ಕಿ ಮತ್ತು ಕಾರು ಜಪ್ತಿ

ಮುನಿರಾಬಾದ್ ಪೊಲೀಸರ ಕಾರ್ಯಚರಣೆಯಿಂದ 8,5 ಲಕ್ಷ ಮೌಲ್ಯದ 154 ಕ್ವಿಂಟಾಲ್ ಅಕ್ಕಿ ಮತ್ತು ಕಾರು ಜಪ್ತಿ ಮಾಡಿದ್ದಾರೆ. ಕೊಪ್ಪಳ ತಾಲೂಕಿನ ಬೂದಗುಂಪಾ ಕ್ರಾಸ್ ಬಳಿ ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿ ಜಪ್ತಿ ಮಾಡಲಾಗಿದೆ.

ಕೊಪ್ಪಳ ಜಿಲ್ಲೆ ಮುನಿರಾಬಾದ್ ಪೊಲೀಸರ ಕಾರ್ಯಚರಣೆ: 8,5 ಲಕ್ಷ ಮೌಲ್ಯದ ಅಕ್ಕಿ ಮತ್ತು ಕಾರು ಜಪ್ತಿ
ಅಕ್ಕಿ ಮತ್ತು ಕಾರು ಜಪ್ತಿ
ಗಂಗಾಧರ​ ಬ. ಸಾಬೋಜಿ
|

Updated on:Mar 18, 2023 | 6:11 PM

Share

ಕೊಪ್ಪಳ: ಜಿಲ್ಲೆಯ ಮುನಿರಾಬಾದ್ ಪೊಲೀಸರ ಕಾರ್ಯಚರಣೆಯಿಂದ 8,5 ಲಕ್ಷ ಮೌಲ್ಯದ 154 ಕ್ವಿಂಟಾಲ್ ಅಕ್ಕಿ ಮತ್ತು ಕಾರು ಜಪ್ತಿ (seize) ಮಾಡಿದ್ದಾರೆ. ಕೊಪ್ಪಳ ತಾಲೂಕಿನ ಬೂದಗುಂಪಾ ಕ್ರಾಸ್ ಬಳಿ ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿ ಜಪ್ತಿ ಮಾಡಲಾಗಿದೆ. ಪ್ರಕಣದಲ್ಲಿ ಭಾಗಿಯಾಗಿದ್ದ ಮೂವರನ್ನು ಬಂಧಿಸಲಾಗಿದೆ. ಪ್ರಶಾಂತ ಮಣ್ಣೂರು, ಗೌತಮ ಬಳಗಾನೂರ, ಮೂಕಪ್ಪ ಹೊಗಾರ ಬಂಧಿತರು. ಮುನಿರಾಬಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. ಮತ್ತೊಂದು ಪ್ರಕರಣದಲ್ಲಿ ಸ್ವತಂತ್ರ್ಯ ಅಭ್ಯರ್ಥಿಯ ಭಾವಚಿತ್ರ ಹೊಂದಿದ ದಿನಸಿ ವಸ್ತುಗಳನ್ನು ಪೊಲೀಸರು ಸೀಜ್​ ಮಾಡಿದ್ದಾರೆ. ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪತ್ತೆ ಆಗಿದೆ. ಗೌರಿಬಿದನೂರು ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಕೆಂಪರಾಜು ಭಾವಚಿತ್ರ ಹೊಂದಿದ್ದ ದಿನಸಿ ಕಿಟ್​ಗಳನ್ನು ವಶಕ್ಕೆ ಪಡೆಯಲಾಗಿದೆ. ಯುಗಾದಿ ಹಬ್ಬದ ಪ್ರಯುಕ್ತ ದಿನಸಿ ನೀಡಲೆಂದು ಕಿಟ್​ಗಳನ್ನು ಇಡಲಾಗಿದೆ ಎನ್ನಲಾಗಿದೆ. ಗೋದಿ ಹಿಟ್ಟು, ಮೈದಾ ಹಿಟ್ಟು, ಕಡಲೇ ಹಿಟ್ಟು, ರವೆ, ಉಪ್ಪು ಸೇರಿದಂತೆ ಸಾವಿರಾರು ಚೀಲಗಳನ್ನು ಮಹಾಲಕ್ಷ್ಮಿ ಲೇಔಟ್ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮತದಾರರಿಗೆ ಹಂಚಲು ತಯಾರಿಸಿದ್ದ 2900 ಕುಕ್ಕರ್​ಗಳು ಜಪ್ತಿ

ರಾಮನಗರ: ತಾಲೂಕಿನ ಕರಿಕಲ್ ದೊಡ್ಡಿ ಬಳಿಯಿರುವ ಕುಕ್ಕರ್​​ತಯಾರಿಕಾ ಕಾರ್ಖಾನೆ ಮೇಲೆ ತಹಶೀಲ್ದಾರ್​ ತೇಜಸ್ವಿನಿ ನೇತೃತ್ವದಲ್ಲಿ ದಾಳಿ ಮಾಡಿದ್ದು, 2900 ಕುಕ್ಕರ್​ಗಳನ್ನು ಜಪ್ತಿ ಮಾಡಲಾಗಿದೆ. ವಿಶ್ವಾಸ್ ವೈದ್ಯ ಎಂಬುವರಿಗೆ ಕುಕ್ಕರ್​ಗಳು ಸೇರಿದ್ದು ಎನ್ನಲಾಗುತ್ತಿದೆ. ಸವದತ್ತಿ ಯಲ್ಲಮ್ಮ ಕ್ಷೇತ್ರದ ಮತದಾರರಿಗೆ ಹಂಚಲು ಸಿದ್ಧತೆ ಮಾಡಿಕೊಳ್ಳಲಾಗಿತ್ತು ಎನ್ನಲಾಗುತ್ತಿದೆ. ಸದ್ಯ ಈ ಕುರಿತು ಇಬ್ಬರ ವಿರುದ್ಧ ಬಿಡದಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಇದನ್ನೂ ಓದಿ: ಕೋಲಾರದಲ್ಲಿ ಸಿದ್ದರಾಮಯ್ಯ ಸ್ಪರ್ಧಿಸದಿದ್ದರೆ ರಾಜಕೀಯ ನಿವೃತ್ತಿ; ಶ್ರೀನಿವಾಸಗೌಡ

ಕುಕ್ಕರ್, ಮಿಕ್ಸರ್ ಗ್ರೈಂಡರ್, ಸೀರೆಗಳನ್ನು ಹಂಚುವ ಕಾರ್ಯ ಎಲ್ಲ ಪಕ್ಷದ ಶಾಸಕರು, ನಾಯಕರು, ಉಚ್ಚಾಟಿತ ನಾಯಕರು ಶುರವಿಟ್ಟುಕೊಂಡಿದ್ದಾರೆ. ಜೆಡಿಎಸ್ ಪಕ್ಷದಿಂದ ಹೊರದೊಬ್ಬಲ್ಪಟ್ಟಿರುವ ಗುಬ್ಬಿ ಕ್ಷೇತ್ರದ ಶಾಸಕ ಎಸ್ ಆರ್ ಶ್ರೀನಿವಾಸ ಅವರು ಇತ್ತೀಚೆಗೆ ಶಿವರಾತ್ರಿಯಂದು ತಮ್ಮ ಕ್ಷೇತ್ರದಲ್ಲಿ ಕುಕ್ಕರ್​ ಹಂಚಲು ಹೋಗಿ ಮತದಾರರಿಂದ ಮಂಗಳಾರತಿ ಮಾಡಿಸಿಕೊಂಡಿದ್ದಾರೆ.

ತಲೆ ಮೇಲೆ ಹ್ಯಾಟು ಧರಿಸಿ ವಿದೇಶಿ ಮಹಿಳೆಯಂತೆ ಕಾಣುವ ಕಾರ್ಯಕರ್ತೆಯೊಬ್ಬರು ಶಾಸಕರ ಪರವಾಗಿ ಸ್ಥಳೀಯ ಕಾರ್ಯಕರ್ತರೊಂದಿಗೆ ಕುಕ್ಕರ್ ಹಂಚುತ್ತಾ ಈ ಮನೆಗೆ ಬಂದಾಗ ಅದರಲ್ಲಿ ವಾಸವಾಗಿರುವ ವ್ಯಕ್ತಿಯೊಬ್ಬರು, ತಮ್ಮ ಕಷ್ಟದ ಸಮಯದಲ್ಲಿ ನೆರವಾಗದ ಶಾಸಕ ಚುನಾವಣೆ ಸಮಯದಲ್ಲಿ ಕುಕ್ಕರ್ ಕಳಿಸಿದರೆ ಅದನ್ನು ತಗೋಬೇಕಾ? ನಮಗೇನೂ ಬೇಕಿಲ್ಲ, ನಿಮ್ಮ ಅರಿಶಿಣ ಕುಂಕುಮ ಕೂಡ ಬೇಡ ಅಂತ ಗದರುತ್ತಾ ಅಲ್ಲಿಂದ ಸಾಗಹಾಕಿದ್ದಾರೆ.

ಇದನ್ನೂ ಓದಿ: ಹಳೇ ಮೈಸೂರು ಭಾಗದಲ್ಲಿ ಹೆಚ್‌.ಡಿ.ದೇವೇಗೌಡ ರೋಡ್‌ಶೋ ರದ್ದು: ಹೆಚ್​​ಡಿ ಕುಮಾರಸ್ವಾಮಿ

ಚುನಾವಣೆ ದಿನಾಂಕ ಪ್ರಕಟವಾಗುವ ಮೊದಲೇ ಗಿಫ್ಟ್​ಗಳ ವಿತರಣೆ!

ಬೆಳಗಾವಿ: ಸ್ಟಾರ್ಟ್ ಅಪ್​ಗಳನ್ನು ಆರಂಭಿಸುವ ಯೋಚನೆಯಿರುವ ಯುವಕರು ರಾಜ್ಯ ವಿಧಾನ ಸಭಾ ಚುನಾವಣೆ ಮುಗಿಯುವವರೆಗೆ ಆ ಯೋಜನೆಯನ್ನು ಕೈಬಿಟ್ಟು ಬೆಳಗಾವಿ ಜಿಲ್ಲೆಯಲ್ಲಿ ಸೀರೆ ಮತ್ತು ಮಿಕ್ಸರ್ ಗ್ರೈಂಡರ್​ಗಳ ಸಗಟು ವ್ಯಾಪಾರ ಮಾಡುವುದರಲ್ಲಿ ಹೆಚ್ಚು ಲಾಭವಿದೆ ಅಂತ ನಮಗನಿಸುತ್ತಿದೆ. ಚುನಾವಣೆ ದಿನಾಂಕ ಇನ್ನೂ ಪ್ರಕಟಗೊಂಡಿಲ್ಲ. ಆದರೆ ಬೆಳಗಾವಿ ಗ್ರಾಮೀಣ ಮತಕ್ಷೇತ್ರದಲ್ಲಿ ರಾಷ್ಟ್ರೀಯ ಪಕ್ಷಗಳ ಸಂಭವನೀಯ ಅಭ್ಯರ್ಥಿಗಳು ಮತದಾರರನ್ನು ಓಲೈಸಿಕೊಳ್ಳಲು ಗಿಫ್ಟ್​​ ನೀಡುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 6:09 pm, Sat, 18 March 23

Follow Us
Gangadhar Saboji
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ