AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Devadasi System: ಕೊಪ್ಪಳದಲ್ಲಿ ಅಮಾನವೀಯ ಘಟನೆ; ಅನಾರೋಗ್ಯ ನಿವಾರಣೆಗೆ ಯುವತಿಗೆ ದೇವದಾಸಿ ಪಟ್ಟ

ಖಚಿತ ಮಾಹಿತಿ‌ ಮೇರೆಗೆ ಗ್ರಾಮಕ್ಕೆ ಭೇಟಿ‌ ನೀಡಿದ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಈ ವೇಳೆ, ಯುವತಿಯನ್ನು 7 ತಿಂಗಳ ಹಿಂದೆಯೇ ದೇವದಾಸಿಯನ್ನಾಗಿ ಮಾಡಿರುವ ವಿಷಯ ತಿಳಿದುಬಂದಿದೆ.

Devadasi System: ಕೊಪ್ಪಳದಲ್ಲಿ ಅಮಾನವೀಯ ಘಟನೆ; ಅನಾರೋಗ್ಯ ನಿವಾರಣೆಗೆ ಯುವತಿಗೆ ದೇವದಾಸಿ ಪಟ್ಟ
ಸಾಂದರ್ಭಿಕ ಚಿತ್ರ
TV9 Web
| Updated By: Digi Tech Desk|

Updated on:Dec 28, 2022 | 11:13 AM

Share

ಕೊಪ್ಪಳ: ಅನಾರೋಗ್ಯ ನಿವಾರಣೆಗೆಂದು ಯುವತಿಯೊಬ್ಬರಿಗೆ ಕುಟುಂಬದವರೇ ದೇವದಾಸಿ (Devadasi) ಪಟ್ಟ ಕಟ್ಟಿದ ಅಮಾನವೀಯ ಘಟನೆ ಕೊಪ್ಪಳದಲ್ಲಿ (Koppal) ನಡೆದಿರುವುದು ಬೆಳಕಿಗೆ ಬಂದಿದೆ. ಯುವತಿಯನ್ನು ಇದೀಗ ರಕ್ಷಣೆ ಮಾಡಲಾಗಿದ್ದು, ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ನಾಲ್ವರ ವಿರುದ್ಧ ಪ್ರಕರಣ ದಾಖಲಾಗಿದೆ. ಯುವತಿಯನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮಹಿಳಾ ಸಾಂತ್ವನ ಕೇಂದ್ರಕ್ಕೆ ಕಳುಹಿಸಲಾಗಿದ್ದು, ಆರೈಕೆ ಮಾಡಲಾಗುತ್ತಿದೆ. ಘಟನೆ ಬಗ್ಗೆ ಗ್ರಾಮದ ದಲಿತ ಮುಖಂಡರು ದೂರು ನೀಡಿ ಗಮನ ಸೆಳೆದಿದ್ದರು.

ಪ್ರಕರಣದ ಹಿನ್ನೆಲೆ

ಕೊಪ್ಪಳ ತಾಲೂಕಿನ ಗ್ರಾಮವೊಂದರ 21 ವರ್ಷದ ಯುವತಿ ಅನಾರೋಗ್ಯದಿಂದ ಬಳಲುತ್ತಿದ್ದರು. ಹಲವು ದಿನಗಳಾದರೂ ಅನಾರೋಗ್ಯ ಕಡಿಮೆಯಾಗಿರಲಿಲ್ಲ. ಇದಕ್ಕೆ ದೇವರ ಶಾಪವೇ ಕಾರಣ. ದೇವದಾಸಿಯನ್ನಾಗಿ ಮಾಡಿದರೆ ಗುಣಮುಖಳಾಗುತ್ತಾಳೆ ಎಂಬ ಮೌಢ್ಯದಲ್ಲಿ ಕುಟುಂದವರು ಆಕೆಯನ್ನು ದೇವದಾಸಿಯನ್ನಾಗಿ ಮಾಡಿದ್ದಾರೆ. 7 ತಿಂಗಳ ಹಿಂದೆಯೇ ಜಿಲ್ಲೆಯ ಪ್ರಮುಖ ದೇವಸ್ಥಾನಕ್ಕೆ ಯುವತಿಯನ್ನು ಕರೆದ್ಯೊಯ್ದ ದೇವದಾಸಿ ಪದ್ಧತಿಯ ವಿಧಿವಿಧಾನ ಮಾಡಿಸಿರುವುದು ತಿಳಿದುಬಂದಿದೆ. ಯುವತಿಯ ನಡುವಳಿಕೆ, ವಿಚಿತ್ರ ವರ್ತನೆ ಕಂಡು ಗ್ರಾಮದ ದಲಿತ ಮುಖಂಡರು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ದೂರು ನೀಡಿದ್ದರು.

ಇದನ್ನೂ ಓದಿ: ಮಾಜಿ ದೇವದಾಸಿಯರ ಮಾಸಾಶನ ಪಾವತಿಗೆ ಅನುದಾನ ಬಿಡುಗಡೆ ಮಾಡಿದ ರಾಜ್ಯ ಸರ್ಕಾರ

ಖಚಿತ ಮಾಹಿತಿ‌ ಮೇರೆಗೆ ಗ್ರಾಮಕ್ಕೆ ಭೇಟಿ‌ ನೀಡಿದ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಈ ವೇಳೆ, ಯುವತಿಯನ್ನು 7 ತಿಂಗಳ ಹಿಂದೆಯೇ ದೇವದಾಸಿಯನ್ನಾಗಿ ಮಾಡಿರುವ ವಿಷಯ ತಿಳಿದುಬಂದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 10:39 am, Wed, 28 December 22

ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ