Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಿಶ್ರತಳಿ ಹಸು ಘಟಕ ಅನುಷ್ಠಾನಕ್ಕಾಗಿ ಫಲಾನುಭವಿಗಳಿಂದ ಅರ್ಜಿ ಆಹ್ವಾನ; ಇಲ್ಲಿದೆ ವಿವರ

ಕಳೆದ 5 ವರ್ಷಗಳಲ್ಲಿ ಪಶುಪಾಲನಾ ಇಲಾಖೆಯಲ್ಲಿ ವಿವಿಧ ಯೋಜನೆಗಳಲ್ಲಿ ಹೈನುಗಾರಿಕೆಗೆ ಸಹಾಯಧನ ಸವಲತ್ತು ಪಡೆದಿರುವ ಕುಟುಂಬಗಳು ಈ ಯೋಜನೆಯ ಸವಲತ್ತು ಪಡೆಯಲು ಅರ್ಹರಿರುವುದಿಲ್ಲ. ಸರ್ಕಾರದ ನಿಯಮದಂತೆ ಮಹಿಳೆಯರಿಗೆ ಶೇ.33.3 ರಷ್ಟು ಮತ್ತು ವಿಶೇಷ ಚೇತನರಿಗೆ ಶೇ. 3 ರಷ್ಟು ಅದ್ಯತೆ ನೀಡಲಾಗುತ್ತದೆ.

ಮಿಶ್ರತಳಿ ಹಸು ಘಟಕ ಅನುಷ್ಠಾನಕ್ಕಾಗಿ ಫಲಾನುಭವಿಗಳಿಂದ ಅರ್ಜಿ ಆಹ್ವಾನ; ಇಲ್ಲಿದೆ ವಿವರ
ಕೊಪ್ಪಳ
Follow us
ಸಂಜಯ್ಯಾ ಚಿಕ್ಕಮಠ, ಕೊಪ್ಪಳ
| Updated By: ಕಿರಣ್ ಹನುಮಂತ್​ ಮಾದಾರ್

Updated on: Nov 18, 2023 | 4:01 PM

ಕೊಪ್ಪಳ, ನ.18: ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಕೊಪ್ಪಳ ಜಿಲ್ಲೆಯ ಹಾಲು‌ ಉತ್ಫಾದಕರಿಗೆ ಸಿಹಿ ಸುದ್ದಿ ನೀಡಿದೆ. ಕೊಪ್ಪಳ ಜಿಲ್ಲೆಯಲ್ಲಿ 2023-24 ನೇ ಸಾಲಿನ ಹಾಲು ಉತ್ಪಾದಕರಿ(Milk Producers)ಗೆ ಉತ್ತೇಜನ ನೀಡುವ ಉದ್ದೇಶದಿಂದ ‘ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆಯಡಿ ಉಳಿಕೆ ಅನುದಾನದಲ್ಲಿ ಒಂದು ಮಿಶ್ರತಳಿ ಹಸು ಘಟಕ ಅನುಷ್ಠಾನಗೊಳಿಸಲು ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಯೋಜನೆಯಲ್ಲಿ ಏನೇನಿದೆ?

ಒಂದು ಮಿಶ್ರತಳಿ ಹಸು ಘಟಕದಲ್ಲಿ ಒಂದು ಮಿಶ್ರ ತಳಿ ಹಸು ವಿತರಿಸಲಾಗುವುದು. ಈ ಘಟಕದ ವೆಚ್ಚ 65 ಸಾವಿರ ರೂಪಾಯಿ ಇದ್ದು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಫಲಾನುಭವಿಗಳಿಗೆ (ಶೇ.90) ಅಂದರೆ,  58,500 ರೂ. ಸಹಾಯಧನ ಮತ್ತು (ಶೇ.10) 6500 ರೂ. ಫಲಾನುಭವಿಗಳ ವಂತಿಕೆ ಅಥವಾ ಬ್ಯಾಂಕ್​ನಿಂದ ಸಾಲದೊಂದಿಗೆ ಅನುಷ್ಠಾನಗೊಳಿಸಲಾಗುವುದು.

ಇದನ್ನೂ ಓದಿ:ಹಾಸನ: ಹಾಲು ಉತ್ಪಾದಕರ ಸಂಘದಲ್ಲಿ ಹಣ ದುರ್ಬಳಕೆ ಆರೋಪ; ಸಾವಿರಾರು ಲೀಟರ್ ಹಾಲು ಚೆಲ್ಲಿ ರೈತರ ಆಕ್ರೋಶ

ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು

ಇದಕ್ಕೆ ಅರ್ಜಿ ಸಲ್ಲಿಸುವ ಅರ್ಜಿದಾರರು FRUITS ID (ಗುರುತಿನ ಸಂಖ್ಯೆ) ಹೊಂದಿರಬೇಕು. ಪಶುಸಂಗೋಪನೆಯಲ್ಲಿ ತೊಡಗಿಸಿಕೊಂಡ ಮತ್ತು ಆಸಕ್ತ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕೂಲಿ ಕಾರ್ಮಿಕರು, ಕೃಷಿ ಕಾರ್ಮಿಕರನ್ನು ಆಯ್ಕೆ ಮಾಡಲಾಗುತ್ತದೆ. ಆಯ್ಕೆಗೊಂಡ ಫಲಾನುಭವಿಗಳು ಕಡ್ಡಾಯವಾಗಿ ಹಾಲು ಉತ್ಪಾದಕರ ಸಹಕಾರ ಸಂಘಗಳ ಸದಸ್ಯರಾಗಿರಬೇಕು ಅಥವಾ ಸದಸ್ಯತ್ವ ಕಡ್ಡಾಯವಾಗಿ ಪಡೆಯಬೇಕು. ಆಯ್ಕೆಗೊಂಡ ಫಲಾನುಭವಿ, ಸ್ವತ್ತು ಪಡೆದ ನಂತರ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಕಡ್ಡಾಯವಾಗಿ ಹಾಲು ಪೂರೈಸುವ ಷರತ್ತಿಗೆ ಒಳಪಟ್ಟು ಮುಚ್ಚಳಿಕೆಯನ್ನು ವ್ಯವಸ್ಥಾಪಕರು/ಪ್ರತಿನಿಧಿಯವರಿಂದ ಧೃಢೀಕರಿಸಿ ಸಲ್ಲಿಸಬೇಕು.

ಇನ್ನು ಕಳೆದ 5 ವರ್ಷಗಳಲ್ಲಿ ಪಶುಪಾಲನಾ ಇಲಾಖೆಯಲ್ಲಿ ವಿವಿಧ ಯೋಜನೆಗಳಲ್ಲಿ ಹೈನುಗಾರಿಕೆಗೆ ಸಹಾಯಧನ ಸವಲತ್ತು ಪಡೆದಿರುವ ಕುಟುಂಬಗಳು ಈ ಯೋಜನೆಯ ಸವಲತ್ತು ಪಡೆಯಲು ಅರ್ಹರಿರುವುದಿಲ್ಲ. ಸರ್ಕಾರದ ನಿಯಮದಂತೆ ಮಹಿಳೆಯರಿಗೆ ಶೇ.33.3 ರಷ್ಟು ಮತ್ತು ವಿಶೇಷ ಚೇತನರಿಗೆ ಶೇ. 3 ರಷ್ಟು ಅದ್ಯತೆ ನೀಡಲಾಗುವುದು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಫಲಾನುಭವಿಗಳು ಆರ್‌ಡಿ ಸಂಖ್ಯೆ ಇರುವ ಜಾತಿ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ಸಲ್ಲಿಸಬೇಕು. ವಿಶೇಷ ಚೇತನರಾಗಿದ್ದಲ್ಲಿ ಪ್ರಮಾಣ ಪತ್ರ ಹೊಂದಿರಬೇಕು.

ಇದನ್ನೂ ಓದಿ:DBT: 339 ಕೋಟಿ ಬಾಕಿ ಪ್ರೋತ್ಸಾಹಧನ ಶೀಘ್ರವೇ ನೇರವಾಗಿ ಹಾಲು ಉತ್ಪಾದಕರ ಬ್ಯಾಂಕ್ ಖಾತೆಗೆ ಪಾವತಿ -ರಾಜ್ಯ ಸರ್ಕಾರ ಸ್ಪಷ್ಟನೆ

ಅರ್ಜಿ ಸಲ್ಲಿಸುವುದು ಹೇಗೆ?

ಅರ್ಜಿ ಸಲ್ಲಿಸಲು ನವೆಂಬರ್ 25 ಕೊನೆಯ ದಿನವಾಗಿದ್ದು, ಅರ್ಜಿಗಳಿಗಾಗಿ ಮತ್ತು ಹೆಚ್ಚಿನ ಮಾಹಿತಿಗಾಗಿ ತಾಲ್ಲೂಕುಗಳ ಮುಖ್ಯ ಪಶುವೈದ್ಯಾಧಿಕಾರಿಗಳು(ಆಡಳಿತ) / ಮುಖ್ಯ ಪಶುವೈದ್ಯಾಧಿಕಾರಿಗಳು, ಪಶು ಆಸ್ಪತ್ರೆ, ಕೊಪ್ಪಳ / ಗಂಗಾವತಿ / ಯಲಬುರ್ಗಾ / ಕುಷ್ಟಗಿ / ಕನಕಗಿರಿ / ಕಾರಟಗಿ ಮತ್ತು ಕುಕನೂರು ಕಛೇರಿಗಳಿಗೆ ಸಂಪರ್ಕಿಸಲು ಮತ್ತು ಯೋಜನೆಯ ಸದುಪಯೋಗ ಪಡೆದುಕೊಳ್ಳುವಂತೆ ಜಿಲ್ಲೆಯ ರೈತರಲ್ಲಿ ಇಲಾಖೆಯ ಉಪ ನಿರ್ದೇಶಕರಾದ ಡಾ.ಪಿ.ಎಂ.ಮಲ್ಲಯ್ಯ ಅವರು ಪ್ರಕಟಣೆ ಮೂಲಕ ಕೋರಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮತ್ತೆ ಹಳ್ಳಿ ಹುಡುಗಿ ಅವತಾರದಲ್ಲಿ ಸಪ್ತಮಿ ಗೌಡ; ಅನುಭವ ಹಂಚಿಕೊಂಡ ನಟಿ
ಮತ್ತೆ ಹಳ್ಳಿ ಹುಡುಗಿ ಅವತಾರದಲ್ಲಿ ಸಪ್ತಮಿ ಗೌಡ; ಅನುಭವ ಹಂಚಿಕೊಂಡ ನಟಿ
ಕದಿಯಲು ಆಕೆಯದ್ದೇ ಬ್ಯಾಗ್​ ಬೇಕಿತ್ತಾ, ಯಾಕಾದ್ರೂ ಕದ್ನೋ ಅನ್ನೋ ಸ್ಥಿತಿ
ಕದಿಯಲು ಆಕೆಯದ್ದೇ ಬ್ಯಾಗ್​ ಬೇಕಿತ್ತಾ, ಯಾಕಾದ್ರೂ ಕದ್ನೋ ಅನ್ನೋ ಸ್ಥಿತಿ
ಶಿವಕುಮಾರ್ ರಾಜೀನಾಮೆಗೆ ಆಗ್ರಹಿಸಿದ ಪ್ರತಿಭಟನೆಕಾರರು
ಶಿವಕುಮಾರ್ ರಾಜೀನಾಮೆಗೆ ಆಗ್ರಹಿಸಿದ ಪ್ರತಿಭಟನೆಕಾರರು
ನ್ಯಾಯಾಧೀಶರ ಹನಿಟ್ರ್ಯಾಪ್​ಗೆ​ ಯತ್ನ? ರಾಜಣ್ಣ ಸ್ಪಷ್ಟನೆ
ನ್ಯಾಯಾಧೀಶರ ಹನಿಟ್ರ್ಯಾಪ್​ಗೆ​ ಯತ್ನ? ರಾಜಣ್ಣ ಸ್ಪಷ್ಟನೆ
ಹನಿಟ್ರ್ಯಾಪ್ ಮಾಡಲು ಬ್ಲೂ ಜೀನ್ಸ್ ಹುಡುಗಿ ಬಂದಿದ್ಳು: ರಾಜಣ್ಣ
ಹನಿಟ್ರ್ಯಾಪ್ ಮಾಡಲು ಬ್ಲೂ ಜೀನ್ಸ್ ಹುಡುಗಿ ಬಂದಿದ್ಳು: ರಾಜಣ್ಣ
ರನ್ಯಾ ಪ್ರಕರಣದಲ್ಲಿ ಡಿಅರ್​ಐ, ಸಿಎಂಗೆ ವರದಿ ಸಲ್ಲಿಸಿರಬಹುದು: ಪರಮೇಶ್ವರ್
ರನ್ಯಾ ಪ್ರಕರಣದಲ್ಲಿ ಡಿಅರ್​ಐ, ಸಿಎಂಗೆ ವರದಿ ಸಲ್ಲಿಸಿರಬಹುದು: ಪರಮೇಶ್ವರ್
ಬಿಡದಿ ರೈಲ್ವೆ ನಿಲ್ದಾಣ ಸ್ಫೋಟಿಸುವುದಾಗಿ ಬೆದರಿಕೆ ಕರೆ
ಬಿಡದಿ ರೈಲ್ವೆ ನಿಲ್ದಾಣ ಸ್ಫೋಟಿಸುವುದಾಗಿ ಬೆದರಿಕೆ ಕರೆ
ಉತ್ತರ ಕರ್ನಾಟಕದ ಅನೇಕ ಭಾಗಗಳಲ್ಲಿ ನೀರಿನ ಸಮಸ್ಯೆ, ಎಲ್ಲಿ ಜನಪ್ರತಿನಿಧಿಗಳು?
ಉತ್ತರ ಕರ್ನಾಟಕದ ಅನೇಕ ಭಾಗಗಳಲ್ಲಿ ನೀರಿನ ಸಮಸ್ಯೆ, ಎಲ್ಲಿ ಜನಪ್ರತಿನಿಧಿಗಳು?
ಗ್ಯಾಸ್​ ಸಿಲಿಂಡರ್​ ತುಂಬಿದ್ದ ಲಾರಿ ಬ್ರೇಕ್​ ಫೇಲ್​ ಆಗಿ ಮರಕ್ಕೆ ಡಿಕ್ಕಿ
ಗ್ಯಾಸ್​ ಸಿಲಿಂಡರ್​ ತುಂಬಿದ್ದ ಲಾರಿ ಬ್ರೇಕ್​ ಫೇಲ್​ ಆಗಿ ಮರಕ್ಕೆ ಡಿಕ್ಕಿ
ಫೆಲೈನ್ ಪ್ಯಾನ್​ಲ್ಯೂಕೊಪೇನಿಯಾ ವೈರಸ್ ಸೋಂಕು ಬೆಕ್ಕುಗಳಲ್ಲಿ ಸಾಂಕ್ರಾಮಿಕ!
ಫೆಲೈನ್ ಪ್ಯಾನ್​ಲ್ಯೂಕೊಪೇನಿಯಾ ವೈರಸ್ ಸೋಂಕು ಬೆಕ್ಕುಗಳಲ್ಲಿ ಸಾಂಕ್ರಾಮಿಕ!