AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಿಶ್ರತಳಿ ಹಸು ಘಟಕ ಅನುಷ್ಠಾನಕ್ಕಾಗಿ ಫಲಾನುಭವಿಗಳಿಂದ ಅರ್ಜಿ ಆಹ್ವಾನ; ಇಲ್ಲಿದೆ ವಿವರ

ಕಳೆದ 5 ವರ್ಷಗಳಲ್ಲಿ ಪಶುಪಾಲನಾ ಇಲಾಖೆಯಲ್ಲಿ ವಿವಿಧ ಯೋಜನೆಗಳಲ್ಲಿ ಹೈನುಗಾರಿಕೆಗೆ ಸಹಾಯಧನ ಸವಲತ್ತು ಪಡೆದಿರುವ ಕುಟುಂಬಗಳು ಈ ಯೋಜನೆಯ ಸವಲತ್ತು ಪಡೆಯಲು ಅರ್ಹರಿರುವುದಿಲ್ಲ. ಸರ್ಕಾರದ ನಿಯಮದಂತೆ ಮಹಿಳೆಯರಿಗೆ ಶೇ.33.3 ರಷ್ಟು ಮತ್ತು ವಿಶೇಷ ಚೇತನರಿಗೆ ಶೇ. 3 ರಷ್ಟು ಅದ್ಯತೆ ನೀಡಲಾಗುತ್ತದೆ.

ಮಿಶ್ರತಳಿ ಹಸು ಘಟಕ ಅನುಷ್ಠಾನಕ್ಕಾಗಿ ಫಲಾನುಭವಿಗಳಿಂದ ಅರ್ಜಿ ಆಹ್ವಾನ; ಇಲ್ಲಿದೆ ವಿವರ
ಕೊಪ್ಪಳ
ಸಂಜಯ್ಯಾ ಚಿಕ್ಕಮಠ
| Edited By: |

Updated on: Nov 18, 2023 | 4:01 PM

Share

ಕೊಪ್ಪಳ, ನ.18: ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಕೊಪ್ಪಳ ಜಿಲ್ಲೆಯ ಹಾಲು‌ ಉತ್ಫಾದಕರಿಗೆ ಸಿಹಿ ಸುದ್ದಿ ನೀಡಿದೆ. ಕೊಪ್ಪಳ ಜಿಲ್ಲೆಯಲ್ಲಿ 2023-24 ನೇ ಸಾಲಿನ ಹಾಲು ಉತ್ಪಾದಕರಿ(Milk Producers)ಗೆ ಉತ್ತೇಜನ ನೀಡುವ ಉದ್ದೇಶದಿಂದ ‘ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆಯಡಿ ಉಳಿಕೆ ಅನುದಾನದಲ್ಲಿ ಒಂದು ಮಿಶ್ರತಳಿ ಹಸು ಘಟಕ ಅನುಷ್ಠಾನಗೊಳಿಸಲು ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಯೋಜನೆಯಲ್ಲಿ ಏನೇನಿದೆ?

ಒಂದು ಮಿಶ್ರತಳಿ ಹಸು ಘಟಕದಲ್ಲಿ ಒಂದು ಮಿಶ್ರ ತಳಿ ಹಸು ವಿತರಿಸಲಾಗುವುದು. ಈ ಘಟಕದ ವೆಚ್ಚ 65 ಸಾವಿರ ರೂಪಾಯಿ ಇದ್ದು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಫಲಾನುಭವಿಗಳಿಗೆ (ಶೇ.90) ಅಂದರೆ,  58,500 ರೂ. ಸಹಾಯಧನ ಮತ್ತು (ಶೇ.10) 6500 ರೂ. ಫಲಾನುಭವಿಗಳ ವಂತಿಕೆ ಅಥವಾ ಬ್ಯಾಂಕ್​ನಿಂದ ಸಾಲದೊಂದಿಗೆ ಅನುಷ್ಠಾನಗೊಳಿಸಲಾಗುವುದು.

ಇದನ್ನೂ ಓದಿ:ಹಾಸನ: ಹಾಲು ಉತ್ಪಾದಕರ ಸಂಘದಲ್ಲಿ ಹಣ ದುರ್ಬಳಕೆ ಆರೋಪ; ಸಾವಿರಾರು ಲೀಟರ್ ಹಾಲು ಚೆಲ್ಲಿ ರೈತರ ಆಕ್ರೋಶ

ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು

ಇದಕ್ಕೆ ಅರ್ಜಿ ಸಲ್ಲಿಸುವ ಅರ್ಜಿದಾರರು FRUITS ID (ಗುರುತಿನ ಸಂಖ್ಯೆ) ಹೊಂದಿರಬೇಕು. ಪಶುಸಂಗೋಪನೆಯಲ್ಲಿ ತೊಡಗಿಸಿಕೊಂಡ ಮತ್ತು ಆಸಕ್ತ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕೂಲಿ ಕಾರ್ಮಿಕರು, ಕೃಷಿ ಕಾರ್ಮಿಕರನ್ನು ಆಯ್ಕೆ ಮಾಡಲಾಗುತ್ತದೆ. ಆಯ್ಕೆಗೊಂಡ ಫಲಾನುಭವಿಗಳು ಕಡ್ಡಾಯವಾಗಿ ಹಾಲು ಉತ್ಪಾದಕರ ಸಹಕಾರ ಸಂಘಗಳ ಸದಸ್ಯರಾಗಿರಬೇಕು ಅಥವಾ ಸದಸ್ಯತ್ವ ಕಡ್ಡಾಯವಾಗಿ ಪಡೆಯಬೇಕು. ಆಯ್ಕೆಗೊಂಡ ಫಲಾನುಭವಿ, ಸ್ವತ್ತು ಪಡೆದ ನಂತರ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಕಡ್ಡಾಯವಾಗಿ ಹಾಲು ಪೂರೈಸುವ ಷರತ್ತಿಗೆ ಒಳಪಟ್ಟು ಮುಚ್ಚಳಿಕೆಯನ್ನು ವ್ಯವಸ್ಥಾಪಕರು/ಪ್ರತಿನಿಧಿಯವರಿಂದ ಧೃಢೀಕರಿಸಿ ಸಲ್ಲಿಸಬೇಕು.

ಇನ್ನು ಕಳೆದ 5 ವರ್ಷಗಳಲ್ಲಿ ಪಶುಪಾಲನಾ ಇಲಾಖೆಯಲ್ಲಿ ವಿವಿಧ ಯೋಜನೆಗಳಲ್ಲಿ ಹೈನುಗಾರಿಕೆಗೆ ಸಹಾಯಧನ ಸವಲತ್ತು ಪಡೆದಿರುವ ಕುಟುಂಬಗಳು ಈ ಯೋಜನೆಯ ಸವಲತ್ತು ಪಡೆಯಲು ಅರ್ಹರಿರುವುದಿಲ್ಲ. ಸರ್ಕಾರದ ನಿಯಮದಂತೆ ಮಹಿಳೆಯರಿಗೆ ಶೇ.33.3 ರಷ್ಟು ಮತ್ತು ವಿಶೇಷ ಚೇತನರಿಗೆ ಶೇ. 3 ರಷ್ಟು ಅದ್ಯತೆ ನೀಡಲಾಗುವುದು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಫಲಾನುಭವಿಗಳು ಆರ್‌ಡಿ ಸಂಖ್ಯೆ ಇರುವ ಜಾತಿ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ಸಲ್ಲಿಸಬೇಕು. ವಿಶೇಷ ಚೇತನರಾಗಿದ್ದಲ್ಲಿ ಪ್ರಮಾಣ ಪತ್ರ ಹೊಂದಿರಬೇಕು.

ಇದನ್ನೂ ಓದಿ:DBT: 339 ಕೋಟಿ ಬಾಕಿ ಪ್ರೋತ್ಸಾಹಧನ ಶೀಘ್ರವೇ ನೇರವಾಗಿ ಹಾಲು ಉತ್ಪಾದಕರ ಬ್ಯಾಂಕ್ ಖಾತೆಗೆ ಪಾವತಿ -ರಾಜ್ಯ ಸರ್ಕಾರ ಸ್ಪಷ್ಟನೆ

ಅರ್ಜಿ ಸಲ್ಲಿಸುವುದು ಹೇಗೆ?

ಅರ್ಜಿ ಸಲ್ಲಿಸಲು ನವೆಂಬರ್ 25 ಕೊನೆಯ ದಿನವಾಗಿದ್ದು, ಅರ್ಜಿಗಳಿಗಾಗಿ ಮತ್ತು ಹೆಚ್ಚಿನ ಮಾಹಿತಿಗಾಗಿ ತಾಲ್ಲೂಕುಗಳ ಮುಖ್ಯ ಪಶುವೈದ್ಯಾಧಿಕಾರಿಗಳು(ಆಡಳಿತ) / ಮುಖ್ಯ ಪಶುವೈದ್ಯಾಧಿಕಾರಿಗಳು, ಪಶು ಆಸ್ಪತ್ರೆ, ಕೊಪ್ಪಳ / ಗಂಗಾವತಿ / ಯಲಬುರ್ಗಾ / ಕುಷ್ಟಗಿ / ಕನಕಗಿರಿ / ಕಾರಟಗಿ ಮತ್ತು ಕುಕನೂರು ಕಛೇರಿಗಳಿಗೆ ಸಂಪರ್ಕಿಸಲು ಮತ್ತು ಯೋಜನೆಯ ಸದುಪಯೋಗ ಪಡೆದುಕೊಳ್ಳುವಂತೆ ಜಿಲ್ಲೆಯ ರೈತರಲ್ಲಿ ಇಲಾಖೆಯ ಉಪ ನಿರ್ದೇಶಕರಾದ ಡಾ.ಪಿ.ಎಂ.ಮಲ್ಲಯ್ಯ ಅವರು ಪ್ರಕಟಣೆ ಮೂಲಕ ಕೋರಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sanjayya Chikkamath
Sanjayya Chikkamath

ಸಂಜಯ್ಯಾ ಚಿಕ್ಕಮಠ. ಹುಟ್ಟಿದ್ದು ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ರಾಮನಾಳ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 14 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್ ನಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಕೊಪ್ಪಳಕ್ಕೆ ಬಂದು ನಿಂತಿದೆ. ಕೃಷಿ ನನ್ನಿಷ್ಟ.ಆದ್ರೆ ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?