AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪತಿ ಬಿಟ್ಟು ನವವಿವಾಹಿತೆ ನಾಪತ್ತೆ; ವಿಷಯ ತಿಳಿದ ಮಾವ ಹೃದಯಾಘಾತದಿಂದ ಸಾವು!

ಕೊಪ್ಪಳದಲ್ಲಿ ಮನಕಲಕುವ ಘಟನೆಯೊಂದು ನಡೆದಿದೆ. ನವವಿವಾಹಿತೆ ಪತಿಯನ್ನು ಬಿಟ್ಟು ನಾಪತ್ತೆಯಾಗಿದ್ದಾರೆ. ಈ ವಿಷಯ ತಿಳಿದ ಯುವತಿಯ ಮಾವ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಮದುವೆಯಾಗಿ ಕೇವಲ ಒಂದು ತಿಂಗಳೊಳಗೆ ನಡೆದ ಈ ದುರಂತ ಕುಟುಂಬದಲ್ಲಿ ತೀವ್ರ ಆಘಾತ ಮೂಡಿಸಿದೆ. ಪತ್ನಿಗಾಗಿ ಪತಿ ಹುಡುಕಾಟ ನಡೆಸುತ್ತಿದ್ದು, ಈ ಬಗ್ಗೆ ಪೊಲೀಸ್​​ ದೂರು ಕೂಡ ದಾಖಲಾಗಿದೆ.

ಪತಿ ಬಿಟ್ಟು ನವವಿವಾಹಿತೆ ನಾಪತ್ತೆ; ವಿಷಯ ತಿಳಿದ ಮಾವ ಹೃದಯಾಘಾತದಿಂದ ಸಾವು!
ಮೃತ ಖಂಡೆಪ್ಪ ಮತ್ತು ನಾಪತ್ತೆಯಾದ ಯುವತಿImage Credit source: Tv9 Kannada
ಶಿವಕುಮಾರ್ ಪತ್ತಾರ್
| Edited By: |

Updated on: Mar 26, 2026 | 11:17 AM

Share

ಕೊಪ್ಪಳ, ಮಾರ್ಚ್​​ 26: ಮದುವೆ ಎಂಬುದು ಎರಡು ಕುಟುಂಬಗಳ ನಡುವೆ ಹೊಸ ಸಂಬಂಧ ಬೆಸೆಯುವ ಸೇತುವೆ. ಬಲಗಾಲಿಟ್ಟು ಪತಿ ಮನೆಗೆ ಬರುವವಳು ತಮ್ಮ ಮನೆಯನ್ನು ಬೆಳಗಿಸುತ್ತಾಳೆ. ವಂಶೋದ್ಧಾರಕ್ಕೆ ಆಕೆ ಕಾರಣವಾಗುತ್ತಾಳೆ ಎಂಬ ಭಾವನೆ ನಮ್ಮಲ್ಲಿದೆ. ಆದರೆ ಇತ್ತೀಚಿಗೆ ಇವುಗಳಿಗೆ ವಿರುದ್ಧ ಎಂಬಂತಹ ಘಟನೆಗಳು ಮೇಲಿಂದ ಮೇಲೆ ನಡೆಯುತ್ತಲೇ ಇವೆ. ಮದುವೆಯಾಗಿ ಕೆಲ ದಿನಗಳ ಒಳಗೆಯೇ ನಾನಾ ಕಾರಣಕ್ಕೆ ದಾಂಪತ್ಯ ಸಂಬಂಧ ಹಳಸಿ ಅದೆಷ್ಟೋ ಕುಟುಂಬಗಳು ಸರ್ವನಾಶ ಆದ ಉದಾಹರಣೆಯನ್ನೂ ಕೇಳಿದ್ದೇವೆ. ಇಂತಹುದ್ದೇ ಮನಕಲಕುವ ಘಟನೆಯೊಂದೀಗ ಕರ್ನಾಟಕದ ಕೊಪ್ಪಳದಲ್ಲಿ ನಡೆದಿದೆ.

ಮೂಲತಃ ಕೊಪ್ಪಳದ ಗೌರಿ ಅಂಗಳ ನಿವಾಸಿ ನಾಗರಾಜ್​​ ಎಂಬವರ ವಿವಾಹ ರಾಯಚೂರ ಜಲ್ಲೆಯ ಸಿಂದನೂರಿನ ಸಂಜನಾ ಎಂಬಾಕೆಯ ಜೊತೆ ಫೆಬ್ರವರಿ 8ರಂದು ನಡೆದಿತ್ತು. ಎರಡೂ ಕುಟುಂಬಳ ಪರಸ್ಪರ ಒಪ್ಪಿಗೆಯ ಮೇಲೆಯೇ ಕೊಪ್ಪಳದ ಪಾರ್ಥಾ ಕಲ್ಯಾಣ ಮಂಟಪದಲ್ಲಿ ಮದುವೆಕಾರ್ಯ ನೆರವೇರಿತ್ತು. ಆ ಬಳಿಕ ದಂಪತಿ ನಾಗರಾಜ್​​ ಅವರ ಮನೆಯ ಮೇಲಿನ ಮಹಡಿಯಲ್ಲಿ ವಾಸವಿದ್ದರು. ಈ ನಡುವೆ ಮಾರ್ಚ್​​ 21ರ ರಾತ್ರಿ ರಾತ್ರಿ 8.30ರ ಸುಮಾರಿಗೆ ಸಂಜನಾ ತನಗೆ ಆರೋಗ್ಯ ಸರಿ ಇಲ್ಲದ ಕಾರಣ ಔಷಧ ತರುವಂತೆ ಪತಿ ನಾಗರಾಜ್​​ಗೆ ತಿಳಿಸಿದ್ದಾಳೆ. ಹೀಗಾಗಿ ಮಾತ್ರೆ ತರಲೆಂದು ತೆರಳಿದ್ದ ನಾಗರಾಜ್​​ 15 ನಿಮಿಷಗಳ ಬಳಿಕ ಮನೆಗೆ ಹಿಂದಿರುಗಿದ್ದಾರೆ. ಆದರೆ ಆ ವೇಳೆ ಹೆಂಡತಿ ಸಂಜನಾ ಮನೆಯಲ್ಲಿ ಇಲ್ಲದಿರೋದು ಗಮನಕ್ಕೆ ಬಂದಿದೆ. ಹೀಗಾಗಿ ಕೆಳ ಮಹಡಿಯಲ್ಲಿರುವ ಸಹೋದರನ ಮನೆಗೆ ತೆರಳಿ ನಾಗರಾಜ್​​ ಪತ್ನಿ ಬಗ್ಗೆ ವಿಚಾರಿಸಿದ್ದಾರೆ. ಆದರೆ ಆಕೆ ಇಲ್ಲಿಗೆ ಬಂದಿಲ್ಲ ಎಂಬ ಉತ್ತರ ದೊರೆತಿದೆ. ಸಂಬಂಧಿಕರ ಮನೆಗಳಲ್ಲಿ ವಿಚಾರಿಸಿದಾಗಲೂ ಆಕೆಯ ಬಗ್ಗೆ ಮಾಹಿತಿ ಸಿಗದ ಕಾರಣ ಪತಿ ನಾಗರಾಜ್​​ ಈ ಬಗ್ಗೆ ದೂರು ದಾಖಲಿಸಿದ್ದಾರೆ.

ಇದನ್ನೂ ಓದಿ: ತುಂಗಭದ್ರಾ ಎಡದಂಡೆ ಕಾಲುವೆ ಭಾಗದ ರೈತರಿಗೆ ಗುಡ್​ನ್ಯೂಸ್; ಸಚಿವರಿಂದ ಮಹತ್ವದ ಭರವಸೆ

ಈ ನಡುವೆ ಮನಕಲಕುವ ಘಟನೆಯೊಂದು ನಡೆದಿದೆ. ಸೊಸೆ ನಾಪತ್ತೆಯಾಗಿರುವ ವಿಚಾರ ತಿಳಿದ ನಾಗರಾಜ್​​ ತಂದೆ ಖಂಡೆಪ್ಪ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಸಂಜನಾ ವಿಚಾರವಾಗಿ ಅವರು ಮಾನಸಿಕವಾಗಿ ತೀವ್ರ ನೊಂದಿದ್ದರು ಎನ್ನಲಾಗಿದೆ. ಇನ್ನು ನಾಪತ್ತೆಯಾಗಿರುವ ನವ ವಿವಾಹಿತೆ ತವರು ಮನೆಗೂ ತೆರಳಿಲ್ಲ ಎನ್ನಲಾಗಿದ್ದು, ಆಕೆಯ ಸಹೋದರ ಕೂಡ ಹುಡುಕಾಟ ನಡೆಸುತ್ತಿದ್ದಾರೆ. ಸಂಜನಾ ಕೈಯಲ್ಲಿ ರವಿ ಎಂಬ ಟ್ಯಾಟೂ ಇರೋದಾಗಿ ದೂರಿನಲ್ಲಿ‌ ಉಲ್ಲೇಖಿಸಲಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ಕೊಲ್ಕತ್ತಾಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಕೊಲ್ಕತ್ತಾಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
Live: ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ; ಅಧಿಕಾರ ಸ್ವೀಕಾರ ಲೈವ್
Live: ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ; ಅಧಿಕಾರ ಸ್ವೀಕಾರ ಲೈವ್
ಕನ್ನಡದ ಯಾವ ಹೀರೋಗೆ ವಿಜಯ್ ತರಹ ಗೆಲ್ಲುವ ತಾಕತ್ತಿದೆ? ಉಪ್ಪಿ ಹೇಳಿದ್ದಿಷ್ಟು
ಕನ್ನಡದ ಯಾವ ಹೀರೋಗೆ ವಿಜಯ್ ತರಹ ಗೆಲ್ಲುವ ತಾಕತ್ತಿದೆ? ಉಪ್ಪಿ ಹೇಳಿದ್ದಿಷ್ಟು
ಕೆರೆಯಂತಾದ ರಾಜ್ಯ ಹೆದ್ದಾರಿ; ಜೀವ ಕೈಯಲ್ಲಿ ಹಿಡಿದು ಸವಾರರ ಸಂಚಾರ!
ಕೆರೆಯಂತಾದ ರಾಜ್ಯ ಹೆದ್ದಾರಿ; ಜೀವ ಕೈಯಲ್ಲಿ ಹಿಡಿದು ಸವಾರರ ಸಂಚಾರ!
ಬೋಳು ತಲೆಯಿದ್ದವರಿಗೆ ಅದೃಷ್ಟವೋ ಅದೃಷ್ಟ! ಯಾಕೆ ಗೊತ್ತಾ?
ಬೋಳು ತಲೆಯಿದ್ದವರಿಗೆ ಅದೃಷ್ಟವೋ ಅದೃಷ್ಟ! ಯಾಕೆ ಗೊತ್ತಾ?
ಇಂದು ಈ ರಾಶಿಯವರು ಸ್ನೇಹಿತರೊಂದಿಗೆ ಹಣಕಾಸು ವ್ಯವಹಾರ ಮಾಡಬೇಡಿ
ಇಂದು ಈ ರಾಶಿಯವರು ಸ್ನೇಹಿತರೊಂದಿಗೆ ಹಣಕಾಸು ವ್ಯವಹಾರ ಮಾಡಬೇಡಿ
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ