ಕೊಪ್ಪಳ: ಕಳಪೆ ಧಾನ್ಯಗಳ ಊಟ ಸೇವಿಸಿ 30ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

ಇಂದು ಮುಂಜಾನೆ ಇಡ್ಲಿ ತಯಾರಿಸುವಾಗ ಇಡ್ಲಿ ಹಿಟ್ಟಿನಲ್ಲಿ ಹುಳಗಳು ಕಂಡು ಬಂದಿದ್ದವು ಎಂಬ ಮಾಹಿತಿ ಕೂಡ ಲಭ್ಯವಾಗಿದೆ. ಹಿಟ್ಟಿನಲ್ಲಿ ಹುಳುಗಳು ಇರುವ ಹಿನ್ನಲೆ ವಿದ್ಯಾರ್ಥಿಗಳು ಊಟ ಬಿಟ್ಟಿದ್ದರು.

ಕೊಪ್ಪಳ: ಕಳಪೆ ಧಾನ್ಯಗಳ ಊಟ ಸೇವಿಸಿ 30ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ
ಪ್ರಾತಿನಿಧಿಕ ಚಿತ್ರ
Edited By:

Updated on: Nov 28, 2021 | 3:03 PM

ಕೊಪ್ಪಳ: ಕಳಪೆ ಧಾನ್ಯಗಳ ಊಟ ಸೇವಿಸಿ ವಿದ್ಯಾರ್ಥಿಗಳು ಅಸ್ವಸ್ಥರಾದ ದುರ್ಘಟನೆ ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ನಿಡಶೇಸಿ ಗ್ರಾಮದಲ್ಲಿ ನಡೆದಿದೆ. ಇಲ್ಲಿನ 30ಕ್ಕೂ ಹೆಚ್ಚು ವಿದ್ಯಾರ್ಥಿಗಳು ಕಳಪೆ ಧಾನ್ಯಗಳ ಊಟ ಸೇವಿಸಿ ಅಸ್ವಸ್ಥರಾಗಿದ್ದಾರೆ. ಅಸ್ವಸ್ಥರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ನಿಡಶೇಸಿ ಮುರಾರ್ಜಿ ವಸತಿ ಶಾಲೆಯಲ್ಲಿ ಘಟನೆ ನಡೆದಿದೆ. ನಿನ್ನೆ ರಾತ್ರಿ ಅನ್ನ ಸಾರು ಊಟ ಮಾಡಿದ್ದ ವಿದ್ಯಾರ್ಥಿಗಳು ಇಂದು ಅಸ್ವಸ್ಥರಾಗಿದ್ದಾರೆ.

ಇಂದು ಮುಂಜಾನೆ ಇಡ್ಲಿ ತಯಾರಿಸುವಾಗ ಇಡ್ಲಿ ಹಿಟ್ಟಿನಲ್ಲಿ ಹುಳಗಳು ಕಂಡು ಬಂದಿದ್ದವು ಎಂಬ ಮಾಹಿತಿ ಕೂಡ ಲಭ್ಯವಾಗಿದೆ. ಹಿಟ್ಟಿನಲ್ಲಿ ಹುಳುಗಳು ಇರುವ ಹಿನ್ನಲೆ ವಿದ್ಯಾರ್ಥಿಗಳು ಊಟ ಬಿಟ್ಟಿದ್ದರು. 2 ತಾಸಿನ ನಂತರ ಪಲಾವ್ ತಯಾರಿಸಿ ವಸತಿ ಶಾಲೆ ಸಿಬ್ಬಂದಿ ತಿಂಡಿ ನೀಡಿದ್ದರು. ಈ ಸಮಯದಲ್ಲಿ ವಿದ್ಯಾರ್ಥಿಗಳು ತಲೆ ಸುತ್ತಿ ವಾಂತಿ ಮಾಡಿಕೊಂಡಿದ್ದಾರೆ. ತಕ್ಷಣ ವಿದ್ಯಾರ್ಥಿಗಳನ್ನು ಕುಷ್ಟಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಸ್ಪತ್ರೆಯಲ್ಲಿ ವಿದ್ಯಾರ್ಥಿಗಳು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ತಿಳಿದುಬಂದಿದೆ.

ಶಿವಮೊಗ್ಗ: ಎಸ್​ಬಿಐ ಶಾಖೆಯಲ್ಲಿ ಅಗ್ನಿ ಅವಘಡ
ಶಿವಮೊಗ್ಗದ ಎಸ್​ಬಿಐ ಶಾಖೆಯಲ್ಲಿ ಅಗ್ನಿ ಅವಘಡ ಸಂಭವಿಸಿದ ಘಟನೆ ನಡೆದಿದೆ. ವಿದ್ಯಾನಗರದಲ್ಲಿರುವ ಎಸ್​ಬಿಐ ಶಾಖೆಯಲ್ಲಿ ಅವಘಡ ಸಂಭವಿಸಿದೆ. ಶಾರ್ಟ್​​ ಸರ್ಕ್ಯೂಟ್​ನಿಂದ ಬ್ಯಾಂಕ್​ನಲ್ಲಿ ಬೆಂಕಿ ಕಾಣಿಸಿಕೊಂಡ ಬಗ್ಗೆ ಹೇಳಲಾಗಿದೆ. ಬೆಂಕಿಯ ಕೆನ್ನಾಲಿಗೆಗೆ ಕೆಲವು ದಾಖಲೆಗಳು ಸುಟ್ಟು ಭಸ್ಮ ಆಗಿದೆ. ಅಗ್ನಿಶಾಮಕ‌ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಇದನ್ನೂ ಓದಿ: ಕೊಪ್ಪಳದಲ್ಲಿ ಕೊರೊನಾ ಲಸಿಕೆ ನೀಡಲು ಹೊಗುತ್ತಿದ್ದಂತೆ ಮೈ ಮೇಲೆ ದೇವರು ಬಂದಂತೆ ವರ್ತಿಸಿದ ವ್ಯಕ್ತಿ; ವಿಡಿಯೋ ವೈರಲ್

ಇದನ್ನೂ ಓದಿ: ಕೊವಿಡ್ ಸಾವಿನ ಸಂಖ್ಯೆಯಲ್ಲಿ ಮಹಾ ಎಡವಟ್ಟು ಬಯಲು ಮಾಡಿದ ಕೊಪ್ಪಳ ಜಿಲ್ಲಾಧಿಕಾರಿ

Published On - 2:56 pm, Sun, 28 November 21