AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚುನಾವಣೆ ಹೊತ್ತಲ್ಲೇ ಕೇಸರಿ ಪಡೆಗೆ ಬಿಗ್ ಶಾಕ್: ಬಿಜೆಪಿಗೆ ಗುಡ್​ ಬೈ ಹೇಳಿದ ಸಂಸದ ಕರಡಿ ಸಂಗಣ್ಣ

ಈ ಬಾರಿ ಲೋಕಸಭಾ ಚುನಾವಣೆಯ ಟಿಕೆಟ್ ಕೈತಪ್ಪಿದ್ದಕ್ಕೆ ಅಸಮಾಧಾನಗೊಂಡಿದ್ದ ಸಂಸದ ಕರಣ ಸಂಗಣ್ಣ ಬಿಜೆಪಿಗೆ ಗುಡ್​ಬೈ ಹೇಳಿದ್ದಾರೆ. ಈ ಮೂಲಕ ಚುನಾವಣೆ ಹೊತ್ತಲ್ಲೇ ಕರಡಿ ಸಂಗಣ್ಣ ಪಕ್ಷ ತೊರೆಯುವುದರೊಂದಿಗೆ ಬಿಜೆಪಿಗೆ ಶಾಕ್ ಕೊಟ್ಟಿದ್ದಾರೆ.

ಚುನಾವಣೆ ಹೊತ್ತಲ್ಲೇ ಕೇಸರಿ ಪಡೆಗೆ ಬಿಗ್ ಶಾಕ್: ಬಿಜೆಪಿಗೆ ಗುಡ್​ ಬೈ ಹೇಳಿದ ಸಂಸದ ಕರಡಿ ಸಂಗಣ್ಣ
ಕರಡಿ ಸಂಗಣ್ಣ
TV9 Web
| Edited By: |

Updated on:Apr 16, 2024 | 8:36 PM

Share

ಕೊಪ್ಪಳ, (ಏಪ್ರಿಲ್ 16): ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ(BS Yediyurappa), ರಾಜ್ಯಾಧ್ಯಕ್ಷ ವಿಜಯೇಂದ್ರ ನಡೆಸಿದ್ದ ಸಂಧಾನ ವಿಫಲವಾಗಿದೆ. ಕೊಪ್ಪಳ ಲೋಕಸಭಾ ಕ್ಷೇತ್ರದ ಟಿಕೆಟ್​ ಕೈತಪ್ಪಿದ್ದರಿಂದ ಮುನಿಸಿಕೊಂಡಿದ್ದ ಹಾಲಿ ಸಂಸದ ಕರಡಿ ಸಂಗಣ್ಣ(Koppal MP Karadi sanganna) ಬಿಜೆಪಿಗೆ (BJP) ಗುಡ್​ಬೈ ಹೇಳಿದ್ದಾರೆ. ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದು, ರಾಜೀನಾಮೆ ಪತ್ರವನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಸಲ್ಲಿಸಿದ್ದಾರೆ. ಸಂಸದ ಸ್ಥಾ‌ನಕ್ಕೂ ರಾಜೀನಾಮೆ ನೀಡಿದ್ದು, ಇ-ಮೇಲ್‌ ಮೂಲಕ ಸ್ಪೀಕರ್ ಓಂ ಬಿರ್ಲಾಗೆ ರಾಜೀನಾಮೆ ರವಾನಿಸಿದ್ದಾರೆ. ಇದೀಗ ಅಧಿಕೃತವಾಗಿ ಬಿಜೆಪಿಗೆ ರಾಜೀನಾಮೆ ನೀಡಿರುವ ಕರಡಿ ಸಂಗಣ್ಣ ಅವರು ಕಾಂಗ್ರೆಸ್ ಸೇರುವುದು ಬಹುತೇಕ ಖಚಿತವಾದಂತಾಗಿದೆ.

ಕೊಪ್ಪಳ ಲೋಕಸಭಾ ಕ್ಷೇತ್ರದ ಹಾಲಿ ಸಂಸದರೂ ಆಗಿದ್ದ ಕರಡಿ ಸಂಗಣ್ಣ ಅವರಿಗೆ ಈ ಬಾರಿ ಲೋಕಸಭೆ ಟಿಕೆಟ್ ಕೊಡದೇ ಹೊಸ ಅಭ್ಯರ್ಥಿ ಡಾ.ಬಸವರಾಜ್ ಕ್ಯಾವಟರ್ ಅವರಿಗೆ ಟಿಕೆಟ್ ನೀಡಲಾಗಿತ್ತು. ಇದರಿಂದ ಆರಂಭದಿಂದಲೂ ಅಸಮಾಧಾನ ಹೊರ ಹಾಕಿದ್ದ ಕರಡಿ ಸಂಗಣ್ಣ ಅವರು, ನಮ್ಮ ಲೋಕಸಭಾ ಟಿಕೆಟ್‌ ಅನ್ನು ಪುನಃ ಬದಲಾಯಿಸಿ ತಮಗೆ ಟಿಕೆಟ್ ನೀಡಬೇಕು ಎಂದು ಪಟ್ಟು ಹಿಡಿದಿದ್ದರು. ಆದ್ರೆ, ಇದ್ಯಾವುದಕ್ಕೂ ಬಿಜೆಪಿ ಹೈಕಮಾಂಡ್ ಆಗಲೀ ಅಥವಾ ರಾಜ್ಯ ಬಿಜೆಪಿ ನಾಯಕರಾಗಲೂ ಸೊಪ್ಪು ಹಾಕಲಿಲ್ಲ. ಬದಲಿಗೆ ಮುಂದಿನ ದಿನಗಳಲ್ಲಿ ಸ್ಥಾನಮಾನದ ಭರವಸೆ ನೀಡುವುದಾಗಿ ಮನವೊಲಿಸುವ ಪ್ರಯತ್ನ ಮಾಡಿದ್ದರು. ಆದ್ರೆ, ಕರಡಿ ಸಂಗಣ್ಣ ಭರವಸೆಗಳನ್ನು ನಿರಾಕರಿಸಿ ಬಿಜೆಪಿಗೆ ಗುಡ್​ ಬೈ ಹೇಳಿದ್ದಾರೆ.

ನಾಳೆ ಕಾಂಗ್ರೆಸ್ ಸೇರ್ಪಡೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೊಂದಿಗೆ ಮಾತುಕತೆ ನಡೆಸಿಯೇ ಕರಡಿ ಸಂಗಣ್ಣ ಬಿಜೆಪಿಗೆ ರಾಜೀನಾಮೆ ನಿಡಿದ್ದಾರೆ  ಎಂದು ತಿಳಿದುಬಂದಿದೆ. ಜೊತೆಗೆ, ಶಾಸಕ ಲಕ್ಷ್ಮಣ ಸವದಿ ಅವರು ನಿನ್ನೆ(ಏಪ್ರಿಲ್ 15) ಕರಡಿ ಸಂಗಣ್ಣ ಅವರನ್ನು ಭೇಟಿ ಮಾಡಿ ಅಂತಿಮವಾಗಿ ಕಾಂಗ್ರೆಸ್‌ ಸೇರ್ಪಡೆ ಬಗ್ಗೆ ಚರ್ಚೆ ಮಾಡಿದ್ದರು. ಮಂಗಳವಾರ ಬೆಳಗ್ಗೆ ಕೊಪ್ಪಳ ಕಾಂಗ್ರೆಸ್ ಅಭ್ಯರ್ಥಿ ರಾಜಶೇಖರ ಹಿಟ್ನಾಳ್ ಅವರು ಕರಡಿ ಸಂಗಣ್ಣ ನಿವಾಸಕ್ಕೆ ಭೇಟಿ ನೀಡಿ ಚರ್ಚೆ ಮಾಡಿದ್ದರು. ಇದರ ಬೆನ್ನಲ್ಲೇ ಈಗ ಬಿಜೆಪಿ ತೊರೆದಿರುವ ಕರಡಿ ಸಂಗಣ್ಣ ನಾಳೆ (ಏಪ್ರಿಲ್ 16)  ಬೆಳಗ್ಗೆ 10.30ಕ್ಕೆ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ   ಕಾಂಗ್ರೆಸ್‌ ಸೇರ್ಪಡೆಯಾಗಲಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:59 pm, Tue, 16 April 24

Follow Us
ಆಷಾಢ ಮಾಸದ ಈ ಶುಕ್ರವಾರದಂದು ದೇವಿಗೆ ಕೆಂಪು ಹೂಗಳನ್ನು ಸಮರ್ಪಿಸಿ!
ಆಷಾಢ ಮಾಸದ ಈ ಶುಕ್ರವಾರದಂದು ದೇವಿಗೆ ಕೆಂಪು ಹೂಗಳನ್ನು ಸಮರ್ಪಿಸಿ!
ಪಾಲ್ಘರ್‌ನ ಧಾಮಣಿ ಡ್ಯಾಂನ 5 ಗೇಟ್ ಓಪನ್; ಧುಮ್ಮುಕ್ಕುವ ನೀರಿನ ರೌದ್ರಾವತಾರ
ಪಾಲ್ಘರ್‌ನ ಧಾಮಣಿ ಡ್ಯಾಂನ 5 ಗೇಟ್ ಓಪನ್; ಧುಮ್ಮುಕ್ಕುವ ನೀರಿನ ರೌದ್ರಾವತಾರ
ಬೆಂಗಳೂರು–ಮೈಸೂರು ಟೋಲ್ ದರ ವರ್ಷದಲ್ಲಿ 2ನೇ ಬಾರಿ ಏರಿಕೆ
ಬೆಂಗಳೂರು–ಮೈಸೂರು ಟೋಲ್ ದರ ವರ್ಷದಲ್ಲಿ 2ನೇ ಬಾರಿ ಏರಿಕೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ