AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಪ್ಪಳ ಜಿಲ್ಲಾ ಗಣಿ ಮತ್ತು ವಿಜ್ಞಾನ ಇಲಾಖೆ ಕಚೇರಿಯಲ್ಲಿ ಗಲಾಟೆ: ಗನ್ ತೋರಿಸಿದ ಭೂಪ

ಬಸವರಾಜ ಹೊಸಳ್ಳಿ ಟೀಂ ಹಾಗೂ ಬಸವರಾಜ ಪೂಜಾರ ಟೀಂ ಸೇರಿ ಎರಡು ಗುಂಪುಗಳೂ ಅಧಿಕಾರಿಯ ಸಮ್ಮುಖದಲ್ಲೇ ಹೊಡೆದಾಡಿಕೊಂಡಿವೆ. ಘಟನೆಯಲ್ಲಿ ಓರ್ವರಿಗೆ ಗಾಯಗಳಾಗಿದ್ದು ಸಧ್ಯ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕೊಪ್ಪಳ ಜಿಲ್ಲಾ ಗಣಿ ಮತ್ತು ವಿಜ್ಞಾನ ಇಲಾಖೆ ಕಚೇರಿಯಲ್ಲಿ ಗಲಾಟೆ: ಗನ್ ತೋರಿಸಿದ ಭೂಪ
ಅಧಿಕಾರಿಗಳ ಎದುರೇ ಗನ್ ತೋರಿಸಿ ವ್ಯಕ್ತಿ ಕೂಗಾಟ
TV9 Web
| Updated By: ಆಯೇಷಾ ಬಾನು|

Updated on:Jun 14, 2023 | 12:00 PM

Share

ಕೊಪ್ಪಳ: ಕೊಪ್ಪಳ ಜಿಲ್ಲಾ ಗಣಿ ಮತ್ತು ವಿಜ್ಞಾನ ಇಲಾಖೆ ಕಚೇರಿಯಲ್ಲಿ ಮಣ್ಣು ಗಣಿಗಾರಿಕೆ ಪರ್ಮಿಷನ್ ವಿಚಾರಕ್ಕೆ 2 ಗುಂಪುಗಳ ಮಧ್ಯೆ ಗಲಾಟೆ ನಡೆದಿದ್ದು ಅಧಿಕಾರಿಗಳ ಎದುರೇ ಗನ್ ತೋರಿಸಿ ವ್ಯಕ್ತಿ ಕೂಗಾಡಿದ ಘಟನೆ ನಡೆದಿದೆ. ಗನ್ ಹಿಡಿದು ಅಧಿಕಾರಿಯ ಎದುರೇ ಏಯ್ ಹೊಯ್ ಎಂದು ಕೂಗಾಡಿದ್ದಾರೆ.

ತುಂಗಭದ್ರ ಡ್ಯಾಂ ಹಿನ್ನೀರಿನ ಮಣ್ಣು ಗಣಿಗಾರಿಕೆ ಸಂಬಂಧ ಗಲಾಟೆ ನಡೆದಿದೆ. ಕೆಲವರ ಜೊತೆ ಇಲಾಖೆ ಅಧಿಕಾರಿಗಳೇ ಶಾಮೀಲಾಗಿದ್ದರೆಂದು ಆರೋಪಿಸಿದ್ದು ರಾಯಲ್ಟಿ ಇಲ್ಲದೇ ಮಣ್ಣು ಗಣಿಗಾರಿಕೆ ಮಾಡಿದ್ದಕ್ಕೆ ಒಂದು ಟೀಂ ಆಕ್ಷೇಪ ವ್ಯಕ್ತಪಡಿಸಿದೆ. ಇದ್ರಿಂದ ಮಾತಿಗೆ ಮಾತು ಬೆಳೆದು ಎರಡು ಟೀಂಗಳ ನಡುವೆ ಗಲಾಟೆಯಾಗಿದೆ. ಬಸವರಾಜ ಹೊಸಳ್ಳಿ ಟೀಂ ಹಾಗೂ ಬಸವರಾಜ ಪೂಜಾರ ಟೀಂ ಸೇರಿ ಎರಡು ಗುಂಪುಗಳೂ ಅಧಿಕಾರಿಯ ಸಮ್ಮುಖದಲ್ಲೇ ಹೊಡೆದಾಡಿಕೊಂಡಿವೆ. ಘಟನೆಯಲ್ಲಿ ಓರ್ವರಿಗೆ ಗಾಯಗಳಾಗಿದ್ದು ಸಧ್ಯ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಗಲಾಟೆ ವೇಳೆ ನಾಯ್ಡು ಎನ್ನೋರು ಗನ್ ತೆಗೆದುಕೊಂಡು ಬಂದಿದ್ದರು. ಗಣಿ ಇಲಾಖೆ ಕಚೇರಿಯೊಳಗೆ ಗನ್ ತೋರಿಸಿ ಬೆದರಿಸಿದ್ದರು. ಇಷ್ಟಾದ್ರು ಇಲ್ಲಿಯವರೆಗೂ ದೂರು ದಾಖಲಾಗಿಲ್ಲ. ಖುದ್ದು ಹಿರಿಯ ಪೊಲೀಸ್ ಅಧಿಕಾರಿಯಿಂದಲೇ ರಾಜಿ ಪಂಚಾಯಿತಿ ನಡೆದಿದೆ.

ಇದನ್ನೂ ಓದಿ: ಮನೆ-ಮರಗಳಲ್ಲಿ ಹಕ್ಕಿಗಳು ಗೂಡು ಕಟ್ಟತ್ತವೆ, ಸ್ಕೂಟಿಯಲ್ಲಿ ಪಕ್ಷಿ ಗೂಡು ಕಟ್ಟಿರುವುದು ನೋಡಿ

ಇನ್ನು ಮತ್ತೊಂದೆಡೆ ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ತುಂಗಭದ್ರಾ ನದಿ ಪಾತ್ರದಲ್ಲಿ ಅಕ್ರಮ ಮರಳು ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಹೊನ್ನಾಳಿ ತಾಲೂಕಿನ ಸಾಸ್ವೇಹಳ್ಳಿ, ಬುಳ್ಳಾಪುರ, ಹೊಸಹಳ್ಳಿ, ಬೇಲಿಮಲ್ಲೂರು ಸೇರಿದಂತೆ ಹಲವೆಡೆ ಅಕ್ರಮ ಮರಳು ಸಂಗ್ರಹ ಮಾಡಲಾಗಿದ್ದು ಮರಳು ಸಾಗಿಸುತ್ತಿದ್ದ ಟ್ರ್ಯಾಕ್ಟರ್​, ಎತ್ತಿನಗಾಡಿಯನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

 ಕೊಪ್ಪಳಕ್ಕೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 11:53 am, Wed, 14 June 23

ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ