AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಪ್ಪಳ ಜಿಲ್ಲಾ ಗಣಿ ಮತ್ತು ವಿಜ್ಞಾನ ಇಲಾಖೆ ಕಚೇರಿಯಲ್ಲಿ ಗಲಾಟೆ: ಗನ್ ತೋರಿಸಿದ ಭೂಪ

ಬಸವರಾಜ ಹೊಸಳ್ಳಿ ಟೀಂ ಹಾಗೂ ಬಸವರಾಜ ಪೂಜಾರ ಟೀಂ ಸೇರಿ ಎರಡು ಗುಂಪುಗಳೂ ಅಧಿಕಾರಿಯ ಸಮ್ಮುಖದಲ್ಲೇ ಹೊಡೆದಾಡಿಕೊಂಡಿವೆ. ಘಟನೆಯಲ್ಲಿ ಓರ್ವರಿಗೆ ಗಾಯಗಳಾಗಿದ್ದು ಸಧ್ಯ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕೊಪ್ಪಳ ಜಿಲ್ಲಾ ಗಣಿ ಮತ್ತು ವಿಜ್ಞಾನ ಇಲಾಖೆ ಕಚೇರಿಯಲ್ಲಿ ಗಲಾಟೆ: ಗನ್ ತೋರಿಸಿದ ಭೂಪ
ಅಧಿಕಾರಿಗಳ ಎದುರೇ ಗನ್ ತೋರಿಸಿ ವ್ಯಕ್ತಿ ಕೂಗಾಟ
TV9 Web
| Edited By: ಆಯೇಷಾ ಬಾನು|

Updated on:Jun 14, 2023 | 12:00 PM

Share

ಕೊಪ್ಪಳ: ಕೊಪ್ಪಳ ಜಿಲ್ಲಾ ಗಣಿ ಮತ್ತು ವಿಜ್ಞಾನ ಇಲಾಖೆ ಕಚೇರಿಯಲ್ಲಿ ಮಣ್ಣು ಗಣಿಗಾರಿಕೆ ಪರ್ಮಿಷನ್ ವಿಚಾರಕ್ಕೆ 2 ಗುಂಪುಗಳ ಮಧ್ಯೆ ಗಲಾಟೆ ನಡೆದಿದ್ದು ಅಧಿಕಾರಿಗಳ ಎದುರೇ ಗನ್ ತೋರಿಸಿ ವ್ಯಕ್ತಿ ಕೂಗಾಡಿದ ಘಟನೆ ನಡೆದಿದೆ. ಗನ್ ಹಿಡಿದು ಅಧಿಕಾರಿಯ ಎದುರೇ ಏಯ್ ಹೊಯ್ ಎಂದು ಕೂಗಾಡಿದ್ದಾರೆ.

ತುಂಗಭದ್ರ ಡ್ಯಾಂ ಹಿನ್ನೀರಿನ ಮಣ್ಣು ಗಣಿಗಾರಿಕೆ ಸಂಬಂಧ ಗಲಾಟೆ ನಡೆದಿದೆ. ಕೆಲವರ ಜೊತೆ ಇಲಾಖೆ ಅಧಿಕಾರಿಗಳೇ ಶಾಮೀಲಾಗಿದ್ದರೆಂದು ಆರೋಪಿಸಿದ್ದು ರಾಯಲ್ಟಿ ಇಲ್ಲದೇ ಮಣ್ಣು ಗಣಿಗಾರಿಕೆ ಮಾಡಿದ್ದಕ್ಕೆ ಒಂದು ಟೀಂ ಆಕ್ಷೇಪ ವ್ಯಕ್ತಪಡಿಸಿದೆ. ಇದ್ರಿಂದ ಮಾತಿಗೆ ಮಾತು ಬೆಳೆದು ಎರಡು ಟೀಂಗಳ ನಡುವೆ ಗಲಾಟೆಯಾಗಿದೆ. ಬಸವರಾಜ ಹೊಸಳ್ಳಿ ಟೀಂ ಹಾಗೂ ಬಸವರಾಜ ಪೂಜಾರ ಟೀಂ ಸೇರಿ ಎರಡು ಗುಂಪುಗಳೂ ಅಧಿಕಾರಿಯ ಸಮ್ಮುಖದಲ್ಲೇ ಹೊಡೆದಾಡಿಕೊಂಡಿವೆ. ಘಟನೆಯಲ್ಲಿ ಓರ್ವರಿಗೆ ಗಾಯಗಳಾಗಿದ್ದು ಸಧ್ಯ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಗಲಾಟೆ ವೇಳೆ ನಾಯ್ಡು ಎನ್ನೋರು ಗನ್ ತೆಗೆದುಕೊಂಡು ಬಂದಿದ್ದರು. ಗಣಿ ಇಲಾಖೆ ಕಚೇರಿಯೊಳಗೆ ಗನ್ ತೋರಿಸಿ ಬೆದರಿಸಿದ್ದರು. ಇಷ್ಟಾದ್ರು ಇಲ್ಲಿಯವರೆಗೂ ದೂರು ದಾಖಲಾಗಿಲ್ಲ. ಖುದ್ದು ಹಿರಿಯ ಪೊಲೀಸ್ ಅಧಿಕಾರಿಯಿಂದಲೇ ರಾಜಿ ಪಂಚಾಯಿತಿ ನಡೆದಿದೆ.

ಇದನ್ನೂ ಓದಿ: ಮನೆ-ಮರಗಳಲ್ಲಿ ಹಕ್ಕಿಗಳು ಗೂಡು ಕಟ್ಟತ್ತವೆ, ಸ್ಕೂಟಿಯಲ್ಲಿ ಪಕ್ಷಿ ಗೂಡು ಕಟ್ಟಿರುವುದು ನೋಡಿ

ಇನ್ನು ಮತ್ತೊಂದೆಡೆ ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ತುಂಗಭದ್ರಾ ನದಿ ಪಾತ್ರದಲ್ಲಿ ಅಕ್ರಮ ಮರಳು ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಹೊನ್ನಾಳಿ ತಾಲೂಕಿನ ಸಾಸ್ವೇಹಳ್ಳಿ, ಬುಳ್ಳಾಪುರ, ಹೊಸಹಳ್ಳಿ, ಬೇಲಿಮಲ್ಲೂರು ಸೇರಿದಂತೆ ಹಲವೆಡೆ ಅಕ್ರಮ ಮರಳು ಸಂಗ್ರಹ ಮಾಡಲಾಗಿದ್ದು ಮರಳು ಸಾಗಿಸುತ್ತಿದ್ದ ಟ್ರ್ಯಾಕ್ಟರ್​, ಎತ್ತಿನಗಾಡಿಯನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

 ಕೊಪ್ಪಳಕ್ಕೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 11:53 am, Wed, 14 June 23

Follow Us
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ