AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಪ್ಪಳ ಜಿಲ್ಲಾ ಗಣಿ ಮತ್ತು ವಿಜ್ಞಾನ ಇಲಾಖೆ ಕಚೇರಿಯಲ್ಲಿ ಗಲಾಟೆ: ಗನ್ ತೋರಿಸಿದ ಭೂಪ

ಬಸವರಾಜ ಹೊಸಳ್ಳಿ ಟೀಂ ಹಾಗೂ ಬಸವರಾಜ ಪೂಜಾರ ಟೀಂ ಸೇರಿ ಎರಡು ಗುಂಪುಗಳೂ ಅಧಿಕಾರಿಯ ಸಮ್ಮುಖದಲ್ಲೇ ಹೊಡೆದಾಡಿಕೊಂಡಿವೆ. ಘಟನೆಯಲ್ಲಿ ಓರ್ವರಿಗೆ ಗಾಯಗಳಾಗಿದ್ದು ಸಧ್ಯ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕೊಪ್ಪಳ ಜಿಲ್ಲಾ ಗಣಿ ಮತ್ತು ವಿಜ್ಞಾನ ಇಲಾಖೆ ಕಚೇರಿಯಲ್ಲಿ ಗಲಾಟೆ: ಗನ್ ತೋರಿಸಿದ ಭೂಪ
ಅಧಿಕಾರಿಗಳ ಎದುರೇ ಗನ್ ತೋರಿಸಿ ವ್ಯಕ್ತಿ ಕೂಗಾಟ
TV9 Web
| Edited By: ಆಯೇಷಾ ಬಾನು|

Updated on:Jun 14, 2023 | 12:00 PM

Share

ಕೊಪ್ಪಳ: ಕೊಪ್ಪಳ ಜಿಲ್ಲಾ ಗಣಿ ಮತ್ತು ವಿಜ್ಞಾನ ಇಲಾಖೆ ಕಚೇರಿಯಲ್ಲಿ ಮಣ್ಣು ಗಣಿಗಾರಿಕೆ ಪರ್ಮಿಷನ್ ವಿಚಾರಕ್ಕೆ 2 ಗುಂಪುಗಳ ಮಧ್ಯೆ ಗಲಾಟೆ ನಡೆದಿದ್ದು ಅಧಿಕಾರಿಗಳ ಎದುರೇ ಗನ್ ತೋರಿಸಿ ವ್ಯಕ್ತಿ ಕೂಗಾಡಿದ ಘಟನೆ ನಡೆದಿದೆ. ಗನ್ ಹಿಡಿದು ಅಧಿಕಾರಿಯ ಎದುರೇ ಏಯ್ ಹೊಯ್ ಎಂದು ಕೂಗಾಡಿದ್ದಾರೆ.

ತುಂಗಭದ್ರ ಡ್ಯಾಂ ಹಿನ್ನೀರಿನ ಮಣ್ಣು ಗಣಿಗಾರಿಕೆ ಸಂಬಂಧ ಗಲಾಟೆ ನಡೆದಿದೆ. ಕೆಲವರ ಜೊತೆ ಇಲಾಖೆ ಅಧಿಕಾರಿಗಳೇ ಶಾಮೀಲಾಗಿದ್ದರೆಂದು ಆರೋಪಿಸಿದ್ದು ರಾಯಲ್ಟಿ ಇಲ್ಲದೇ ಮಣ್ಣು ಗಣಿಗಾರಿಕೆ ಮಾಡಿದ್ದಕ್ಕೆ ಒಂದು ಟೀಂ ಆಕ್ಷೇಪ ವ್ಯಕ್ತಪಡಿಸಿದೆ. ಇದ್ರಿಂದ ಮಾತಿಗೆ ಮಾತು ಬೆಳೆದು ಎರಡು ಟೀಂಗಳ ನಡುವೆ ಗಲಾಟೆಯಾಗಿದೆ. ಬಸವರಾಜ ಹೊಸಳ್ಳಿ ಟೀಂ ಹಾಗೂ ಬಸವರಾಜ ಪೂಜಾರ ಟೀಂ ಸೇರಿ ಎರಡು ಗುಂಪುಗಳೂ ಅಧಿಕಾರಿಯ ಸಮ್ಮುಖದಲ್ಲೇ ಹೊಡೆದಾಡಿಕೊಂಡಿವೆ. ಘಟನೆಯಲ್ಲಿ ಓರ್ವರಿಗೆ ಗಾಯಗಳಾಗಿದ್ದು ಸಧ್ಯ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಗಲಾಟೆ ವೇಳೆ ನಾಯ್ಡು ಎನ್ನೋರು ಗನ್ ತೆಗೆದುಕೊಂಡು ಬಂದಿದ್ದರು. ಗಣಿ ಇಲಾಖೆ ಕಚೇರಿಯೊಳಗೆ ಗನ್ ತೋರಿಸಿ ಬೆದರಿಸಿದ್ದರು. ಇಷ್ಟಾದ್ರು ಇಲ್ಲಿಯವರೆಗೂ ದೂರು ದಾಖಲಾಗಿಲ್ಲ. ಖುದ್ದು ಹಿರಿಯ ಪೊಲೀಸ್ ಅಧಿಕಾರಿಯಿಂದಲೇ ರಾಜಿ ಪಂಚಾಯಿತಿ ನಡೆದಿದೆ.

ಇದನ್ನೂ ಓದಿ: ಮನೆ-ಮರಗಳಲ್ಲಿ ಹಕ್ಕಿಗಳು ಗೂಡು ಕಟ್ಟತ್ತವೆ, ಸ್ಕೂಟಿಯಲ್ಲಿ ಪಕ್ಷಿ ಗೂಡು ಕಟ್ಟಿರುವುದು ನೋಡಿ

ಇನ್ನು ಮತ್ತೊಂದೆಡೆ ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ತುಂಗಭದ್ರಾ ನದಿ ಪಾತ್ರದಲ್ಲಿ ಅಕ್ರಮ ಮರಳು ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಹೊನ್ನಾಳಿ ತಾಲೂಕಿನ ಸಾಸ್ವೇಹಳ್ಳಿ, ಬುಳ್ಳಾಪುರ, ಹೊಸಹಳ್ಳಿ, ಬೇಲಿಮಲ್ಲೂರು ಸೇರಿದಂತೆ ಹಲವೆಡೆ ಅಕ್ರಮ ಮರಳು ಸಂಗ್ರಹ ಮಾಡಲಾಗಿದ್ದು ಮರಳು ಸಾಗಿಸುತ್ತಿದ್ದ ಟ್ರ್ಯಾಕ್ಟರ್​, ಎತ್ತಿನಗಾಡಿಯನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

 ಕೊಪ್ಪಳಕ್ಕೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 11:53 am, Wed, 14 June 23

Follow Us
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ