AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಪ್ಪಳ ಜಿಲ್ಲಾ ಗಣಿ ಮತ್ತು ವಿಜ್ಞಾನ ಇಲಾಖೆ ಕಚೇರಿಯಲ್ಲಿ ಗಲಾಟೆ: ಗನ್ ತೋರಿಸಿದ ಭೂಪ

ಬಸವರಾಜ ಹೊಸಳ್ಳಿ ಟೀಂ ಹಾಗೂ ಬಸವರಾಜ ಪೂಜಾರ ಟೀಂ ಸೇರಿ ಎರಡು ಗುಂಪುಗಳೂ ಅಧಿಕಾರಿಯ ಸಮ್ಮುಖದಲ್ಲೇ ಹೊಡೆದಾಡಿಕೊಂಡಿವೆ. ಘಟನೆಯಲ್ಲಿ ಓರ್ವರಿಗೆ ಗಾಯಗಳಾಗಿದ್ದು ಸಧ್ಯ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕೊಪ್ಪಳ ಜಿಲ್ಲಾ ಗಣಿ ಮತ್ತು ವಿಜ್ಞಾನ ಇಲಾಖೆ ಕಚೇರಿಯಲ್ಲಿ ಗಲಾಟೆ: ಗನ್ ತೋರಿಸಿದ ಭೂಪ
ಅಧಿಕಾರಿಗಳ ಎದುರೇ ಗನ್ ತೋರಿಸಿ ವ್ಯಕ್ತಿ ಕೂಗಾಟ
TV9 Web
| Edited By: |

Updated on:Jun 14, 2023 | 12:00 PM

Share

ಕೊಪ್ಪಳ: ಕೊಪ್ಪಳ ಜಿಲ್ಲಾ ಗಣಿ ಮತ್ತು ವಿಜ್ಞಾನ ಇಲಾಖೆ ಕಚೇರಿಯಲ್ಲಿ ಮಣ್ಣು ಗಣಿಗಾರಿಕೆ ಪರ್ಮಿಷನ್ ವಿಚಾರಕ್ಕೆ 2 ಗುಂಪುಗಳ ಮಧ್ಯೆ ಗಲಾಟೆ ನಡೆದಿದ್ದು ಅಧಿಕಾರಿಗಳ ಎದುರೇ ಗನ್ ತೋರಿಸಿ ವ್ಯಕ್ತಿ ಕೂಗಾಡಿದ ಘಟನೆ ನಡೆದಿದೆ. ಗನ್ ಹಿಡಿದು ಅಧಿಕಾರಿಯ ಎದುರೇ ಏಯ್ ಹೊಯ್ ಎಂದು ಕೂಗಾಡಿದ್ದಾರೆ.

ತುಂಗಭದ್ರ ಡ್ಯಾಂ ಹಿನ್ನೀರಿನ ಮಣ್ಣು ಗಣಿಗಾರಿಕೆ ಸಂಬಂಧ ಗಲಾಟೆ ನಡೆದಿದೆ. ಕೆಲವರ ಜೊತೆ ಇಲಾಖೆ ಅಧಿಕಾರಿಗಳೇ ಶಾಮೀಲಾಗಿದ್ದರೆಂದು ಆರೋಪಿಸಿದ್ದು ರಾಯಲ್ಟಿ ಇಲ್ಲದೇ ಮಣ್ಣು ಗಣಿಗಾರಿಕೆ ಮಾಡಿದ್ದಕ್ಕೆ ಒಂದು ಟೀಂ ಆಕ್ಷೇಪ ವ್ಯಕ್ತಪಡಿಸಿದೆ. ಇದ್ರಿಂದ ಮಾತಿಗೆ ಮಾತು ಬೆಳೆದು ಎರಡು ಟೀಂಗಳ ನಡುವೆ ಗಲಾಟೆಯಾಗಿದೆ. ಬಸವರಾಜ ಹೊಸಳ್ಳಿ ಟೀಂ ಹಾಗೂ ಬಸವರಾಜ ಪೂಜಾರ ಟೀಂ ಸೇರಿ ಎರಡು ಗುಂಪುಗಳೂ ಅಧಿಕಾರಿಯ ಸಮ್ಮುಖದಲ್ಲೇ ಹೊಡೆದಾಡಿಕೊಂಡಿವೆ. ಘಟನೆಯಲ್ಲಿ ಓರ್ವರಿಗೆ ಗಾಯಗಳಾಗಿದ್ದು ಸಧ್ಯ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಗಲಾಟೆ ವೇಳೆ ನಾಯ್ಡು ಎನ್ನೋರು ಗನ್ ತೆಗೆದುಕೊಂಡು ಬಂದಿದ್ದರು. ಗಣಿ ಇಲಾಖೆ ಕಚೇರಿಯೊಳಗೆ ಗನ್ ತೋರಿಸಿ ಬೆದರಿಸಿದ್ದರು. ಇಷ್ಟಾದ್ರು ಇಲ್ಲಿಯವರೆಗೂ ದೂರು ದಾಖಲಾಗಿಲ್ಲ. ಖುದ್ದು ಹಿರಿಯ ಪೊಲೀಸ್ ಅಧಿಕಾರಿಯಿಂದಲೇ ರಾಜಿ ಪಂಚಾಯಿತಿ ನಡೆದಿದೆ.

ಇದನ್ನೂ ಓದಿ: ಮನೆ-ಮರಗಳಲ್ಲಿ ಹಕ್ಕಿಗಳು ಗೂಡು ಕಟ್ಟತ್ತವೆ, ಸ್ಕೂಟಿಯಲ್ಲಿ ಪಕ್ಷಿ ಗೂಡು ಕಟ್ಟಿರುವುದು ನೋಡಿ

ಇನ್ನು ಮತ್ತೊಂದೆಡೆ ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ತುಂಗಭದ್ರಾ ನದಿ ಪಾತ್ರದಲ್ಲಿ ಅಕ್ರಮ ಮರಳು ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಹೊನ್ನಾಳಿ ತಾಲೂಕಿನ ಸಾಸ್ವೇಹಳ್ಳಿ, ಬುಳ್ಳಾಪುರ, ಹೊಸಹಳ್ಳಿ, ಬೇಲಿಮಲ್ಲೂರು ಸೇರಿದಂತೆ ಹಲವೆಡೆ ಅಕ್ರಮ ಮರಳು ಸಂಗ್ರಹ ಮಾಡಲಾಗಿದ್ದು ಮರಳು ಸಾಗಿಸುತ್ತಿದ್ದ ಟ್ರ್ಯಾಕ್ಟರ್​, ಎತ್ತಿನಗಾಡಿಯನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

 ಕೊಪ್ಪಳಕ್ಕೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 11:53 am, Wed, 14 June 23

Follow Us
Web contact
Web contact

TV9 Kannada

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ