AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಪ್ಪಳ: ಕೋಟಿ ಖರ್ಚು ಮಾಡಿ ಕಟ್ಟಿದ ತರಲಕಟ್ಟಿ ಕೆರೆ ಕಟ್ಟೆಯಲ್ಲಿ ಕೆಲವೇ ದಿನಗಳಲ್ಲಿ ಬಿರುಕು!

ಸರಿಯಾಗಿ ಕಾಮಗಾರಿ ಮಾಡದೇ ಹಣ ನುಂಗಿ ಹಾಕಿರೋ ಆರೋಪ ಸಣ್ಣ ನೀರಾವರಿ ಇಲಾಖೆ ಮೇಲೆ ಕೇಳಿಬಂದಿದೆ. ತರಲಕಟ್ಟಿ ಗ್ರಾಮದಲ್ಲಿ ನೂರಾ ಹತ್ತು ಎಕರೆ ವಿಸ್ತೀರ್ಣದಲ್ಲಿ ಕೆರೆ ಇದ್ದು, ಪ್ರತಿನಿತ್ಯ ಅಪಾರ ಪ್ರಮಾಣದ ನೀರು ಪೋಲಾಗುತ್ತಿದೆ.

ಕೊಪ್ಪಳ: ಕೋಟಿ ಖರ್ಚು ಮಾಡಿ ಕಟ್ಟಿದ ತರಲಕಟ್ಟಿ ಕೆರೆ ಕಟ್ಟೆಯಲ್ಲಿ ಕೆಲವೇ ದಿನಗಳಲ್ಲಿ ಬಿರುಕು!
ಕೆರೆ ಕಟ್ಟೆ ಒಡೆದು ನೀರು ಹರಿದು ಹೋಗುತ್ತಿರುವುದು
ಸಂಜಯ್ಯಾ ಚಿಕ್ಕಮಠ
| Edited By: |

Updated on: Dec 20, 2023 | 10:00 AM

Share

ಕೊಪ್ಪಳ, ಡಿಸೆಂಬರ್ 20: ಕೊಪ್ಪಳ (Koppal) ಜಿಲ್ಲೆಯ ಯಲಬುರ್ಗಾ (Yelburga) ತಾಲೂಕಿನ ತರಲಕಟ್ಟಿ ಗ್ರಾಮದಲ್ಲಿ ‌ಕೆರೆ ಕಾಮಗಾರಿಯಲ್ಲಿ ಲೂಟಿ ಆರೋಪ ಕೇಳಿಬಂದಿದೆ. ಕೋಟಿ ಕೋಟಿ ರೂಪಾಯಿ ಖರ್ಚು ಮಾಡಿ ಕೆರೆ ಕಟ್ಟೆ ನಿರ್ಮಾಣ ಮಾಡಲಾಗಿದೆ. ಆದರೆ, ಕೆರೆ ತುಂಬುತ್ತಿದ್ದಂತೆಯೇ ಕಾಮಗಾರಿಯ ಅಸಲಿ ಬಣ್ಣ ಬಯಲಾಗುತ್ತಿದೆ. ಸದ್ಯ ಕೆರೆ ಕಟ್ಟೆ ಬಿರುಕು ಬಿಟ್ಟಿದ್ದು, ಗ್ರಾಮಸ್ಥರು ಆತಂಕಗೊಂಡಿದ್ದಾರೆ.

ವರ್ಷದ ಹಿಂದಷ್ಟೇ ಒಂದು ಕೋಟಿ ‌ತೊಂಬತ್ತು‌ ಲಕ್ಷ ರೂಪಾಯಿ ವೆಚ್ಚದಲ್ಲಿ ಕೆರೆ ಕಟ್ಟೆ ನಿರ್ಮಾಣ ಮಾಡಲಾಗಿತ್ತು. ಸಣ್ಣ ನೀರಾವರಿ ಇಲಾಖೆಯಿಂದ ಕೆರೆ ಕಟ್ಟೆ ನಿರ್ಮಾಣ ಮಾಡಲಾಗಿತ್ತು. ಕಳಪೆ ಕಾಮಗಾರಿಯಿಂದಾಗಿ ಕೆರೆ ದಂಡೆ ಒಡೆದು ಹೋಗೋ ಸ್ಥಿತಿಯಲ್ಲಿದೆ. ಕೆರೆ ಕಟ್ಟೆಯ ಹಲವಡೆ ಬಿರುಕು ಕಾಣಿಸಿದ್ದು, ನೀರು ಸೋರಿ ಹೋಗುತ್ತಿದೆ.

ಇದೀಗ ಸರಿಯಾಗಿ ಕಾಮಗಾರಿ ಮಾಡದೇ ಹಣ ನುಂಗಿ ಹಾಕಿರೋ ಆರೋಪ ಸಣ್ಣ ನೀರಾವರಿ ಇಲಾಖೆ ಮೇಲೆ ಕೇಳಿಬಂದಿದೆ. ತರಲಕಟ್ಟಿ ಗ್ರಾಮದಲ್ಲಿ ನೂರಾ ಹತ್ತು ಎಕರೆ ವಿಸ್ತೀರ್ಣದಲ್ಲಿ ಕೆರೆ ಇದ್ದು, ಪ್ರತಿನಿತ್ಯ ಅಪಾರ ಪ್ರಮಾಣದ ನೀರು ಪೋಲಾಗುತ್ತಿದೆ.

ಇದನ್ನೂ ಓದಿ: ಕೊಪ್ಪಳ: ನಾಪತ್ತೆಯಾಗಿದ್ದ ಯುವಕ ಶವವಾಗಿ ಪತ್ತೆ; ಇದ್ದೊಬ್ಬ ಮಗನನ್ನು ಕಳೆದುಕೊಂಡು ಕಂಗಾಲಾದ ಕುಟುಂಬ

ಕೆರೆಗೆ ನೀರು ತುಂಬಿಸೋ ಯೋಜನೆಯಲ್ಲಿ ಇದೀಗ ನೀರು ತುಂಬಿಸಲಾಗುತ್ತಿದೆ. ಆಲಮಟ್ಟಿ ಜಲಾಶಯದಿಂದ ನೀರು ತುಂಬಿಸಲಾಗುತ್ತಿದೆ. ಇದೀಗ ಕೆರೆ ತುಂಬಿದ್ದರೂ ಗ್ರಾಮದ ಜನರಿಗೆ ಆತಂಕ ಎದುರಾಗಿದೆ.

ಕಳಪೆ ಕಾಮಗಾರಿ ಮಾಡಿದವರ ವಿರುದ್ಧ ಕ್ರಮಕ್ಕೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ