AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹರ್ ಘರ್ ತಿರಂಗಾ ಸಂದೇಶ ಸಾರುವ ಭಾವಚಿತ್ರಕ್ಕೆ ಕುಷ್ಟಗಿ ತಾಲೂಕಿನ ತಾವರಗೇರಾದ ಮನೆ ಆಯ್ಕೆ

Koppal News: ಹರ್ ಘರ್ ತಿರಂಗಾ ಕಾರ್ಯಕ್ರಮದ ಸಂದೇಶ ಸಾರುವ ಭಾವಚಿತ್ರಕ್ಕೆ ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ತಾವರಗೇರಾದ ಪಟ್ಟಣದ ಮನೆ ಆಯ್ಕೆಯಾಗಿದೆ. ಈ ಕುರಿತು ಜಿಲ್ಲಾ ನಗರಾಭಿವೃಧ್ಧಿ ಕೋಶ ಯೋಜನಾ ನಿರ್ದೇಶಕರಾದ ಕಾವ್ಯಾರಾಣಿ ಅವರು ತಿಳಿಸಿದ್ದಾರೆ.

ಹರ್ ಘರ್ ತಿರಂಗಾ ಸಂದೇಶ ಸಾರುವ ಭಾವಚಿತ್ರಕ್ಕೆ ಕುಷ್ಟಗಿ ತಾಲೂಕಿನ ತಾವರಗೇರಾದ ಮನೆ ಆಯ್ಕೆ
ಹರ್ ಘರ್ ತಿರಂಗಾ ಕಾರ್ಯಕ್ರಮಕ್ಕೆ ಆಯ್ಕೆಯಾದ ಮನೆ
ದತ್ತಾತ್ರೇಯ ಪಾಟೀಲ, ಕಲಬುರಗಿ
| Edited By: |

Updated on: Aug 14, 2023 | 8:26 PM

Share

ಕೊಪ್ಪಳ, ಆಗಸ್ಟ್​ 14: 76ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ‘ನನ್ನ ಮಣ್ಣು ನನ್ನ ದೇಶ’ ಕಾರ್ಯಕ್ರಮದ ಭಾಗವಾಗಿ ಹರ್​ ಘರ್​ ತಿರಂಗಾ (Har Ghar Tiranga) ಅಭಿಯಾನ ನಡೆಸಲಾಗುತ್ತಿದೆ. ಹಾಗಾಗಿ ಆಗಸ್ಟ್​ 13 ರಿಂದ 15ರ ವರೆಗೆ ರಾಜ್ಯಾದ್ಯಂತ ರಾಷ್ಟ್ರಧ್ವಜಗಳನ್ನು ಹಾರಿಸಲು ತೀರ್ಮಾನಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹರ್ ಘರ್ ತಿರಂಗಾ ಕಾರ್ಯಕ್ರಮದ ಸಂದೇಶ ಸಾರುವ ಭಾವಚಿತ್ರಕ್ಕೆ ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ತಾವರಗೇರಾದ ಪಟ್ಟಣದ ಮನೆ ಆಯ್ಕೆಯಾಗಿದೆ. ಈ ಕುರಿತು ಜಿಲ್ಲಾ ನಗರಾಭಿವೃಧ್ಧಿ ಕೋಶ ಯೋಜನಾ ನಿರ್ದೇಶಕರಾದ ಕಾವ್ಯಾರಾಣಿ ಅವರು ತಿಳಿಸಿದ್ದಾರೆ.

ಪ್ರಧಾನ ಮಂತ್ರಿ ಅವಾಸ್ ಯೋಜನೆಯಡಿಯಲ್ಲಿ ಕುಷ್ಟಗಿ ತಾಲೂಕಿನ ತಾವರಗೇರಾ ಪಟ್ಟಣ ಪಂಚಾಯತಿಯ 2016-17ನೇ ಸಾಲಿನ ಫಲಾನುಭವಿಯಾಗಿ ಮನೆ ನಿರ್ಮಿಸಿಕೊಂಡಿರುವ ಶಕುಂತಲಾ ಗಂಡ ಮಲ್ಲಪ್ಪ ನಾಲತ್ತವಾಡ ಅವರು ತಮ್ಮ ಮನೆಯ ಮೇಲೆ ಧ್ವಜಾರೋಹಣ ಮಾಡಿದ್ದಾರೆ.

ಇದನ್ನೂ ಓದಿ: ಬೆಂಗಳೂರು ಗ್ರಾಮಾಂತರ; ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆ ಗ್ರಾಮಗಳಲ್ಲಿ ಅಮೃತ ಸರೋವರ, ಹುತಾತ್ಮರ ಸ್ಮಾರಕ ಶಿಲಾಫಲಕ

ಆಜಾದಿಕಾ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ಹರ್ ಘರ್ ತಿರಂಗಾ ಕಾರ್ಯಕ್ರಮದಡಿ ತ್ರಿವರ್ಣ ಧ್ವಜ ಹಾರಿಸಿದ್ದರು. ಈ ಚಿತ್ರವು ಭಾರತ ಸರ್ಕಾರದ ಹರ್ ಘರ್ ತಿರಂಗಾ ಹಾಗೂ ಆಜಾದಿಕಾ ಅಮೃತ ಮಹೋತ್ಸವ ಕಾರ್ಯಕ್ರಮಕ್ಕೆ  ಆಯ್ಕೆಯಾಗಿದೆ. ಆ ಮೂಲಕ ಕೊಪ್ಪಳ ಜಿಲ್ಲೆಯ ಕೀರ್ತಿಯು ರಾಷ್ಟ್ರಾದ್ಯಂತ ಹಬ್ಬಿದಂತಾಗಿದೆ ಎಂದು ಜಿಲ್ಲಾ ನಗರಾಭಿವೃದ್ಧಿ ಯೋಜಾನಾಧಿಕಾರಿ ಸಂತಸ ವ್ಯಕ್ತಪಡಿಸಿದ್ದಾರೆ.

ಮತ್ತಷ್ಟು ಮಾಹಿತಿ ಅಪ್​ಡೇಟ್​ ಆಗಲಿದೆ. 

Follow Us
Dattatraya Patil
Dattatraya Patil

ಮೂಲತಃ ಕಲಬುರಗಿ ಜಿಲ್ಲೆಯವರಾದ ದತ್ತಾತ್ರೇಯ ಪಾಟೀಲ್ ಸಧ್ಯ ಟಿರ್ವಿ ಕನ್ನಡ ವಾಹಿನಿಯ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದಾರೆ. ಕಳೆದ 9 ವರ್ಷಗಳಿಂದ ಟಿರ್ವಿ ಸಂಸ್ಥೆಯಲ್ಲಿ ಕೆಲಸ‌ ಮಾಡುತ್ತಿದ್ದು ಜ,2015 ರಿಂದ 22 ರವೆಗೆ ಹುಬ್ಬಳ್ಳಿಯ ವರದಿಗಾರಾಗಿ, ಕಳೆದೊಂದು ವರ್ಷ ಕೊಪ್ಪಳ ಸಧ್ಯ ಮೂರು ತಿಂಗಳಿಮದ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದು, ಕೊರೊನಾ ಸಮಯದಲ್ಲಿ ವೈದ್ಯರ ಕಳ್ಳಾಟದ ಮಾಡಿದ ರಹಸ್ಯ ಕಾರ್ಯಚರಣೆ.ಆಪರೇಷನ್ ಕಮಲದ ಕುರಿತು ಸ್ಪೋಟಕ ಬಿಎಸ್ ವೈ ವಿಡಿಯೋ ದ ಎಕ್ಸಕ್ಲೂಸಿವ್ ವರದಿಯ ಜೊತೆಗೆ ರಾಜಕೀಯ ವರದಿಗಾರಿಕೆಯಲ್ಲಿಯೂ ಆಸಕ್ತಿ ಹೊಂದಿದ್ದು, ಬಿಡುವಿನ ಸಮಯದಲ್ಲಿ ಪುಸ್ತಕ ಓದುವುದು,ಪ್ರೇಕ್ಷಣೀಯ ಹಾಗೂ ಐತಿಹಾಸಿಕ ಸ್ಥಳಗಳ ಪ್ರವಾಸ,ಮತ್ತು ಟ್ರೆಕ್ಕಿಂಗ್ ಹವ್ಯಾಸ ರೂಢಿಸಿಕೊಂಡಿದ್ದಾರೆ.

Read More